ಎತ್ತಿನಹೊಳೆ ಯೋಜನೆ ಕಾಮಗಾರಿ ಕಾರ್ಮಿಕರಿಗಿಲ್ಲ ಶುದ್ಧ ನೀರು


Team Udayavani, Mar 6, 2021, 4:40 PM IST

ಎತ್ತಿನಹೊಳೆ ಯೋಜನೆ ಕಾಮಗಾರಿ ಕಾರ್ಮಿಕರಿಗಿಲ್ಲ ಶುದ್ಧ ನೀರು

ಆಲೂರು: ಬಯಲುಸೀಮೆ ಜಿಲ್ಲೆಗಳಿಗೆ ಶಾಶ್ವತ ನೀರಾವರಿ ಸೌಲಭ್ಯ ಒದಗಿಸುವ ಎತ್ತಿನಹೊಳೆ ಯೋಜನೆಯ ಕಾಲುವೆ ನಿರ್ಮಾಣ ಕಾಮಗಾರಿಯಲ್ಲಿ ತೊಡಗಿಕೊಂಡಿರುವ ವಲಸೆ ಕಾರ್ಮಿಕರಿಗೆ, ಗುತ್ತಿದಾರರು ಶುದ್ಧ ಕುಡಿಯುವ ನೀರು ಸೇರಿ ಹಲವು ಸೌಲಭ್ಯ ಕಲ್ಪಿಸದೇ, ಹೀನಾಯವಾಗಿ ದುಡಿಸಿಕೊಳ್ಳುತ್ತಿದ್ದಾರೆ.

ತಾಲೂಕಿನ ಕಾಮತಿಕೂಡಿಗೆ ಬಳಿ ನಡೆಯುತ್ತಿರುವ ಎತ್ತಿನಹೊಳೆ ಯೋಜನೆಯಕಾಲುವೆ ನಿರ್ಮಾಣ ಕಾಮಗಾರಿ ಯಲ್ಲಿ 25 ರಿಂದ 30 ವಲಸೆ ಕಾರ್ಮಿಕರು ತೊಡಗಿಕೊಂಡಿದ್ದಾರೆ.ಇವರು ಮೂಲತಃ ಪಶ್ಚಿಮ ಬಂಗಾಳದಿಂದ ಬಂದವರು. ಗುತ್ತಿಗೆದಾರರು ಶುದ್ಧ ಕುಡಿಯುವ ನೀರು ಒದಗಿಸಿದ ಕಾರಣ, ಕಾಲುವೆ ಯಲ್ಲಿ ಜಿನುಗುತ್ತಿರುವ ನೀರನ್ನು ಲೋಟ, ಪ್ಲಾಸ್ಟಿಕ್‌ ಬಾಟಲ್‌ನಲ್ಲಿ ತುಂಬಿಕೊಂಡು ಸೇವಿಸುತ್ತಿದ್ದಾರೆ.

ಅಡುಗೆಗೂ ಕಲುಷಿತ ನೀರು: ಮೊದಲು ಟ್ಯಾಂಕರ್‌ ಮೂಲಕ ನೀರು ಪೂರೈಕೆ ಮಾಡುತ್ತಿದ್ದಗುತ್ತಿಗೆದಾರರು, ನಂತರ ಟ್ಯಾಂಕರ್‌ ತುಕ್ಕು ಹಿಡಿದು ತೂತು ಬಿದ್ದಿದೆ ಎಂದು ಹೇಳಿ ನೀರು ಪೂರೈಕೆ ನಿಲ್ಲಿಸಿದ್ದಾರೆ. ಇತ್ತ ಇದ್ದ ಟ್ಯಾಂಕರ್‌ ಅನ್ನು ದುರಸ್ತಿ ಪಡಿಸದೇ, ಅತ್ತ ಬೇರೆ ಟ್ಯಾಂಕರ್‌ನಿಂದ ನೀರು ಪೂರೈಕೆ ಮಾಡದೇ, ಕಾಲುವೆ ಯಲ್ಲಿ ಜಿನುಗುವಕೆಂಪು, ಗೋಡು ಮಣ್ಣು ಮಿಶ್ರಿತ ನೀರನ್ನೇ ಕುಡಿಯುಲು, ಅಡುಗೆಗೆ ಬಳಸುವಂತಹ ಪರಿಸ್ಥಿತಿ ಇದೆ. ಸುಮಾರು 150 ಅಡಿ ಆಳದ ಕಾಲುವೆಯಲ್ಲಿಹಿಟಾಚಿ ಯಂತ್ರಗಳಿಂದ ಮಣ್ಣು ತೆಗೆದು ಅದನ್ನು

ಟಿಪ್ಪರ್‌ಗಳಲ್ಲಿ ಹೊರಗಡೆ ಸಾಗಿಸುವ ಕೆಲಸ ಮಾಡುತ್ತಿರುವ ಈ ಕಾರ್ಮಿಕರು, ಕೆಲಸದ ಸ್ಥಳದಲ್ಲಿ ಗುಡಾರಗಳನ್ನು ಹಾಕಿಕೊಂಡು, ಅಲ್ಲಿಯೇ ಸಿಗುವ ಕಲ್ಲುಗಳನ್ನು ಇಟ್ಟು ಆಹಾರ ಬೇಯಿಸಿಕೊಂಡು ಜೀವನ ಸಾಗಿಸುತ್ತಿದ್ದಾರೆ. ಕನಿಷ್ಠ ಅವರಿಗೆ ಆಹಾರ ತಯಾರಿಕೆಗೆ ಸೂಕ್ತ ಸಲಕರಣೆಗಳನ್ನು ಒದಗಿಸದಿರುವುದು ವಿಪರ್ಯಾಸವೇ ಸರಿ.

ಭಾಷೆ ಸಮಸ್ಯೆ: ಪಶ್ಚಿಮ ಬಂಗಾಳದಿಂದ ಬಂದಿರುವ ಈ ಕಾರ್ಮಿಕರಿಗೆ ಕನ್ನಡ ಬರುವುದಿಲ್ಲ, ಹೀಗಾಗಿ ಸ್ಥಳೀಯರನ್ನು ಮಾತನಾಡಿಸಿ ಸಹಕಾರಪಡೆಯಲು ಕಾರ್ಮಿಕರು ಹಿಂದೇಟು ಹಾಕುತ್ತಿದ್ದಾರೆ. ಅಲ್ಲದೆ, ಆಳದ ಕಾಲುವೆಯಲ್ಲಿ ಕೆಲಸಮಾಡುವ ಕಾರಣ, ಕಾರ್ಮಿಕರು ನೀರು, ಇತರೆ ತಿಂಡಿ ತಿನಿಸು ಖರೀದಿಗೆ ಪದೇ ಪದೆ ಅಂಗಡಿ ಬಳಿಬರುವುದು ಕಷ್ಟದ ಕೆಲಸ. ಹೀಗಾಗಿ ಕಾರ್ಮಿಕರಿಗೆಅವರು ಕೆಲಸ ಮಾಡುವ ಜಾಗಕ್ಕೆ ಸೂಕ್ತ ಸೌಲಭ್ಯ ಒದಗಿಸುವ ವ್ಯವಸ್ಥೆ ಗುತ್ತಿಗೆದಾರರು ಮಾಡಬೇಕಿದೆ. ಬಯಲು ಸೀಮೆಯ ಜನರಿಗೆ ಕೋಟ್ಯಂತರ ರೂ.ವೆಚ್ಚದಲ್ಲಿ ನೀರು ಪೂರೈಸಲು ನಡೆಸುತ್ತಿರುವ ಈ ಕಾಮಗಾರಿ ಮಹತ್ವದ್ದು. ಆದರೆ, ಆ ಕಾರ್ಯದಲ್ಲಿ ತೊಡಗಿರುವ ಕಾರ್ಮಿಕರಿಗೆ ಶುದ್ಧ ನೀರು ಸಿಗದೆಕಲುಷಿತ ನೀರು ಬಳಸುವ ಸ್ಥಿತಿ ಬಂದಿರುವುದು ದುರಂತವೇ ಸರಿ. ಕೂಡಲೇ ಸಂಬಂಧಪಟ್ಟಅಧಿಕಾರಿಗಳು, ಗುತ್ತಿಗೆದಾರರು ಕಾರ್ಮಿಕರಿಗೆಸೌಲಭ್ಯ ಒದಗಿಸುವ ವ್ಯವಸ್ಥೆ ಮಾಡಬೇಕಿದೆ.

 

ಕುಮಾರಸ್ವಾಮಿ

ಟಾಪ್ ನ್ಯೂಸ್

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.