ಮುಂದಿನ ದಿನಗಳಲ್ಲಿ ಅಭಿವೃದ್ಧಿಗೆ ಹೆಚ್ಚಿನ ಅನುದಾನ: ಜೊಲ್ಲೆ


Team Udayavani, Mar 13, 2021, 3:48 PM IST

ಮುಂದಿನ ದಿನಗಳಲ್ಲಿ ಅಭಿವೃದ್ಧಿಗೆ ಹೆಚ್ಚಿನ ಅನುದಾನ: ಜೊಲ್ಲೆ

ಚಿಕ್ಕೋಡಿ: ಬೇಸಿಗೆಯಲ್ಲಿ ಸಮರ್ಪಕ ವಿದ್ಯುತ್‌ ಸಮಸ್ಯೆ, ರೈತರಿಗೆ ಸಿಗಬೇಕಾದ ವಿದ್ಯುತ್‌ ಪರಿವರ್ತಕಗಳು, ಗ್ರಾಮೀಣಪ್ರದೇಶದಲ್ಲಿ ಬಸ್‌ ವ್ಯವಸ್ಥೆ , ಗ್ರಾಮೀಣರಸ್ತೆಗಳ ಬೇಡಿಕೆ, ಆರೋಗ್ಯ ಸೇವೆ ಹೀಗೆಹತ್ತು ಹಲವು ಸಮಸ್ಯೆಗಳನ್ನು ಜನರಿಂದ ಆಲಿಸಿ ಸ್ಪಂ ದಿಸಿದ ಸಂಸದ ಅಣ್ಣಾಸಾಹೇಬಜೊಲ್ಲೆ ಅವರು ಶೀಘ್ರವಾಗಿ ಜನರ ಸಮಸ್ಯೆ ಇತ್ಯರ್ಥವಾಗಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಶುಕ್ರವಾರ ಇಲ್ಲಿನ ಬಿಜೆಪಿ ಕಚೇರಿಯಲ್ಲಿ ಚಿಕ್ಕೋಡಿ ಲೋಕಸಭೆಯ ಚಿಕ್ಕೋಡಿ-ಸದಲಗಾ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಜನಸಂಪರ್ಕಸಭೆಯಲ್ಲಿ ಸಾರ್ವಜನಿಕರ ಹಲವಾರುಸಮಸ್ಯೆಗಳಿಗೆ ಸಂಸದ ಅಣ್ಣಾಸಾಹೇಬಜೊಲ್ಲೆ ಸಕಾರಾತ್ಮಕ ಸ್ಪಂದಿ ಸಿ ಜನರಿಂದ ಅರ್ಜಿ ಸ್ವೀಕರಿಸಿದರು.

ಚಿಕ್ಕೋಡಿ ತಾಲೂಕಿನ ಶಮನೇವಾಡಿ-ಬೇಡಕಿಹಾಳ ಗ್ರಾಮಗಳಿಗೆ ಹೋಗುವಸಾರ್ವಜನಿಕರಿಗೆ ಬಸ್‌ ವ್ಯವಸ್ಥೆ ಇಲ್ಲವಾಗಿದೆ. ಪ್ರತಿದಿನ ಸಾಕಷ್ಟು ಬಸ್‌ ಸಂಚಾರ ಮಾಡಿದರೂ ಸಹ ಬೇಡಕಿಹಾಳ ಕ್ರಾಸ್‌ದಲ್ಲಿ ನಿಲ್ಲಿಸಿಇಚಲಕರಂಜಿಗೆ ಹೋಗುತ್ತವೆ. ಇದರಿಂದಶಮನೇವಾಡಿ ಹಾಗೂ ಬೇಡಕಿಹಾಳ ಗ್ರಾಮದಜನರಿಗೆ ಬಸ್‌ ಸೇವೆ ಸಿಗುತ್ತಿಲ್ಲ, ಸಂಸದರು ಗಮನ ಹರಿಸಬೇಕು ಎಂದು ಶಮನೇವಾಡಿಗ್ರಾಮದ ಜನರು ಸಂಸದರ ಬಳಿ ಬೇಡಿಕೆಇಟ್ಟರು. ತಾಲೂಕಿನ ವಾಳಕಿ, ಪಟ್ಟಣಕುಡಿ ಮುಂತಾದ ಕಡೆಗಳಲ್ಲಿ ಗ್ರಾಮೀಣ ಪ್ರದೇಶದಜನರಿಗೆ ಆರೋಗ್ಯ ಸೇವೆ ಮರೀಚಿಕೆಯಾಗಿದೆ.ಹಲವು ರೋಗಿಗಳಿಗೆ ಔಷಧ ಸಿಗುತ್ತಿಲ್ಲ,ವೈದ್ಯರ ಕೊರತೆ ಇದೆ ಎಂದು ವಾಳಕಿ ಗ್ರಾಮಸ್ಥರು ಮನವಿ ಮಾಡಿದರು.

ಮಾಂಜರಿ, ಇಂಗಳಿ, ಯಡೂರ, ಕಲ್ಲೋಳಸೇರಿದಂತೆ ಕೃಷ್ಣಾ ನದಿ ವ್ಯಾಪ್ತಿಯ ರೈತರಜಮೀನುಗಳಿಗೆ ಸವಳು-ಜವಳು ಸಮಸ್ಯೆಕಾಡುತ್ತಿದೆ. ಸಂಸದರು ವಿಶೇಷ ಅನುದಾನ ಒದಗಿಸಿ ಸವಳು ಜವಳು ಹೋಗಲಾಡಿಸಲು ಕೃಷಿ ಇಲಾಖೆ ಅಧಿಕಾರಿಗಳಿಗೆ ಸೂಚನೆನೀಡಬೇಕೆಂದು ರೈತರು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಮಾತನಾಡಿ, ಇಡೀ ರಾಜ್ಯದಲ್ಲಿ ಚಿಕ್ಕೋಡಿ ಲೋಕಸಭೆ ಕ್ಷೇತ್ರ ದೊಡ್ಡ ಕ್ಷೇತ್ರವಾಗಿದೆ. ಸಂಸದರಾಗಿ ಎರಡು ವರ್ಷಕಳೆದಿದೆ. ಕೊರೊನಾ ಮತ್ತು ಪ್ರವಾಹದಿಂದಸರ್ಕಾರದಿಂದ ಬರುವ ಅನುದಾನಕಡಿತವಾಗಿದೆ. ಹೀಗಾಗಿ ಅಭಿವೃದ್ಧಿ ಕೆಲಸಗಳಿಗೆಸ್ವಲ್ಪಮಟ್ಟಿನ ಹಿನ್ನಡೆಯಾಗಿದೆ ಎಂದರು.ಓರ್ವ ಸಂಸದರಿಗೆ ಐದು ವರ್ಷದಲ್ಲಿ 25 ಕೋಟಿ ಅನುದಾನ ಒದಗಿ ಬರಲಿದೆ. ಕ್ಷೇತ್ರದಎಂಟು ವಿಧಾನಸಭೆ ಕ್ಷೇತ್ರಗಳಿಗೆ 25 ಲಕ್ಷರೂ ಹಂಚಿಕೆ ಮಾಡುತ್ತಿದ್ದೇನೆ. ಈಗ ಎರಡು ವರ್ಷದಲ್ಲಿ 5 ಕೋಟಿ ಅನುದಾನ ಬಂದಿದೆ.ಎಲ್ಲ ವಿಧಾನಸಭೆ ಕ್ಷೇತ್ರದಲ್ಲಿ 5 ಲಕ್ಷ ರೂ.ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗೆ ನೀಡಿದ್ದೇನೆ ಎಂದರು.

ಮುಂಬರುವ ದಿನಗಳಲ್ಲಿ ಬಿಜೆಪಿ ಸರ್ಕಾರ ಹೆಚ್ಚಿನ ಅನುದಾನ ನೀಡುವ ಭರವಸೆ ಇದೆ. ಚಿಕ್ಕೋಡಿ ಲೋಕಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ನನೆಗುದಿಗೆ ಬಿದ್ದಿರುವ ಯೋಜನೆಗಳಿಗೆಅನುದಾನ ಸಿಗಲಿದೆ. ರಸಗೊಬ್ಬರಕ್ಕೆ ಸಬ್ಸಿಡಿನೀಡಲು ಸರ್ಕಾರ ಸಿದ್ಧತೆ ನಡೆಸಿದೆ. ಕೋವಿಡ್‌ನಂತಹ ಮಾರಕ ರೋಗ ದೂರವಾಗಲು ಸಾರ್ವಜನಿಕರು ಮುಂಜಾಗ್ರತೆ ವಹಿಸಬೇಕು ಎಂದರು.

ಧುರೀಣ ಜಗದೀಶ ಕವಟಗಿಮಠ, ಬಿಜೆಪಿ ಮಂಡಲ ಅಧ್ಯಕ್ಷ ಸಂಜು ಪಾಟೀಲ,ಬಿಜೆಪಿ ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷದುಂಡಪ್ಪ ಬೆಂಡವಾಡೆ, ವಿಶ್ವನಾಥ ಕಮತೆ,ಅಪ್ಪಾಸಾಹೇಬ ಚೌಗಲೆ, ಪುರಸಭೆಅಧ್ಯಕ್ಷ ಪ್ರವೀಣ ಕಾಂಬಳೆ, ಪುರಸಭೆಸದಸ್ಯರಾದ ನಾಗರಾಜ ಮೇದಾರ, ಸಿದ್ದಪ್ಪಡಂಗೇರ, ಬಾಬು ಮಿರ್ಜೆ, ವಿಶ್ವನಾಥಕಾಮಗೌಡ, ಶಕುಂತಲಾ ಡೋನವಾಡೆ, ಶಾಂಭವಿ ಅಶ್ವಥಪೂರ ಇದ್ದರು.

ಟಾಪ್ ನ್ಯೂಸ್

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

1-wqeqweqw

Yellow alert; ಬೆಂಗಳೂರು ನಗರ ಸೇರಿ ಸುತ್ತಮುತ್ತ ಆಲಿಕಲ್ಲು ಸಹಿತ ಮಳೆ

1-wqewqewqe

Hubli: ಇಲ್ಲಿ ಮತ ಚಲಾಯಿಸಿ ಬಂದವರಿಗೆ ಸಿಗುತ್ತೆ ಫ್ರೀ ಐಸ್ ಕ್ರೀಮ್!

suicide (2)

Mangaluru: ಆಸ್ಪತ್ರೆಗೆ ದಾಖಲಾಗಿದ್ದ ವಿಚಾರಣಾಧೀನ ಕೈದಿ ಆತ್ಮಹತ್ಯೆ

1-qeewqewqe

Maldives; ಪ್ರವಾಸೋದ್ಯಮದ ಭಾಗವಾಗಿ: ಭಾರತೀಯರನ್ನು ಅಂಗಲಾಚಿದ ಮಾಲ್ಡೀವ್ಸ್!

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

India’s first-ever ‘hybrid pitch’ was unveiled at the HPCA stadium

HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕನ್ನಡ ಸಾಹಿತ್ಯ ಓದುವ ಹವ್ಯಾಸ ಬೆಳೆಸಿಕೊಳ್ಳಿ: ಸವಿತಾ ಹಿರೇಮಠ

ಕನ್ನಡ ಸಾಹಿತ್ಯ ಓದುವ ಹವ್ಯಾಸ ಬೆಳೆಸಿಕೊಳ್ಳಿ: ಸವಿತಾ ಹಿರೇಮಠ

ಬೆಳಗಾವಿ-ಸೋಲಿನ ಭಯದಿಂದ ಕಾಂಗ್ರೆಸ್‌ ಹತಾಶ: ಜಗದೀಶ ಶೆಟ್ಟರ

ಬೆಳಗಾವಿ-ಸೋಲಿನ ಭಯದಿಂದ ಕಾಂಗ್ರೆಸ್‌ ಹತಾಶ: ಜಗದೀಶ ಶೆಟ್ಟರ

D. K. Shivakumar ಕಾಂಗ್ರೆಸ್‌ನ ಭರವಸೆ, ಬಿಜೆಪಿಯ ಬುರುಡೆ ನಡುವೆ ಹೋರಾಟ

D. K. Shivakumar ಕಾಂಗ್ರೆಸ್‌ನ ಭರವಸೆ, ಬಿಜೆಪಿಯ ಬುರುಡೆ ನಡುವೆ ಹೋರಾಟ

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

ಪ್ರಧಾನಿ ನರೇಂದ್ರ ಮೋದಿ ಬಜರಂಗದಳ ಕಾರ್ಯಕರ್ತರಂತೆ ಮಾತಾಡ್ತಾರೆ: ಸಿದ್ದರಾಮಯ್ಯ

Belagavi; ಪ್ರಧಾನಿ ನರೇಂದ್ರ ಮೋದಿ ಬಜರಂಗದಳ ಕಾರ್ಯಕರ್ತರಂತೆ ಮಾತಾಡ್ತಾರೆ: ಸಿದ್ದರಾಮಯ್ಯ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

police

Chikkaballapur: ಆಂಧ್ರದಿಂದ ಗಾಂಜಾ ತರುತ್ತಿದ್ದ ಇಬ್ಬರ ಬಂಧನ

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

1-wqeqweqw

Yellow alert; ಬೆಂಗಳೂರು ನಗರ ಸೇರಿ ಸುತ್ತಮುತ್ತ ಆಲಿಕಲ್ಲು ಸಹಿತ ಮಳೆ

1-weewqeq

Gadag; ಮತದಾನದ ಮುನ್ನಾ ದಿನ ಬಸ್‌ಗಳು ಫುಲ್ ರಶ್: ಜನರ ಪರದಾಟ

1-wqeeqw

Hunsur: ಹಣ್ಣಿನ ತೋಟ ಸೇರಿಕೊಂಡಿದ್ದ ಹೆಣ್ಣುಹುಲಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.