ಅಸಮರ್ಪಕ ವಿದ್ಯುತ್ ಪೂರೈಕೆ: ಹೆಸ್ಕಾಂ ಕಚೇರಿಗೆ ಮುತ್ತಿಗೆ
Team Udayavani, Mar 10, 2021, 6:05 PM IST
ಶಿರಹಟ್ಟಿ: ಅಸಮರ್ಪಕ ವಿದ್ಯುತ್ಪೂರೈಕೆ ಹಾಗೂ ಕಚೇರಿಯಲ್ಲಿ ಸಿಬ್ಬಂದಿಇಲ್ಲದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿ ತಾಲೂಕಿನವಡವಿ-ಹೊಸೂರ, ಅಲಗಿಲವಾಡ, ಮಾಚೇನಹಳ್ಳಿ, ದೇವಿಹಾಳ ಸೇರಿದಂತೆ ವಿವಿಧ ಗ್ರಾಮಗಳ ರೈತರು ಮಂಗಳವಾರ ಬೆಳ್ಳಟ್ಟಿಹೆಸ್ಕಾಂ ಕಚೇರಿ ಬೀಗ ಒಡೆದು ಒಳನುಗ್ಗಿ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಯುವ ರೈತ ರಾಜೀವ್ರೆಡ್ಡಿ ಬಮ್ಮನಕಟ್ಟಿ, ಬೆಳ್ಳಟ್ಟಿ ಫೀಡರ್ನಿಂದ ರೈತರ ಪಂಪ್ಸೆಟ್ಗಳಿಗೆಪೂರೈಕೆಯಾಗುವ ವಿದ್ಯುತ್ ಸರಬರಾಜಿಗೆ ಯಾವುದೇ ಸಮಯ ನಿಗದಿ ಮಾಡಿಲ್ಲ.ತಮಗೆ ಬೇಕಾದಾಗ ವಿದ್ಯುತ್ ಸರಬರಾಜು ಮಾಡುವ ಪರಿಪಾಠ ಬೆಳೆಸಿಕೊಂಡಿದ್ದಾರೆ.ಸಧ್ಯ ಬೇಸಿಗೆ ಕಾಲ ಇರುವುದರಿಂದ ಬೆಳೆಗಳಿಗೆಸರಿಯಾದ ಸಮಯಕ್ಕೆ ನೀರು ಹಾಯಿಸದಿದ್ದರೆಸಾಲ-ಶೂಲ ಮಾಡಿ ಬಿತ್ತಿದ ಬೆಳೆಗಳು ಒಣಗಿ ಹೋಗಿ ಅಪಾರ ನಷ್ಟ ಉಂಟಾಗಲಿದೆ.
ಇದನ್ನು ಸರಿಪಡಿಸುವಂತೆ ಬೆಳ್ಳಟ್ಟಿಯ ಎಸ್ಒ ಹಾಗೂ ಸಿಬ್ಬಂದಿಗೆ ಸಾಕಷ್ಟು ಬಾರಿ ಮನವಿಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಆದ್ದರಿಂದ,ನಮಗೆ ಹಗಲು ಸಮಯದಲ್ಲಿಯೇಸಮರ್ಪಕ ವಿದ್ಯುತ್ ಪೂರೈಸಬೇಕೆಂದು ಒತ್ತಾಯಿಸಿದರು.
ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಮಾತನಾಡಿದ ಹೆಸ್ಕಾಂ ಎಇಇ ಎಂ.ಟಿ.ದೊಡ್ಡಮನಿ, ಬೇಸಿಗೆ ಇರುವುದರಿಂದ ವಿದ್ಯುತ್ ಪೂರೈಕೆಯಲ್ಲಿವ್ಯತ್ಯಯವಾಗುತ್ತಿದೆ. ಸಿಬ್ಬಂದಿಗೆ ಸೂಕ್ತನಿರ್ದೇಶನ ನೀಡಿ ರೈತರ ಬೇಡಿಕೆ ಈಡೇರಿಸಲು ಕ್ರಮ ಕೈಕೊಳ್ಳಲಾಗುವುದು ಎಂದರು. ಹೆಸ್ಕಾಂಎಇಇ ಸೂಕ್ತ ಭರವಸೆ ನೀಡಿದ ನಂತರ ಪ್ರತಿಭಟನೆ ಹಿಂಪಡೆದರು.
ಈ ವೇಳೆ ಹನುಮಂತ ಬಾಲೇಹೊಸೂರು,ಸುಭಾಸ ಕೊಂಚಿಗೇರಿ, ಪ್ರವೀಣ ಅಳವಂಡಿ,ಹನುಮರೆಡಿ ಆನ್ವೇರಿ, ಮಹೇಶ ಬಾಗೇವಾಡಿ,ಅಶೋಕರೆಡ್ಡಿ ಹುಲ್ಲೂರ, ಶ್ರೀಧರ ಹುಲ್ಲೂರ, ನಾಗರಾಜ ತಳವಾರ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag; ಚುನಾವಣೆ ಬಳಿಕ ಸಿಎಂ ರಾಜೀನಾಮೆ ಕೊಡುವ ಸಂದರ್ಭ ಬರಬಹುದು: ಸಿ.ಸಿ.ಪಾಟೀಲ್
ಗದಗ: ಸಂವಿಧಾನ ಧರ್ಮಗ್ರಂಥ ಎಂದವರು ಮೋದಿ- ಬೊಮ್ಮಾಯಿ
Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’
Interview: “ಈ ಭಾಗದಲ್ಲಿ ಶಿಕ್ಷಣ-ಉದ್ಯೋಗಕ್ಕೆ ಹೆಚ್ಚು ಆದ್ಯತೆ ನೀಡುವುದು ಅಗತ್ಯ’
Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
Pen drive Case; ಹಾಲಿ ಮಹಿಳಾ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು: ಸಿ.ಟಿ. ರವಿ
PM ಮೋದಿ ಒಬಿಸಿ ಮೀಸಲಾತಿಗೆ ಕೋಮು ಬಣ್ಣ ನೀಡಲು ಪ್ರಯತ್ನಿಸುತ್ತಿದ್ದಾರೆ: ಕಾಂಗ್ರೆಸ್
NADA; ಕುಸ್ತಿಪಟು ಬಜರಂಗ್ ಅನಿರ್ದಿಷ್ಟಾವಧಿಗೆ ಅಮಾನತು: ಒಲಿಂಪಿಕ್ಸ್ ಭಾಗಿ ಅನುಮಾನ
ಸಂವಿಧಾನ ಬದಲಿಸುವ BJPಗೆ ಬುದ್ಧಿ ಕಲಿಸಲು Congress ಪಕ್ಷ ಗೆಲ್ಲಬೇಕು: ದರ್ಶನ್ ಧ್ರುವನಾರಾಯಣ
Gadag; ಚುನಾವಣೆ ಬಳಿಕ ಸಿಎಂ ರಾಜೀನಾಮೆ ಕೊಡುವ ಸಂದರ್ಭ ಬರಬಹುದು: ಸಿ.ಸಿ.ಪಾಟೀಲ್