ಜಯದೇವ ಆಸ್ಪತ್ರೆಗಾಗಿ ಬಡವರ ಹೃದಯ ಮಿಡಿತ

ಜಯದೇವ ಆಸ್ಪತ್ರೆ

Team Udayavani, Mar 12, 2021, 7:18 PM IST

hbgghj

ದಾವಣಗೆರೆ : ಪ್ರಸಕ್ತ ಸಾಲಿನ ರಾಜ್ಯ ಬಜೆಟ್‌ನಲ್ಲಿ ಜಿಲ್ಲೆಗೆ ಘೋಷಣೆಯಾಗಿರುವಂತೆ ನಗರದಲ್ಲಿ ಜಯದೇವ ಹೃದ್ರೋಗ ವಿಜ್ಞಾನ ಸಂಸ್ಥೆಯ ಉಪಕೇಂದ್ರ ಕಾರ್ಯಾರಂಭ ಮಾಡಿದರೆ ಸಾವಿರಾರು ಬಡ ಹೃದಯಗಳಿಗೆ ಜೀವಬಲ ತುಂಬುವ ನಿರೀಕ್ಷೆ ಗರಿಗೆದರಿದೆ.

ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಬಜೆಟ್‌ ನಲ್ಲಿ ನಗರದಲ್ಲಿ 20 ಕೋಟಿ ರೂ. ವೆಚ್ಚದಲ್ಲಿ 50 ಹಾಸಿಗೆಯ ಜಯದೇವ ಹೃದ್ರೋಗ ವಿಜ್ಞಾನ ಸಂಸ್ಥೆಯ ಉಪ ಕೇಂದ್ರ ಪ್ರಾರಂಭಿಸುವುದಾಗಿ ಘೋಷಿಸಿದ್ದಾರೆ. ಅವರ ಘೋಷಣೆ ಸಾಕಾರಗೊಂಡು ಉಪಕೇಂದ್ರ ಕಾರ್ಯ ನಿರ್ವಹಿಸಿದರೆ, ಸರ್ಕಾರಿ ವ್ಯವಸ್ಥೆಯಲ್ಲಿ ಹೃದ್ರೋಗಗಳಿಗೆ ಉತ್ತಮ ವೈದ್ಯಕೀಯ ಸೇವೆ ಸಿಗುವ ಜತೆಗೆ ದೂರದ ಊರುಗಳಿಗೆ ಅಲೆದಾಡುವುದು

ತಪ್ಪಲಿದೆ. ಜಿಲ್ಲೆ ಸೇರಿದಂತೆ ಸುತ್ತಲಿನ ಚಿತ್ರದುರ್ಗ, ಶಿವಮೊಗ್ಗ, ಹಾವೇರಿ, ಗದಗ, ಬಳ್ಳಾರಿ ಭಾಗದ ಬಡವರ ಹೃದಯಕ್ಕೂ ಇದು ಆರೈಕೆ ನೀಡಲಿದೆ. ದಾವಣಗೆರೆ ನಗರದಲ್ಲಿ ಹೃದಯ ಆರೋಗ್ಯ ಸಮಸ್ಯೆಗೆ ಚಿಕಿತ್ಸೆ ನೀಡುವ ವಿವಿಧ ಖಾಸಗಿ ಆಸ್ಪತ್ರೆಗಳು ಇವೆ. ಆದರೆ, ಹೃದ್ರೋಗಕ್ಕೆ ಸಂಬಂಧಿಸಿದ ವಿಶೇಷ ಸರ್ಕಾರಿ ಆಸ್ಪತ್ರೆಗಳಿಲ್ಲ. ಬಡವರು ಹೃದ್ರೋಗಕ್ಕೊಳಗಾದರೆ ಖಾಸಗಿ ಆಸ್ಪತ್ರೆಗಳ ದುಬಾರಿ ಚಿಕಿತ್ಸಾ ವೆಚ್ಚಕ್ಕೆ ಅಂಜಿ ಚಿಕಿತ್ಸೆಯಿಂದಲೇ ದೂರ ಉಳಿಯಬೇಕಿತ್ತು. ಇಲ್ಲವೇ ಸರ್ಕಾರಿ ಸೌಲಭ್ಯ ಬಯಸಿ ಜಯದೇವ ಆಸ್ಪತ್ರೆ ಇಲ್ಲವೇ ಇತರ ಶಾಖೆಗಳಿರುವ ಬೆಂಗಳೂರು, ಮೈಸೂರು, ಕಲಬುರಗಿಯಂಥ ದೂರದ ಊರುಗಳಿಗೆ ಅಲೆಯಬೇಕಿತ್ತು. ಜಯದೇವ ಆಸ್ಪತ್ರೆಯ ಉಪಕೇಂದ್ರವೇ ದಾವಣಗೆರೆಯಲ್ಲಿ ಸ್ಥಾಪನೆಯಾದರೆ ಈ ಭಾಗದ ಬಡವರಿಗೆ ಸುಲಭವಾಗಿ ಚಿಕಿತ್ಸೆ ದೊರೆತು ಬಡಹೃದಯಗಳಿಗೆ ಭದ್ರತೆ ಸಿಕ್ಕಂತಾಗುತ್ತದೆ ಎಂದು ಭಾವಿಸಲಾಗಿದೆ.

ಏನೆಲ್ಲ ಸೌಲಭ್ಯ ಸಿಗುತ್ತವೆ?: ಜಿಲ್ಲೆಗೆ

ಘೋಷಣೆಯಾಗಿರುವುದು ಜಯದೇವ ಹೃದ್ರೋಗ ವಿಜ್ಞಾನ ಸಂಸ್ಥೆಯ ಉಪಕೇಂದ್ರವಾಗಿದ್ದು, ಸರ್ಕಾರ ಘೋಷಿಸಿದಂತೆ ಇದು ಕೇವಲ 50 ಹಾಸಿಗೆಯುಳ್ಳ ಆಸ್ಪತ್ರೆಯಾಗಿರಲಿದೆ. ಉಪ ಕೇಂದ್ರದಲ್ಲಿ ಹೃದಯ ರಕ್ತನಾಳಗಳಲ್ಲಿ ಉಂಟಾಗಿರುವ ತಡೆಗಳನ್ನು ಗುರುತಿಸುವ ಆಂಜಿಯೋಗ್ರಾಂ, ರಕ್ತನಾಳಗಳಲ್ಲಿನ ರಕ್ತ ಸಂಚಾರ ಸುಗಮಗೊಳಿಸುವಿಕೆಯ ಆಂಜಿಯೋಪ್ಲಾಸ್ಟಿ, ಹೃದಯ ಸಮಸ್ಯೆ ಪತ್ತೆ ಹಚ್ಚುವಿಕೆಯ ಟಿಎಂಟಿ-ಇಕೋ ತಪಾಸಣೆ, ಹೃದಯಬಡಿತದ ತಪಾಸಣೆ ಹಾಗೂ ನಿಯಂತ್ರಣದ ಫೇಸ್‌ ಮೇಕರ್‌, ಹೃದ್ರೋಗಗಳಿಗೆ ಸಂಬಂಧಿಸಿದ ಪ್ರಯೋಗಾಲಯ ಸೇರಿದಂತೆ ಇನ್ನಿತರ ಚಿಕಿತ್ಸಾ ಸೇವೆಗಳು ಈ ಕೇಂದ್ರದಿಂದ ಸಿಗುವ ನಿರೀಕ್ಷೆ ಇದೆ.

ಇಲ್ಲಿ ತೆರೆದ ಹೃದಯ ಶಸ್ತ್ರಚಿಕಿತ್ಸೆ ಹೊರತುಪಡಿಸಿ ಉಳಿದೆಲ್ಲ ಸೇವೆ ಸಿಗುವ ಸಾಧ್ಯತೆ ಇದೆ. ಶಸ್ತ್ರಚಿಕಿತ್ಸೆ ಅಗತ್ಯವಿದ್ದವರಿಗೆ ಇಲ್ಲಿಂದಲೇ ಮುಖ್ಯ ಕೇಂದ್ರಕ್ಕೆ ಶಿಫಾರಸು ಮಾಡುವುದರಿಂದ ಸುಲಭವಾಗಿ ಹಾಗೂ ಶೀಘ್ರವಾಗಿ ಆ ಸೇವೆಯನ್ನೂ ಬಡವರು ಪಡೆಯಲು ಅನುಕೂಲವಾಗಲಿದೆ.

ಸಾಮಾನ್ಯವಾಗಿ ಹೃದಯಕ್ಕೆ ಸಂಬಂಧಿಸಿದ ಚಿಕಿತ್ಸೆಗಳು ದುಬಾರಿಯಾಗಿದ್ದು, ಹೃದಯ ಚಿಕಿತ್ಸೆಯಲ್ಲಿ ಅಳವಡಿಸುವ ಸ್ಟಂಟ್‌ಗೆ ಅಂದಾಜು ಕನಿಷ್ಟ 40 ಸಾವಿರದಿಂದ ಎರಡೂ¾ರು ಲಕ್ಷ ರೂ.ವರೆಗೂ ಖರ್ಚು ತಗಲುತ್ತದೆ. ಇಷ್ಟೊಂದು ದುಬಾರಿಯಾಗಿರುವ ಚಿಕಿತ್ಸೆ ಈ ಕೇಂದ್ರದ ಮೂಲಕ ಅತೀ ಕಡಿಮೆ ದರದಲ್ಲಿ ಇಲ್ಲವೇ ಉಚಿತವಾಗಿ ಲಭಿಸಲಿವೆ. ಬಿಪಿಎಲ್‌ ಕಾರ್ಡ್‌ದಾರರು, ಆಯುಷ್ಮಾನ್‌ ಭಾರತ್‌ ಆರೋಗ್ಯ ಕರ್ನಾಟಕ ಆರೋಗ್ಯ ವಿಮೆಯ ಫಲಾನುಭವಿಗಳಿಗಂತೂ ಈ ಸೇವೆ ಸುಲಭವಾಗಿ ದೊರಕಿ, ಬಡವರ ಜೀವ ಕಾಪಾಡುವಲ್ಲಿ ಸಹಕಾರಿಯಾಗಲಿದೆ.

ಹಿಂದಿನಂತೆ ಆಗದಿರಲಿ : ರಾಜ್ಯದ ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ 2017-18ನೇ ಸಾಲಿನ ಬಜೆಟ್‌ನಲ್ಲಿ 25 ಕೋಟಿ ರೂ. ವೆಚ್ಚದಲ್ಲಿ ಕ್ಯಾನ್ಸರ್‌, ಹೃದಯ ರೋಗ ಮತ್ತು ಜೀವನಕ್ರಮ ಆಧಾರಿತ ರೋಗಗಳ ಚಿಕಿತ್ಸೆಗಾಗಿ 25 ಕೋಟಿ ರೂ. ಗಳಲ್ಲಿ ನಗರದಲ್ಲಿ ಸೂಪರ್‌ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ ಮಾಡುವುದಾಗಿ ಘೋಷಿಸಿದ್ದರು. ಆದರೆ, ಆ ಘೋಷಣೆ ಈವರೆಗೂ ಘೋಷಣೆಯಾಗಿಯೇ ಉಳಿದಿದೆ. ಹೀಗಾಗಿ ಜನರಿಗೆ ಬಜೆಟ್‌ ಘೋಷಣೆ ಮೇಲಿನ ನಂಬಿಕೆಯೇ ಕಡಿಮೆಯಾಗಿದೆ. ಸರ್ಕಾರ ಬಜೆಟ್‌ನಲ್ಲಿ ಜಿಲ್ಲೆಗೆ ಘೋಷಿಸಿರುವ ಜಯದೇವ ಹೃದ್ರೋಗ ವಿಜ್ಞಾನ ಸಂಸ್ಥೆಯ ಉಪಕೇಂದ್ರವು ಬಡವರ ಹೃದಯ ಕಾಪಾಡಿ, ಜೀವ ಉಳಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿದೆ. ಆದ್ದರಿಂದ ಇದು ಕೇವಲ ಘೋಷಣೆಗೆ ಸೀಮಿತವಾಗಬಾರದು ಎಂಬುದು ಜಿಲ್ಲೆಯ ಜನರ ಅಪೇಕ್ಷೆಯಾಗಿದೆ.

ಟಾಪ್ ನ್ಯೂಸ್

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.