ವನಿತಾ ಏಕದಿನ: ದಕ್ಷಿಣ ಆಫ್ರಿಕಾವನ್ನು ಕೆಡವಿದ ಭಾರತ


Team Udayavani, Mar 10, 2021, 12:40 AM IST

ವನಿತಾ ಏಕದಿನ: ದಕ್ಷಿಣ ಆಫ್ರಿಕಾವನ್ನು ಕೆಡವಿದ ಭಾರತ

ಲಕ್ನೋ: ಹಿರಿಯ ವೇಗಿ ಜೂಲನ್‌ ಗೋಸ್ವಾಮಿ ಅವರ ಘಾತಕ ಬೌಲಿಂಗ್‌, ಸ್ಮೃತಿ ಮಂಧನಾ-ಪೂನಂ ರಾವತ್‌ ಜೋಡಿಯ ಅಜೇಯ ಬ್ಯಾಟಿಂಗ್‌ ಪರಾಕ್ರಮದಿಂದ ಪ್ರವಾಸಿ ದಕ್ಷಿಣ ಆಫ್ರಿಕಾ ಎದುರಿನ ದ್ವಿತೀಯ ಏಕದಿನ ಪಂದ್ಯದಲ್ಲಿ ಭಾರತ ಸೇಡು ತೀರಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಮಂಗಳವಾರದ ಪಂದ್ಯವನ್ನು 9 ವಿಕೆಟ್‌ಗಳಿಂದ ಭರ್ಜರಿ ಯಾಗಿ ಗೆದ್ದು ಸರಣಿಯನ್ನು 1-1 ಸಮಬಲಕ್ಕೆ ತಂದಿದೆ.

ಬ್ಯಾಟಿಂಗಿಗೆ ಇಳಿಸಲ್ಪಟ್ಟ ಪ್ರವಾಸಿ ದಕ್ಷಿಣ ಆಫ್ರಿಕಾಕ್ಕೆ ಆತಿಥೇಯರ ಶಿಸ್ತಿನ ಹಾಗೂ ಘಾತಕ ಬೌಲಿಂಗ್‌ ತಲೆನೋವಾಗಿ ಪರಿಣಮಿಸಿತು. 41 ಓವರ್‌ಗಳಲ್ಲಿ 157 ರನ್ನುಗಳ ಸಣ್ಣ ಮೊತ್ತಕ್ಕೆ ಆಲೌಟ್‌ ಆಯಿತು. ಜವಾಬಿತ್ತ ಭಾರತ 28.4 ಓವರ್‌ಗಳಲ್ಲಿ ಒಂದೇ ವಿಕೆಟಿಗೆ 160 ರನ್‌ ಬಾರಿಸಿ ವಿಜಯೋತ್ಸವ ಆಚರಿಸಿತು.

ಮೊದಲ ಮುಖಾಮುಖೀಯಲ್ಲಿ ಭಾರತ 8 ವಿಕೆಟ್‌ ಸೋಲನುಭವಿಸಿತ್ತು. 3ನೇ ಪಂದ್ಯ ಶುಕ್ರವಾರ ನಡೆಯಲಿದೆ.

ಮಿಂಚಿನ ದಾಳಿ
ವೇಗಿಗಳಾದ ಜೂಲನ್‌ ಗೋಸ್ವಾಮಿ ಮತ್ತು ಮಾನ್ಸಿ ಜೋಶಿ ದಕ್ಷಿಣ ಆಫ್ರಿಕಾದ ಅಗ್ರ ಸರದಿಯನ್ನು ನಡುಗಿಸಿದರು. ಮಧ್ಯಮ ಕ್ರಮಾಂಕದಲ್ಲಿ ತಂಡ ಚೇತರಿಕೆ ಕಂಡಿತೆನ್ನುವಷ್ಟರಲ್ಲಿ ಕರ್ನಾಟಕದ ಎಡಗೈ ಸ್ಪಿನ್ನರ್‌ ರಾಜೇಶ್ವರಿ ಗಾಯಕ್ವಾಡ್‌ ಘಾತಕ ವಾಗಿ ಪರಿಣಮಿಸಿದರು. ಹೀಗಾಗಿ ತಂಡಕ್ಕೆ ಸವಾಲಿನ ಮೊತ್ತ ಮರೀಚಿಕೆಯಾಗಿ ಪರಿಣಮಿಸಿತು.

ಜೂಲನ್‌ ಗೋಸ್ವಾಮಿ 4, ರಾಜೇಶ್ವರಿ ಗಾಯಕ್ವಾಡ್‌ 3 ಹಾಗೂ ಮಾನ್ಸಿ 2 ವಿಕೆಟ್‌ ಕೆಡವಿದರು. 49 ರನ್‌ ಮಾಡಿದ ಲಾರಾ ಗುಡಾಲ್‌ ಅವರದು ದಕ್ಷಿಣ ಆಫ್ರಿಕಾ ಸರದಿಯ ಗರಿಷ್ಠ ಮೊತ್ತ. ನಾಯಕಿ ಸುನೆ ಲೂಸ್‌ 36 ರನ್‌ ಮಾಡಿದರು. ಇವರಿಬ್ಬರ 3ನೇ ಜತೆಯಾಟದಲ್ಲಿ 60 ರನ್‌ ಹರಿದು ಬಂತು. 77 ರನ್‌ ಅಂತರದಲ್ಲಿ ಕೊನೆಯ 8 ವಿಕೆಟ್‌ ಉರುಳಿತು.

ಇದನ್ನೂ ಓದಿ :ಭಾರತದ ಸ್ಟಾರ್‌ ಚೆಸ್‌ ಆಟಗಾರ್ತಿ ಕೊನೆರು ಹಂಪಿಗೆ ಬಿಬಿಸಿ ಪ್ರಶಸ್ತಿ

ಸಂಕ್ಷಿಪ್ತ ಸ್ಕೋರ್‌: ದಕ್ಷಿಣ ಆಫ್ರಿಕಾ-41 ಓವರ್‌ಗಳಲ್ಲಿ 157 (ಗುಡಾಲ್‌ 49, ಲೂಸ್‌ 36, ಜೂಲನ್‌ 42ಕ್ಕೆ 4, ರಾಜೇಶ್ವರಿ ಗಾಯಕ್ವಾಡ್‌ 37ಕ್ಕೆ 3, ಮಾನ್ಸಿ 23ಕ್ಕೆ 2). ಭಾರತ-28.4 ಓವರ್‌ಗಳಲ್ಲಿ ಒಂದು ವಿಕೆಟಿಗೆ 160 (ಮಂಧನಾ ಔಟಾಗದೆ 80, ಪೂನಂ ಔಟಾಗದೆ 62, ಶಬಿ°ಮ್‌ 46ಕ್ಕೆ 1). ಪಂದ್ಯಶ್ರೇಷ್ಠ: ಜೂಲನ್‌ ಗೋಸ್ವಾಮಿ.

ಮಂಧನಾ ಮಿಂಚಿನ ಆಟ
10 ರನ್‌ ಆಗುವಷ್ಟರಲ್ಲಿ ಜೆಮಿಮಾ ರೋಡ್ರಿಗಸ್‌ (9) ವಿಕೆಟ್‌ ಕಳೆದು ಕೊಂಡು ಅಪಾಯಕ್ಕೆ ಸಿಲುಕಿದ ಭಾರತಕ್ಕೆ ಸ್ಮೃತಿ ಮಂಧನಾ- ಪೂನಂ ರಾವತ್‌ ಸೇರಿಕೊಂಡು ರಕ್ಷಣೆ ಒದಗಿಸಿದರು. ಹರಿಣಗಳ ಬೌಲಿಂಗ್‌ ಪಡೆಯ ಮೇಲೆ ಸವಾರಿ ಮಾಡಿದ ಈ ಜೋಡಿ ಕೊನೆಯ ತನಕವೂ ಕ್ರೀಸ್‌ ಬಿಟ್ಟು ಕದಲಲಿಲ್ಲ. ಮುರಿಯದ ದ್ವಿತೀಯ ವಿಕೆಟಿಗೆ ಭರ್ತಿ 150 ರನ್‌ ಬಾರಿಸಿ ಭಾರತಕ್ಕೆ ಮಹೋನ್ನತ ಜಯವೊಂದನ್ನು ತಂದಿತ್ತರು.

ಇದರಲ್ಲಿ ಮಂಧನಾ ಕೊಡುಗೆ ಅಜೇಯ 80 ರನ್‌. 64 ಎಸೆತಗಳ ಈ ಅತ್ಯಾಕರ್ಷಕ ಆಟದಲ್ಲಿ 10 ಬೌಂಡರಿ ಹಾಗೂ 3 ಸಿಕ್ಸರ್‌ ಸೇರಿತ್ತು. ಮಂಧನಾ ಹೊರತುಪಡಿಸಿ ಈ ಪಂದ್ಯದಲ್ಲಿ ಬೇರೆ ಯಾರಿಂದಲೂ ಸಿಕ್ಸರ್‌ ದಾಖಲಾಗಲಿಲ್ಲ. ಮಂಧನಾ ಕಳೆದ 5 ಪಂದ್ಯಗಳಲ್ಲಿ ಬಾರಿಸಿದ 4ನೇ ಅರ್ಧ ಶತಕ ಇದಾಗಿದೆ. ಪೂನಂ ರಾವತ್‌ ಕೊಡುಗೆ 89 ಎಸೆತಗಳಿಂದ 62 ರನ್‌.

ಟಾಪ್ ನ್ಯೂಸ್

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

1-ww-ewqe

India-Bangladesh ಇಂದಿನಿಂದ ವನಿತಾ ಟಿ20 ಸರಣಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.