ಕುದೂರಿನ ಮುಖ್ಯರಸ್ತೆಯಲ್ಲಿ ಗುಂಡಿಗಳದ್ದೇ ಕಾರುಬಾರು


Team Udayavani, Mar 10, 2021, 2:35 PM IST

Untitled-1

ಕುದೂರು: ಕುದೂರಿನ ಮುಖ್ಯ ರಸ್ತೆ ಸಂಪೂರ್ಣ ಹದೆಗೆಟ್ಟು ಹೋಗಿದ್ದು, ಮಾರುದ್ದಕೊಂದು ಗುಂಡಿ ಬಿದ್ದಿರುವುದರಿಂದ ವಾಹನ ಸಂಚಾರ ದುಸ್ತರವಾಗಿದೆ.

ಲೋಕೋಪಯೋಗಿ ಇಲಾಖೆ ಕಣ್ಮುಚ್ಚಿ ಕುಳಿತರೆ ಸ್ಥಳೀಯ ಗ್ರಾಮ ಪಂಚಾಯಿತಿ ಗುಂಡಿ ಮುಚ್ಚಿಸುವ ಕಾರ್ಯಕ್ಕೂ ಮುಂದಾಗುತ್ತಿಲ್ಲ ಎಂದು ಸಾರ್ವಜನಿಕರು ದೂರಿದ್ದಾರೆ.

ಅನೇಕ ತಿಂಗಳಿಂದ ಕುದೂರು ಮುಖ್ಯ ರಸ್ತೆ ಇದೇ ಪರಿಸ್ಥಿತಿಯಲ್ಲಿದೆ. ಕೆಲವಡೆ ದೊಡ್ಡ ದೊಡ್ಡ ಗುಂಡಿಗಳಾಗಿದ್ದು, ಮುಂದಿನ ಚಕ್ರ ಸರಿಸುವುದಕೆ ಹೋದರೆ ಹಿಂದಿನ ಚಕ್ರ ಗುಂಡಿಯೊಳಗೆ ಇಳಿಯುತ್ತದೆ. ಇದರಿಂದ ಹಲವು ಜನರು ಬಿದ್ದು ಗಾಯಗೊಂಡ ಉದಾಹರಣೆ ಬೇಕಾದಷ್ಟಿದೆ. ಈ ಬಗ್ಗೆ ಗ್ರಾಪಂ ಗಮನಕ್ಕೆ ತಂದರೂ ಏನು ಪ್ರಯೋಜನವಾಗಿಲ್ಲ,

ಇದೇ ರಸ್ತೆಯಲ್ಲಿ ಪ್ರತಿದಿನ ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಓಡಾಡುತ್ತಾರೆ. ಇವರ್ಯಾರಿಗೂ ಗುಂಡಿಗಳುಕಣ್ಣಿಗೆ ಬಿದ್ದೇ ಇಲ್ವಾ ಅಥವಾ ನಮಗೂ ಇದಕ್ಕೂ ಸಂಬಂಧವಿಲ್ಲ, ಲೋಕೋಪಯೋಗಿಯವರು ಬೇಕಾದರೇ ಮಾಡಲಿ ಎಂದು ಸುಮ್ಮನಿದ್ದಾರೂಗೊತ್ತಾಗುತ್ತಿಲ್ಲ ಎಂದು ಸಾರ್ವಜನಿಕರುಮಾತನಾಡಿಕೊಳ್ಳುತ್ತಿದ್ದಾರೆ. ಪಂಚಾಯಿತಿ ಯವರು ಮನಸ್ಸು ಮಾಡಿದರೆ ಅರ್ಧದಿನದಲ್ಲಿ ಗುಂಡಿ ಮುಚ್ಚಿಸುವ ಕೆಲಸ ಮಾಡಬಹುದು. ಬೇಜಾವಾಬ್ದಾರಿ ತನದಿಂದ ನನೆಗುದ್ದಿಗೆ ಬಿದ್ದಿದೆ.

ಮುಖ್ಯ ರಸ್ತೆ ಸಂಪೂರ್ಣ ಅದ್ವಾನ: ಕುದೂರು ಗ್ರಾಪಂ ಕಚೇರಿಯಿಂದ ಸಂತೆ ಸರ್ಕಲ್‌ವರೆಗೂ ಅರ್ಧ ಕಿ.ಮೀ. ರಸ್ತೆ ಸಂಪೂರ್ಣ ಅದ್ವಾನವಾಗಿದೆ. ಕೆಲವಡೆ ಸಣ್ಣ ಸಣ್ಣಗುಂಡಿಗಳು ಬಿಟ್ಟರೆ ಮತ್ತೆ ಕೆಲವಡೆ ದೊಡ್ಡ ದೊಡ್ಡ ಗುಂಡಿಗಳಿವೆ. ಕಣ್ಣಾಯಿಸಿದಷ್ಟು ದೂರ ಕಾಣುವ ಗುಂಡಿಗಳೇ. ಈ ರಸ್ತೆಯಲ್ಲಿ ಸಂಚಾರಮಾಡುವುದೇ ದುಸ್ಸಾಹಸವಾಗಿದೆ.

ಮೊಂಡತನ ತೋರುತ್ತಿರುವ ಲೋಕಪಯೋಗಿ ಇಲಾಖೆ: ಕುದೂರು ಮುಖ್ಯ ರಸ್ತೆಯ ದುಸ್ಥಿತಿ ಬಗ್ಗೆ ಪತ್ರಿಕೆಗಳಲ್ಲಿ ವರದಿಯಾಗುತ್ತಿದ್ದರೂ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಮಾತ್ರ ಏನೂ ಗೊತ್ತಿಲ್ಲದಂತೆ ವರ್ತಿಸುತ್ತಾಮೊಂಡುತನಾ ಪ್ರದರ್ಶಿಸುತ್ತಿದ್ದಾರೆ. ದಿನ ಕಳೆದಂತೆ ಗುಂಡಿಗಳು ದೊಡ್ಡದಾಗುತ್ತಿದ್ದು, ಸಂಪೂರ್ಣ ರಸ್ತೆಯನ್ನು ಅವರಿಸುವ ಮೊದಲು ಅಧಿಕಾರಿಗಳು ಎಚ್ಚೆತ್ತುಕೊಳ್ಳಬೇಕಿದೆ.

 

ಕುದೂರು ಮುಖ್ಯ ರಸ್ತೆಯಲ್ಲಿ ಸಂಚರಿಸುವುದೇ ದುಸ್ಸಾಹಸವಾಗಿದೆ.ಅದರಲ್ಲೂ ವಯಸ್ಸಾದವರಂತೂ ಬೈಕ್‌ಗಳಲ್ಲಿಕರೆದುಕೊಂಡು ಬಂದರೆ ಗುಂಡಿಯಿಂದ ಇಳಿಸಿಹತ್ತಿಸಿ ಹೋಗುವಷ್ಟರಲ್ಲಿ ಸೊಂಟ, ಮೈ-ಕೈನೋವುಗಳಿಂದ ಎಣಗಬೇಕಾಗುತ್ತದೆ. ಓಡಾಡುವುದಕ್ಕೆ ತುಂಬಾ ತೊಂದರೆಯಾಗುತ್ತಿದೆ. ದ್ವಾರಕನಾಥ್, ಕುದೂರು ನಿವಾಸಿ,

ಕುದೂರಿನ ಮುಖ್ಯ ರಸ್ತೆ ಸಂಪೂರ್ಣ ಅದ್ವಾನವಾಗಿದೆ. ಈ ಬಗ್ಗೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರೂಯಾವುದೇ ಪ್ರಯೋಜನವಾಗಿಲ್ಲ. ಜನಪ್ರತಿನಿಧಿಗಳಾದರೂ ಎಚ್ಚೆತ್ತುಕೊಂಡು ಗುಂಡಿ ಮುಚ್ಚಿಸುವಕೆಲಸ ಮಾಡಿಸುತ್ತಾರೂ ಕಾದು ನೋಡಬೇಕಿದೆ. ಬಿ.ಜಿ.ಕೃಷ್ಣಕುಮಾರ್, ವರ್ತಕರ ಸಂಘದ ಅಧ್ಯಕ್ಷ

 

ಟಾಪ್ ನ್ಯೂಸ್

Suspense still about Rae Bareli, Amethi Congress candidates!

Lok Sabha; ರಾಯ್‌ಬರೇಲಿ, ಅಮೇಠಿ ಕಾಂಗ್ರೆಸ್‌ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್‌!

6-time Madhya Pradesh MLA Ramniwas Rawat quits Congress, joins BJP

Madhya Pradesh; ರಾಹುಲ್‌ ಗಾಂಧಿ ಭೇಟಿ ನಡುವೆ, ಬಿಜೆಪಿ ಸೇರಿದ ಕಾಂಗ್ರೆಸ್‌ ಶಾಸಕ!

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Implementation of secular law for Muslim succession: Supreme Court debate

Muslim ಉತ್ತರಾಧಿಕಾರಕ್ಕೆ ಜಾತ್ಯತೀತ ಕಾಯ್ದೆ ಜಾರಿ: ಸುಪ್ರೀಂಕೋರ್ಟ್‌ ಚರ್ಚೆ

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

Maulana Fazlur Rahman praises India in Pakistan

Fazal ur Rehman; ಭಾರತ ಸೂಪರ್‌ಪವರ್‌, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Suspense still about Rae Bareli, Amethi Congress candidates!

Lok Sabha; ರಾಯ್‌ಬರೇಲಿ, ಅಮೇಠಿ ಕಾಂಗ್ರೆಸ್‌ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್‌!

6-time Madhya Pradesh MLA Ramniwas Rawat quits Congress, joins BJP

Madhya Pradesh; ರಾಹುಲ್‌ ಗಾಂಧಿ ಭೇಟಿ ನಡುವೆ, ಬಿಜೆಪಿ ಸೇರಿದ ಕಾಂಗ್ರೆಸ್‌ ಶಾಸಕ!

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Implementation of secular law for Muslim succession: Supreme Court debate

Muslim ಉತ್ತರಾಧಿಕಾರಕ್ಕೆ ಜಾತ್ಯತೀತ ಕಾಯ್ದೆ ಜಾರಿ: ಸುಪ್ರೀಂಕೋರ್ಟ್‌ ಚರ್ಚೆ

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.