ಸಿಡಿ ಪ್ರಕರಣ : ಸಂತ್ರಸ್ತೆ ಹೇಳಿಕೆ ಮುಖ್ಯ
ಯುವತಿಗೆ ಪೊಲೀಸರು ನೋಟಿಸ್ ನೀಡುವ ಮೂಲಕ ಕರೆಸಿ ವಿಚಾರಣೆ ಮಾಡಬೇಕು: ಸತೀಶ ಜಾರಕಿಹೊಳಿ
Team Udayavani, Mar 5, 2021, 5:14 PM IST
ಗೋಕಾಕ: ರಮೇಶ ಸಿಡಿ ಪ್ರಕರಣದಲ್ಲಿ ಸಂತ್ರಸ್ತೆ ಯುವತಿ ಹೇಳಿಕೆ ಅತಿ ಮುಖ್ಯ. ಪೊಲೀಸರು ತನಿಖೆ ನಡೆಸಬೇಕು. ಯುವತಿಗೆ ನೋಟಿಸ್ ನೀಡುವ ಮೂಲಕ ಕರೆಸಿ ವಿಚಾರಣೆ ಮಾಡಬೇಕು. ಬೇರೆಯಾರೇ ದೂರು ಕೊಟ್ಟರೂ ಅದು ಪ್ರಯೋಜನವಾಗಲ್ಲ, ಯುವತಿ ಹೇಳಿಕೆಯೇ ಪ್ರಮುಖವಾಗಿರುತ್ತದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು.
ಗುರುವಾರ ಸುದ್ದಿಗಾರರ ಜತೆ ಮಾತನಾಡಿ, ರಮೇಶ ಜಾರಕಿಹೊಳಿ ಯಾರ ಮಾತುಗಳನ್ನು ಕೇಳುವ ಸ್ಟೇಜ್ನಲ್ಲಿ ಇರಲಿಲ್ಲ. ಈ ಪರಿಸ್ಥಿತಿಯಲ್ಲಿ ಜಾರಕಿಹೊಳಿ ಕುಟುಂಬ ಒಂದೇ ಎಂದು ಹೇಳಲು ಆಗಲ್ಲ. ಗೋಕಾಕದಲ್ಲಿ ಪರಿಸ್ಥಿತಿ ಏನಿದೆ, ಜಾರಕಿಹೊಳಿ ಕುಟುಂಬವನ್ನು ಯಾರು ನಡೆಸುತ್ತಾರೆ ಎಂಬುದು ಎಲ್ಲರಿಗೂ ಗೊತ್ತಿದೆ. ರಮೇಶ ಅವರು ವೈಯಕ್ತಿಕವಾಗಿ ಇದ್ದಾರೆ. ಅಳಿಯ ಅಂಬಿರಾವ ಪಾಟೀಲ ಮಾತು ಬಿಟ್ಟರೆ ಯಾರ ಮಾತನ್ನೂ ಕೇಳುವ ಪರಿಸ್ಥಿತಿಯಲ್ಲಿ ಇರಲಿಲ್ಲ. ಪಕ್ಷ ಯಾವುದೇ ಇದ್ದರೂ ಇಂತಹ ಘಟನೆಗಳು ನಡೆಯಬಾರದು. ಹಾಗೆ ಏನಾದರೂ ಇದ್ದರೆ ನೇರವಾಗಿ ಪೊಲೀಸ್ ಠಾಣೆಗೆ ದೂರು ನೀಡಿ, ತನಿಖೆ ನಡೆಸುವಂತೆ ಆಗ್ರಹಿಸಬೇಕು. ಅದನ್ನು ಬಿಟ್ಟು ಇಂತಹ ಪ್ರಕರಣಗಳನ್ನು ರಸ್ತೆಗೆ ತರಬಾರದು. ಸಿಡಿ ಪ್ರಕರಣ ಮುಗಿದ ವಿಚಾರ. ಈಗಾಗಲೇ ರಮೇಶ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸಂಬಂಧಪಟ್ಟವರಿಗೆ ಪೊಲೀಸರು ನೋಟಿಸ್ ನೀಡಿ, ತನಿಖೆ ನಡೆಸಬೇಕು. ಆಗ ಸತ್ಯಾಂಶ ಹೊರಬರಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ
Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್ಗೆ ಮತಹಾಕಲಿ: ಯೋಗೇಂದ್ರ ಯಾದವ್
Manipal ಆಸ್ಪತ್ರೆಯ ಡಾ.ರಾಮದಾಸ್ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್ ಸೇವೆ ಆರಂಭ
ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ
ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
MUST WATCH
ಹೊಸ ಸೇರ್ಪಡೆ
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ
Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ
ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ
ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ
Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್ಗೆ ಮತಹಾಕಲಿ: ಯೋಗೇಂದ್ರ ಯಾದವ್