ನಿರ್ವಹಣೆ ಇಲ್ಲದೆ ಸೊರಗಿದ ಉಬರಡ್ಕ-ಮಿತ್ತೂರಿನ ಕಿಂಡಿ ಅಣೆಕಟ್ಟು

 ಆಡಳಿತದ ನಿರ್ಲಕ್ಷ್ಯ, ಜನರ ಪೇಚಾಟ ,ಶೀಘ್ರ ಕ್ರಮಕ್ಕೆ ಆಗ್ರಹ

Team Udayavani, Mar 12, 2021, 2:40 AM IST

ನಿರ್ವಹಣೆ ಇಲ್ಲದೆ ಸೊರಗಿದ ಉಬರಡ್ಕ-ಮಿತ್ತೂರಿನ ಕಿಂಡಿ ಅಣೆಕಟ್ಟು

ಸುಳ್ಯ: ಪಶ್ಚಿಮ ವಾಹಿನಿ ಯೋಜನೆಯ ಮೂಲಕ ರಾಜ್ಯಾದ್ಯಂತ ನದಿಗಳಿಗೆ ಕಿಂಡಿ ಅಣೆಕಟ್ಟು ಕಟ್ಟಿಸಲಾಗಿದೆ. ಈ ಬಾರಿಯ ಬಜೆಟ್‌ನಲ್ಲಿಯೂ 1,348 ಕಿಂಡಿ ಅಣೆಕಟ್ಟೆ ನಿರ್ಮಿಸಲು 3,986 ಕೋಟಿ ರೂ. ಮೀಸಲಿರಿಸಲಾಗಿದೆ. ಆದರೆ ಅತ್ಯಾವಶ್ಯಕವಾದ ಕೆಲವು ಪ್ರಮುಖ ಪ್ರದೇಶಗಳಿಗೆ ಕಿಂಡಿ ಅಣೆಕಟ್ಟು ಭಾಗ್ಯ ದೊರೆತಿಲ್ಲ. ಕಿಂಡಿ ಅಣೆಕಟ್ಟು ಇರುವ ಕೆಲವೆಡೆ ಅದರ ನಿರ್ವಹಣೆ ಸರಿಯಾಗಿ ಆಗುತ್ತಿಲ್ಲ. ಇದಕ್ಕೆ ಉದಾರಣೆ ಉಬರಡ್ಕ-ಮಿತ್ತೂರಿನ ಕಿಂಡಿ ಅಣೆಕಟ್ಟು.

ಸುಳ್ಯ-ಉಬರಡ್ಕ-ಮಿತ್ತೂರು- ದೊಡ್ಡತೋಟ ರಸ್ತೆ ಬದಿ 2 ವರ್ಷಗಳ ಹಿಂದೆ ಸಣ್ಣ ನೀರಾವರಿ ಇಲಾಖೆ ವತಿಯಿಂದ 45 ಲಕ್ಷ ರೂ. ವೆಚ್ಚದಲ್ಲಿ ಕಿಂಡಿ ಅಣೆಕಟ್ಟು ನಿರ್ಮಿಸಲಾಗಿತ್ತು.  ಮೊದಲು ಸೇತುವೆ  ಕಟ್ಟುವ ವೇಳೆ ಸ್ವಲ್ಪ ಪ್ರಮಾಣದ ಮರಳು, ಸಿಮೆಂಟ್‌ ಪಯಸ್ವಿನಿ ಪಾಲಾಗಿತ್ತು. ಮತ್ತೆ ಪುನಃ ಸೇತುವೆ ನಿರ್ಮಿಸಲಾಗಿತ್ತು. ಸಣ್ಣ ನೀರಾವರಿ ಇಲಾಖೆಯಿಂದ ಮೊತ್ತ ಪಾವತಿಯಾಗಿಲ್ಲ ಎಂದು ಗುತ್ತಿಗೆ ಪಡೆದುಕೊಂಡವರು ಕಿಂಡಿ ಅಣೆಕಟ್ಟು ನಿರ್ಮಿಸಲು ಬಳಸುವ ಹಲಗೆಯನ್ನು ತಮ್ಮ ಬಳಿಯೇ ಇಟ್ಟುಕೊಂಡಿದ್ದಾರೆ. ಈಗ ಹಲಗೆಗಳ ಗುಣಮಟ್ಟ ಕಡಿಮೆಯಾಗಿದೆ.  ನೀರಾವರಿ ಇಲಾಖೆಯಿಂದ ದುಡ್ಡು ಸಿಕ್ಕಿಲ್ಲ ಎಂದು ಜನರಿಗೆ ಉಪಕಾರಿಯಾಗಿರುವ ಹಲಗೆಗಳನ್ನು ಇಟ್ಟು ಗೆದ್ದಲು ಬರಿಸುವುದು ಏಕೆ ಎಂದು ಸಾರ್ವಜನಿಕರು ಪ್ರಶ್ನಿಸಿದ್ದಾರೆ.

ಕಸ ತೆರವುಗೊಳಿಸಿಲ್ಲ :

ಈಗಲೇ ನೀರಿನ ಅಭಾವದ ಮುನ್ಸೂಚನೆ ಗೋಚರಿಸಿದ್ದು, ಮಳೆಗಾಲದಲ್ಲಿ ಕಿಂಡಿಗಳಲ್ಲಿ  ತುಂಬಿದ್ದ ಹೂಳು ಹಾಗೂ  ಕಡ್ಡಿಗಳನ್ನು ಇನ್ನೂ ತೆರವುಗೊಳಿಸಿಲ್ಲ.  ಆಡಳಿತ ವೈಫಲ್ಯ, ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ಸ್ವ ಹಿತಾಸಕ್ತಿಗೆ ಬಲಿಯಾಗಿ ಸಾರ್ವಜನಿಕರು ನೀರಿನ ಬರ ಎದುರಿಸಬೇಕಾದ ದುಸ್ಥಿತಿಯಲ್ಲಿದ್ದಾರೆ. ಈ ರೀತಿ ನಿರ್ಲಕ್ಷ್ಯ ಮುಂದುವರಿದರೆ ಬೇಸಿಗೆ ಅಂತ್ಯದಲ್ಲಿ ನೀರಿನ ಅಭಾವ ಎದುರಾಗಲಿದೆ ಎಂದು ಜನರು ಆತಂಕ ವ್ಯಕ್ತಪಡಿಸುತ್ತಾರೆ.

ಕ್ರಮಕ್ಕೆ ಮುಂದಾಗಬೇಕು :

ಸ್ಥಳೀಯರು ಈ ನೀರನ್ನೇ ಬಳಸುತ್ತಿರುವುದರಿಂದ ಬೋರ್‌ ಅಥವಾ ಪರ್ಯಾಯ ಮಾರ್ಗಗಳನ್ನು ಕಂಡು ಕೊಂಡಿಲ್ಲ. ಈಗ ನಿರ್ಮಿಸಿರುವ ಕಿಂಡಿ ಅಣೆಕಟ್ಟೆಯನ್ನು ಸರಿಯಾದ ರೀತಿ ನಿರ್ವಹಿಸಿ ಜನರ ಬಳಕೆಗೆ ಲಭ್ಯವಾಗಲು ನೂತನ ಆಡಳಿತ ಕಾರಣ ನೀಡದೇ ಕ್ರಮಕ್ಕೆ ಮುಂದಾಗಬೇಕು ಎಂದು ಉಬರಡ್ಕ-ಮಿತ್ತೂರಿನ ಸ್ಥಳೀಯರು ಆಗ್ರಹಿಸುತ್ತಿದ್ದಾರೆ.  ಸಣ್ಣ ನೀರಾವರಿ ಇಲಾಖೆಯು ಗುತ್ತಿಗೆದಾರರ ಬಿಲ್‌ ಪರಿಶೀಲಿಸಬೇಕು ಎನ್ನುವುದು ಸಾರ್ವಜನಿಕರ ಸಲಹೆ.

ಕಿಂಡಿ ಅಣೆಕಟ್ಟು ನಿರ್ಮಿಸಲು ಮಾತ್ರವೇ ಟೆಂಡರ್‌ ನೀಡಿದ್ದರು. ಆದರೆ ಅದಕ್ಕೆ ನೀಡಬೇಕಾದ ಮೊತ್ತವನ್ನೇ ಇಲಾಖೆ ಮಂಜೂರು ಮಾಡಿಲ್ಲ. ಇದರಿಂದ ನಮಗೆ ಸಂಕಷ್ಟ ಎದುರಾಗಿದೆ. ಹಾಗಾಗಿ ಮೊತ್ತ ಪಾವತಿಯಾಗುವವರೆಗೆ ಹಲಗೆ ನಮ್ಮಲ್ಲಿ ಇಟ್ಟುಕೊಂಡಿದ್ದೇವೆ. -ಆನಂದ,ಗುತ್ತಿಗೆದಾರ

ಈ ಬಾರಿಯ ಗ್ರಾ.ಪಂ. ಆಡಳಿತ ಸಭೆಯಲ್ಲಿ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳುತ್ತೇವೆ. ಮೊದಲು ಅಲ್ಲಿನ ಹೂಳನ್ನು ತೆಗೆಸಲಾಗುವುದು. ಹಲಗೆಯ ವ್ಯವಸ್ಥೆ ಆಗಬೇಕು. ಸಂಬಂಧಪಟ್ಟವರು ಈ ಬಗ್ಗೆ ಕ್ರಮ ಕೈಗೊಳ್ಳಬೇಕಿದೆ.   -ವಿದ್ಯಾಧರ,  ಪಿಡಿಒ, ಉಬರಡ್ಕ-ಮಿತ್ತೂರು

 

– ಸುದೀಪ್‌ರಾಜ್‌ ಕೋಟೆಮೂಲೆ

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

8-

Charmadi ಘಾಟ್‌ನಲ್ಲಿ ಟಾಟಾ ಏಸ್‌ ಪಲ್ಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.