ಓಂಕಾರೇಶ್ವರ ರಥೋತ್ಸವ, ಕಲ್ಲೂರಪ್ಪನ ಬೆಟ್ಟದಲ್ಲಿ ಕೊಂಡೋತ್ಸವ ಸಂಭ್ರಮ


Team Udayavani, Mar 13, 2021, 12:52 PM IST

ಓಂಕಾರೇಶ್ವರ ರಥೋತ್ಸವ, ಕಲ್ಲೂರಪ್ಪನ ಬೆಟ್ಟದಲ್ಲಿ ಕೊಂಡೋತ್ಸವ ಸಂಭ್ರಮ

ಹುಣಸೂರು: ಮಹಾಶಿವರಾತ್ರಿ ಅಂಗವಾಗಿ ತಾಲೂಕಿನ ವಿವಿಧೆಡೆ ಗುರುವಾರ ರಾತ್ರಿಯಿಂದಲೇ ಜಾಗರಣೆ, ವಿಶೇಷ ಪೂಜೆ ನಡೆದರೆ, ಶುಕ್ರವಾರ ಹಲವೆಡೆ ರಥೋತ್ಸವ, ಕೊಂಡೋತ್ಸವ, ಉತ್ಸವಗಳು ಜರುಗಿದವು.

ಓಂಕಾರೇಶ್ವರ ರಥೋತ್ಸವ: ಹನಗೋಡು ರಸ್ತೆಯ ರಾಮೇನಹಳ್ಳಿಬೆಟ್ಟದ ಮೇಲಿನ ಶ್ರೀ ಓಂಕಾರೇಶ್ವರ ಸ್ವಾಮಿ ರಥೋತ್ಸವವು ಬೆಟ್ಟದ ಬುಡದಲ್ಲಿ ಶುಕ್ರವಾರ ಬೆಳಗ್ಗೆ 8.30ಕ್ಕೆ ನೂರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರುಗಿತು. ಗುರುವಾರ ರಾತ್ರಿ ಬೆಟ್ಟದ ಮೇಲಿನ ದೇವಾಲಯದಲ್ಲಿ ವಿಶೇಷ ಹೋಮ, ಹವನ, ಭಜನೆಯೊಂದಿಗೆ ಭಕ್ತರು ಜಾಗರಣೆ ನಡೆಸಿದರು. ಭಕ್ತರು ಬೆಟ್ಟಹತ್ತಿ ದೇವರ ದರ್ಶನ ಮಾಡಿ, ಭಕ್ತಿಭಾವ ಮೆರೆದರು. ಹರಕೆ ಹೊತ್ತ ಮಂದಿ ಲಕ್ಷ್ಮಣತೀರ್ಥ ನದಿ ತಟದಲ್ಲಿ ಮುಡಿಕೊಟ್ಟು ಬಾಯಿಗೆ ಬೀಗ ಹಾಕಿಕೊಂಡು ಬೆಟ್ಟ ಹತ್ತಿ ಉರುಳುಸೇವೆ ಸಲ್ಲಿಸಿದರು.

ರಥೋತ್ಸವದಲ್ಲಿ ಶಾಸಕ ಎಚ್‌.ಪಿ.ಮಂಜುನಾಥ್‌, ಗೋವಿಂದನಹಳ್ಳಿ ಗ್ರಾಪಂ ಅಧ್ಯಕ್ಷ ಪ್ರಸನ್ನ ಕುಮಾರ್‌, ಉಪಾಧ್ಯಕ್ಷೆ ಷರೀನ್‌ತಾಜ್‌, ಸದಸ್ಯ ನಟರಾಜ್‌, ಯ.ರಾಜೇಶ್‌, ದೇವಾಲಯ ಸಮಿತಿ ಅಧ್ಯಕ್ಷ ಶಿವಾನಂದ ಇತರ ರಿದ್ದರು. ಬೆಟ್ಟದ ತಪ್ಪಲಿನಲ್ಲಿ ಆಯೋಜಿಸಿದ್ದ ಅನ್ನಸಂತರ್ಪಣೆಯಲ್ಲಿ 15 ಸಾವಿರಕ್ಕೂ ಹೆಚ್ಚು ಭಕ್ತರುಊಟ ಸವಿದರು. ಜಾತ್ರೆಯಲ್ಲಿ ಹುಣಸೂರಿನ ಗಾಡಿ ಕಾರ್ಖಾನೆ ದಿ.ನಾರಾಯಣಸ್ವಾಮಿ ಸ್ಮರಣಾರ್ಥ ಮಜ್ಜಿಗೆ, ಪಾನಕ ನೀಡಲಾಯಿತು.

ಕಲ್ಲೂರಪ್ಪನ ಬೆಟ್ಟದಲ್ಲಿ ಕೊಂಡೋತ್ಸವ: ಹನಗೋಡಿಗೆ ಸಮೀಪದ ಕಲ್ಲೂರಪ್ಪನಬೆಟ್ಟದ ಕಲ್ಲೂರೇಶ್ವರಸ್ವಾಮಿಗೆ ಹಬ್ಬದಂದು ವಿಶೇಷ ಪೂಜೆ ನಡೆಯಿತು. ಜಾಗರಣೆ ಅಂಗವಾಗಿ ರಾತ್ರಿ ಇಡೀ ಸಾಂಸ್ಕೃತಿಕ ಕಾರ್ಯಕ್ರಮಗಳುನೆರವೇರಿದವು. ಶುಕ್ರವಾರ ಬೆಳಗ್ಗೆ ದೀವಟಿಕೆ ಉತ್ಸವ,ಕೊಂಡೋತ್ಸವ ನಡೆಯಿತು.  ನಗರಕ್ಕೆ ಸಮೀಪದ ಮಹದೇಶ್ವರ ದೇವಸ್ಥಾನದಲ್ಲಿ ರಾತ್ರಿ ಭಜನೆ, ಹರಿಕತೆ ಹಾಗೂ ಬೆಳಗ್ಗೆ ಕೊಂಡೋತ್ಸವ, ಜಾತ್ರೆ ನಡೆಯಿತು.

ಕೊಳುವಿಗೆ ಶ್ರೀರಾಮಲಿಂಗೇಶ್ವರ ಉತ್ಸವ: ನಾಗರಹೊಳೆ ಉದ್ಯಾನವನದಂಚಿನ ಕೊಳುವಿಗೆಯ ಲಕ್ಷ್ಮಣತೀರ್ಥ ನದಿದಂಡೆಯಲ್ಲಿರುವ ಶ್ರೀರಾಮಲಿಂಗೇಶ್ವರ ದೇವಾಲಯದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಶುಕ್ರವಾರ ಮುಂಜಾನೆ ಉತ್ಸವ ನಂತರ ಅನ್ನದಾಸೋಹ ನೆರವೇರಿತು. ಹನಗೋಡಿಗೆ ಸಮೀಪದ ಹೆಬ್ಟಾಳದ ಓಂಕಾರೇಶ್ವರದೇವಾಲಯದಲ್ಲಿಯೂ ಸಹ ವಿಶೇಷ ಪೂಜೆ, ಅನ್ನದಾಸೋಹ ನಡೆಯಿತು.

ವಿವಿಧೆಡೆ ಜಾಗರಣೆ-ಪೂಜೆ: ನಗರದ ಮಂಜುನಾಥಸ್ವಾಮಿ, ಶಿವ, ಸುಬ್ರಹ್ಮಣ್ಯ, ಕೃಷ್ಣ, ಗಣೇಶ, ಆಂಜನೇಯ ದೇವಾಲಯ ಸೇರಿದಂತೆ ಪಕ್ಕದ ಶಿರಡಿಸಾಯಿಬಾಬ ಮಂದಿರಗಳಲ್ಲಿ ವಿಶೇಷ ಧಾರ್ಮಿಕ ಪೂಜಾ ಕೈಂಕರ್ಯಗಳು ಜರುಗಿದವು. ಲಕ್ಷ್ಮಣತೀರ್ಥ ನದಿ ದಂಡೆ ಮೇಲಿರುವ ಚಂದ್ರಮೌಳೇಶ್ವರ ದೇವಾಲಯದಲ್ಲಿ ರುದ್ರಹೋಮ ನಡೆಯಿತು. ಕೋಟೆರಸ್ತೆಯ ಶಿವನಮಠ, ಅಯ್ಯಪ್ಪಸ್ವಾಮಿಬೆಟ್ಟ, ಮುನೇಶ್ವರಸ್ವಾಮಿ, ಕೆ.ಆರ್‌.ನಗರರಸ್ತೆ ಹಾಗೂ ಸಾಕೇತ ಬಡಾವಣೆಯ ಶನೇಶ್ವರ,ಕನ್ಯಕಾ ಪರಮೇಶ್ವರಿ ದೇವಾಸ್ಥಾನ, ಮಾರುತಿಬಡಾವಣೆಯ ಮಹದೇಶ್ವರ ದೇವರು ಸೇರಿದಂತೆ ವಿವಿಧ ದೇವಾಲಯಗಳಲ್ಲಿ ಪೂಜೆ ನಡೆಯಿತು. ಬಿಳಿ ಕೆರೆಯ ಕೋಡಿ ಮಲ್ಲೇಶ್ವರಸ್ವಾಮಿ ದೇವಸ್ಥಾನದಲ್ಲಿ ಭಜನೆ ಆಯೋಜಿಸಲಾಗಿತ್ತು.

ಮುಂದಿನ ಜಾತ್ರೆಗೆ ಹೊಸ ತೇರು :

ರಾಮೇನಹಳ್ಳಿ ಓಂಕಾರೇಶ್ವರ ಜಾತ್ರಾಮಹೋತ್ಸವಕ್ಕೆ ಹೊಸ ರಥ ನಿರ್ಮಿಸಲು ನೆರವಾಗುವುದಾಗಿ ಶಾಸಕ ಎಚ್‌.ಪಿ.ಮಂಜುನಾಥ್‌ ತಿಳಿಸಿದರು. ಜಾತ್ರೆಗೆ ಭೇಟಿ ನೀಡಿದ್ದ ವೇಳೆ ಸಮಿತಿ ಅಧ್ಯಕ್ಷ ಶಿವಾನಂದ್‌ ತೇರು ಹಳೆಯದಾಗಿದ್ದು. ಹೊಸ ತೇರು ನಿರ್ಮಾಣಕ್ಕೆ ನೆರವಾಗಬೇಕೆಂಬ ಮನವಿಗೆ ಸ್ಪಂದಿಸಿದ ಶಾಸಕರು, ಅಧಿವೇಶನದ ನಂತರ ದೇವಸ್ಥಾನದ ಬಳಿಯೇ ಭಕ್ತರು ಹಾಗೂ ಗ್ರಾಮಸ್ಥರ ಸಭೆ ನಡೆಸಿ, ಮುಂದಿನ ಜಾತ್ರೆಗೆ ಹೊಸ ರಥ ನಿರ್ಮಿಸಲು ಯೋಜನೆ ರೂಪಿಸೋಣ ಎಂದರು. ದೇವಾಲಯಕ್ಕೆ ತೆರಳುವ ಬೆಟ್ಟದ ಮೇಲಿನ ಉಳಿಕೆ ರಸ್ತೆಗೆ ಕಾಂಕ್ರಿಟೀಕರಣ ಮಾಡಿಸಲಾಗುವುದೆಂದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.