ಹೃದಯಕ್ಕಷ್ಟೇ ಬೆಣ್ಣೆ! : ಕನಸಾಗೇ ಉಳಿದ ವಿಮಾನ ನಿಲ್ದಾಣ

ವೈದ್ಯಕೀಯ ಕಾಲೇಜು ಮರೀಚಿಕೆ , ಬಜೆಟ್‌ನಲ್ಲಿ ದಕ್ಕಿಲ್ಲ ಬೆಣ್ಣೆ ದೋಸೆ

Team Udayavani, Mar 9, 2021, 12:19 PM IST

ಹೃದಯಕ್ಕಷ್ಟೇ ಬೆಣ್ಣೆ! : ಕನಸಾಗೇ ಉಳಿದ ವಿಮಾನ ನಿಲ್ದಾಣ

ದಾವಣಗೆರೆ: ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಸೋಮವಾರ ಮಂಡಿಸಿದ ಬಜೆಟ್‌ನಲ್ಲಿ ಮಧ್ಯಕರ್ನಾಟಕದ ಪ್ರಮುಖ ಜಿಲ್ಲೆ ದಾವಣಗೆರೆಗೆ ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿ ಒಂದು ವಿಶೇಷ ಸೌಲಭ್ಯ ಘೋಷಿಸಿದ್ದು ಬಿಟ್ಟರೆ ಬೇರೆ ಯಾವ ವಿಶೇಷ ಕೊಡುಗೆಗಳೂ ಲಭಿಸಿಲ್ಲ. ಜಿಲ್ಲೆಯ ಜನರ ಹಲವು ನಿರೀಕ್ಷೆಗಳು ಹುಸಿಗೊಂಡಿದ್ದು ಜಿಲ್ಲೆಯ ಪಾಲಿಗೆ ಈ ಬಜೆಟ್‌ ನಿರಾಶಾದಾಯಕವಾಗಿದೆ.

ಕಳೆದ ಎರಡ್ಮೂರು ಬಜೆಟ್‌ಗಳಲ್ಲಿಯೂ ಜಿಲ್ಲೆಗೆ ಗುರುತರವಾದ ಕೊಡುಗೆ ಸಿಕ್ಕಿಲ್ಲ. ಪ್ರಸ್ತುತ ಕೋವಿಡ್ ನಂತರ ಮಂಡನೆಯಾದ ಬಜೆಟ್‌ ನಲ್ಲಾದರೂ ಜಿಲ್ಲೆಯ ಆರ್ಥಿಕ, ಸಾಮಾಜಿಕ,ಶೈಕ್ಷಣಿಕ ಹಾಗೂ ಆರೋಗ್ಯ ಕ್ಷೇತ್ರ ಪುನಶ್ಚೇತನಕ್ಕೆ ಪೂರಕ ವಿಶೇಷ ಸೌಲಭ್ಯಗಳು ಸಿಗಬಹುದು. ಅದರಲ್ಲಿಯೂ ಪ್ರಸ್ತುತ ಸ್ಥಳೀಯವಾಗಿ ಸಚಿವರಿಲ್ಲದ ಜಿಲ್ಲೆಯ (ಉಸ್ತುವಾರಿ ಸಚಿವರು ಬೇರೆ ಜಿಲ್ಲೆಯವರು) ಬಗ್ಗೆ ಸ್ವತಃ ಮುಖ್ಯಮಂತ್ರಿಯವರೇ ಮುತುವರ್ಜಿ ವಹಿಸಿ, ಅನೇಕ ವಿಶೇಷ ಕೊಡುಗೆ ನೀಡಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ, ಆ ನಿರೀಕ್ಷೆಗಳೆಲ್ಲವೂ ಹುಸಿಯಾಗಿವೆ.

ಪ್ರಸಕ್ತ ಬಜೆಟ್‌ನಲ್ಲಿ ದಾವಣಗೆರೆ ಜಿಲ್ಲೆಗೆ ಎಂದೇ ವಿಶೇಷವಾಗಿ ಘೋಷಣೆಯಾಗಿದ್ದು ಜಯದೇವ ಹೃದ್ರೋಗ ವಿಜ್ಞಾನ ಸಂಸ್ಥೆಯ ಉಪಕೇಂದ್ರ. 50 ಹಾಸಿಗೆ ಸಾಮರ್ಥ್ಯದ ಈ ಉಪಕೇಂದ್ರವನ್ನು 20 ಕೋಟಿ ರೂ. ವೆಚ್ಚದಲ್ಲಿ ಪ್ರಾರಂಭಿಸುವುದಾಗಿ ಸರ್ಕಾರ ಘೋಷಿಸಿದೆ. ಈ ಸೌಲಭ್ಯವೊಂದರ ಮೂಲಕ ದಾವಣಗೆರೆ ಜಿಲ್ಲೆಯ ಹೆಸರು ಈ ಬಾರಿಯ ಬಜೆಟ್‌ ಪುಸ್ತಕದಲ್ಲಿ ವಿಶೇಷವಾಗಿ ಗುರುತಿಸಿಕೊಂಡಂತಾಗಿದೆ. ಜಿಲ್ಲೆಗೆ ನೀಡಿದ ಈ ಕೊಡುಗೆ ಅನುಷ್ಠಾನಗೊಂಡರೆ ಜಿಲ್ಲೆಯ ಜನರ ಪಾಲಿಗೆ ಇದು ಬಹುಪಯೋಗಿ ಹಾಗೂ ಬಹು ಅಗತ್ಯತೆಯ ಸೌಲಭ್ಯವಾಗಲಿದೆ ಎಂಬುದು ಸತ್ಯದ ಸಂಗತಿ.

ಜಯದೇವ ಹೃದ್ರೋಗ ವಿಜ್ಞಾನ ಸಂಸ್ಥೆಯ ಉಪಕೇಂದ್ರದ ವಿಶೇಷ ಕೊಡುಗೆ ಜತೆಗೆ ಬಜೆಟ್‌ನಲ್ಲಿ ಕೆಲವು ಸಾಮಾನ್ಯ ಸೌಲಭ್ಯಗಳು ಜಿಲ್ಲೆಗೂ ದೊರೆತಿವೆ. ಭದ್ರಾ ಮೇಲ್ದಂಡೆ ಯೋಜನೆಯ 21,474 ಕೋಟಿ ರೂ.ಗಳ ಪರಿಷ್ಕೃತ ಅಂದಾಜು ಮೊತ್ತಕ್ಕೆ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದ್ದು ಈ ರಾಷ್ಟ್ರೀಯ ಯೋಜನೆಯಿಂದ ಚಿಕ್ಕಮಗಳೂರು, ಚಿತ್ರದುರ್ಗ, ತುಮಕೂರು ಸೇರಿ ದಾವಣಗೆರೆಜಿಲ್ಲೆಯ ರೈತರಿಗೂ ಅನುಕೂಲವಾಗಲಿದೆ.ವೈಜ್ಞಾನಿಕ ಸಂಚಾರ ನಿರ್ವಹಣಾ ವ್ಯವಸ್ಥೆಯಡಿಅಪಘಾತಗಳನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಅತ್ಯಾಧುನಿಕ ಸಂಚಾರ ವ್ಯವಸ್ಥೆ, ಇಂಟಲಿಜೆಂಟ್‌ ಟ್ರಾಫಿಕ್‌ ಮ್ಯಾನೇಜ್‌ಮೆಂಟ್‌ ಸಿಸ್ಟಂ ಮತ್ತು ಸೇಫ್ಟಿ ಸೊಲ್ಯೂಷನ್ಸ್‌ ಪ್ರಾಯೋಗಿಕವಾಗಿ ಶಿವಮೊಗ್ಗ-ಸವಳಂಗ-ಶಿಕಾರಿಪುರ-ಶಿರಾಳಕೊಪ್ಪ ರಸ್ತೆಗಳಲ್ಲಿ ಅಭಿವೃದ್ಧಿಪಡಿಸಲಾಗುತ್ತಿದ್ದು ಇದರಿಂದ ಜಿಲ್ಲೆಯ ಗಡಿಭಾಗದ ಜನರಿಗೆ ಹಾಗೂ ಶಿವಮೊಗ್ಗ ಸಂಪರ್ಕಿಸುವ ಜಿಲ್ಲೆಯ ಜನರಿಗೆ ತುಸು ಪ್ರಯೋಜನವಾಗಲಿದೆ.

ಸಾಮಾನ್ಯ ಸೌಲಭ್ಯ.. : ಅದೇ ರೀತಿ ನಿರ್ಮಾಣ ಕಾರ್ಮಿಕರು ಎದುರಿಸುತ್ತಿರುವ ವಸತಿ ಸಮಸ್ಯೆಗೆ ಸ್ಪಂದಿಸಿರುವ ಸರ್ಕಾರ, ಆಯ್ದ ಜಿಲ್ಲೆಗಳ ಪೈಕಿ ದಾವಣಗೆರೆ ಜಿಲ್ಲೆಯಲ್ಲಿಯೂ ಒಂದು ಸುಸಜ್ಜಿತ ತಾತ್ಕಾಲಿಕ ವಸತಿಗೃಹ ಸೌಲಭ್ಯ ನಿರ್ಮಾಣ ಮಾಡಲು ಉದ್ದೇಶಿಸಿದೆ. ಘನತ್ಯಾಜ್ಯ ನಿರ್ವಹಣೆಯಲ್ಲಿ ಸಾರ್ವಜನಿಕ ಸಹಭಾಗಿತ್ವಉತ್ತೇಜಿಸಲು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಸ್ವಚ್ಛ ಗೃಹ ಕಲಿಕಾ ಕೇಂದ್ರಗಳನ್ನು ಒಂಭತ್ತು ಕೋಟಿ ರೂ.ಗಳಲ್ಲಿ ಅಭಿವೃದ್ಧಿಪಡಿಸಲು ಸರ್ಕಾರ ನಿರ್ಧರಿಸಿದ್ದು ಈ ಪ್ರಯೋಜನ ಜಿಲ್ಲೆಗೂ ಅನ್ವಯಿಸಲಿದೆ. ಕೇಂದೀಕೃತ ಹಸಿತ್ಯಾಜ್ಯಸಂಸ್ಕರಣಾ ಕೇಂದ್ರಗಳ  ಮೇಲಿನ ಹೊರೆ ಹಾಗೂ ಸಾರಿಗೆ ವೆಚ್ಚವನ್ನು ಕಡಿಮೆ ಮಾಡಲು ರಾಜ್ಯದ 10ಮಹಾನಗರ ಪಾಲಿಕೆಗಳು ಹಾಗೂ 59ನಗರಸಭೆಗಳಲ್ಲಿ 89 ಸಮುದಾಯ ಮಿಶ್ರಗೊಬ್ಬರ ಘಟಕಗಳನ್ನು ಸ್ಥಾಪಿಸಲು 250ಕೋಟಿ ರೂ. ಮೀಸಲಿಡಲಾಗಿದೆ. ಇದರಿಂದ ದಾವಣಗೆರೆ ಮಹಾನಗರ ಪಾಲಿಕೆ ಜತೆಗೆ ಜಿಲ್ಲೆಯ ವಿವಿಧ ನಗರಸಭೆಗಳಿಗೂ ಸೌಲಭ್ಯ ಸಿಗುವ ನಿರೀಕ್ಷೆ ಮೂಡಿಸಿದೆ. ಜಿಲ್ಲೆಗೊಂದು ಗೋಶಾಲೆ ಸ್ಥಾಪನೆಯಾಗಲಿದೆ.

ಹುಸಿಯಾದ ನಿರೀಕ್ಷೆಗಳು: ಈ ಬಾರಿಯ ಬಜೆಟ್‌ನಲ್ಲಿ ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜು ಮಂಜೂರಾಗಬಹುದು. ಬಹುದಿನಗಳ ಬೇಡಿಕೆಯಾದ ವಿಮಾನ ನಿಲ್ದಾಣದ ಬಗ್ಗೆ ಪ್ರಸ್ತಾಪವಾಗಬಹುದು. ಮಾಯಕೊಂಡಹೊಸ ತಾಲೂಕಾಗಬಹುದು. ಮೆಕ್ಕೆಜೋಳದ ಕಣಜ ಖ್ಯಾತಿಯ ಜಿಲ್ಲೆಯಲ್ಲಿ ಮೆಕ್ಕೆಜೋಳ ಸಂಸ್ಕರಣ ಘಟಕ ಇಲ್ಲವೇ ಕೃಷಿ ಉತ್ಪನ್ನ ಪೂರಕ ಕೈಗಾರಿಕೆ, ಉದ್ದಿಮೆಗಳ ಸ್ಥಾಪನೆಯಾದೀತು. ಚಿಗಟೇರಿ ಜಿಲ್ಲಾಸ್ಪತ್ರೆ ಮತ್ತು ಸುತ್ತಮುತ್ತಲಿನ ಜಿಲ್ಲೆಯ ಜನರ ಪ್ರಮುಖ ಆರೋಗ್ಯ ಕೇಂದ್ರ ಮೇಲ್ದರ್ಜೆಗೇರಿಸಬಹುದು. ಜಿಲ್ಲೆಯ ಕಾಡಜ್ಜಿಯ ಕೃಷಿ ತರಬೇತಿ ಕೇಂದ್ರದಲ್ಲಿ ಕೃಷಿ ಕಾಲೇಜು ಘೋಷಿಸಬಹುದು. ಜಿಲ್ಲೆಗೆ ಪ್ರತ್ಯೇಕಹಾಲು ಒಕ್ಕೂಟ ಕಾರ್ಯಾರಂಭಕ್ಕೆ ಅನುದಾನ ಘೋಷಿಸಬಹುದು ಸೇರಿದಂತೆ ಹತ್ತು ಹಲವು ಜನರ ನಿರೀಕ್ಷೆಗಳು ಹುಸಿಯಾಗಿವೆ.

ಒಟ್ಟಾರೆ ಈ ಬಾರಿಯ ಬಜೆಟ್‌ ಕೂಡ ಜಿಲ್ಲೆಯ ಜನರ ಹತ್ತು ಹಲವು ನಿರೀಕ್ಷೆಗಳನ್ನು ಹುಸಿಗೊಳಿಸುವ ಮೂಲಕ ನಿರಾಶಾದಾಯಕವಾಗಿರುವುದು ಜನರ ಅಸಮಾಧಾನಕ್ಕೆ ಕಾರಣವಾಗಿದೆ.

ಸಚಿವರಿಲ್ಲ ಎಂಬುದೂ ಹಿನ್ನಡೆ :

ಬಜೆಟ್‌ನಲ್ಲಿ ಜಿಲ್ಲೆಗೆ ವಿಶೇಷ ಕೊಡುಗೆಗಳು ಸಿಗದೆ ಇರಲು ಜಿಲ್ಲೆಯ ಶಾಸಕರಾರೂ ಸಚಿವ ಸಂಪುಟದಲ್ಲಿಲ್ಲ ಎನ್ನುವುದು ಸಹ ಕಾರಣ ಎಂದು ವಿಶ್ಲೇಷಿಸಲಾಗುತ್ತಿದೆ. ಸಚಿವ ಸಂಪುಟದಲ್ಲಿ ಜಿಲ್ಲೆಯ ಸಮಸ್ಯೆ, ಬೇಡಿಕೆಗಳ ಬಗ್ಗೆ ಜ್ಞಾನವಿರುವ, ಕಾಳಜಿ ಇರುವ ಜಿಲ್ಲೆಯ ಸಚಿವರು ಇದ್ದಿದ್ದರೆ ಜಿಲ್ಲೆಗೆ ಇನ್ನಷ್ಟು ಹೆಚ್ಚಿನ ಕೊಡುಗೆಗಳನ್ನು ನಿರೀಕ್ಷಿಸಬಹುದಿತ್ತು. ಜಿಲ್ಲೆಯ ಒಟ್ಟು ಏಳು ವಿಧಾನಸಭೆ ಕ್ಷೇತ್ರಗಳಲ್ಲಿ ಐವರು ಬಿಜೆಪಿ ಶಾಸಕರಿದ್ದಾರೆ. ಆದರೆ, ಸಚಿವ ಸಂಪುಟದಲ್ಲಿ ಒಬ್ಬರಿಗೂ ಮಂತ್ರಿ ಸ್ಥಾನ ಸಿಕ್ಕಿಲ್ಲ. ಬೇರೆ ಜಿಲ್ಲೆಯವರನ್ನು ಉಸ್ತುವಾರಿ ಸಚಿವರನ್ನಾಗಿ (ಭೈರತಿ ಬಸವರಾಜ್‌)ಮಾಡಲಾಗಿದೆ. ಸಹಜವಾಗಿ ಅವರಿಂದ ಹೆಚ್ಚಿನ ಸೌಲಭ್ಯ, ಸರ್ಕಾರದ ಮೇಲೆ ಒತ್ತಡ ನಿರೀಕ್ಷಿಸಲು ಸಾಧ್ಯವಿಲ್ಲ ಎಂಬ ಮಾತುಗಳು ಕೇಳಿ ಬರುತ್ತಿವೆ.

ಮುಖ್ಯಮಂತ್ರಿ ಯಡಿಯೂರಪ್ಪ ಈ ಬಾರಿಯ ಬಜೆಟ್‌ ನಲ್ಲಿ ಮಹಿಳಾ ಉದ್ಯಮಕ್ಕೆ ಹೆಚ್ಚಿನ ರೀತಿಯಲ್ಲಿ ಸೌಲಭ್ಯ ಕೊಟ್ಟಿದ್ದಾರೆ. ಸರ್ಕಾರಿ ಮೆಡಿಕಲ್‌ ಕಾಲೇಜು ತೆರೆಯಲು ಕಳೆದ ವರ್ಷದ ಬಜೆಟ್‌ನಲ್ಲಿ ಹೇಳಿದ್ದರು. ಈ ವರ್ಷದ ಬಜೆಟ್‌ನಲ್ಲಿ ಸಹ ಹೇಳಿರುವ ಬಗ್ಗೆ ಹೆಚ್ಚಿನಗಮನ ಹರಿಸಬೇಕು. ವ್ಯಾಟ್‌ನಲ್ಲಿ 2014-15 ರಿಂದ 2017 ಜೂನ್‌ ತಿಂಗಳವರೆಗಿನ ಲೆಕ್ಕ ಪರಿಶೋಧನೆಯಲ್ಲಿ ಹಾಕುವ ದಂಡಮತ್ತು ಬಡ್ಡಿಯನ್ನು ಕರಸಮಾಧಾನದ ಅಡಿಯಲ್ಲಿ ಜಾರಿಗೆ ತಂದಿದ್ದು, ಸುಮಾರು 76,500.00 ಕೋಟಿ ತೆರಿಗೆ ಹಣ ಸರ್ಕಾರಕ್ಕೆ ಸಂದಾಯವಾಗಿರುವುದು ನಿಜಕ್ಕೂ ಒಳ್ಳೆಯ ಬೆಳವಣಿಗೆ. ವ್ಯಾಪಾರಸ್ಥರಿಗೆ ಅನುಕೂಲಕರವಾಗಿದೆ. ಒಟ್ಟಿಗೆ ರಾಜ್ಯ ಬಜೆಟ್‌ 6ಕ್ಕೆ ಏರಲಿಲ್ಲ 3ಕ್ಕೆ ಇಳಿಯಲಿಲ್ಲ ಎನ್ನುವಂತಿದೆ.-ರಾಧೇಶ್‌ ಜಂಬಗಿ, ಜಿಲ್ಲಾ ತೆರಿಗೆ ಸಲಹೆಗಾರರ ಸಂಘದ ಅಧ್ಯಕ್ಷ

ಸಿಎಂ ಯಡಿಯೂರಪ್ಪನವರು ಮಂಡಿಸಿದ 2021-22 ನೇ ಸಾಲಿನ ಬಜೆಟ್‌ ನಾಡಿನ ಜನರ ಸರ್ವವ್ಯಾಪಿ ಹಾಗೂ ಸರ್ವಸ್ಪರ್ಶಿ, ಘೋಷಣೆಯೊಂದಿಗೆ, ಎಲ್ಲ ಕ್ಷೇತ್ರಗಳಿಗೆ ಸಮತೋಲಿತವಾಗಿ ಸಮೃದ್ಧ ಕರ್ನಾಟಕದ ವಿಕಾಸಕ್ಕಾಗಿ ದಿಟ್ಟ ಹೆಜ್ಜೆಯಾಗಿದೆ. ದಾವಣಗೆರೆಗೆ 50 ಹಾಸಿಗೆ ಸಾಮರ್ಥಯದ ಜಯದೇವ ಹೃದ್ರೋಗ ಆಸ್ಪತ್ರೆಯ ಉಪ ಕೇಂದ್ರ ಸ್ಥಾಪಿಸಲು 20 ಕೋಟಿ ಅನುದಾನ ನೀಡಿದ್ದಾರೆ. ವಿಶೇಷವಾಗಿ ಅಂತಾರಾಷ್ಟ್ರೀಯ ಮಹಿಳಾ ದಿನ ಮಂಡಿಸಿದ ಬಜೆಟ್‌ನಲ್ಲಿ ಮಹಿಳಾ ಅಭಿವೃದ್ಧಿಗೆ ಒಟ್ಟಾರೆ 37 ಸಾವಿರ ಕೋಟಿ ಮೀಸಲಿರಿಸಿದ್ದಾರೆ. ಕಡಿಮೆ ಬಡ್ಡಿದರಲ್ಲಿ ಮಹಿಳಾ ಉದ್ಯಮಿಗಳಿಗೆ 2 ಕೋಟಿವರೆಗೆ ಸಾಲ ನೀಡುವ ಯೋಜನೆಯ ರಾಜ್ಯದ ಮಹಿಳೆಯರ ಸಬಲೀಕರಣಕ್ಕೆ ಸಹಕಾರಿ ಆಗಲಿದೆ. ವಿವಿಧ ಹಿಂದುಳಿದ ವರ್ಗಗಳ ಸಮಾಜದ ಅಭಿವೃದ್ಧಿಗೆ ವಿಶೇಷ ಅನುದಾನ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಸಮುದಾಯದ ಬೆಳವಣಿಗೆ, ಶಿಕ್ಷಣ, ಗ್ರಾಮೀಣಾಭಿವೃದ್ಧಿಗೆ ಆದ್ಯತೆ, ರೈತರ ಸಬಲೀಕರಣಕ್ಕೆ ಯೋಜನೆ, ಜನಪರ ಕಾಳಜಿಯ ಬಜೆಟ್‌ ಸ್ವಾಗತಾರ್ಹ. -ಕೆ.ಪ್ರಸನ್ನ ಕುಮಾರ್‌, ನಗರಪಾಲಿಕೆ ಸದಸ್ಯರು.

ಮುಖ್ಯಮಂತ್ರಿಯಡಿಯೂರಪ್ಪ ಅವರು ಮಂಡಿಸಿರುವ ರಾಜ್ಯ ಬಜೆಟ್‌ ಆರ್ಥಿಕ ನಿರ್ವಹಣೆಯ ಲೋಪಗಳನ್ನು ಬಿಂಬಿಸಿದೆ. ಯಾವ ಬಾಬ್ತಿಗೆ ಎಷ್ಟು ಅನುದಾನ ಹಂಚಿಕೆ ಮಾಡಬೇಕು ಎಂಬುದರ ಬಗ್ಗೆ ಸ್ವತಃ ಸಿಎಂ ಅವರೇ ಗೊಂದಲದಲ್ಲಿದ್ದಾರೆ ಎನಿಸುತ್ತದೆ. ಕಲ್ಯಾಣ ಕರ್ನಾಟಕಕ್ಕೆ ಸಿಂಹಪಾಲು ಮೊತ್ತವನ್ನು ತೋರಿಸಲಾಗಿದ್ದು, ಯಾವುದಕ್ಕೆಎಂದು ಸ್ಪಷ್ಟವಾಗಿ ಹೇಳಿಲ್ಲ. ಜಾತಿ ಅಭಿವೃದ್ಧಿ ನಿಗಮಗಳಿಗೆ ಹೇರಳವಾಗಿ 2 ಸಾವಿರ ಕೋಟಿ ಅನುದಾನ ಮೀಸಲಿರಿಸಿರುವುದು ಸರಿಯಲ್ಲ. ಜಿಲ್ಲೆಗೆ ಜಯದೇವ ಹೃದಯರೋಗ ಉಪ ಕೇಂದ್ರ ತೆರಯಲು ಅನುದಾನ ಬಿಟ್ಟರೆಯಾವುದೇ ಘೋಷಣೆ ಮಾಡಿಲ್ಲ. ಮಧ್ಯಕರ್ನಾಟಕ ದಾವಣಗೆರೆಗೆ ನಿರಾಶೆಯಾಗಿದೆ. ವಕೀಲರಿಗೆ ಯಾವುದೇ ಯೋಜನೆ ಘೋಷಣೆಯಾಗಿಲ್ಲ. –ಎಲ್‌.ಎಚ್‌.ಅರುಣ್‌ ಕುಮಾರ್‌, ಹಿರಿಯ ವಕೀಲರು

 ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪನವರು ಮಂಡಿಸಿದ ರಾಜ್ಯ ಬಜೆಟ್‌ ಜನವಿರೋಧಿ ಹಾಗೂ ನಿರಾಶದಾಯಕ. ಗಗನಕ್ಕೆ ಏರಿರುವ ಪೆಟ್ರೋಲ್‌, ಡೀಸೆಲ್‌ ಹಾಗೂ ಸಿಲಿಂಡರ್‌ ಮೇಲಿನ ರಾಜ್ಯ ಮಾರಾಟ ತೆರಿಗೆಯನ್ನು ಬಜೆಟ್‌ನಲ್ಲಿ ಇಳಿಸುತ್ತಾರೆಂದು ನಂಬಿದ್ದ ಜನರಿಗೆ ತೀವ್ರ ನಿರಾಶೆಯಾಗಿದೆ. ದಾವಣಗೆರೆ ಜಿಲ್ಲೆಗೆ ಬಿಜೆಪಿಯಿಂದ 6 ಶಾಸಕರು ಗೆದ್ದರು ಯಾರೊಬ್ಬರನ್ನೂ ಮಂತ್ರಿ ಮಾಡಲಿಲ್ಲ. ಜಿಲ್ಲೆಗೆ ಸೂಕ್ತ ಯೋಜನೆ ಹಾಗೂ ಅನುದಾನ ನೀಡಲಿಲ್ಲ. ದಾವಣಗೆರೆ ಜಿಲ್ಲೆ ಬಿಜೆಪಿ ಸರ್ಕಾರದಲ್ಲಿ ಆಟಕ್ಕೆ ಉಂಟು ಲೆಕ್ಕಕ್ಕೆ ಇಲ್ಲ ಎನ್ನುವಂತಾಗಿದೆ. ಒಟ್ಟಾರೆಯಾಗಿ 2021-22ರ ಬಜೆಟ್‌ ರಾಜ್ಯದ ಅಭಿವೃದ್ಧಿಗೆ ಪೂರಕವಾಗಿಲ್ಲ.  -ಡಿ.ಬಸವರಾಜ್‌, ಕೆಪಿಸಿಸಿ ವಕ್ತಾರರು.

ಜಿಲ್ಲೆಗೆ ಜಯದೇವ ಹೃದ್ರೋಗ ವಿಜ್ಞಾನ ಸಂಸ್ಥೆಯ ಉಪಕೇಂದ್ರ ಹೊರತುಪಡಿಸಿದರೆ ಬೇರೆಯಾವ ವಿಶೇಷ ಸೌಲಭ್ಯ ನೀಡದೆ ಜಿಲ್ಲೆಯನ್ನು ಕಡೆಗಣಿಸಲಾಗಿದೆ. ಯುವಸಮೂಹಕ್ಕೆ ಉದ್ಯೋಗ, ಕೈಗಾರಿಕೆ ಸ್ಥಾಪನೆ ವಿಚಾರ ಪ್ರಸ್ತಾಪವಾಗಿಲ್ಲ. ಜಿಲ್ಲೆಯಲ್ಲಿ ವಿಶೇಷ ಅಭಿವೃದ್ಧಿಗೆ ಯಾವುದೇಕೊಡುಗೆ ನೀಡಿಲ್ಲ. ಜಿಲ್ಲೆಯ ಪಾಲಿಗೆ ಇದು ನಿರಾಶಾದಾಯಕ ಬಜೆಟ್‌. – ಬಿ.ಚಿದಾನಂದಪ್ಪ,  ಜಿಲ್ಲಾಧ್ಯಕ್ಷರು, ಜೆಡಿಎಸ್‌.

ಜಿಲ್ಲೆಗೆ ಅತ್ಯವಶ್ಯಕವಾಗಿದ್ದ ಜಯದೇವ ಹೃದ್ರೋಗ ವಿಜ್ಞಾನ ಸಂಸ್ಥೆಯಉಪಕೇಂದ್ರಕ್ಕೆ ಬಜೆಟ್‌ನಲ್ಲಿ 20ಕೋಟಿ ರೂ. ನೀಡಲಾಗಿದೆ. ಎಲ್ಲ ವರ್ಗದ ಜನರಿಗೆ,ಮಹಿಳೆಯರಿಗೆ ಅನುಕೂಲ ಕಲ್ಪಿಸಲಾಗಿದೆ. ವಿವಿಧ ರಾಜ್ಯ ಕಾರ್ಯಕ್ರಮಗಳು ಜಿಲ್ಲೆಯ ಜನರಿಗೂ ಸಾಕಷ್ಟು ಅನುಕೂಲಕರವಾಗಿದ್ದು ಸರ್ವ ರಂಗಗಳ ಅಭಿವೃದ್ಧಿ ಪರಬಜೆಟ್‌ ಇದಾಗಿದೆ. – ವಿರೇಶ್‌ ಹನಗವಾಡಿ,  ಜಿಲ್ಲಾಧ್ಯಕ್ಷರು, ಬಿಜೆಪಿ.

ಪೆಟ್ರೋಲ್‌, ಡೀಸೆಲ್‌ ಮೇಲಿನ ರಾಜ್ಯ ತೆರಿಗೆ ಕಡಿಮೆಗೊಳಿಸಿ ಜನರಿಗೆಬೆಲೆ ಏರಿಕೆ ಭಾರ ಇಳಿಸುವ ನಿರೀಕ್ಷೆ ಇತ್ತು. ಅದು ಹುಸಿಯಾಗಿದೆ. ಕೇವಲ ಸಣ್ಣಪುಟ್ಟ ಘೋಷಣೆ ಮಾಡಲಾಗಿದೆ. ಎಲ್ಲ ವರ್ಗದ ಜನರಿಗೂ ಈ ಬಜೆಟ್‌ ಅನುಕೂಲವಾಗಿಲ್ಲ. ಜನವಿರೋಧಿ ಹಾಗೂ ನಿರಾಶಾದಾಯಕ ಬಜೆಟ್‌ ಇದಾಗಿದೆ. – ಡಿ.ಬಸವರಾಜ್‌, ವಕ್ತಾರರು, ಕೆಪಿಸಿಸಿ.

 

-ಎಚ್‌.ಕೆ. ನಟರಾಜ

ಟಾಪ್ ನ್ಯೂಸ್

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

India’s first-ever ‘hybrid pitch’ was unveiled at the HPCA stadium

HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

1-qweqwqwe

Kerala ಕರಾವಳಿಯಲ್ಲಿ 6 ಮೀನುಗಾರರ ಸಹಿತ ಇರಾನ್ ಹಡಗು ಕೋಸ್ಟ್ ಗಾರ್ಡ್ ವಶಕ್ಕೆ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

foeticide

Mandya: ಮತ್ತೆ ಹೆಣ್ಣುಭ್ರೂಣ ಹತ್ಯೆ ಜಾಲ ಪತ್ತೆ; ನಾಲ್ವರ ಬಂಧನ

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

Lok Sabha Election: ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

LS Polls: “ಕಾಂಗ್ರೆಸ್ಸಿಗರಿಗೆ ಬಡವರೆಂದರೆ ನಾಟಕೀಯ ಪ್ರೀತಿ’: ಗಾಯತ್ರಿ ಸಿದ್ದೇಶ್ವರ್‌

LS Polls: “ಕಾಂಗ್ರೆಸ್ಸಿಗರಿಗೆ ಬಡವರೆಂದರೆ ನಾಟಕೀಯ ಪ್ರೀತಿ’: ಗಾಯತ್ರಿ ಸಿದ್ದೇಶ್ವರ್‌

CT Ravi ಡಿಕೆಶಿಗೆ ಆಲೂ ಬಿತ್ತಿ ಬಂಗಾರ ಬೆಳೆಯುವ ವಿದ್ಯೆ ಕರಗತ

CT Ravi ಡಿಕೆಶಿಗೆ ಆಲೂ ಬಿತ್ತಿ ಬಂಗಾರ ಬೆಳೆಯುವ ವಿದ್ಯೆ ಕರಗತ

accident

Davanagere; ಟೈರ್ ಸಿಡಿದು ಸೇತುವೆ ಮೇಲಿಂದ ಉರುಳಿದ ಕಾರು:ಇಬ್ಬರು ಮೃತ್ಯು

ಸಿ.ಟಿ. ರವಿ

Pen drive Case; ಹಾಲಿ ಮಹಿಳಾ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು: ಸಿ.ಟಿ. ರವಿ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

1—wewqeqw

Maharashtra ;120 ಅಡಿ ಜಲಪಾತದಿಂದ ಹಾರಿದ ಯುವಕ ಮೃತ್ಯು: ವಿಡಿಯೋ ವೈರಲ್

India’s first-ever ‘hybrid pitch’ was unveiled at the HPCA stadium

HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?

65 ವರ್ಷದಿಂದ ದೇಶಕ್ಕೆ ಚೊಂಬು ಹಿಡಿಸಿದ್ದೆ ಕಾಂಗ್ರೆಸ್‌ ಸಾಧನೆ: ಹರಿಪ್ರಕಾಶ ಕೋಣೆಮನೆ

65 ವರ್ಷದಿಂದ ದೇಶಕ್ಕೆ ಚೊಂಬು ಹಿಡಿಸಿದ್ದೆ ಕಾಂಗ್ರೆಸ್‌ ಸಾಧನೆ: ಹರಿಪ್ರಕಾಶ ಕೋಣೆಮನೆ

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.