ಮದುವೆಯಾಗುತ್ತೀಯಾ ಎಂದು ಕೇಳಿರಲಿಲ್ಲ..! : ಬೋಬ್ಡೆ ಸ್ಪಷ್ಟನೆ
Team Udayavani, Mar 8, 2021, 5:12 PM IST
ನವ ದೆಹಲಿ : ಇತ್ತೀಚೆಗಿನ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟಿನ ಮುಖ್ಯ ನಾಯಮೂರ್ತಿ ಎಸ್ ಎ ಬೋಬ್ಡೆ ಮಹಿಳಾ ದಿನಾಚರಣೆಯ ದಿನದಂದು ಸ್ಪಷ್ಟೀಕರಣ ನೀಡಿದ್ದಾರೆ. ಸುಪ್ರೀಂ ಕೋರ್ಟ್ ಮಹಿಳೆಯರಿಗೆ ಗೌರವವನ್ನು ನೀಡುತ್ತದೆ ಎಂದು ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಮೂರ್ತಿ ಎಸ್ ಎ ಬೋಬ್ಡೆ ಹೇಳಿದ್ದಾರೆ.
ಕಳೆದ ವಾರ ಅತ್ಯಾಚಾರಕ್ಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಯ ವೇಳೆ ಬೋಬ್ಡೆ ಕೇಳಿದ ಪ್ರಶ್ನೆಯೊಂದು ಸಾಮಾಜಿಕ ವಲಯದಲ್ಲಿ ದೊಡ್ಡ ಮಟ್ಟದಲ್ಲಿ ಚರ್ಚೆಗೆ ಕಾರಣವಾಗಿತ್ತು, ಆ ವಿಷಯಕ್ಕೆ ಪೂರ್ಣ ವಿರಾಮ ಇಡುವಂತೆ ಇಂದು ಬೋಬ್ಡೆ ಸ್ಪಷ್ಟೀಕರಣ ಕೊಟ್ಟಿದ್ದಾರೆ.
ಓದಿ : ಮಹಿಳಾ ದಿನಾಚರಣೆ ವಿಶೇಷ : ಪತಿ ಆಸರೆ ಕಳೆದುಕೊಂಡರೂ ಕೃಷಿಯಲ್ಲಿ ಸಾಧನೆ
ನಾವು ಅವನನ್ನು(ಅತ್ಯಾಚಾರ ಪ್ರಕರಣದ ಆರೋಪಿ) ಮದುವೆಯಾಗುವಂತೆ ಕೇಳಲಿಲ್ಲ. ಮದುವೆಯಾಗುವಿರೇ..? ಎಂದು ಕೇಳಿದ್ದೇವೆ. ಮದುವೆಯಾಗು ಎಂದು ಹೇಳಲಿಲ್ಲ. ನಮ್ಮ ಪ್ರಶ್ನೆಯ ಅರ್ಥ ಸುದ್ದಿಗಳಲ್ಲಿ ವರದಿಯಾಗಿದ್ದಕ್ಕಿಂತ ಭಿನ್ನವಾಗಿತ್ತು. ಸುಪ್ರೀಂ ಕೋರ್ಟ್ ಎಂದಿಗೂ ಮಹಿಳೆಯರಿಗೆ ಗೌರವವನ್ನು ನೀಡುತ್ತದೆ ಎಂದು ಅವರು ಹೇಳಿದ್ದಾರೆ.
ಶಾಲಾ ವಿದ್ಯಾರ್ಥಿನಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಮಹಾರಾಷ್ಟ್ರ ರಾಜ್ಯ ವಿದ್ಯುತ್ ಉತ್ಪಾದನಾ ಕಂಪನಿಯ ತಂತ್ರಜ್ಞ ಮೋಹಿತ್ ಸುಭಾಷ್ ಚವಾಣ್ ಅವರ ಜಾಮೀನು ಕೋರಿಕೆಯನ್ನು ಮಾರ್ಚ್ 1 ರಂದು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿತ್ತು. ಅವರು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾನೂನಿನಡಿಯಲ್ಲಿ ಆರೋಪಗಳನ್ನು ಎದುರಿಸಿದ್ದರು.
ನೀವು ಮದುವೆಯಾಗಲು ಬಯಸಿದರೆ, ನಾವು ನಿಮಗೆ ಸಹಾಯ ಮಾಡಬಹುದು. ಇಲ್ಲದಿದ್ದರೆ, ನೀವು ನಿಮ್ಮ ಕೆಲಸವನ್ನು ಕಳೆದುಕೊಂಡು ಜೈಲಿಗೆ ಹೋಗುತ್ತೀರಿ. ನೀವು ಹುಡುಗಿಯನ್ನು ಮೋಹಿಸಿದ್ದೀರಿ, ಅವಳ ಮೇಲೆ ಅತ್ಯಾಚಾರ ಮಾಡಿದ್ದೀರಿ. ನಾವು ನಿಮ್ಮನ್ನು ಒತ್ತಾಯಿಸುತ್ತಿಲ್ಲ. ನಂತರ ನ್ಯಾಯಾಲಯವು ನಿಮ್ಮನ್ನು ಒತ್ತಾಯಿಸಿತು ಎಂದು ನೀವು ಹೇಳಬಹುದು” ಎಂದು ಮುಖ್ಯ ನ್ಯಾಯಮೂರ್ತಿ ಬೋಬ್ಡೆ ಅರ್ಜಿದಾರರ ವಕೀಲರಿಗೆ ತಿಳಿಸಿದ್ದರು.
ಇನ್ನು, ಈ ವಿಚಾರಕ್ಕೆ ಸಂಬಂಧಪಟ್ಟಂತೆ, ಹಲವಾರು ಮಹಿಳಾ ಹಕ್ಕುಗಳ ಕಾರ್ಯಕರ್ತರು, ಪ್ರಗತಿಪರ ಚಿಂತಕರು, ಬುದ್ಧಿಜೀವಿಗಳು, ಬರಹಗಾರರು ಮತ್ತು ಕಲಾವಿದರು ಮುಖ್ಯ ನ್ಯಾಯಮೂರ್ತಿ ಬೊಬ್ಡೆ ಅವರಿಗೆ ಕ್ಷಮೆಯಾಚಿಸಬೇಕು ಮತ್ತು ಅವರ ಮಾತನ್ನು ಹಿಂತೆಗೆದುಕೊಳ್ಳಬೇಕೆಂದು ಒತ್ತಾಯಿಸಿದ್ದರು.
ಅವರು ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಹುದ್ದೆಯಿಂದ ಕೆಳಗಿಳಿಯಬೇಕೆಂದು ಒತ್ತಾಯಿಸಿ 5,000 ಕ್ಕೂ ಹೆಚ್ಚು ಜನರು ಪತ್ರಕ್ಕೆ ಸಹಿ ಹಾಕಿದ್ದರು. ನ್ಯಾಯಾಲಯದ ಅಧಿಕಾರಿಯೊಬ್ಬರು ಈ ಟೀಕೆಗಳನ್ನು ಅನ್ಯಾಯವೆಂದು ಹೇಳಿದ್ದಾರೆ, 18 ವರ್ಷ ತುಂಬಿದ ನಂತರ ಅಪ್ರಾಪ್ತ ವಯಸ್ಕ ಬಾಲಕಿಯನ್ನು, ಮದುವೆಯಾಗುವುದಾಗಿ ಆರೋಪಿಯು ಒಪ್ಪಿಕೊಂಡಿರುವ “ನ್ಯಾಯಾಂಗ ದಾಖಲೆಗಳನ್ನು” ಆಧರಿಸಿದೆ ಎಂದು ಹೇಳಿರುವುದನ್ನು ಪಿಟಿಐ ವರದಿ ಮಾಡಿದೆ.
ಮುಖ್ಯ ನ್ಯಾಯಮೂರ್ತಿ ಬೋಬ್ಡೆ ಇಂದು ಈ ವಿಷಯದಲ್ಲಿ “ಸಂಪೂರ್ಣ ತಪ್ಪು ವರದಿ ಆಗಿದೆ” ಎಂದು ಹೇಳಿರುವುದು ವರದಿಯಾಗಿದೆ.
ಓದಿ : ಕೃಷಿ ಕಾಯ್ದೆ ವಿರೋಧಿ ಹೋರಾಟಕ್ಕೆ ಮಹಿಳೆಯರ ಸಾಥ್ : ದೆಹಲಿ ಗಡಿಗೆ ಲಗ್ಗೆಯಿಟ್ಟ ರೈತ ನಾರಿಯರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
MUST WATCH
ಹೊಸ ಸೇರ್ಪಡೆ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು
ಈ ಪೆನ್ಡ್ರೈವ್ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ