ಮೀಸಲಿಗಾಗಿ ಪಂಚಮಸಾಲಿ ಹೋರಾಟ : ಸ್ವಾಮೀಜಿ ಮನವೊಲಿಕೆಗೆ ತೆರೆಮರೆ ಯತ್ನ?

ಮೀಸಲಿಗಾಗಿ ಪಂಚಮಸಾಲಿ ಹೋರಾಟ | ತೀವ್ರತೆ ಕಳೆದುಕೊಂಡ ಪ್ರತಿಭಟನೆ

Team Udayavani, Mar 8, 2021, 11:43 AM IST

ಸ್ವಾಮೀಜಿ ಮನವೊಲಿಕೆಗೆ ತೆರೆಮರೆ ಯತ್ನ?

ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗಾಗಿ ನಡೆಸುತ್ತಿರುವ ಕೂಡಲ ಸಂಗಮ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಅವರನ್ನು ಸಮಾ ಧಾನಪಡಿಸಿ ಧರಣಿ ಅಂತ್ಯಗೊಳಿಸುವಂತೆ ಮಾಡಲು ರಾಜ್ಯ ಸರ್ಕಾರ ತೆರೆ ಮರೆ ಯತ್ನ ನಡೆಸುತ್ತಿದೆ.

ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸುತ್ತಿರುವ ಪಂಚಮಸಾಲಿ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಧರಣಿ ಅಂತ್ಯಗೊಳಿಸಲು ಪಂಚಮಸಾಲಿ ಸಮುದಾಯದ ಹಿರಿಯ ಮುಖಂಡರು, ಮಾಜಿ ಸಚಿವರು ಹಾಗೂ ಬಿಜೆಪಿಯ ಹಾಲಿ ಶಾಸಕರ ಮೂಲಕ ಮನವೊಲಿಕೆ ಪ್ರಯತ್ನ ನಡೆಸಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಅರಮನೆ ಮೈದಾನದ ಸಮಾವೇಶದ ನಂತರ ಹೋರಾಟವನ್ನು ಸ್ಥಗಿತಗೊಳಿಸುವಂತೆರಾಜ್ಯ ಸರ್ಕಾರದ ಪರವಾಗಿ ಸಚಿವರಾದಮುರುಗೇಶ್‌ ನಿರಾಣಿ, ಸಿ.ಸಿ. ಪಾಟೀಲ್‌ ಹಾಗೂ ಬಸವರಾಜ ಬೊಮ್ಮಾಯಿ ಭೇಟಿಮಾಡಿ ಮನವಿ ಮಾಡಿದ್ದರು. ಆಗ ಮೀಸಲಾತಿ ನೀಡುವ ಕುರಿತು ಸ್ವತಃ ಮುಖ್ಯಮಂತ್ರಿ ಬಂದು ನಿರ್ದಿಷ್ಟ ಸಮಯ ನೀಡಬೇಕೆಂದು ಪ್ರತಿಭಟನಾಕಾರರು ಪಟ್ಟು ಹಿಡಿದಿದ್ದರು.

ಆದರೆ, ರಾಜ್ಯ ಸರ್ಕಾರ ಕೇವಲ ಪಂಚಮಸಾಲಿ ಮೀಸಲಾತಿ ಯಷ್ಟೇ ಅಲ್ಲ, ರಾಜ್ಯದಲ್ಲಿ ಬೇರೆ ಸಮುದಾಯದವರೂ ಮೀಸಲಿಗೆ ಬೇಡಿಕೆ ಇಟ್ಟಿರುವುದನ್ನು ಸೇರಿಸಿ ಸಮಗ್ರಅಧ್ಯಯನ ನಡೆಸಿ ವರದಿ ನೀಡಲು ಮೂರು ಜನರ ಸಮಿತಿ ರಚನೆ ಮಾಡಿರುವುದರಿಂದ ಪಂಚಮಸಾಲಿ ಸಮುದಾಯದ ಅನಿರ್ದಿಷ್ಟಾವಧಿ ಹೋರಾಟವನ್ನು ನಿರ್ಲಕ್ಷ್ಯ ಮಾಡಿದಂತಾಗಿದೆ.

ಈಗಿರುವ ಪರಿಸ್ಥಿತಿಯಲ್ಲಿ ರಾಜ್ಯ ಸರ್ಕಾರ ತಕ್ಷಣಕ್ಕೆ ಪಂಚಮಸಾಲಿ ಸಮುದಾಯದಮೀಸಲಾತಿ ವಿಷಯದಲ್ಲಿ ಯಾವುದೇ ತೀರ್ಮಾನ ತೆಗೆದುಕೊಳ್ಳಲು ಸಾಧ್ಯವಾಗದಕಾರಣ ಸರ್ಕಾರ ಸಮುದಾಯದ ಹಿರಿಯ ಮುಖಂಡರ ಮೂಲಕ ಧರಣಿ ಅಂತ್ಯಗೊಳಿಸುವಂತೆ ಸರ್ಕಾರ ಪ್ರಯತ್ನ ನಡೆಸುತ್ತಿದೆಎಂಬ ಮಾತುಗಳು ಕೇಳಿ ಬರುತ್ತಿವೆ.

ಸಚಿವರ ನಡೆಯ ಬಗ್ಗೆ ಬೇಸರ: ಪಂಚಮಸಾಲಿ ಸಮುದಾಯದ 2ಎ ಮೀಸಲಾತಿ ಹೋರಾಟದಲ್ಲಿ ಅದೇ ಸಮುದಾಯದ ಸಚಿವರು ಸಮುದಾಯದ ಪರವಾಗಿ ಸರ್ಕಾರದ ಮೇಲೆ ಒತ್ತಡ ಹೇರುವ ಬದಲು, ಸರ್ಕಾರದ ಪರವಾಗಿ ಪ್ರತಿಭಟನೆ ಕೈಬಿಡುವಂತೆ ಪರೋಕ್ಷ ಒತ್ತಡ ಹೇರುತ್ತಿದ್ದಾರೆಂಬ ಆರೋಪ ಪ್ರತಿಭಟನಾಕಾರರಿಂದ ಕೇಳಿ ಬರುತ್ತಿದೆ.

ವೇಗ ಕಳೆದುಕೊಂಡ ಹೋರಾಟ: ಅರಮನೆ ಮೈದಾನದಲ್ಲಿ ಬೃಹತ್‌ ಸಮಾವೇಶ ನಡೆಯು ವವರೆಗೂ ಹೋರಾಟದವೇಗ ಜೋರಾಗಿಯೇ ಇತ್ತು. ಆದರೆ,ಸಮಾವೇಶ ಮುಗಿದ ನಂತರ ಹರಿಹರಪೀಠದ ವಚನಾನಂದ ಸ್ವಾಮೀಜಿಪ್ರತಿಭಟನಾ ಧರಣಿಯಿಂದ ದೂರ ಉಳಿದಿದ್ದು, ಹೋರಾಟ ತನ್ನ ತೀವ್ರತೆ ಕಳೆದುಕೊಳ್ಳುವಂತಾಗಿದೆ ಎಂಬ ಅಭಿ ಪ್ರಾಯ ಕೇಳಿ ಬರುತ್ತಿದೆ.

ಸದನದಲ್ಲಿ ಪ್ರಸ್ತಾಪಕ್ಕೆ ನಿರ್ಧಾರ: ರಾಜ್ಯ ಸರ್ಕಾರ ತಮ್ಮ ಹೋರಾಟಕ್ಕೆ ಸರಿಯಾಗಿ ಸ್ಪಂದಿಸದೇ ಹತ್ತಿಕ್ಕುವ ಯತ್ನ ಮಾಡುತ್ತಿದೆ ಎನ್ನುವ ಕಾರಣಕ್ಕೆ ಮಾ.8ರ ನಂತರ ಈ ಕುರಿತು ಅಧಿವೇಶನದಲ್ಲಿ ಪ್ರಸ್ತಾಪಿಸಲು ಹೋರಾಟದ ಮುಂಚೂಣಿಯಲ್ಲಿ ಗುರುತಿಸಿಕೊಂಡಿರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಮುಂದಾಗಿದ್ದಾರೆ.

ಈ ಕುರಿತು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿಯವರನ್ನು ಭೇಟಿ ಮಾಡಿ ಮನವಿ ಮಾಡಿದ್ದು, ಸೋಮವಾರ ಬಜೆಟ್‌ ಮಂಡನೆಯಾದ ನಂತರ ಮಂಗಳವಾರ ಈ ಕುರಿತು ಸದನದಲ್ಲಿ ಪ್ರಸ್ತಾಪಕ್ಕೆ ಆಗ್ರಹಿಸುವ ಸಾಧ್ಯತೆಯಿದೆ. ಈ ಸಂದರ್ಭದಲ್ಲಿ ರಾಜ್ಯ ಸರ್ಕಾರದ ಉತ್ತರ ನೋಡಿಕೊಂಡು ಮತ್ತೆ ಮುಂದಿನ ಹೋರಾಟದ ಕುರಿತು ಚರ್ಚಿಸಿ ನಿರ್ಧರಿಸಲು ಮುಂದಾಗಿದ್ದಾರೆಂದು ತಿಳಿದು ಬಂದಿದೆ.

 

ಶಂಕರ ಪಾಗೋಜಿ

 

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.