ಬೀದಿ ವ್ಯಾಪಾರಿಗಳಿಗೆ “ಪಿಎಂ ಸ್ವನಿಧಿ’ ಸಹಕಾರಿ
Team Udayavani, Mar 5, 2021, 7:25 PM IST
ಯಾದಗಿರಿ: ಕೋವಿಡ್19 ಹಾಗೂ ಲಾಕ್ಡೌನ್ ಅವ ಧಿಯಲ್ಲಿ ಬೀದಿ ಬದಿ ವ್ಯಾಪಾರಸ್ಥರ ಜೀವನೋಪಾಯದ ಮೇಲೆ ಪರಿಣಾಮ ಬೀರಿದ್ದು, ಬೀದಿ ವ್ಯಾಪಾರಿಗಳ ಅಭಿವೃದ್ಧಿಗಾಗಿ ಹಾಗೂ ಅವರ ವ್ಯವಹಾರವನ್ನು ಪುನರ್ ಪ್ರಾರಂಭಿಸಲು ಪಿಎಂ ಸ್ವನಿಧಿ ಯೋಜನೆ ಅತ್ಯಂತ ಮಹತ್ವದ್ದಾಗಿದೆ ಎಂದು ಜಿಲ್ಲಾ ಧಿಕಾರಿ ಡಾ| ರಾಗಪ್ರಿಯ ಆರ್. ಅಭಿಪ್ರಾಯಪಟ್ಟರು. ನಗರದ ವಿದ್ಯಾಮಂಗಲ ಕಾರ್ಯಾಲಯದಲ್ಲಿ ಜಿಲ್ಲಾಡಳಿತ, ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ, ನಗರಸಭೆ, ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್ ಇವರ ಸಂಯುಕ್ತಾಶ್ರದಲ್ಲಿ ನಡೆದ ಪ್ರಧಾನಮಂತ್ರಿ ಬೀದಿ ವ್ಯಾಪಾರಿಗಳ ಆತ್ಮ ನಿರ್ಭರ್ ನಿಧಿ (ಪಿಎಂ ಸ್ವನಿಧಿ ) ಡಿಜಿಟಲ್ ವಹಿವಾಟಿನ ತರಬೇತಿ ವಿಶೇಷ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಡಿಜಿಟಲ್ ಯುಗದಲ್ಲಿ ಬೀದಿ ಬದಿ ವ್ಯಾಪಾರಿಗಳು ಸಹ ಕ್ಯಾಶ್ ಬ್ಯಾಕ್ ವಿಧಾನವನ್ನು ಬಳಸಿಕೊಂಡು ಆರ್ಥಿಕವಾಗಿ ಸಬಲರಾಗಬೇಕು. ಈ ಯೋಜನೆಯ ವಿಧಾನದ ಬಗ್ಗೆ ಬೀದಿ ಬದಿ ವ್ಯಾಪಾರಿಗಳಿಗೆ ಮಾಹಿತಿ ನೀಡುವುದು ಅವಶ್ಯಕವಾಗಿದೆ ಎಂದು ಹೇಳಿದರು. ಈ ಯೋಜನೆಯ ಲಾಭ ಪಡೆಯುವುದಕ್ಕಾಗಿ ಆಧಾರ ಕಾರ್ಡ್, ಬೀದಿ ಬದಿ ವ್ಯಾಪಾರಿ ಎಂಬ ಸರ್ಟಿμಕೇಟ್ ಸೇರಿದಂತೆ ಇತರ ದಾಖಲಾತಿಗಳನ್ನು ನೀಡಿ ಸಾಲದ ಸೌಲಭ್ಯವನ್ನು ಪಡೆಯಬಹುದು. ಜಿಲ್ಲೆಯಲ್ಲಿ ಹೀಗಾಗಲೇ ಪಿ.ಎಂ. ಸ್ವನಿ ಯೋಜನೆಯಡಿ 2500 ಅರ್ಜಿಗಳು ಬಂದಿದ್ದು, ಅವುಗಳಲ್ಲಿ ಸುಮಾರು 1500 ಅರ್ಜಿಗಳಿಗೆ ಸಾಲದ ಸೌಲಭ್ಯ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಉಳಿದ ಅರ್ಜಿಗಳಿಗೂ ಸಾಲ ನೀಡುವ ವ್ಯವಸ್ಥೆ ಮಾಡಲಾಗುತ್ತದೆಂದು ಹೇಳಿದರು. ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷರಾದ ವಿಲಾಸ ಬಿ.ಪಾಟೀಲ್ ಮಾತನಾಡಿ, ಕೋವಿಡ್ ಸಂದರ್ಭದಲ್ಲಿ ಬೀದಿ ಬದಿ ವ್ಯಾಪಾರಿಗಳು ತುತ್ತಿನ ಊಟಕ್ಕೂ ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು.
ಅದಕ್ಕಾಗಿಯೇ ಪ್ರಧಾನಮಂತ್ರಿಯವರು ಈ ಸ್ವನಿ ಯನ್ನು ಜಾರಿಗೊಳಿಸಿದ್ದಾರೆ. ಅರ್ಹ ವ್ಯಾಪಾರಿಗಳೆಲ್ಲರೂ ಈ ನಿ ಯನ್ನು ಪೂರ್ಣ ಪ್ರಮಾಣದಲ್ಲಿ ಬಳಕೆ ಮಾಡಿಕೊಳ್ಳಬೇಕೆಂದರು.
ಜಿಲ್ಲಾ ಕೌಶಲ್ಯಾಭಿವೃದ್ಧಿ ಅ ಧಿಕಾರಿ ರೇಖಾ ಮ್ಯಾಗೇರಿ ಮಾತನಾಡಿ, ಪಿ.ಎಂ ಸ್ವನಿ ಯೋಜನೆಯಲ್ಲಿ ಅತಿ ಕಡಿಮೆ ಬಂಡವಾಳ ಹೂಡಿ ವ್ಯಾಪಾರ ಮಾಡಬಹುದಾಗಿದೆ. ಹೀಗಾಗಿ ಎಲ್ಲ ಬೀದಿ ಬದಿ ವ್ಯಾಪಾರಿಗಳು ಈ ಯೋಜನೆಯ ಲಾಭ ಪಡೆಯಬೇಕೆಂದು ಹೇಳಿದರು. ನಗರಸಭೆ ಉಪಾಧ್ಯಕ್ಷೆ ಪ್ರಭಾವತಿ ಎಂ.ಕಲಾಲ, ಪೌರಾಯುಕ್ತ ಭೀಮಣ್ಣ ಟಿ.ನಾಯಕ, ಲೀಡ್ ಬ್ಯಾಂಕ್ ಮ್ಯಾನೇಜರ್ ಭೀಮರಾವ್ ಪಾಂಚಾಳ, ಕರ್ನಾಟಕ ಗ್ರಾಮೀಣ ಬ್ಯಾಂಕ್ ವಿಭಾಗೀಯ ವ್ಯವಸ್ಥಾಪಕ ಹನುಮಂತಪ್ಪ, ಡಿ.ಎಸ್.ಎಚ್, ಎಸ್.ಬಿ.ಐ ಮುಖ್ಯ ವ್ಯವಸ್ಥಾಪಕ ಶ್ರೀನಿವಾಸ್, ನಗರ ಅಭಿಯಾನ ವ್ಯವಸ್ಥಾಪಕ ವಿಠೊಬ ಬಿ, ವಿಜಯಕುಮರ್ ಪಾಟೀಲ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ