ಜಲ ಸಂಪನ್ಮೂಲ ಖಾತೆಗೆ ಹಲವರ ಕಣ್ಣು
Team Udayavani, Mar 12, 2021, 7:20 AM IST
ಬೆಂಗಳೂರು: ಸಿ.ಡಿ. ಪ್ರಕರಣದಲ್ಲಿ ಸಿಲುಕಿಕೊಂಡು ರಾಜೀನಾಮೆ ನೀಡಿರುವ ರಮೇಶ್ ಜಾರಕಿಹೊಳಿ ಅವರು ನಿರ್ವಹಿಸುತ್ತಿದ್ದ ಜಲ ಸಂಪನ್ಮೂಲ ಖಾತೆ ಮೇಲೆ ಹಲವರು ಕಣ್ಣಿಟ್ಟಿದ್ದು, ಅವರಲ್ಲಿ ಬಸವರಾಜ ಬೊಮ್ಮಾಯಿ, ಅಶೋಕ್, ಲಿಂಬಾವಳಿ, ಉಮೇಶ್ ಕತ್ತಿ ಮುಂತಾದವರು ಪ್ರಮುಖರು. ಆದರೆ, ಜಾರಕಿಹೊಳಿ ಸಹೋದರರು ಆಕ್ಷೇಪಿಸುವ ಸಾಧ್ಯತೆ ಇರುವುದರಿಂದ ಬಹಿರಂಗವಾಗಿ ಪ್ರಸ್ತಾಪಿಸಲು ಹಿಂದೇಟು ಹಾಕುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಮತ್ತೂಂದೆಡೆ ರಮೇಶ್ ಜಾರಕಿಹೊಳಿ ಅವರು ತಿಂಗಳೊಳಗೆ ಅದೇ ಖಾತೆಗೆ ಮರಳುವ ನಿರೀಕ್ಷೆಯಲ್ಲಿದ್ದಾರೆ.
ಉತ್ತರ ಕರ್ನಾಟಕ ಭಾಗದ ನೀರಾವರಿ ಯೋಜನೆಗಳಿಗೆ ಟೆಂಡರ್ ಪ್ರಕ್ರಿಯೆ ಆರಂಭವಾಗಿದೆ. ಹೀಗಾಗಿ, ರಮೇಶ್ ಅವರ ಸ್ಥಾನವನ್ನು ಸಹೋದರ ಬಾಲಚಂದ್ರ ಜಾರಕಿಹೊಳಿಗೆ ಜಲ ಸಂಪನ್ಮೂಲ ಖಾತೆ ನೀಡಬೇಕೆಂಬ ಒತ್ತಡವೂ ಅವರ ಆಪ್ತ ಶಾಸಕರ ವಲಯದಿಂದ ಕೇಳಿ ಬರುತ್ತಿದೆ.
ಸಿಎಂನಿಂದ ತಾಳ್ಮೆಯ ಲೆಕ್ಕಾಚಾರ :
ಸದ್ಯ ಜಲ ಸಂಪನ್ಮೂಲ ಖಾತೆ ಮುಖ್ಯಮಂತ್ರಿ ಕೈಯಲ್ಲಿದೆ. ಮುಂದೆ ರಮೇಶ್ ನಿರ್ದೋಷಿ ಎಂಬ ವರದಿ ಬಂದರೆ, ಖಾತೆಯನ್ನು ಅವರಿಗೇ ನೀಡಬೇಕಾಗಿ ಬರಬಹುದು.
ಐದು ರಾಜ್ಯಗಳ ವಿಧಾನಸಭೆ ಚುನಾವಣೆ ಮತ್ತು ರಾಜ್ಯದ ನಾಲ್ಕು ಕ್ಷೇತ್ರಗಳ ಉಪಚುನಾವಣೆ ಬಳಿಕ ಸಚಿವ ಸ್ಥಾನ ನೀಡಲು ಸಿಎಂ ಮತ್ತು ಬಿಜೆಪಿ ಹೈಕಮಾಂಡ್ ಲೆಕ್ಕಾಚಾರ ಹಾಕಿದೆ ಎನ್ನಲಾಗಿದೆ. ಆದರೆ, ರಾಜ್ಯದಲ್ಲಿನ ಉಪಚುನಾವಣೆ ಘೋಷಣೆಗೆ ಮುನ್ನವೇ ರಮೇಶ್ ಅಥವಾ ಬಾಲಚಂದ್ರ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂಬುದು ಪಕ್ಷದ ಶಾಸಕರ ಒಂದು ಗುಂಪು ಸಿಎಂ ಮೇಲೆ ಒತ್ತಡ ಹಾಕುತ್ತಿದೆ.
ಮಾಸಾಂತ್ಯಕ್ಕೆ ಮುಕ್ತಾಯ? :
ಸಿ.ಡಿ. ಪ್ರಕರಣ ಈ ತಿಂಗಳಾಂತ್ಯದೊಳಗೆ ಮುಕ್ತಾಯವಾಗುವ ನಿರೀಕ್ಷೆ ಜಾರಕಿಹೊಳಿ ಸಹೋದರರಲ್ಲಿದೆ. ಸರಕಾರ ಎಸ್ಐಟಿ ರಚನೆ ಮಾಡಿದ್ದು, ಅದು ತಿಂಗಳೊಳಗೆ ವರದಿ ನೀಡುವ ನೀಡುವ ನಿರೀಕ್ಷೆ ಇಟ್ಟುಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ
MUST WATCH
ಹೊಸ ಸೇರ್ಪಡೆ
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು
ಈ ಪೆನ್ಡ್ರೈವ್ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್