ವೈರಾಗ್ಯ, ಆಧ್ಯಾತ್ಮದ ಸಂಕೇತವೇ ಶಿವ
ಶಿವರಾತ್ರಿ ವಿಶೇಷ ಪೂಜೆ ನೆರವೇರಿಸಿದ ಶ್ರೀಗಳು ! ಪೂಜಾ ಕಾರ್ಯಗಳಲ್ಲಿ ಪಾಲ್ಗೊಂಡ ಭಕ್ತರು
Team Udayavani, Mar 12, 2021, 6:27 PM IST
ಕುದೂರು: ಶಿವ ಎಂಬುದು ವೈರಾಗ್ಯ ಮತ್ತು ಆಧ್ಯಾತ್ಮದ ಸಂಕೇತ. ಸಾಧಕರು, ಸನ್ಯಾಸಿಗಳಿಗೆ ಧ್ಯಾನಾಸಕ್ತ ಶಿವನೇ ಮಾದರಿ ಎಂದು ಕಂಚುಗಲ್ ಬಂಡೇಮಠದ ಶ್ರೀ ಬಸವಲಿಂಗ ಸ್ವಾಮೀಜಿ ಹೇಳಿದರು.
ಕಂಚುಗಲ್ ಬಂಡೇಮಠದ ಮಹಾಲಿಂಗೇಶ್ವರ ಸ್ವಾಮಿ ದೇವಾಲಯದಲ್ಲಿ ಶಿವರಾತ್ರಿ ವಿಶೇಷ ಪೂಜೆ ನೆರವೇರಿಸಿ ಮಾತನಾಡಿದ ಅವರು, ದೇಹವನ್ನು ದಂಡಿಸುವ ಜತೆಗೆ, ಶುದ್ಧ ಆಲೋಚನೆ ಮಾಡುವುದು ಶಿವರಾತ್ರಿ ಹಬ್ಬದ ವಿಶೇಷ. ಆಯುರ್ವೇದದಲ್ಲಿ ಬಹುದೊಡ್ಡ ಪಾತ್ರ ವಹಿಸಿರುವ ಔಷಧ ಎಲೆಯಾದ ಬಿಲ್ವಪತ್ರೆಯನ್ನು ಶಿವನಿಗೆ ವಿಶೇಷವಾಗಿ ಅರ್ಪಿಸಲಾಗುತ್ತದೆ. ಬಿಲ್ವಪತ್ರೆ ರೋಗನಿರೋಧಕ ಶಕ್ತಿಯನ್ನು ಹೊಂದಿದೆ. ಬೇಸಿಗೆ ವೇಳೆ ಇದರ ಬಳಕೆ ಹೆಚ್ಚು ಸೂಕ್ತ ಎಂದು ವೈದ್ಯಶಾಸ್ತ್ರ ತಿಳಿಸುತ್ತದೆ ಎಂದರು.
ಶಿವಲಿಂಗಕ್ಕೆ ವಿಶೇಷ ಹೂವಿನ ಅಲಂಕಾರ: ಗ್ರಾಮದ ಪ್ರಸನ್ನ ಗಂಗಾಧರೇಶ್ವರ ದೇವಾಲಯದಲ್ಲಿ ಶಿವಲಿಂಗಕ್ಕೆ ವಿಶೇಷ ಹೂವಿನ ಅಲಂಕಾರ ಮಾಡಲಾಗಿತ್ತು. ಬೆಳಗಿನಿಂದ ನಡೆದ ರುದ್ರಾಭಿಷೇಕ, ಪೂಜಾ ಕಾರ್ಯಗಳಲ್ಲಿ ಭಕ್ತರು ಪಾಲ್ಗೊಂಡಿದ್ದರು. ಗ್ರಾಮದ ತುಮಕೂರು ರಸ್ತೆಯಲ್ಲಿರುವ ರಾಮಲಿಂಗಚೌಡೇಶ್ವರಿ ಅಮ್ಮನವರ ದೇವಾಲಯದಲ್ಲಿ ರಾಮಲಿಂಗ ಸ್ವಾಮಿಗೆ ವಿಶೇಷ ಅಲಂಕಾರ ಏರ್ಪಡಿಸಲಾಗಿತ್ತು. ರಾಮಲಿಂಗಚೌಡೇಶ್ವರಿ ದೇವಾಲಯ ಸಂಘದ ಅಧ್ಯಕ್ಷ ಕೆ.ಬಿ.ಬಾಲರಾಜು, ಶಿವಕುಮಾರ್, ಜಯಚಂದ್ರಬಾಬು, ಶಿವರಾಂ, ಮುರುಳಿಧರ್, ಮಂಜುನಾಥ್, ಶಿವರಾಮ್ ಇದ್ದರು.
ಸೋಲೂರು ಹೋಬಳಿಯ ಗದ್ದುಗೆಮಠದ ಶ್ರೀ ಮಹಂತೇಶ್ವರ ಸ್ವಾಮಿ ದೇವಾಲಯದಲ್ಲಿ ಶಿವರಾತ್ರಿ ಪ್ರಯುಕ್ತ ವಿಶೇಷ ಪೂಜೆ ಏರ್ಪಡಿಸಲಾಗಿತ್ತು. ಗದ್ದುಗೆ ಮಠಾಧ್ಯಕ್ಷ ಮಹಂತ ಸ್ವಾಮೀಜಿ ಮಾತನಾಡಿ, ಉಸಿರಾಡುತ್ತಿದ್ದರೆ ಪ್ರತಿಯೊಬ್ಬರು ಶಿವ ಸ್ವರೂಪಿಗಳೇ ಉಸಿರು ನಿಂತರೆ ಅವರು ಶವವಾಗುತ್ತಾರೆ. ಇನ್ನೊಬ್ಬರ ಹಿತ ಬಯಸುವುದು ಸ್ವಾರ್ಥಕ್ಕೆ ಆರೋಗ್ಯಕರ ಗೆರೆ ಎಳೆದುಕೊಳ್ಳುವುದು. ಸರಳವಾಗಿ ಬದುಕಿದರೂ ಸಂತೋಷದಿಂದ ಇರಬೇಕು ಎಂಬುದನ್ನು ಈ ಹಬ್ಬ ಸಾರುತ್ತದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು
Ramanagara; ಅಪ್ರಾಪ್ತ ಮಕ್ಕಳ ಮೈಯನ್ನು ಕಾದ ಕಬ್ಬಿಣದಿಂದ ಸುಟ್ಟ ಮದ್ಯವ್ಯಸನಿ ತಂದೆ
Vedganga ನದಿಯಲ್ಲಿ ಮುಳುಗಿ ನಾಲ್ವರು ಮೃತ್ಯು:ಇಬ್ಬರು ಬೆಳಗಾವಿಯವರು
Congress ಗಾಡ್ ಫಾದರ್ ಸಂಸ್ಕೃತಿ ಬಿಜೆಪಿಗೆ ಬಂದಿದೆ: ರಘುಪತಿ ಭಟ್
Hubli; ನೇಹಾ ಪ್ರಕರಣದ ಬಳಿಕ ಸರ್ಕಾರ ಎಚ್ಚೆತ್ತುಕೊಳ್ಳಬೇಕಿತ್ತು: ಜಯಮೃಂತ್ಯುಜಯ ಸ್ವಾಮೀಜಿ
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
BJP ಕಚೇರಿಗೆ ಬರುತ್ತಿದ್ದೇವೆ.. ಎಲ್ಲರನ್ನೂ ಬಂಧಿಸಿ: ಪ್ರಧಾನಿಗೆ ಕೇಜ್ರಿವಾಲ್ ಸವಾಲು
Congress ಪಕ್ಷದಲ್ಲಿ ಔರಂಗಜೇಬನ ಆತ್ಮ ಸೇರಿಕೊಂಡಿದೆ: ಸಿಎಂ ಯೋಗಿ ವಾಗ್ದಾಳಿ
RSS ಕೂಡ ನಕಲಿ ಎಂದು ನಾಳೆ ಮೋದಿ ಹೇಳಬಹುದು : ಉದ್ಧವ್ ಠಾಕ್ರೆ ಕಿಡಿ
Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು
Ramanagara; ಅಪ್ರಾಪ್ತ ಮಕ್ಕಳ ಮೈಯನ್ನು ಕಾದ ಕಬ್ಬಿಣದಿಂದ ಸುಟ್ಟ ಮದ್ಯವ್ಯಸನಿ ತಂದೆ