ಬೆಳಗಾವಿ: ಕರವೇ ಕಾರ್ಯಕರ್ತರಿಂದ ಶಿವಸೇನೆ ಮುಖಂಡರ ವಾಹನದ ಮೇಲೆ ದಾಳಿ
Team Udayavani, Mar 12, 2021, 3:25 PM IST
ಸಾಂಧರ್ಭಿಕ ಚಿತ್ರ ಬಳಸಲಾಗಿದೆ
ಬೆಳಗಾವಿ: ಬೆಳಗಾವಿ-ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಶಿವಸೇನೆ ಕಾರ್ಯಕರ್ತರು ಕನ್ನಡ ನಾಮಫಲಕಗಳಿಗೆ ಕಪ್ಪು ಮಸಿ ಬಳಿದಿದ್ದಕ್ಕೆ ಪ್ರತೀಕಾರವಾಗಿ ಕರವೇ ಕಾರ್ಯಕರ್ತರು ಬೆಳಗಾವಿಯ ಶಿವಸೇನೆ ಮುಖಂಡರ ವಾಹನದ ಮೇಲೆ ದಾಳಿ ಮಾಡಿ ವಾಹನದ ಮೇಲಿನ ಶಿವಸೇನೆಯ ಫಲಕಕ್ಕೆ ಕಪ್ಪು ಮಸಿ ಬಳಿದು ಧ್ವಂಸ ಮಾಡಿದ್ದಾರೆ.
ನಗರದ ರಾಮಲಿಂಗ ಖಿಂಡ ಗಲ್ಲಿಯ ಎಂಇಎಸ್ ಕಚೇರಿಯ ಮೇಲೆ ದಾಳಿ ಮಾಡಿ ಕಚೇರಿಗೆ ನುಗ್ಗಲು ಯತ್ನಿಸಿದ ಕರ್ನಾಟಕ ರಕ್ಷಣಾ ವೇದಿಕೆ ಜನನ ಕಾರ್ಯಕರ್ತರನ್ನು ಪೊಲೀಸರು ತಡೆದಿದ್ದಾರೆ.
ಇದೇ ಸಂದರ್ಭದಲ್ಲಿ ಶಿವಸೇನೆ ಮುಖಂಡ ಪ್ರಕಾಶ ಶಿರೋಳಕರ ಅಲ್ಲಿಗೆ ಬಂದಾಗ ಕರವೇ ಕಾರ್ಯಕರ್ತರು ಶಿವಸೇನೆ ಮುಖಂಡನ ಕಾರು ನಿಲ್ಲಿಸಿ ಕಾರಿನ ಮೇಲೆ ಹಾಕಲಾಗಿದ್ದ ಶಿವಸೇನೆ ಫಲಕಕ್ಕೆ ಕಪ್ಪು ಮಸಿ ಬಳಿದು, ಫಲಕವನ್ನೇ ಕಿತ್ತೆಸೆದಿದ್ದಾರೆ.
ಇದನ್ನೂ ಓದಿ:ಮಹಾ ಶಿವರಾತ್ರಿ ಕುರಿತು ಟ್ವೀಟ್ ಮಾಡಿ ಟ್ರೋಲ್ ಆದ ನಟ ಸೋನು ಸೂದ್
ಎಂಇಎಸ್, ಶಿವಸೇನೆ ಕಚೇರಿ ನುಗ್ಗಲು ಯತ್ನಿಸಿದ ಕಾರ್ಯಕರ್ತರು, ಕನ್ನಡ ನಾಡಿನಲ್ಲಿ ಮರಾಠಿ ಭಾಷೆ ನಾಮಫಲಕ ಹಾಕದಂತೆ ಶಿವಸೇನೆ ಕಾರ್ಯಕರ್ತರಿಗೆ ಎಚ್ಚರಿಕೆ ನೀಡಿದರು. ಈ ಸಂದರ್ಭದಲ್ಲಿ ಶಿವಸೇನೆ ಹಾಗೂ ಕರವೇ ಮುಖಂಡರ ಮಧ್ಯೆ ವಾಗ್ವಾದ ನಡೆದಿದೆ.
ಕರವೇ ರಾಜ್ಯ ಸಂಚಾಲಕ ಮಹಾದೇವ ತಳವಾರ್, ಕರವೇ ಜಿಲ್ಲಾಧ್ಯಕ್ಷ ದೀಪಕ್ ಗುಡಗನಟ್ಟಿ ನೇತೃತ್ವದಲ್ಲಿ ಈ ದಾಳಿ ನಡೆದಿದೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು ಹೆಚ್ಚಿನ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಜೂನ್ ಮೊದಲ ವಾರವೇ ರಾಜ್ಯಕ್ಕೆ ಮುಂಗಾರು? ಮುಂದಿನ 5 ದಿನಗಳ ಕಾಲ ರಾಜ್ಯಾದ್ಯಂತ ಮಳೆ
Prajwal ಬಂಧನಕ್ಕೆ ರೆಡ್ ಕಾರ್ನರ್ ಅಸ್ತ್ರ; ಕೇಂದ್ರ ಸರಕಾರಕ್ಕೆ ಪತ್ರ ಬರೆಯುವ ಸಾಧ್ಯತೆ
State Govt ದೇವೇಗೌಡರ ಬಲಿ ಪಡೆಯಲು ಸಂಚು: ಜೆಡಿಎಸ್ ಆರೋಪ
Prajwal Revanna Case; ಸಿಬಿಐಗೆ ವಹಿಸಿದರೆ ಸರಕಾರದಲ್ಲಿ ಇರುವವರು ಜೈಲಿಗೆ
Govt ಕಚೇರಿಗಳಲ್ಲಿ ಇ-ಆಫೀಸ್ ತಂತ್ರಾಂಶ ಕಡ್ಡಾಯಕ್ಕೆ ಆದೇಶ
MUST WATCH
ಹೊಸ ಸೇರ್ಪಡೆ
Unemployment; ಭಾರತದ ಯುವಕರಿಗೆ ಕೆಲಸ ಸಿಗಬೇಕಾದರೆ ಮೋದಿ ನಿವೃತ್ತಿಯಾಗಬೇಕು: ರಾಹುಲ್ ಗಾಂಧಿ
IPL 2024; ವಿರಾಟ್ ಕೊಹ್ಲಿಯ ಎಂಟು ವರ್ಷ ಹಳೆಯ ದಾಖಲೆ ಮುರಿದ ಅಭಿಷೇಕ್ ಶರ್ಮಾ
OTP ಹೇಳದಿದ್ದರೂ ಹಣ ಎಗರಿಸುತ್ತಾರೆ; ಎಚ್ಚರ! ರಾಷ್ಟ್ರೀಕೃತ ಬ್ಯಾಂಕ್ಗಳ ಹೆಸರಲ್ಲಿ ಸಂದೇಶ
Elephant Census; ಮೊದಲ ಬಾರಿಗೆ ದಕ್ಷಿಣದ ರಾಜ್ಯಗಳ ಗಡಿ ಪ್ರದೇಶಗಳಲ್ಲಿ ಆನೆ ಗಣತಿ
Udupi ಜಿಲ್ಲಾಡಳಿತಕ್ಕೆ ಮಾಹಿತಿ ನೀಡದೇ ಆಗುಂಬೆ ಸುರಂಗ ಮಾರ್ಗದ ಡಿಪಿಆರ್?