ರಾಮಮಂದಿರ ನಿರ್ಮಾಣಕ್ಕಾಗಿ 2,500 ಕೋ.ರೂ. ನಿಧಿ ಸಂಗ್ರಹ : ದೇಣಿಗೆ ಸಂಗ್ರಹ ಅಂತ್ಯ
Team Udayavani, Mar 7, 2021, 7:10 AM IST
ಹೊಸದಿಲ್ಲಿ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ದೇಶಾದ್ಯಂತ ನಡೆಸಿದ ದೇಣಿಗೆ ಸಂಗ್ರಹ ಅಭಿಯಾನ ಅಧಿಕೃತವಾಗಿ ಅಂತ್ಯಗೊಂಡಿದ್ದು, 2,500 ಕೋಟಿ ರೂ. ಸಂಗ್ರಹವಾಗಿದೆ ಎಂದು ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಮಾಹಿತಿ ನೀಡಿದೆ.
45 ದಿನಗಳ ಅಭಿಯಾನ ಪೂರ್ಣವಾಗಿದೆ. ಮಾ. 4ರ ವರೆಗೆ ಅಂದಾಜು 2,500 ಕೋಟಿ ರೂ. ಸಂಗ್ರಹವಾಗಿದೆ. 4 ಲಕ್ಷ ಗ್ರಾಮಗಳಲ್ಲಿ 9 ಲಕ್ಷ ಸ್ವಯಂ ಸೇವಕರು 10 ಕೋಟಿ ಕುಟುಂಬಗಳನ್ನು ಸಂಪರ್ಕಿಸಿದ್ದಾರೆ ಎಂದು ಟ್ರಸ್ಟ್ ಅಧ್ಯಕ್ಷ ಚಂಪತ್ ರಾಯ್ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.
ದೇಗುಲ ನಿರ್ಮಾಣ ಕಾರ್ಯ ಎಪ್ರಿಲ್ನಿಂದ ಪ್ರಾರಂಭವಾಗಲಿದ್ದು, ಮೂರು ವರ್ಷಗಳಲ್ಲಿ ಪೂರ್ಣವಾಗಲಿದೆ. ದೇಗುಲ ನಿರ್ಮಾಣಕ್ಕಾಗಿ ಭೂಮಿಯನ್ನು ಸಿದ್ಧಗೊಳಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.