ನಂದಳಿಕೆ ಸಿರಿಜಾತ್ರೆ: ಮೈಲುಗಲ್ಲು, ಮಾಸ್ಕ್ ಮೂಲಕ “ಸಿರಿ ಜಾತ್ರೆ’ ಪ್ರಚಾರ


Team Udayavani, Mar 13, 2021, 4:40 AM IST

ನಂದಳಿಕೆ ಸಿರಿಜಾತ್ರೆ: ಮೈಲುಗಲ್ಲು, ಮಾಸ್ಕ್ ಮೂಲಕ “ಸಿರಿ ಜಾತ್ರೆ’ ಪ್ರಚಾರ

ಬೆಳ್ಮಣ್: ಕೊರೊನಾ ಕಾರಣದಿಂದಾಗಿ ಒಂದು ವರ್ಷದ ಬಳಿಕ ನಂದಳಿಕೆ ಸಿರಿ ಜಾತ್ರೆ ಮಾರ್ಚ್‌ 28ರಂದು ನಡೆಯಲಿದ್ದು ಪ್ರಚಾರ ವೈಖರಿ ಗಮನ ಸೆಳೆದಿದೆ. ವಿಶಿಷ್ಟ ರೀತಿಯಲ್ಲಿ ಪ್ರಚಾರದ ಕಲ್ಪನೆಯಡಿ ಜಾತ್ರೆ ಪ್ರಚಾರವನ್ನು ಮಾಡಲಾಗುತ್ತಿದೆ. ಕಳೆದ ಬಾರಿ ಲಾಕ್‌ಡೌನ್‌ನಲ್ಲಿ ಸಿರಿಜಾತ್ರೆ ಸಾಂಕೇತಿಕವಾಗಿತ್ತು. ಈ ಬಾರಿ ಮೈಲುಗಲ್ಲುಗಳ ಭಿತ್ತಿಯೊಂದಿಗೆ ಕೊರೊನಾ ತಡೆಗಟ್ಟುವ ಮಾಸ್ಕ್ನ ಕೂಡ ಪ್ರಚಾರಕ್ಕೆ ಬಳಸಲಾಗಿದೆ.

ಮಾಸ್ಕ್ ನಲ್ಲೂ ಜಾತ್ರೆ ದಿನಾಂಕ
ಮಾಸ್ಕ್ನಲ್ಲಿ ಜಾತ್ರೆಯ ದಿನಾಂಕ ಉಲ್ಲೇಖೀಸಲಾಗಿದೆ. ಕಪ್ಪು ಬಣ್ಣದ ಸುಮಾರು 20 ರೂ. ಬೆಲೆ ಬಾಳುವ 1000 ಮಾಸ್ಕ್ ಹಾಗೂ 130 ರೂ. ವೆಚ್ಚದ 500 ಮೈಲುಗಲ್ಲುಗಳ ಭಿತ್ತಿಯನ್ನು ಕ್ಷೇತ್ರದಲ್ಲಿ ಗುರುವಾರ ಬಿಡುಗಡೆಗೊಳಿಸಲಾಯಿತು. ನಂದಳಿಕೆ ಚಾವಡಿ ಅರಮನೆ ಸುಹಾಸ್‌ ಹೆಗ್ಡೆ, ಕ್ಷೇತ್ರದ ತಂತ್ರಿಗಳು, ಅರ್ಚಕರು ಹಾಗೂ ಗ್ರಾಮಸ್ಥರ ಜತೆ ಈ ಪ್ರಚಾರ ಪ್ರಕ್ರಿಯೆಗೆ ಚಾಲನೆ ನೀಡಿದರು.

ಪ್ರಚಾರ ಭಿತ್ತಿಗೆ ವಿವಿಧ ವಿನ್ಯಾಸ
ಈ ಹಿಂದೆ ಅಂಚೆ ಕಾರ್ಡ್‌, ಕೊಡೆ ಇನ್ನಿತರ ಆಕರ್ಷಕ ವಿನ್ಯಾಸಗಳ ಮೂಲಕ ಸಿರಿ ಜಾತ್ರೆಯ ಬಗ್ಗೆ ಪ್ರಚಾರ ಕೈಗೊಳ್ಳಲಾ ಗಿತ್ತು. ಆದಿ ಆಲಡೆ, ಸಿರಿ ಕ್ಷೇತ್ರ, ಸಿರಿಗಳ ಮೂಲ ಕ್ಷೇತ್ರ, ನಾಲ್ಕು ಸ್ಥಾನ ನಂದಳಿಕೆ ಹೀಗೆ ನಾನಾ ರೀತಿಯಿಂದಲೂ ಗುರುತಿಸಿಕೊಂಡ ನಂದಳಿಕೆ ಮಹಾಲಿಂಗೇಶ್ವರನ ದೇಗುಲದ‌ ಜಾತ್ರೆ ಇದಾಗಿದೆ. ಸಿರಿ, ಕುಮಾರ, ಸೊನ್ನೆ -ಗಿಂಡೆ, ಅಬ್ಬಗ- ದಾರಗ, ಎಂಬ ಮೂರು ತಲೆಮಾರಿನ ಅದ್ಭುತ ಶಕ್ತಿಗಳ ಸಾನ್ನಿಧ್ಯವಿರುವ ನಂದಳಿಕೆ ಶ್ರೀ ಮಹಾಲಿಂಗೇಶ್ವರ ದೇಗುಲದ ಜಾತ್ರೆಗೆ ಸಿದ್ಧತೆಗಳೂ ನಡೆದಿವೆ.

ಗಮನ ಸೆಳೆವ ಮೈಲುಗಲ್ಲು
ಕಳೆದ ಬಾರಿ ಜನಮನ ಗೆದ್ದ ಮೈಲುಗಲ್ಲುಗಳನ್ನು ಕೂಡ ಈ ಬಾರಿಯ ಜಾತ್ರೆಯ ಪ್ರಚಾರದ ಫಲಕವಾಗಿ ಮತ್ತೆ ಹಾಕಲಾಗುತ್ತಿದೆ. ಒಟ್ಟಿನಲ್ಲಿ ಈ ಎಲ್ಲ ಪರಿಕಲ್ಪನೆಯ ರೂವಾರಿ ನಂದಳಿಕೆ ಚಾವಡಿ ಅರಮನೆ ನಂದಳಿಕೆ ಸುಹಾಸ್‌ ಹೆಗ್ಡೆ ಅವರದು. ಪ್ರತಿ ಬಾರಿಯೂ ಇವರು ಹೊಸತನ ಸೃಷ್ಟಿಸುತ್ತಿದ್ದಾರೆ. ಮೈಲುಗಲ್ಲಿನ ಪ್ರಚಾರ ಫಲಕಗಳು ದ.ಕ., ಉಡುಪಿ ಜಿಲ್ಲೆಯೆಲ್ಲೆಡೆ ರಸ್ತೆಯ ಬದಿಯಲ್ಲಿ ಪ್ರಯಾಣಿಕರ ಗಮನ ಸೆಳೆಯಲಿವೆ. ಧರ್ಮಸ್ಥಳ, ಚಾರ್ಮಾಡಿ, ಉಜಿರೆ, ಬಂಟ್ವಾಳ, ಉಡುಪಿ, ಕುಂದಾಪುರ ಸಹಿತ
ವಿವಿಧ ಭಾಗಗಳಲ್ಲಿ ರಸ್ತೆಯ ಬದಿ ಯಲ್ಲಿ ಕಾಣಸಿಗಲಿದ್ದು ಎಲ್ಲರನ್ನೂ ಆಕರ್ಷಿಸಲಿದೆ.

ಟಾಪ್ ನ್ಯೂಸ್

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.