ಮುಂದಿನ ಸಾಲಿಗೆ ಈಗಲೇ ಪುಸ್ತಕ ಬೇಡಿಕೆ

­ತಂತ್ರಾಂಶದಲ್ಲಿ ದಾಖಲು ಪ್ರಕ್ರಿಯೆ ಆರಂಭ! ­ಪುಸ್ತಕ ಕೊರತೆ ಇಲ್ಲವೇ ಹೆಚ್ಚುವರಿ ಆಗದಂತೆ ನಿಗಾವಹಿಸಲು ಸೂಚನೆ

Team Udayavani, Mar 10, 2021, 7:29 PM IST

textbook for next yar

ದಾವಣಗೆರೆ: ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಕಾಡಿದ ಕೊರೊನಾದಿಂದಾಗಿ ಸಂಪೂರ್ಣವಾಗಿ ಶಾಲೆಗಳನ್ನೇ ತೆರೆಯಲಾಗದ ಸಂಕಷ್ಟಕ್ಕೆ ಸಿಲುಕಿದ್ದ ಸಾರ್ವಜನಿಕ ಶಿಕ್ಷಣ ಇಲಾಖೆ, ಈಗ ಹೊಸ ಭರವಸೆಯೊಂದಿಗೆ ಮುಂದಿನ ಶೈಕ್ಷಣಿಕ ಸಾಲಿಗೆ ಬೇಕಾದ ಪಠ್ಯಪುಸ್ತಕ, ಅಭ್ಯಾಸ ಪುಸ್ತಕ ಹಾಗೂ ದಿನಚರಿಗಳ ಬೇಡಿಕೆಗಳನ್ನು ಶಾಲೆಗಳಿಂದ ಪಡೆಯುವ ಪ್ರಕ್ರಿಯೆ ಆರಂಭಿಸಿದೆ.

2021-22ನೇ ಸಾಲಿನ ಶೈಕ್ಷಣಿಕ ಸಾಲಿಗೆ ಅಗತ್ಯ ಪಠ್ಯಪುಸ್ತಕದ ಬೇಡಿಕೆಯನ್ನು ಎಸ್‌ಎಟಿಎಸ್‌ ತಂತ್ರಾಂಶದಲ್ಲಿ ದಾಖಲಿಸುವ ಪ್ರಕ್ರಿಯೆ ಶಾಲಾ ಹಂತದಿಂದ ಜಿಲ್ಲಾ ಹಂತದವರೆಗೆ ನಡೆದಿದೆ. ಈ ಪ್ರಕ್ರಿಯೆ ಮಾ.3ರಿಂದ ಆರಂಭಗೊಂಡಿದ್ದು ಮಾ.23ವರೆಗೆ ನಡೆಯಲಿದೆ. ಇದಕ್ಕೆ ಪೂರಕವಾಗಿ ಕ್ಲಸ್ಟರ್‌, ಬ್ಲಾಕ್‌ ಮತ್ತು ಜಿಲ್ಲಾ ಹಂತದಿಂದ ಪರಿಶೀಲನೆ ಹಾಗೂ ಅನುಪಾಲನೆ ಚಟುವಟಿಕೆಯೂ ಏಕಕಾಲದಲ್ಲಿ ನಡೆದಿದೆ.

ಪುಸ್ತಕದ ಬೇಡಿಕೆ ಮಂಡಿಸುವ ಹಿನ್ನೆಲೆಯಲ್ಲಿ ಎಸ್‌ ಎಟಿಎಸ್‌ ತಂತ್ರಾಂಶದಲ್ಲಿ ಎಲ್ಲ ಶಾಲೆಗಳನ್ನು  (ಸರ್ಕಾರಿ, ಅನುದಾನಿತ,ಅನುದಾನರಹಿತ ಇತರೆ ಇಲಾಖೆಯಿಂದ ನಡೆಯುವ ಶಾಲೆಗಳು) ದಾಖಲಿಸಿರುವ ಬಗ್ಗೆ ಕ್ಲಸ್ಟರ್‌, ಬ್ಲಾಕ್‌ ಮತ್ತು ಜಿಲ್ಲಾ ಹಂತಗಳಿಂದ ಹಂತ ಹಂತವಾಗಿ ಪರಿಶೀಲಿಸುವ ಕಾರ್ಯವೂ ನಡೆದಿದೆ. ಒಟ್ಟು ಶಾಲೆಗಳ ನಿಖರವಾದ ಮಾಹಿತಿ, ಎಲ್ಲ ವಿಧದ ಶಾಲೆಗಳ ಪಟ್ಟಿ ಸಿದ್ಧಪಡಿಸಿಕೊಂಡ ಬಳಿಕವೇ ಪಠ್ಯಪುಸ್ತಕಗಳ ಬೇಡಿಕೆಯನ್ನು ದಾಖಲಿಸಲು ಕ್ರಮವಹಿಸಲಾಗಿದೆ. ತರಬೇತಿ: ಬೇಡಿಕೆ ಸಲ್ಲಿಸುವ ಪ್ರಕ್ರಿಯೆ ಅಚ್ಚುಕಟ್ಟಾಗಿ ನಡೆಸುವ ಉದ್ದೇಶದಿಂದ ಶಾಲೆಗಳ ಮುಖ್ಯ ಶಿಕ್ಷಕರಿಗೆ, ಕ್ಲಸ್ಟರ್‌ ಸಂಪನ್ಮೂಲ ಅಧಿಕಾರಿಗಳಿಗೆ ಈಗಾಗಲೇ ತರಬೇತಿ ನೀಡಲಾಗಿದೆ. ಜತೆಗೆ ಎಸ್‌ ಎಟಿಎಸ್‌ ತಂತ್ರಾಂಶದಲ್ಲಿ ಆಗಿರುವ ಮಾರ್ಪಾಡುಗಳ ಬಗ್ಗೆಯೂ ತಿಳಿವಳಿಕೆ ನೀಡಲಾಗಿದೆ. ಪ್ರಮುಖವಾಗಿ ನಲಿ-ಕಲಿ ಶಾಲೆಗಳು, ಆದರ್ಶ ಶಾಲೆಗಳು, ಕನ್ನಡ ಮಾಧ್ಯಮ ಮತ್ತು ಉರ್ದು ಮಾಧ್ಯಮ ಶಾಲೆಗಳಲ್ಲಿ ಅನುಷ್ಠಾನಗೊಂಡಿರುವ ಆಂಗ್ಲಮಾಧ್ಯಮ ವಿಭಾಗಗಳಿಗೆ ಹೇಗೆ ಪುಸ್ತಕದ ಬೇಡಿಕೆ ಸಲ್ಲಿಸಬೇಕು ಎಂಬ ವಿವರ ಮಾಹಿತಿ ನೀಡಲಾಗಿದೆ.

ವಿವಿಧ ಹಂತಗಳಲ್ಲಿ ಕಾರ್ಯ: ಶಾಲಾ ಹಂತದಲ್ಲಿ ಮುಖ್ಯ ಶಿಕ್ಷಕರು ತರಗತಿವಾರು ಪಠ್ಯಪುಸ್ತಕಗಳ ಬೇಡಿಕೆಯನ್ನು ತಂತ್ರಾಂಶದಲ್ಲಿ ದಾಖಲಿಸುತ್ತಿದ್ದಾರೆ. ಶಾಲಾ ಹಂತದಲ್ಲಿ ದಾಖಲಿಸಿದ ಬೇಡಿಕೆಗೆ ಆಯಾ ಶಾಲಾ ಮುಖ್ಯಶಿಕ್ಷಕರು ಹಾಗೂ ಶಾಲಾ ವ್ಯಾಪ್ತಿಯ ಸಿಆರ್‌ಪಿ ಅವರನ್ನೇ ಜವಾಬ್ದಾರರನ್ನಾಗಿ ಮಾಡಲಾಗಿದ್ದು ಹೆಚ್ಚು ಮುತುವರ್ಜಿಯಿಂದ ಈ ಹಂತದಲ್ಲಿ ಬೇಡಿಕೆ ಸಲ್ಲಿಕೆ ಕಾರ್ಯ ನಡೆಯುತ್ತಿದೆ. ಕ್ಲಸ್ಟರ್‌ ಹಂತದಲ್ಲಿ ನಿಗದಿತ ಅವಧಿಯಲ್ಲಿ ಶಾಲೆಗಳಿಂದ ಬೇಡಿಕೆ ಪಡೆಯುವ, ಬೇಡಿಕೆ ಖಚಿತಪಡಿಸಿಕೊಳ್ಳುವ ಜವಾಬ್ದಾರಿ ವಹಿಸಲಾಗಿದೆ.

ಬ್ಲಾಕ್‌ ಹಂತದಲ್ಲಿ 2020-21ನೇ ಸಾಲಿನಲ್ಲಿ ವಿತರಿಸದೆ ಉಳಿದ ಪುಸ್ತಕಗಳನ್ನು ಎಸ್‌ಎಟಿಎಸ್‌ ತಂತ್ರಾಂಶದಲ್ಲಿ ದಾಖಲಿಸುವ, ತನ್ನ ವ್ಯಾಪ್ತಿಯ ಎಲ್ಲ ಶಾಲೆಗಳಲ್ಲಿ ದಾಸ್ತಾನು ಇರುವ ಪುಸ್ತಕಗಳ ಮಾಹಿತಿ  ನಮೂದಿಸುವ ಜವಾಬ್ದಾರಿ ವಹಿಸಲಾಗಿದೆ. ಜಿಲ್ಲಾ ಹಂತದಲ್ಲಿ ಶಾಲೆಗಳು ಪಠ್ಯಪುಸ್ತಕಗಳ ಬೇಡಿಕೆ ದಾಖಲಿಸಲು ಪ್ರಾರಂಭಿಸಿದ ದಿನದಿಂದಶಾಲಾವಾರು, ಕ್ಲಸ್ಟರ್‌ವಾರು, ತಾಲೂಕುವಾರು ಬೇಡಿಕೆಯನ್ನು ನಿಗದಿತ ದಿನಾಂಕದವರೆಗೆ ದಾಖಲಿಸುತ್ತಿರುವ ಬಗ್ಗೆ ಪ್ರತಿ ದಿನ ಉಸ್ತುವಾರಿ ಮಾಡುವ ಹಾಗೂ ಪಠ್ಯಪುಸ್ತಕಗಳ ಬೇಡಿಕೆಯನ್ನು ದಾಖಲಿಸುವ ಕೊನೆಯ ದಿನಾಂಕದವರೆಗೆ ವೇಳಾಪಟ್ಟಿ ಅನುಪಾಲಿಸುವ ಜವಾಬ್ದಾರಿ ನೀಡಲಾಗಿದೆ. ಒಟ್ಟಾರೆ ಹೊಸ ಭರವಸೆಯೊಂದಿಗೆ ಮುಂದಿನ ಶೈಕ್ಷಣಿಕ ಸಾಲಿಗೆ ಬೇಕಾದ ಅಗತ್ಯ ಪಠ್ಯಪುಸ್ತಕಗಳ ಬೇಡಿಕೆಗಳನ್ನು ಪಡೆಯುವ ಪ್ರಕ್ರಿಯೆ ರಾಜ್ಯಾದ್ಯಂತ ಅಚ್ಚುಕಟ್ಟಾಗಿ ನಡೆದಿದೆ.

ಟಾಪ್ ನ್ಯೂಸ್

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.