ಪುರಸಭೆ ವ್ಯಾಪ್ತಿಯಲ್ಲಿ ಅಂತಿಮಗೊಳ್ಳದ “ಬೀದಿ ಬದಿ ವ್ಯಾಪಾರಿ ವಲಯ’


Team Udayavani, Mar 14, 2021, 5:20 AM IST

ಪುರಸಭೆ ವ್ಯಾಪ್ತಿಯಲ್ಲಿ ಅಂತಿಮಗೊಳ್ಳದ “ಬೀದಿ ಬದಿ ವ್ಯಾಪಾರಿ ವಲಯ’

ಬಂಟ್ವಾಳ: ತಾಲೂಕು ಕೇಂದ್ರ ಬಿ.ಸಿ.ರೋಡ್‌ ಪೇಟೆ ಸೇರಿದಂತೆ ಪುರಸಭಾ ವ್ಯಾಪ್ತಿಯಲ್ಲಿ ರಸ್ತೆ ಬದಿ ವ್ಯಾಪಾರ ಮಾಡುತ್ತಿರುವ ಬೀದಿ ಬದಿ ವ್ಯಾಪಾರಿಗಳಿಗೆ ತಾತ್ಕಾಲಿಕ ವ್ಯವಸ್ಥೆಯ ಕೂಗು ಕೇಳಿ ಬರುತ್ತಿದೆ. ಅವರಿಗಾಗಿ ಪುರಸಭೆ ವ್ಯಾಪ್ತಿಯಲ್ಲಿ ಮೂರು ಕಡೆ ಬೀದಿ ಬದಿ ವ್ಯಾಪಾರಿ ವಲಯವನ್ನು ಗುರುತಿಸಲಾಗಿದೆ. ಆದರೆ ಅದಕ್ಕೆ ಪುರಸಭೆ ಸದಸ್ಯರಿಂದ ವಿರೋಧ ವ್ಯಕ್ತವಾಗಿದ್ದು, ಹೀಗಾಗಿ ಇನ್ನೂ ಸೂಕ್ತ ಸ್ಥಳ ನಿಗದಿಗೊಂಡಿಲ್ಲ !

ಬಿ.ಸಿ.ರೋಡ್‌ನ‌ಲ್ಲಿ ವಾಹನ ಪಾರ್ಕಿಂಗ್‌ ಸೇರಿದಂತೆ ಸಾಕಷ್ಟು ಸಮಸ್ಯೆಗಳಿಗೆ ಬೀದಿ ಬದಿ ವ್ಯಾಪಾರವೇ ಕಾರಣ ಎಂಬ ಆರೋಪಗಳು ಕೇಳಿ ಬರುತ್ತಿವೆ. ಹೀಗಾಗಿ ಇಂತಹ ವ್ಯಾಪಾರಿಗಳಿಗೆ ಸ್ಥಳೀಯಾಡಳಿತ ತಾತ್ಕಾಲಿಕ ವ್ಯವಸ್ಥೆ ಮಾಡಿ ಕೊಡಬೇಕಿದೆ. ಪ್ರತಿ ನಗರ ಸ್ಥಳೀಯಾಡಳಿತ ಸಂಸ್ಥೆಗಳಲ್ಲೂ ಬೀದಿ ಬದಿ ವ್ಯಾಪಾರಿಗಳಿಗೆ ಕಾರ್ಡ್‌ ನೀಡಿ ಅವರಿಗೆ ಪ್ರತ್ಯೇಕ ವಲಯ ಗುರುತಿಸಬೇಕಿದೆ.

ಮೂರು ಕಡೆ ವ್ಯಾಪಾರಿ ವಲಯ
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ಬೀದಿ ಬದಿ ವ್ಯಾಪಾರದ ಸಮಸ್ಯೆ ನಿವಾರಿಸುವ ನಿಟ್ಟಿನಲ್ಲಿ ತಲಪಾಡಿಯ ಕೆಎಸ್‌ಆರ್‌ಟಿಸಿ ಡಿಪೋ ಮುಂಭಾಗ, ಬಂಟ್ವಾಳದ ಕೊಟ್ರಮಣಗಂಡಿ ಬಸ್‌ ನಿಲ್ದಾಣ ಹಾಗೂ ಮೆಲ್ಕಾರ್‌ ಗುಡ್ಡೆಯಂಗಡಿ ಪ್ರದೇಶದಲ್ಲಿ ಬೀದಿ ಬದಿ ವ್ಯಾಪಾರಿಗಳಿಗೆ ವಲಯ ಮಾಡುವುದಕ್ಕೆ ಸ್ಥಳ ಗುರುತಿಸಲಾಗಿತ್ತು.

ಆದರೆ ಈ ಮೂರು ಸ್ಥಳಗಳಿಗೂ ಪುರಸಭೆ ಸದಸ್ಯರಿಂದ ವಿರೋಧ ವ್ಯಕ್ತವಾಗಿತ್ತು. ಬಂಟ್ವಾಳದ ಕೊಟ್ರಮಣಗಂಡಿ ಪ್ರದೇಶದಲ್ಲಿ ಬಸ್‌ ನಿಲ್ದಾಣಕ್ಕೆ ವ್ಯವಸ್ಥೆ ಮಾಡಲಾಗಿದೆ. ಅಲ್ಲಿ ಬೀದಿ ಬದಿ ವ್ಯಾಪಾರಿ ವಲಯ ಮಾಡುವುದು ಸರಿಯಲ್ಲ. ಜತೆಗೆ ಗುಡ್ಡೆಯಂಗಡಿ ಪ್ರದೇಶದಲ್ಲಿ ಸ್ಥಳೀಯರಿಗೆ ತೊಂದರೆಯಾಗಲಿದೆ ಎಂದು ಸದಸ್ಯರು ಅಭಿಪ್ರಾಯ ವ್ಯಕ್ತಪಡಿಸಿದ್ದರು.

ಮತ್ತೂಂದೆಡೆ ಬೀದಿ ಬದಿ ವ್ಯಾಪಾರಿಗಳು ಜೀವನೋಪಾಯಕ್ಕೆ ವ್ಯಾಪಾರ ಮಾಡುತ್ತಿದ್ದು, ಅವರನ್ನು ಜನರೇ ಬಾರದ ಪ್ರದೇಶದಲ್ಲಿ ತೋರಿಸಿದರೆ ಹೇಗೆ ಎಂಬ ಅಭಿಪ್ರಾಯಗಳು ಕೇಳಿಬಂದಿದೆ. ಹೀಗಾಗಿ ಸದ್ಯಕ್ಕೆ ಬೀದಿ ಬದಿ ವ್ಯಾಪಾರಿ ವಲಯ ಮಾಡುವ ಆಲೋಚನೆಯನ್ನು ಪುರಸಭೆ ಮುಂದುವರಿಸುವ ಸಾಧ್ಯತೆ ಇದೆ.

ಪ್ರಸ್ತುತ ಬಿ.ಸಿ.ರೋಡ್‌ ಪೇಟೆಯ ಜತೆಗೆ ಬಂಟ್ವಾಳ ಪೇಟೆ, ಪಾಣೆಮಂಗಳೂರು, ಕೈಕಂಬ, ಬಂಟ್ವಾಳ ಬೈಪಾಸ್‌, ಮೆಲ್ಕಾರ್‌ ಮೊದಲಾದ ಭಾಗಗಳಲ್ಲಿ ಬೀದಿ ಬದಿ ವ್ಯಾಪಾರಿಗಳನ್ನು ಕಾಣಬಹುದು. ಅದರಲ್ಲೂ ಬಿ.ಸಿ.ರೋಡ್‌ ಸರ್ಕಲ್‌ ಬಳಿ ರಾಷ್ಟ್ರೀಯ ಹೆದ್ದಾರಿಯ ಬದಿ ದಿನೇ ದಿನೆ ಬೀದಿ ಬದಿ ವ್ಯಾಪಾರಿಗಳ ಸಂಖ್ಯೆ ಏರುತ್ತಲೇ ಇದೆ. ಹೀಗಾಗಿ ಪೇಟೆಯ ಸಮಸ್ಯೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ಬೀದಿ ಬದಿ ವ್ಯಾಪಾರಿ ವಲಯ ಗುರುತಿಸುವ ಕಾರ್ಯವನ್ನು ಶೀಘ್ರದಲ್ಲಿ ಮುಗಿಸಬೇಕಿದೆ.

ವ್ಯಾಪಾರಿಗಳ ಸಂಖ್ಯೆ ಹೆಚ್ಚಳ
ಬೀದಿ ಬದಿ ವ್ಯಾಪಾರಿಗಳನ್ನು ಗುರುತಿಸಿ ಅವರಿಗೆ ಸರಕಾರದ ಸೌಲಭ್ಯಗಳನ್ನು ತಲುಪಿಸುವ ನಿಟ್ಟಿನಲ್ಲಿ ಗುರುತಿನ ಚೀಟಿಯನ್ನು ವಿತರಿಸಲಾಗುತ್ತಿದೆ. ಈ ಹಿಂದೆ ಪುರಸಭೆಯು ಒಟ್ಟು 72 ಬೀದಿ ಬದಿ ವ್ಯಾಪಾರಿಗಳಿಗೆ ಗುರುತಿನ ಚೀಟಿ ವಿತರಿಸುವ ಕಾರ್ಯ ಮಾಡಿದ್ದು, ಈ ಬಾರಿ ಇನ್ನಷ್ಟೇ ಗುರುತಿನ ಚೀಟಿ ವಿತರಿಸಬೇಕಿದೆ.

ಪ್ರಸ್ತುತ ಬೀದಿ ಬದಿ ವ್ಯಾಪಾರಿಗಳ ಸಂಖ್ಯೆ ದಿನೇ ದಿನೆ ಏರುತ್ತಲೇ ಇದೆ. ಗುರುತಿನ ಚೀಟಿ ವಿತರಣೆಯೂ ಸವಾಲಾಗುವ ಸಾಧ್ಯತೆ ಇದೆ. ಮತ್ತೂಂದೆಡೆ ಗುರುತಿನ ಚೀಟಿ ಸಿಗದೆ ಇರುವ ವ್ಯಾಪಾರಿಗಳಿಗೆ ಪುರಸಭೆ ವ್ಯಾಪ್ತಿಯಲ್ಲಿ ವ್ಯಾಪಾರಕ್ಕೆ ಅವಕಾಶವಿದೆಯೇ ಎಂಬ ಪ್ರಶ್ನೆಯೂ ಎದುರಾಗಲಿದೆ.

ಸೂಕ್ತ ತೀರ್ಮಾನ
ಬೀದಿ ಬದಿ ವ್ಯಾಪಾರಕ್ಕೆ ಈ ಹಿಂದೆ ಗುರುತಿಸಲಾದ 2 ಸ್ಥಳಗಳು ಅಂತಿಮಗೊಳ್ಳದೆ ಇರುವುದರಿಂದ ಮುಂದಿನ ಸಭೆಯಲ್ಲಿ ಚರ್ಚಿಸಿ ಸೂಕ್ತ ಸ್ಥಳವನ್ನು ನಿಗದಿಗೊಳಿಸಲಾಗುತ್ತದೆ. ಬಳಿಕ ಬೀದಿ ಬದಿ ವ್ಯಾಪಾರಿ ವಲಯವನ್ನು ಅನುಷ್ಠಾನಗೊಳಿಸುವ ಕಾರ್ಯ ನಡೆಸಲಾಗುವುದು.
-ಮಹಮ್ಮದ್‌ ಶರೀಫ್‌, ಅಧ್ಯಕ್ಷರು, ಬಂಟ್ವಾಳ ಪುರಸಭೆ

– ಕಿರಣ್‌ ಸರಪಾಡಿ

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.