BJP ಹಣ ಕೊಟ್ರೆ ತೆಗೆದುಕೊಂಡು TMCಗೆ ಮತ ಹಾಕಿ : ದೀದಿ ಕಿಡಿ
ಬಿಜೆಪಿ ವಿರುದ್ಧ ದೀದಿ ಕಿಡಿ
Team Udayavani, Mar 7, 2021, 5:13 PM IST
ಕೊಲ್ಕತ್ತಾ : ಮೋದಿ ಕೊಲ್ಕತ್ತಾ ಭೇಟಿ ಹಿನ್ನೆಲೆಯಲ್ಲಿಯೇ ಪ್ರತಿಭಟನೆ ಶುರು ಮಾಡಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ತೈಲ ಬೆಲೆ ಮತ್ತು ಎಲ್ ಪಿ ಜಿ ಬೆಲೆ ಏರಿಕೆ ಖಂಡಿಸಿ ಕೇಂದ್ರದ ವಿರುದ್ಧ ಹರಿಹಾಯ್ದಿದ್ದಾರೆ.
ಇನ್ನು ಬಿಜೆಪಿ ಸರ್ಕಾರ ಹಾಗೂ ಮೋದಿ, ಅಮಿತ್ ಶಾ ಬಗ್ಗೆ ಕಿಡಿಕಾರಿರುವ ದೀದಿ, ಭಾರತಕ್ಕೆ ಗೊತ್ತಿದೆ ಯಾರು ಸಿಂಡಿಕೇಟ್ ಗಳು ಎಂದು, ಅವರು ಮೋದಿ ಮತ್ತು ಅಮಿತ್ ಶಾ ಎಂದಿದ್ದಾರೆ.
ನಾವು ಹೋರಾಟಕ್ಕೆ ಸಿದ್ದರಿದ್ದೇವೆ. ಅವರು (BJP)ವೋಟುಗಳಿಗಾಗಿ ಹಣ ನೀಡಿದರೆ ಅದನ್ನು ತೆಗೆದುಕೊಂಡು ಟಿಎಂಸಿಗೆ ಮತ ಹಾಕಿ ಎಂದಿದ್ದಾರೆ. ಇನ್ನು ಬದಲಾವಣೆ ಕೇವಲ ದೆಹಲಿಯಲ್ಲಿ ಮಾತ್ರ ಆಗುತ್ತಿದೆ. ಮಹಿಳೆಯರಿಗೆ ಬಂಗಾಳದಲ್ಲಿ ರಕ್ಷಣೆ ಇಲ್ಲ ಎಂದು ಹೇಳಿರುವ ಮೋದಿ ಮಾತನ್ನು ಉಲ್ಲೇಖಿಸಿದ ಮಮತಾ ಬ್ಯಾನರ್ಜಿ, ಉತ್ತರ ಪ್ರದೇಶ, ಬಿಹಾರ ಮತ್ತು ಇತರೆ ರಾಜ್ಯಗಳನ್ನು ನೋಡಿ. ನಮ್ಮ ಬಂಗಾಳದಲ್ಲಿ ಮಹಿಳೆಯರು ಸುರಕ್ಷಿತವಾಗಿದ್ದಾರೆ ಎಂದು ದೀದಿ ಮೋದಿಗೆ ತಿರುಗೇಟು ಕೊಟ್ಟಿದ್ದಾರೆ.
ಸಾವಿರಾರು ಮಹಿಳೆಯರ ಸಮ್ಮುಖದಲ್ಲಿ ಮಮತಾ ಬ್ಯಾನರ್ಜಿ ಸಿಲಿಗುರಿ ಪ್ರದೇಶದಲ್ಲಿ ಪಾದಯಾತ್ರ ನಡೆಸಿದ್ದಾರೆ. ಈ ವೇಳೆ ಮಹಿಳೆಯರು ಕೆಂಪು ಬಣ್ಣದ ಬಾವುಟವನ್ನು ಹಿಡಿದು ಮಮತಾ ಬ್ಯಾನರ್ಜಿಗೆ ಬೆಂಬಲ ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
MUST WATCH
ಹೊಸ ಸೇರ್ಪಡೆ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ