ದುರಂತಕ್ಕೆ ಕಾರಣವಾದ ಕೋಳಿ ಸಾಕಣೆ ಕೇಂದ್ರ ರದ್ದತಿಗೆ ನಿರ್ಣಯ


Team Udayavani, Mar 6, 2021, 4:30 AM IST

ದುರಂತಕ್ಕೆ ಕಾರಣವಾದ ಕೋಳಿ ಸಾಕಣೆ ಕೇಂದ್ರ ರದ್ದತಿಗೆ ನಿರ್ಣಯ

ಪಾಣಾಜೆ: ಇಲ್ಲಿನ ಗ್ರಾಮ ಪಂಚಾಯತ್‌ ಸಾಮಾನ್ಯ ಸಭೆಯು ಗ್ರಾ.ಪಂ. ಅಧ್ಯಕ್ಷೆ ಭಾರತಿ ಭಟ್‌ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆಯಿತು.

ಗ್ರಾಮದ ಕಡಮಾಜೆ ಖಾಸಗಿ ಸ್ಥಳದಲ್ಲಿ ಮಾ. 4ರಂದು ನಡೆದ ದುರಂತಕ್ಕೆ ಕಾರಣ ವಾದ ಕೋಳಿ ಸಾಕಣೆಯ ಕೇಂದ್ರವನ್ನು ರದ್ದು ಪಡಿಸಲು ಸಭೆಯು ಸರ್ವಾನು ಮತದಿಂದ ನಿರ್ಣಯ ಕೈಗೊಂಡಿದೆ.

ಪಿಡಿಒ ಚಂದ್ರಮತಿ ಮಾಹಿತಿ ನೀಡಿ ಕಳೆದ 2 ವರ್ಷಗಳಿಂದ ದುರಂತಕ್ಕೆ ಕಾರಣವಾದ ಕೋಳಿ ಸಾಕಣೆ ಕೇಂದ್ರವು ಪರವಾನಿಗೆ ನವೀಕರಣಗೊಳಿಸಿಲ್ಲ.

ಫೋನ್‌ ಮೂಲಕ ನವೀಕರಣ ಗೊಳಿಸುವಂತೆ ವಿನಂತಿಸಲಾಗಿದೆ. ಯಾವುದೇ ಸ್ಪಂದನೆ ನೀಡಿರಲಿಲ್ಲ ಎಂದು ಸಭೆಗೆ ತಿಳಿಸಿದರು.
ಸಭೆಯಲ್ಲಿ ಉಪಸ್ಥಿತಿ ಇದ್ದ ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಮಾತನಾಡಿ ಘಟನಾ ಸ್ಥಳಕ್ಕೆ ಭೇಟಿ ನೀಡಿದ ವೇಳೆ ಇಡೀ ಪರಿಸರ ದುರ್ವಾಸನೆ ಬೀರಿದೆ. ನೊಣಗಳು ಸುತ್ತಲಿನ ಪರಿಸರದಲ್ಲಿ ಹಾರಾಡುತ್ತಿದೆ. ಗ್ರಾಮದಲ್ಲಿರುವ ಕೋಳಿ ಸಾಕಣೆ ಕೇಂದ್ರಗಳಿಗೆ ನೊಟೀಸ್‌ ನೀಡಿ ಕೋಳಿ ತ್ಯಾಜ್ಯ ವಿಲೇವಾರಿ ನಿರ್ವಹಣೆಗಳ ಮಾಹಿತಿ ಪಡೆದು ಕೂಡಲೇ ಸೂಕ್ತ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದರು.

ಕೋಳಿ ತ್ಯಾಜ್ಯದ ವಿಲೇವಾರಿಗೆ ಕಟ್ಟು ನಿಟ್ಟಿನ ಕ್ರಮಕೈಗೊಳ್ಳುವಂತೆ ಸದಸ್ಯರು ಆಗ್ರಹಿಸಿದರು.
ಮನೆಗಳು ಇರುವಲ್ಲಿ ಕೋಳಿ ತ್ಯಾಜ್ಯದ ವಿಲೇವಾರಿಗೆ ಅವಕಾಶ ನೀಡಬಾರದು ಎಂದು ಸದಸ್ಯ ನಾರಾಯಣ ನಾಯಕ್‌ ಆಗ್ರಹಿಸಿದರು. ಎಲ್ಲ ಕೋಳಿ ಸಾಕಣೆ ಕೇಂದ್ರ ಗಳಿಗೆ ನೋಟಿಸ್‌ ಜಾರಿ ಮಾಡಿ ಕೋಳಿ ತ್ಯಾಜ್ಯ ನಿರ್ವಹಣೆಯ ಬಗ್ಗೆ ಕೈ ಗೊಂಡ ಕ್ರಮಗಳನ್ನು ಪಂಚಾಯತ್‌ಗೆ ತಿಳಿಸುವಂತೆ ಸಭೆಯಲ್ಲಿ ನಿರ್ಣಯಿ ಸಲಾಯಿತು.

ಪಾಣಾಜೆ ಗ್ರಾಮ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ಇದ್ದು ಕೂಡಲೇ ಕ್ರಮ ಕೈಗೊಳ್ಳುವಂತೆ ಸದಸ್ಯರು ಆಗ್ರಹಿಸಿದರು.
ಪಾಣಾಜೆ ಪ್ರಾಥಮಿಕ ಆರೋಗ್ಯ ಕೇಂದ್ರದ ಕಿರಿಯ ಆರೋಗ್ಯ ಸಹಾಯಕಿ ಜ್ಯೋತಿ ಕೋವಿಡ್‌ 19 ಲಸಿಕೆಯ ಬಗ್ಗೆ ಮಾಹಿತಿ ನೀಡಿದರು. ಪಾಣಾಜೆ ಪಶು ಚಿಕಿತ್ಸಾ ಕೇಂದ್ರದ ಜಾನುವಾರು ಅಧಿಕಾರಿ ಪುಷ್ಪರಾಜ್‌ ಶೆಟ್ಟಿ ಇಲಾಖೆಯ ಮಾಹಿತಿ ನೀಡಿದರು. ತಾ.ಪಂ. ಸದಸ್ಯೆ ಮೀನಾಕ್ಷಿ ಮಂಜುನಾಥ, ಗ್ರಾ.ಪಂ. ಉಪಾಧ್ಯಕ್ಷ ಅಬೂಬಕರ್‌ ಸದಸ್ಯರು ಉಪಸ್ಥಿತರಿದ್ದರು.
ಗ್ರಾ.ಪಂ. ಸಿಬಂದಿ ವಿಶ್ವನಾಥ, ಅರುಣ ಕಲಾಪದಲ್ಲಿ ಸಹಕರಿಸಿದರು.

ಜಲ ಜೀವನ್‌ ಪ್ರತೀ ಮನೆಗೆ ತಲುಪಿಸಿ
ಜಿ.ಪಂ.ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಸಲಹೆ ನೀಡಿ ಜಲ ಜೀವನ್‌ ಯೋಜನೆಯಡಿಯಲ್ಲಿ ಪಂಚಾಯತ್‌ ವ್ಯಾಪ್ತಿಯ ಪ್ರತೀ ಮನೆಗೆ ಕುಡಿಯುವ ನೀರಿನ ವ್ಯವಸ್ಥೆ 2023-24ರಲ್ಲಿ ಆಗಬೇಕಾಗಿದೆ. ಈ ನಿಟ್ಟಿನಲ್ಲಿ ಕ್ರಿಯಾ ಯೋಜನೆ ಮಾಡ ಲಾಗಿದೆ. ಪ್ರತೀ ಸದಸ್ಯರು ಪ್ರತೀ ಮನೆಗೆ ಈ ಯೋಜನೆಯನ್ನು ತಲುಪಿಸಲು ಕ್ರಮ ಕೈಗೊಳ್ಳಬೇಕು ಎಂದರು.

ಟಾಪ್ ನ್ಯೂಸ್

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

diego maradona

Diego Maradona ಹೃದಯಾಘಾತಕ್ಕೆ ಕೊಕೇನ್‌ ಸೇವನೆ ಕಾರಣ?

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Four humans to begin living on Mars

Mars; ಮಂಗಳ ಗ್ರಹದಲ್ಲಿ 4 ಮಂದಿ ವಾಸ: ಆದ್ರೆ ಇದು ನಿಜವಲ್ಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-

Charmadi ಘಾಟ್‌ನಲ್ಲಿ ಟಾಟಾ ಏಸ್‌ ಪಲ್ಟಿ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

diego maradona

Diego Maradona ಹೃದಯಾಘಾತಕ್ಕೆ ಕೊಕೇನ್‌ ಸೇವನೆ ಕಾರಣ?

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.