‘ಕೊರೋನ ನಂತರದ ಗ್ರಾಮ ಭಾರತ’ದೊಳಗೆ ನಿತ್ಯ ಸತ್ಯ

ಕೊರೋನ ನಂತರದ ಗ್ರಾಮ ಭಾರತ – ಪುಸ್ತಕದ ವಿಮರ್ಶೆ

Team Udayavani, Mar 7, 2021, 3:27 PM IST

7-7

ದೇರ್ಲ ಅವರೇ ಹೇಳುವ ಹಾಗೆ “ಬರೀ ಕನಸನ್ನಷ್ಟೇ ಅಲ್ಲ, ವಾಸ್ತವ ಬದುಕನ್ನೇ ಕೊರೋನಾ ಕಸಿದುಕೊಂಡಿದೆ. ಕೋವಿಡ್ ಇಡಿಯ ವ್ಯವಸ್ಥೆಯನ್ನು ಅಡಿಮೇಲಾಗಿ ಮಾಡಿ ಮಾನವನ ಬದುಕಿನಲ್ಲಿ ದೊಡ್ಡ ಬದಲಾವಣೆಯನ್ನು ಮಾಡಿದೆ. ಮತ್ತವನ ಮನಸ್ಸನ್ನೂ.

‘ಕೊರೋನಾ ನಂತರದ ಗ್ರಾಮಭಾರತ’ ಹಲವು ಆಯಾಮಗಳಲ್ಲಿ ಹಳ್ಳಿ ಬದುಕನ್ನು ಪುಟ ಪುಟವಾಗಿ ತೆರೆದಿಡುತ್ತದೆ.

ನಾನು ಸಾಮಾನ್ಯವಾಗಿ ಪುಸ್ತಕಗಳ ಓದಿನ ಅನಿಸಿಕೆಯನ್ನು ಹಂಚಿಕೊಳ್ಳುವುದಿಲ್ಲ ಅಥವಾ ಬರೆಯುವುದಕ್ಕೆ ಮುಂದಾಗಿದ್ದು, ಮುಂದಾಗುವುದು ಬಹಳ ಕಡಿಮೆ. ಈ ಕೃತಿಯ ಕುರಿತಾಗಿ ನಾಲ್ಕಕ್ಷರ ಬರೆಯುವುದಕ್ಕೆ ಹೊರಟಿರುವ ಕಾರಣ, ಕೃತಿಕಾರ ನರೇಂದ್ರ ರೈ ದೇರ್ಲ ಅವರ ಬರಹಗಳಲ್ಲಿನ ನಾಳೆಯ ಭಾರತದ ಕನಸುಗಳು, ಗ್ರಾಮ ಭಾರತದ ಸೊಗಡು, ಹಳ್ಳಿಯ ಇನ್ನೊಂದು ಗಂಭೀರ ಮುಖ, ಹಳ್ಳಿ ಬದುಕಿನ ಸಮಸ್ಯೆ, ‘ನಗರಗಳು ಕುಲಕೆಟ್ಟ ವೇಗದಲ್ಲೇ ಗ್ರಾಮಗಳು ಬದಲಾದರೇ ಉಳಿಯುವುದೇನು..?’ ಎಂಬ ದೇರ್ಲ ಅವರೊಳಗಿನ ಆತಂಕ.

ಓದಿ :  ಹಸಿರುಗಳ ನಡುವೆ ಬಗೆದ ದಾರಿಯಲ್ಲಿ ಶೃಂಗೇರಿಗೆ ಏಕಾಂಗಿ ಪಯಣ..!

ಹಳ್ಳಿಗಳನ್ನು ಬಿಟ್ಟು ನಗರವೇ ಚೆಂದ ಅಂದ ಎಂದು ಹೋಗಿದ್ದ ಮಂದಿಯೆಲ್ಲಾ ಮೂಟೆ ಹೊತ್ತು ಮರಳಿ ಗೂಡಿಗೆ ಎಂಬಂತೆ ಮತ್ತದೇ ಹೊರಟಲ್ಲೇ ನೆಲೆ ಕಾಣಲು ಮುಖ ಮಾಡಿದ್ದು ಕೋವಿಡ್ ನಂತರದ ದಿನಮಾನಗಳು. ಮರಳಿ ಬಂದವರಿಗೆ ಹಳ್ಳಿ ನೀಡಿದ ಸ್ವಾಗತ ಮತ್ತು ಆಶ್ರಯ ಅಚ್ಚರಿಯೇ ಸರಿ.

ಎಲ್ಲೋ ದೂರದ ಮಹಾ ನಗರಗಳಲ್ಲಿ ಬದುಕು ಕಂಡುಕೊಂಡು ಈ ಕೋವಿಡ್ ಎಂಬ ಕಾಯಿಲೆಗೆ ಹೆದರಿ ಹಳ್ಳಿಗೆ ಹಿಂತಿರುಗಿದಾಗ ಈ ಹಿಂದೆಲ್ಲಾ ಮದುವೆ ಮುಂಜಿಗೆಂದು ಬಂದು ಹೋಗುತ್ತಿದ್ದಾಗಿದ್ದ  ಆತಿಥ್ಯ, ಇಲ್ಲಿಯೇ ಹೊಸ ಬದುಕು ಕಾಣಬೇಕು ಎಂದು ಹೊರಟು ಬಂದಿರುವವರ ಬಗ್ಗೆ ಬದಲಾದ ಭಾವನೆಯ ಬಗೆಯನ್ನು ದೇರ್ಲ ಅವರು ಚೆನ್ನಾಗಿ ವಿವರಿಸಿದ್ದಾರೆ. ‘ಇಲ್ಲಿರುವವರಿಗೇ ಕಷ್ಟ, ಈಗ ಇವನೊಬ್ಬ ಮತ್ತೆ ವಕ್ಕರಿಸಿದ’ ಎಂಬುವುದು ಸಹಜವಾಗಿ ಹಳ್ಳಿ ಬದುಕನ್ನು ಕಂಡವರಿಗೆ ಒಪ್ಪಿಕೊಳ್ಳಲಾಗದ ವಾಸ್ತವದ ನಿಜ ಮುಖದ ಅಧ್ಯಯನ ದೇರ್ಲರದ್ದು.

ಸೆಗಣಿ, ಕೆಸರು, ಗಂಜಲ, ನಮ್ಮದು ಇಪ್ಪತ್ತನಾಲ್ಕು ಗಂಟೆ ಎ.ಸಿ ಹವೆ ಎಂದೆಲ್ಲಾ ಸಾಂಪ್ರದಾಯಿಕ ರೈತಾಪಿಗಳನ್ನು ಟೀಕಿಸಿ ನಗರದೆಡೆಗೆ ಮುಖ ಮಾಡಿ ಹೋದವರು ಈಗ ಹಳ್ಳಿಗೆ ಬಂದು, ಹಳ್ಳಿಯ ಪಡಸಾಲೆಯಲ್ಲಿ ಕೂತು ವರ್ಕ್ ಫ್ರಂ ಹೋಮ್ ಮಾಡಿ, ಉಳಿದ ಸಮಯದಲ್ಲಿ ಕೈ ಕಾಲು ಕೆಸರು ಮಾಡಿಕೊಂಡು ಕೃಷಿ ಮಾಡುತ್ತಿರುವಾಗ, ‘ನಮ್ಮದಾದದ್ದು ಆಯ್ತು ಬಿಡಿ, ನೀವು ಮಣ್ಣಿಗಿಳಿಯುವುದು ಬೇಡ’ ಅಂದ ಹಿರಿಯವರೇ ಮುಸಿ ಮುಸಿ ನಗುವಂತೆ ಕೋವಿಡ್ ಮಾಡಿ ಬಿಟ್ಟಿದೆ ಅಂತ ಲೇಖಕರು ಬಹಳ ಮಾರ್ಮಿಕವಾಗಿ ಹಳ್ಳಿ ಬದುಕಿನ ಗಟ್ಟಿತನವನ್ನು, ಹಳ್ಳಿ ಬದುಕಿನ ಬಗ್ಗೆ ಕೇವಲವಾಗಿ ಮಾತನಾಡುವವರಿಗೆ ಸತ್ಯದ ಕಹಿ ರಾಚಿ ಹೊಡೆಯುವಂತೆ ಹೇಳಿರುವುದು ನಮ್ಮನ್ನು ನನ್ನ ಕೃತಿ ಒಳಗೆ ಮತ್ತಷ್ಟು ಎಳೆದುಕೊಳ್ಳುತ್ತದೆ.

ಓದಿ : HDK ಮಾಡಿದ 5 ಕೋಟಿ ಡೀಲ್ ಆರೋಪದಿಂದ ನೊಂದು ದೂರು ವಾಪಸ್ ಪಡೆದಿದ್ದೇನೆ: ದಿನೇಶ್ ಕಲ್ಲಹಳ್ಳಿ

ಇನ್ನು, ಸ್ವದೇಶೀಯತೆ. ಚೀನಾದಿಂದ ಆಮದಾಗುವ ಕಳೆಕೊಚ್ಚುವ ಯಂತ್ರ. ಯಂತ್ರದ ಬ್ಲೇಡ್ ನ ಫಿನಿಶಿಂಗ್ ಆಧಾರದಲ್ಲಿ ನಮ್ಮ ರೈತರನ್ನು ತಲುಪುವ ಮತ್ತು ಈಗೀಗ ನಮ್ಮ ರೈತರಿಗೆ ಬೇಕಾಗುವುದು ಕೂಡ ಅದೇ. ಆ ಯಂತ್ರದ  ಹರಿತವಾದ  ಬ್ಲೇಡ್. ಚೀನಾ ಕಂಪೆನಿಯ ಮಾಲಿಕತ್ವ. ವಾಸ್ತವಾಂಶವೆಂದರೇ, ಆ ಯಂತ್ರದ ಹರಿತವಾದ ಬ್ಲೇಡ್ ನಮ್ಮ ದೇಶದಿಂದಲೇ ಚೀನಾಗೆ ರಫ್ತಾದ ಕಬ್ಬಿಣದಿಂದಲೇ ತಯಾರಿಸಿದ್ದು. ಇದು, ವರ್ತಮಾನದ ಗಡಿಬಿಡಿಯ ಆರ್ಥಿಕ ಸ್ಥಿತಿ ಗತಿಯ ಹಪಹಪಿಯ ಸ್ವದೇಶಿಯತೆಯನ್ನು ಕಟುವಾಗಿ  ಟೀಕಿಸುವಂತೆ ಮಾಡುತ್ತದೆ. ಈ ಎಲ್ಲದರ ಆಚೆಯಲ್ಲಿ… ದೇರ್ಲರ ಆಳ, ವಿಸ್ತಾರ ನೋಟ ಅವರ

ಅಧ್ಯಯನ ಶೀಲತೆಯಲ್ಲಿ ಇಲ್ಲಿ ಕಾಣಸಿಗುವುದು ಭವಿಷ್ಯದ ಗ್ರಾಮ ಭಾರತ. ‘ಸಾಲ, ಬಡತನ, ಮಣ್ಣಿನ ಮನೆ, ಕಾಲಿನ ಕೆಸರು, ಗಂಜಲದ ವಾಸನೆ, ಬರಿಗಾಲ ಓಡಾಟ ಇವೆಲ್ಲಾ ಅವಮಾನವಲ್ಲ ಎಂಬ ಅರಿವು ಮೂಡಬೇಕು. ಶುದ್ಧ ನೀರು, ಸ್ವಚ್ಛ ಗಾಳಿ, ವಿಷವಿಲ್ಲದ ಹಾಲು, ತರಕಾರಿ, ಅನ್ನ, ನಿರ್ಮಲ ಸಂಪನ್ನ ಪ್ರೀತಿಯೇ ವರ್ತಮಾನದ ಬಹುದೊಡ್ಡ ಸುಖ ಎಂಬ ಅರಿವು ಬರಬೇಕು’ ಎಂಬ ಅವರ ಮಾತುಗಳಲ್ಲಿ ನಾಳೆಯ ಭಾರತದ ಶಿಖರದೆತ್ತರದ ಆಶಯಗಳಿವೆ ಎನ್ನುವುದು ಅಪ್ಪಟ ಸತ್ಯ. ಸರಳ ಜೀವನಕ್ಕೆ ಕೊರೋನ, ಹಳ್ಳಿಯಲ್ಲಿ ತೋರಿಸಿದ ಹಲವು ದಾರಿಗಳನ್ನು, ಹಳ್ಳಿಯ ಅವಕಾಶಗಳನ್ನು ‘ಯುಗಧರ್ಮವನ್ನು ಪಾಲಿಸುವುದು ಆಯಾಯ ಕಾಲದ ಧರ್ಮ’ ಎಂದು ಹೇಳಿ ಹಳೆಯ ತಲೆಮಾರಿನವರ ಬಾಯಿ ಮುಚ್ಚಿಸುವ ಹೊಸ ತಲೆಮಾರಿನವರಿಗೆ ಈ ಕೃತಿ ಅನೇಕ ಆಯಾಮಗಳಲ್ಲಿ ಕನ್ನಡಿ ಹಿಡಿದು ಇಲ್ಲೇ ಇದೆ. ನಿತ್ಯ ಸತ್ಯ ಎನ್ನುವುದನ್ನು ತೋರಿಸಿಕೊಟ್ಟಿದೆ. ಈ ಓದು ಖುಷಿ ಕೊಟ್ಟಿದೆ.

– ಶ್ರೀರಾಜ್ ವಕ್ವಾಡಿ

ಓದಿ : ಮಾ.8ರಂದು ರಾಜಕಾರಣಿಗಳ ಹೊಸ ಗುಟ್ಟು ಬಹಿರಂಗಪಡಿಸುತ್ತೇನೆ: ಮತ್ತೊಂದು ಬಾಂಬ್ ಸಿಡಿಸಿದ ಮಲಾಲಿ

ಟಾಪ್ ನ್ಯೂಸ್

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.