ಅಧಿಕಾರಿಗಳೇ ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸಿ
Team Udayavani, Mar 7, 2021, 3:32 PM IST
ಕನಕಪುರ:ಅಧಿಕಾರಿಗಳು ಸಣ್ಣಪುಟ್ಟ ಸಮಸ್ಯೆಗೆ ಇಂದು ನಾಳೆ ಎಂದು ಸಾರ್ವಜನಿಕರನ್ನು ಅಲೆದಾಡಿಸಬಾರದು ಎಂದು ಶಾಸಕಿ ಅನಿತಾಕುಮಾರಸ್ವಾಮಿ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ತಾಲೂಕಿನ ಹಾರೋಹಳ್ಳಿಯ ಸ್ಕೌಟ್ ಅಂಡ್ ಗೈಡ್ಸ್ ಭವನದಲ್ಲಿ ನಡೆದ ಕಂದಾಯ ಇಲಾಖೆ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಒಂದೆರಡು ದಿನದಲ್ಲಿ ಬಗೆಹರಿಸಬಹುದಾದ ಸಮಸ್ಯೆಗಳಿಗೆ ಅಧಿಕಾರಿಗಳು ಸ್ಪಂದಿಸದೆ ವಿಳಂಬ ಮಾಡುತ್ತಾರೆ ಎಂದು ಸಾರ್ವಜನಿಕರಿಂದ ದೂರು ಕೇಳಿ ಬರುತ್ತಿದೆ. ಪೌತಿ ಖಾತಿ, ಪಿಂಚಣಿ, ವಿಧವಾ ವೇತನ ಸೇರಿದಂತೆ ಇನ್ನಿತರ ಸಮಸ್ಯೆಗೆ ಸಾರ್ವಜನಿಕರನ್ನು ಸುಖಾ ಸುಮ್ಮನೆ ಅಲೆದಾಡಿಸದೆ ಜನರ ಕಷ್ಟಗಳಿಗೆ ಸ್ಪಂದಿಸಬೇಕು ಎಂದು ಹೇಳಿದರು.
ಬಸ್ ತಂಗುದಾನ ನಿರ್ಮಾಣಕ್ಕೆ ಹಣ ಬಿಡುಗಡೆ: ಇತ್ತೀಚಿಗೆ ಶಾಲಾ-ಕಾಲೇಜುಗಳು ಆರಂಭವಾಗಿದ್ದು, ಗ್ರಾಮೀಣ ಭಾಗದ ಬಸ್ನಿಲ್ದಾಣಗಳಲ್ಲಿ ತಂಗುದಾಣಗಳಿಲ್ಲದೆ ಶಾಲಾ ಮಕ್ಕಳು ಬಿಸಿಲಿನಲ್ಲಿ ಬಸ್ಗಾಗಿ ಕಾದು ನಿಲ್ಲುವಂತಾಗಿದೆ. ಅಲ್ಲಲ್ಲಿ ತಂಗುದಾಣ ನಿರ್ಮಿಸಲು ಸಾರ್ವಜನಿಕರಿಂದ ಅಹವಾಲುಗಳು ಬಂದಿವೆ.
ಹಾರೋಹಳ್ಳಿ- ಮರಳವಾಡಿ ಹೋಬಳಿ ವ್ಯಾಪ್ತಿಗಳಲ್ಲಿ ಶಾಸಕರ ನಿಧಿಯಲ್ಲಿ ಅವಶ್ಯವಿರುವ ಕಡೆ ತಂಗುದಾನ ನಿರ್ಮಿಸಲು ಹಣ ಬಿಡುಗಡೆ ಮಾಡುವುದಾಗಿ ತಿಳಿಸಿದರು. ಮುಂದಿನ ದಿನಗಳಲ್ಲಿ ಪ್ರತಿ ಗ್ರಾಮದಲ್ಲೂ ಗ್ರಾಮಸಭೆ ನಡೆಸಲಿದ್ದು, ಗ್ರಾಮಸ್ಥರಿಂದ ಯಾವುದೇ ಸಮಸ್ಯೆಗಳು ಬಾರದ ಹಾಗೆ ನೋಡಿಕೊಳ್ಳಿ ಎಂದರು.
ತಾಪಂ ಪ್ರಭಾರ ಕಾರ್ಯ ನಿರ್ವಹಣಾಧಿಕಾರಿ ಮೋಹನ್ಬಾಬು, ತಹಶೀಲ್ದಾರ್ ವರ್ಷಾ ಒಡೆಯರ್, ಹಾರೋಹಳ್ಳಿ ಹೋಬಳಿ ಪಿಡಿಒ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ
Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು
Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ
MUST WATCH
ಹೊಸ ಸೇರ್ಪಡೆ
T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ
Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್ ಪಂತ್