#DKSvsSiddu: ಕಾಂಗ್ರೆಸ್ ಸಿಎಂ ಆಕಾಂಕ್ಷಿಗಳ ವಿರುದ್ಧ ಬಿಜೆಪಿ ಟ್ವೀಟ್ ಟಕ್ಕರ್
Team Udayavani, Mar 11, 2021, 4:35 PM IST
ಬೆಂಗಳೂರು: ಕಾಂಗ್ರೆಸ್ ನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಮಧ್ಯೆ ಮುಖ್ಯಮಂತ್ರಿ ಕುರ್ಚಿಗಾಗಿ ಕದನ ಆರಂಭವಾಗಿದೆ. ಕನಸಿನಲ್ಲೂ ಸಿಗದ ಮುಖ್ಯಮಂತ್ರಿ ಪಟ್ಟಕ್ಕಾಗಿ ಇವರಿಬ್ಬರ ಕದನದಿಂದ ಕಾಂಗ್ರೆಸ್ ಈಗ ನಾವಿಕನಿಲ್ಲದೆ ದಿಕ್ಕೆಟ್ಟು ನಿಂತಿದೆ ಎಂದು ಬಿಜೆಪಿ ಟ್ವೀಟ್ ಮೂಲಕ ಟೀಕೆ ಮಾಡಿದೆ.
#DKSvdSiddu ಹ್ಯಾಷ್ ಟ್ಯಾಗ್ ನಡಿ ಬಿಜೆಪಿ ಕರ್ನಾಟಕವು ಕಾಂಗ್ರೆಸ್ ವಿರುದ್ಧ ಸರಣಿ ಟ್ವೀಟ್ ಮಾಡಿದೆ.
ಜೆಡಿಎಸ್ ಬಿತ್ತಿದ ಬೀಜ, ಕಾಂಗ್ರೆಸ್ ಪಕ್ಷದಲ್ಲಿ ಬೆಳೆಯುತ್ತಿದೆ. ಇದು ಬೆಳೆ ಅಲ್ಲ, ಕಳೆ ಎಂದು ಡಿ ಕೆ ಶಿವಕುಮಾರ್ ಗೆ ಈಗ ಅರಿವಾಗುತ್ತಿದೆ. ಈ ಕಳೆ ಎಂಬ ಸಿದ್ದರಾಮಯ್ಯ ಅವರನ್ನು ಬೇರು ಸಮೇತ ಕಿತ್ತು ಹಾಕಲು ಮೂಲ ಕಾಂಗ್ರೆಸ್ಸಿಗರು ಪಣ ತೊಟ್ಟಿದ್ದಾರೆ ಎಂದು ಟೀಕಿಸಿದೆ.
ಇದನ್ನೂ ಓದಿ:ಕೋವಿಡ್ 19 ಸೋಂಕು ಹೆಚ್ಚಳ; ಮಾರ್ಚ್ 15ರಿಂದ 21ರವರೆಗೆ ನಾಗ್ಪುರದಲ್ಲಿ ಲಾಕ್ ಡೌನ್ ಜಾರಿ
ಡಿಜೆ ಹಳ್ಳಿ ಗಲಭೆ ಪ್ರಕರಣದ ಬಗ್ಗೆ ಉಲ್ಲೇಖಿಸಿ, ವಲಸೆ ನಾಯಕ ಸಿದ್ದರಾಮಯ್ಯ ಅವರು ಸಂತ್ರಸ್ತ ಶಾಸಕ ಅಖಂಡ ಪರವಾಗಿ ನಿಂತರೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಗಲಭೆಯ ಆರೋಪಿ ಸಂಪತ್ ರಾಜ್ ಪರವಾಗಿ ನಿಂತರು. ಇವರಿಬ್ಬರ ನಡುವಿನ ಸಂಘರ್ಷದಿಂದ ದಲಿತ ಶಾಸಕನಿಗೆ ಅನ್ಯಾಯವಾಗಿದೆ. ಕಾಂಗ್ರೆಸ್ ಗಲಭೆಯ ಆರೋಪಿಗೆ ಬಹಿರಂಗ ಬೆಂಬಲ ನೀಡಿದೆ ಎಂದು ಬಿಜೆಪಿ ಆರೋಪಿಸಿದೆ.
ವಲಸೆ ನಾಯಕ @siddaramaiah ಅವರು ಸಂತ್ರಸ್ತ ಶಾಸಕ ಅಖಂಡ ಪರವಾಗಿ ನಿಂತರೆ,
ಕೆಪಿಸಿಸಿ ಅಧ್ಯಕ್ಷ @DKShivakumar ಗಲಭೆಯ ಆರೋಪಿ ಸಂಪತ್ ರಾಜ್ ಪರವಾಗಿ ನಿಂತರು.
ಇವರಿಬ್ಬರ ನಡುವಿನ ಸಂಘರ್ಷದಿಂದ ದಲಿತ ಶಾಸಕನಿಗೆ ಅನ್ಯಾಯವಾಗಿದೆ.@INCKarnataka ಗಲಭೆಯ ಆರೋಪಿಗೆ ಬಹಿರಂಗ ಬೆಂಬಲ ನೀಡಿದೆ.#DksVsSiddu pic.twitter.com/1WfMX6pPQc
— BJP Karnataka (@BJP4Karnataka) March 11, 2021
ವಲಸೆ ನಾಯಕ ಸಿದ್ದರಾಮಯ್ಯ ಅವರಿಗೆ ಡಿಕೆಶಿ ಅವರು ಕೆಪಿಸಿಸಿ ಅಧ್ಯಕ್ಷರಾಗುವುದು ಇಷ್ಟವಿರಲಿಲ್ಲ. ಈ ಹಿನ್ನೆಲೆಯಲ್ಲಿ ಇವರ ನಡುವೆ ಮುಸುಕಿನ ಗುದ್ದಾಟವಾಗುತ್ತಿತ್ತು. ಹಿಂದ ಸಮಾವೇಶದ ಮೂಲಕ ಶಕ್ತಿಪ್ರದರ್ಶನಕ್ಕೆ ಸಜ್ಜಾಗಿರುವ ಸಿದ್ದರಾಮಯ್ಯ ಮೇಲೆ ಮುಗಿಬೀಳಲು ಮೂಲ ಕಾಂಗ್ರೆಸ್ಸಿಗರು ತುದಿಗಾಲಿನಲ್ಲಿ ನಿಂತಿದ್ದಾರೆ ಎಂದು ಬಿಜೆಪಿ ಕರ್ನಾಟಕ ಟ್ವೀಟ್ ನಲ್ಲಿ ಟೀಕಿಸಿದೆ.
ಇದನ್ನೂ ಓದಿ: ಚುನಾವಣೆಯನ್ನು ಪ್ರಜಾಸತ್ತಾತ್ಮಕವಾಗಿ ಗೆಲ್ಲಬೇಕು, ಹಿಂಸೆಯಿಂದಲ್ಲ: ದೀದಿ ಬೆಂಬಲಕ್ಕೆ ಎಚ್ಡಿಕೆ
ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್ ನಡುವೆ ಇತ್ತೀಚೆಗೆ ಮೈಸೂರು ಮೇಯರ್ ವಿಚಾರದಲ್ಲಿ ಸಂಘರ್ಷವೇರ್ಪಟ್ಟಿತ್ತು. ಅದು ಕೇವಲ ಮನಸ್ತಾಪವಾಗಿರಲಿಲ್ಲ, ಅದು ಸಿಎಂ ಕುರ್ಚಿಗಾಗಿ ನಡೆದ ಕದನವಾಗಿತ್ತು. ಇಬ್ಬರು ಮುಖ್ಯಮಂತ್ರಿ ಅಭ್ಯರ್ಥಿಗಳು ಪಕ್ಷದಲ್ಲಿ ಹಿಡಿತ ಸಾಧಿಸಲು ಹೆಣಗಾಡುತ್ತಿದ್ದಾರೆ. ಕನಸಿನಲ್ಲೂ ಲಭಿಸದ ಮುಖ್ಯಮಂತ್ರಿ ಪಟ್ಟಕ್ಕಾಗಿ ಇವರಿಬ್ಬರ ನಡುವೆ ಕದನ ಆರಂಭವಾಗಿದೆ. ಈ ಆಂತರಿಕ ಸಂಘರ್ಷ ಶಮನ ಮಾಡುವುದಕ್ಕೆ ಸುರ್ಜೇವಾಲಾ ಅವರನ್ನು ಮುಲಾಮು ಸಮೇತ ಕಳುಹಿಸಿಕೊಡಲು ಕಾಂಗ್ರೆಸ್ ಪಕ್ಷದ ಒಂದು ಕುಟುಂಬ ನಿರ್ಧರಿಸಿದೆ. ನಾವಿಕನಿಲ್ಲದ ಕಾಂಗ್ರೆಸ್ ದಿಕ್ಕೆಟ್ಟು ನಿಂತಿದೆ ಎಂದು ಟೀಕಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
MUST WATCH
ಹೊಸ ಸೇರ್ಪಡೆ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ