ಬಜೆಟ್‌ನಲ್ಲಿ ಕೋಲಾರ ನಿರ್ಲಕ್ಷ್ಯಕ್ಕೆ ಆಕ್ರೋಶ


Team Udayavani, Mar 10, 2021, 4:28 PM IST

ಬಜೆಟ್‌ನಲ್ಲಿ ಕೋಲಾರ ನಿರ್ಲಕ್ಷ್ಯಕ್ಕೆ ಆಕ್ರೋಶ

ಕೋಲಾರ: ಈ ಸಾಲಿನ ಬಜೆಟ್‌ನಲ್ಲಿ ರಾಜ್ಯ ಸರ್ಕಾರವು ಕೋಲಾರ ಜಿಲ್ಲೆಯನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿರುವುದನ್ನು ಖಂಡಿಸಿ, ಜಿಲ್ಲೆಯನ್ನು ನೆರೆಯ ಆಂಧ್ರ ರಾಜ್ಯಕ್ಕೆ ಸೇರಿಸುವಂತೆ ಆಗ್ರಹಿಸಿ ರೈತ ಸಂಘದಿಂದ ನಗರದ ಮೆಕ್ಕೆ ವೃತ್ತದಲ್ಲಿ ಮುಖ್ಯಮಂತ್ರಿಸೇರಿದಂತೆ ಜಿಲ್ಲೆಯ ಸಂಸದರು, ಶಾಸಕರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಲಾಯಿತು.

ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿದ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ,ರಾಜಧಾನಿ ಬೆಂಗಳೂರಿಗೆ ಕೂಗಳತೆ ದೂರದಲ್ಲಿರುವಜಿಲ್ಲೆಯಲ್ಲಿ ಜ್ವಲಂತ ಸಮಸ್ಯೆಗಳಿವೆ.

ಜಾಗ ನೀಡಿಲ್ಲ: ಅತಿವೃಷ್ಟಿ, ಅನಾವೃಷ್ಟಿಯಿಂದಾಗಿರೈತರು ಸಂಕಷ್ಟದಲ್ಲಿದ್ದು, ಸಾಲ ಮಾಡಿ ಬೆಳೆದಬೆಳೆಗಳಿಗೆ ಸೂಕ್ತ ಮಾರುಕಟ್ಟೆ ವ್ಯವಸ್ಥೆಯೂಇಲ್ಲದಾಗಿದ್ದು, ಕೋಲಾರ ಎಪಿಎಂಸಿ ಮಾರುಕಟ್ಟೆಗೆಅವಶ್ಯವಿರುವ 50 ಎಕರೆ ಜಾಗ ಗುರುತಿಸಿ ನೀಡಲುಈವರೆಗೂ ಸಾಧ್ಯವಾಗಿಲ್ಲ ಎಂದು ದೂರಿದರು.

ಶಾಶ್ವತ ಒರಿಹಾರ ಇಲ್ಲ: ಜಿಲ್ಲೆಯ ಗಡಿಭಾಗಗಳಲ್ಲಿ ಕಾಡು ಪ್ರಾಣಿಗಳ ಹಾವಳಿ ಮಿತಿಮೀರಿದ್ದು, ವಾರಕ್ಕೆ2-3 ಬಾರಿ ಕಾಡಾನೆಗಳ ದಾಳಿ ನಡೆಯುತ್ತಲೇ ಇರುತ್ತದೆ. ಈಗಾಗಲೇ ಕೋಟ್ಯಂತರ ರೂ.ಬೆಳೆನಷ್ಟವುಂಟಾಗಿದ್ದು, ಹತ್ತಾರು ಮಂದಿ ಪ್ರಾಣಕಳೆದುಕೊಂಡಿದ್ದಾರೆ. ಆದರೂ ಶಾಶ್ವತ ಪರಿಹಾರ ಕಲ್ಪಿಸಿಕೊಡುವುದಕ್ಕೆ ಸರ್ಕಾರ ಮುಂದಾಗಿಲ್ಲ ಎಂದುದೂರಿದರು.

ಜಿಲ್ಲೆಗೆ ಬಜೆಟ್‌ನಲ್ಲಿ ಕೃಷಿ ಆಧಾರಿತ ಕೈಗಾರಿಕೆಗಳು,ಮಾವು ಸಂಸ್ಕರಣಾ ಘಟಕಗಳು ಸೇರಿದಂತೆಕಾಡಾನೆಗಳ ಹಾವಳಿಗೆ ಶಾಶ್ವತ ಪರಿಹಾರವನ್ನಾದರೂನೀಡುತ್ತಾರೆಂಬ ನಿರೀಕ್ಷೆ ಹುಸಿಯಾಗಿದೆ ಎಂದುಅಸಮಾಧಾನ ವ್ಯಕ್ತಪಡಿಸಿದರು.

ಜಿಲ್ಲೆಗೆ ಅನ್ಯಾಯವಾಗಿದ್ದರೂ ಜಿಲ್ಲೆಯ 6 ಮಂದಿಶಾಸಕರ ಪೈಕಿ ಒಬ್ಬರೂ ಸಹ ಈ ಬಗ್ಗೆ ಚಕಾರವೆತ್ತದೆ ಮೌನಕ್ಕೆ ಶರಣಾಗಿರುವುದು ಖಂಡನೀಯವಾಗಿದ್ದು,ಜಿಲ್ಲೆಯ ಬಗ್ಗೆ ಇಷ್ಟರ ಮಟ್ಟಕ್ಕೆ ನಿರ್ಲಕ್ಷ್ಯ ತೋರಿರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಐತಾಂಡಹಳ್ಳಿ ಮಂಜುನಾಥ್‌, ತಾಲೂಕು ಅಧ್ಯಕ್ಷ ಈಕಂಬಳ್ಳಿಮಂಜುನಾಥ್‌, ರಾಜ್ಯ ಸಂಚಾಲಕ ಅನಿಲ್‌, ನಂಗಲಿ ಕಿಶೋರ್‌, ಹಸಿರುಸೇನೆ ಜಿಲ್ಲಾಧ್ಯಕ್ಷ ಕಿರಣ್‌,ಮಂಗಸಂದ್ರ ನಾಗೇಶ್‌, ತಿಮ್ಮಣ್ಣ, ಚಲಪತಿ, ಸುಪ್ರೀಂಚಲ, ವಕ್ಕಲೇರಿ ಹನುಮಯ್ಯ, ಚಂದ್ರಪ್ಪ, ಕುವ್ವಣ್ಣ, ಅಶ್ವತ್ಥಪ್ಪ ಮತ್ತಿತರರು ಉಪಸ್ಥಿತರಿದ್ದರು.

ಬಿಜೆಪಿ ಶಾಸಕರಿಲ್ಲದ್ದಕ್ಕೆ ಕಡೆಗಣನೆ :  ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಎ.ನಳಿನಿಗೌಡಮಾತನಾಡಿ, ಜಿಲ್ಲೆಯಲ್ಲಿ ಬಿಜೆಪಿ ಶಾಸಕರುಇಲ್ಲದ ಕಾರಣ ರಾಜ್ಯ ಸರ್ಕಾರ ಕಡೆಗಣಿಸಿದೆಎಂದು ಕಿಡಿಕಾರಿದರು. ಜಿಲ್ಲೆಗೆ ಖಾಯಂ ಜಿಲ್ಲಾಉಸ್ತುವಾರಿ ಸಚಿವರೂ ಇಲ್ಲದ ಕಾರಣ ಸಮಸ್ಯೆಗಳನ್ನು ಹೇಳಿಕೊಳ್ಳುವುದಕ್ಕೂ ಜನರಿಗೆಸಾಧ್ಯವಾಗುತ್ತಿಲ್ಲ. ಕೇವಲ ಧ್ವಜಾರೋಹಣಕೆ Rಮಾತ್ರವೇ ಸಿ.ಪಿ.ಯೋಗೇಶ್ವರ್‌ ಅವರನ್ನುಜಿಲ್ಲೆಗೆ ಕಳುಹಿಸಿದ್ದು, ಆ ಬಳಿಕ ಇತ್ತ ಯಾರನ್ನೂ ನೇಮಕ ಮಾಡದೆ ಇರುವುದು ಜನತೆಯಲ್ಲಿ ಆಕ್ರೋಶ ಮತ್ತಷ್ಟು ಎಚ್ಚಿಸಿದೆ ಎಂದು ತಿಳಿಸಿದರು.

ಬಜೆಟ್‌ ಸಮೀಪಿಸಿದ್ದ ಹಿನ್ನೆಲೆಯಲ್ಲಿ ಅನೇಕ ಹೋರಾಟಗಳ ಮೂಲಕ ಜಿಲ್ಲೆಯಸಮಸ್ಯೆಗಳ ಪಟ್ಟಿ ಮಾಡಿ ಸರ್ಕಾರಕ್ಕೆ ಮನವಿಗಳನ್ನು ಸಲ್ಲಿಸಲಾಗಿದ್ದರೂ, ಯಾವುದನ್ನೂ ಪರಿಗಣಿಸಿಲ್ಲ ಎಂದರು.

ಟಾಪ್ ನ್ಯೂಸ್

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.