ಮನಸ್ಸಿಗೆ ಮುದ ನೀಡಿದ ಚಿತ್ರಸಂತೆ

ಕೋವಿಡ್ ಜಾಗೃತಿ, ಸ್ವಚ್ಛ ಕಲಬುರಗಿ ಮತ್ತು ಹಳ್ಳಿ ಜೀವನ ಕುರಿತ ಮಕ್ಕಳ ಸ್ಥಳದಲ್ಲೇ ಚಿತ್ರ ಬಿಡಿಸಿದರು.

Team Udayavani, Mar 8, 2021, 7:01 PM IST

ಮನಸ್ಸಿಗೆ ಮುದ ನೀಡಿದ ಚಿತ್ರಸಂತೆ

ಕಲಬುರಗಿ: ಹೊರಗೆ ತಲೆ ಸುಡುವ ಬಿರು ಬಿಸಿಲು. ಕಣ್ಣೆತ್ತಿ ನೋಡಲು ಆಗದಷ್ಟು ಸೂರ್ಯನ ಪ್ರತಾಪ. ಅದೇ ಸ್ವಲ್ಪ ಬಿಡುವು ಮಾಡಿಕೊಂಡು ರಸ್ತೆಯಿಂದ ಒಳ ಹೊಕ್ಕು ಹೋದರೆ ಕಣ್ಮನ ಸೆಳೆಯುವ ಚಿತ್ತಾರಗಳು. ಮನಸ್ಸಿಗೆ ಮುದ ನೀಡುವ ಬಣ್ಣ-ಬಣ್ಣ ಕಲಾಕೃತಿಗಳು. ಕಿವಿಗೆ ಇಂಪೆನಿಸುವ ಗಾಯನ.

ಇದು ಇಲ್ಲಿನ ಕನ್ನಡ ಭವನ ಆವರಣದಲ್ಲಿರುವ ಬಾಪುಗೌಡ ದರ್ಶನಾಪುರ ರಂಗ ಮಂದಿರದಲ್ಲಿ ರವಿವಾರ ಚಿತ್ರಸಂತೆ ನೀಡಿದ ಹಿತ ಅನುಭವ. ವೈವಿಧ್ಯಮಯ ಬಣ್ಣಗಳೊಂದಿಗೆ ಭಾವನೆಗಳನ್ನು ಬೆರೆಸಿ ಕಲಾವಿದರ ಕುಂಚದಲ್ಲಿ ಅರಳಿದ ಹೊಸ ಲೋಕವೇ ಅನಾವರಣಗೊಂಡಿತ್ತು. ಕಲಾಸಕ್ತರ ಕಣ್ಣಿಗೆ ಹಬ್ಬದ ವಾತಾವರಣವನ್ನು ಚಿತ್ರಸಂತೆ ಸೃಷ್ಟಿಸಿತ್ತು.

ಕಲ್ಯಾಣ ಕರ್ನಾಟಕ ಮಾನವ ಅಭಿವೃದ್ಧಿ, ಕೃಷಿ ಮತ್ತು ಸಾಂಸ್ಕೃತಿಕ ಸಂಘ, ವಿಕಾಸ ಅಕಾಡೆಮಿ, ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ, ಗುಲಬರ್ಗಾ ವಿಶ್ವವಿದ್ಯಾಲಯ ಚೈತನ್ಯಮಯಿ ಟ್ರಸ್ಟ್‌, ದೃಶ್ಯ ಬೆಳಕು ಸಾಂಸ್ಕೃತಿಕ ಸಂಸ್ಥೆ, ದಿ ಆರ್ಟ್‌ ಇಂಟಿಗ್ರೇಶನ್‌ ಸೊಸೈಟಿ ಸಂಯುಕ್ತಾಶ್ರಯದಲ್ಲಿ ನಡೆದ ಚಿತ್ರಸಂತೆಯಲ್ಲಿ ವಿವಿಧ ಕಲಾ ಪ್ರಕಾರದ ಚಿತ್ರಗಳು ಗಮನ ನೋಡುಗರ ಸೆಳೆದವು.

ನಾಡಿನ ಪ್ರಖ್ಯಾತ ಕಲಾವಿದ ಎಸ್‌.ಎಂ. ಪಂಡಿತರ ಶಿಷ್ಯ, ಶತಾಯುಷಿ ಕಲಾವಿದ ಎಂ.ಎಂ.ಕೋರಾಕರ್‌ ಸೇರಿ ಕಲಬುರಗಿ, ಬೀದರ್‌, ಯಾದಗಿರಿ,ರಾಯಚೂರು, ಬಾಗಲಕೋಟೆ, ಬೆಳಗಾವಿ ಸೇರಿ 90ಕ್ಕೂ ಹೆಚ್ಚು ಕಲಾವಿದರು ತಮ್ಮ ಕಲಾಕೃತಿಗಳನ್ನು ಪ್ರದರ್ಶಿಸಿದರು. ರೈತಾಪಿ ಜೀವನ, ಗ್ರಾಮೀಣ ಸೊಗಡು, ನಿಸರ್ಗ ಚಿತ್ರ, ಅಮೂರ್ತಚಿತ್ರ, ನೈಜ ಶೈಲಿಯ ಚಿತ್ರಗಳು, ಜಲವರ್ಣಗಳಲ್ಲಿ ರಚಿಸಿದ ಚಿತ್ರಗಳು, ಉಬ್ಬು ಚಿತ್ರಗಳು, ಶಿಲ್ಪ ಕಲಾಕೃತಿಗಳು ಕಲಾಸಕ್ತರನ್ನು ಸೆಳೆದವು. ಕೊರೊನಾ ಕುರಿತಾದ ಕಲಾಕೃತಿಗಳು ಪ್ರದರ್ಶನದಲ್ಲಿ ಕಂಡು ಬಂದವು.

ವ್ಯಕ್ತಿ ಚಿತ್ರಕ್ಕೆ ಬೇಡಿಕೆ: ಚಿತ್ರ ಸಂತೆಯಲ್ಲಿ ಸ್ಥಳದಲ್ಲೇ ಬಿಡಿಸುವ ವ್ಯಕ್ತಿ ಚಿತ್ರಕ್ಕೆ ಹೆಚ್ಚಿನ ಬೇಡಿಕೆ ಕಂಡುಬಂತು. ಚಿತ್ರಸಂತೆಗೆ ಆಗಮಿಸಿದ್ದ ಹಲವರು ಕಲಾವಿದರ ಮುಂದೆ ಕೂತು ತಮ್ಮದೇ ಚಿತ್ರ ಬಿಡಿಸಿಕೊಂಡು ಸಂಭ್ರಮ ಪಟ್ಟರು. ಏಕಾಗ್ರತೆಯಿಂದ ಕುಳಿತು ನೈಜ ಚಿತ್ರ, ರೇಖಾ, ವ್ಯಂಗ್ಯ ಚಿತ್ರಗಳನ್ನು ಬಿಡಿಸಿಕೊಂಡರು. ಇನ್ನು ಕೆಲವರು ತಮಗೆ ಬೇಕಾದವರು ಅಥವಾ ತಮ್ಮದೇ ಹಳೆಯ ಚೆಂದದ ಫೋಟೋಗಳನ್ನು ಮೊಬೈಲ್‌ನಲ್ಲಿ ತೋರಿಸಿ ಅದೇ ರೀತಿ ಚಿತ್ರಗಳನ್ನು ಕಲಾವಿದರಿಂದ ರಚಿಸಿಕೊಂಡರು.

ಮಕ್ಕಳ ಕಲರವ: ಚಿತ್ರಸಂತೆ ಅಂಗವಾಗಿ ಪ್ರೌಢ ಶಾಲೆ ಮಕ್ಕಳಿಗೆ ಸ್ಥಳದಲ್ಲೇ ಚಿತ್ರಕಲೆ ಬಿಡಿಸುವ ಮತ್ತು ಕುಂಭ ಕಲೆಯ ಕಾರ್ಯಾಗಾರ ನಡೆಯಿತು. ವಿವಿಧ ಶಾಲೆಗಳ ಸುಮಾರು 300 ವಿದ್ಯಾರ್ಥಿಗಳು ಕಾರ್ಯಾಗಾರದಲ್ಲಿ ಪಾಲ್ಗೊಂಡಿದ್ದರು. ಇದರಿಂದ ಚಿತ್ರಸಂತೆಯಲ್ಲಿ ಮಕ್ಕಳ ಕಲರವ ಜೋರಾಗಿಯೇ ಇರುವುದೊಂದಿಗೆ ಮತ್ತಷ್ಟು ಮೆರಗು ತುಂಬಿತ್ತು. ಕೋವಿಡ್ ಜಾಗೃತಿ, ಸ್ವಚ್ಛ ಕಲಬುರಗಿ ಮತ್ತು ಹಳ್ಳಿ ಜೀವನ ಕುರಿತ ಮಕ್ಕಳ ಸ್ಥಳದಲ್ಲೇ ಚಿತ್ರ ಬಿಡಿಸಿದರು.

ಕುಂಬಾರಿಕೆ ಕೌಶಲ್ಯ ಮಕ್ಕಳಲ್ಲಿ ಬೆರುಗು ಮೂಡಿಸಿತ್ತು. ಮಕ್ಕಳು, ಯುವಕ, ಯುವತಿಯರು ತಾವೇ ಕೈಯಾರೇ ಮಣ್ಣು ಬಳಸಿ ಮಡಿಕೆ, ಪಾತ್ರೆ, ಪಗಡಿ, ಹೂಕುಂಡಗಳನ್ನು ತಯಾರು ಮಾಡಿ ಖುಷಿ ಪಟ್ಟರು. ಅಲ್ಲದೇ, ಚಿತ್ರಸಂತೆಯಲ್ಲಿ ದಿನವಿಡೀ ಮನೋರಂಜನೆ ಕಾರ್ಯಕ್ರಮ ನಡೆಯಿತು. ಕಲಾವಿದರಿಂದ ಚಿತ್ರಗೀತೆಗಳು ಗಾಯನ, ಕಾಲೇಜು ವಿದ್ಯಾರ್ಥಿಗಳಿಂದ ಮೂಡಿ ಬಂದ ನೃತ್ಯ, ಭರತನಾಟ್ಯ ಹಾಗೂ ಮಿಮಿಕ್ರಿ ಗಮನ ಸೆಳೆಯಿತು.

ಚಿತ್ರ ಬಿಡಿಸುವ ಉದ್ಘಾಟನೆ: ಇದಕ್ಕೂ ಬೆಳಗ್ಗೆ ಚಿತ್ರ ಸಂತೆಯನ್ನು ಕರ್ನಾಟಕ ಲಲಿತಕಲಾ ಅಕಾಡೆಮಿ ಅಧ್ಯಕ್ಷ ಮಹೇಂದ್ರ ಡಿ. ಚಿತ್ರ ಬಿಡಿಸುವುದರ ಮೂಲಕ ಉದ್ಘಾಟಿಸಿದರು. ಗುಲಬರ್ಗಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ| ದಯಾನಂದ ಅಗಸರ, ಗುವಿವಿ ದೃಶ್ಯಕಲಾ ವಿಭಾಗದ ಸಂಯೋಜನಾಧಿಕಾರಿ ಅಬ್ದುಲ್‌ ರಬ್‌ ಉಸ್ತಾದ್‌, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೆಶಕ ದತ್ತಪ್ಪ ಸಾಗನೂರ, ಚಿತ್ರಸಂತೆಯ ಪ್ರಧಾನ ಸಂಯೋಜಕ ಡಾ| ಎ.ಎಸ್‌. ಪಾಟೀಲ, ಸಂಯೋಜಕ ಡಾ|ಪರಶುರಾಮ ಪಿ. ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

4-manjeshwara-1

Manjeshwara: ಆ್ಯಂಬುಲೆನ್ಸ್- ಕಾರು ಭೀಕರ ಅಪಘಾತ; ಮೂವರು ಮೃತ್ಯು, ನಾಲ್ವರಿಗೆ ಗಾಯ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.