ಗ್ರಾಪಂಗೊಂದು ಸ್ಯಾನಿಟರಿ ದಹನ ಯಂತ್ರ

ನಗರ ಜಿಪಂ ವ್ಯಾಪ್ತಿಯ ಪ್ರತಿ ಗ್ರಾಪಂಗೆ ಅಳವಡಿಕೆ | 18. 6 ಲಕ್ಷ ರೂ.ಅನುದಾನ

Team Udayavani, Mar 14, 2021, 10:52 AM IST

ಗ್ರಾಪಂಗೊಂದು ಸ್ಯಾನಿಟರಿ ದಹನ ಯಂತ್ರ

ಬೆಂಗಳೂರು: ಗ್ರಾಮಗಳ ಸ್ವತ್ಛತೆಗೆ ಹೆಚ್ಚಿನ ಆದ್ಯತೆ ನೀಡಿರುವ ಬೆಂಗಳೂರು ನಗರ ಜಿಪಂ ಈಗ ತನ್ನ ವ್ಯಾಪ್ತಿಯ ಪ್ರತಿ ಗ್ರಾಮಪಂಚಾಯ್ತಿಗಳಲ್ಲಿ ಒಂದು “ಸ್ಯಾನಿಟರಿ ನ್ಯಾಪ್‌ ಕಿನ್‌ ದಹನ ಯಂತ್ರ’ ಅಳವಡಿಕೆ ಮುಂದಾಗಿದೆ.

ಗ್ರಾಮೀಣ ಮತ್ತು ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸ್ವತ್ಛ ಭಾರತ್‌ ಮಿಷನ್‌ (ಗ್ರಾಮೀಣ)ಯಡಿ ದಹನಯಂತ್ರಗಳ ಅಳವಡಿಕೆಗೆ ಯೋಜನೆ ರೂಪಿಸಿದೆ.

ನಗರ ಜಿಪಂ ವ್ಯಾಪ್ತಿಯಲ್ಲಿ 93 ಗ್ರಾಪಂಗಳಲ್ಲಿವೆ. ಅವುಗಳಲ್ಲಿ ರಾಜಾನುಕುಂಟೆ,ದೊಡ್ಡಜಾಲ, ಸಿಂಗನಾಯಕನಹಳ್ಳಿ ಮತ್ತು ಶಾಂತಿಪುರ ಗ್ರಾಪಂ ವ್ಯಾಪ್ತಿಯ ಘನ ತ್ಯಾಜ್ಯ ನಿರ್ವಹಣಾ ಘಟಕಗಳಲ್ಲಿ ಈಗಾಗಲೇಪ್ರಯೋಗಾರ್ಥವಾಗಿ ಸ್ಯಾನಿಟರಿ ನ್ಯಾಪ್‌ಕಿನ್‌ದಹನ ಯಂತ್ರಗಳನ್ನ ಅಳವಡಿಸಲಾಗಿದೆ. ಈಪ್ರಯೋಗ ಯಶಸ್ವಿಯಾದ ನಂತರ ನಗರ ಜಿಪಂ ಎಲ್ಲಾ ಗ್ರಾಪಂಗಳಲ್ಲಿ ದಹನ ಯಂತ್ರ ಅಳವಡಿಕೆಗೆ ಮುಂದಾಗಿದೆ.

ನಗರ ಜಿಪಂ ಸ್ವಚ್ಛ ಭಾರತ್‌ ಯೋಜನೆಯಡಿ ಘನತ್ಯಾಜ್ಯ ನಿರ್ವಹಣೆಸಂಬಂಧ ಹಲವು ಯೋಜನೆಗಳನ್ನು ರೂಪಿಸಿದೆ. ಅದರಲ್ಲಿ ಸ್ಯಾನಿಟರಿ ನ್ಯಾಪ್‌ಕಿನ್‌ ಕೇಂದ್ರೀಕರಿಸಿಯೇ ಯೋಜನೆ ರೂಪಿಸಿರುವುದೂ ಸೇರಿದೆ. ಬಳಕೆ ಮಾಡಿದಸ್ಯಾನಿಟರಿ ನ್ಯಾಪ್‌ಕಿನ್‌ಗಳಿಂದ ಹಲವುರೀತಿಯ ಅಪಾಯಗಳು ಎದುರಾಗುವ ಸಾಧ್ಯತೆಯಿದೆ. ಆ ಹಿನ್ನೆಲೆಯಲ್ಲಿ ತಕ್ಷಣದಲ್ಲೇ ಅವುಗಳನ್ನು ದಹನ ಮಾಡಲುಸಲುವಾಗಿಯೇ ಪ್ರತಿ ಗ್ರಾಪಂಗೆ ಒಂದರಂತೆಯಂತ್ರಗಳನ್ನು ಅಳವಡಿಕೆ ಮಾಡಲಾಗುತ್ತಿದೆ.

18.6 ಲಕ್ಷ ರೂ.ಅನುದಾನ: ಗ್ರಾಪಂ ವ್ಯಾಪ್ತಿಯ ಘನತಾಜ್ಯ ನಿರ್ವಹಣಾ ಘಟಕಗಳಲ್ಲಿ ಈ ಯಂತ್ರಗಳನ್ನು ಅಳವಡಿಕೆ ಯೋಜನೆ ರೂಪಿಸಲಾಗಿದೆ. ಈ ಯೋಜನೆಯ ಕಾರ್ಯಗತಕ್ಕಾಗಿಯೇಸುಮಾರು 18. 6ಲಕ್ಷ ರೂ. ಅನುದಾನ ಬಳಕೆಮಾಡಿಕೊಳ್ಳಲಾಗುತ್ತಿದೆ. ಸ್ವಚ್ಛ ಭಾರತ್‌ ಮಿಷನ್‌ ಅಡಿ ಪ್ರತಿ ಗ್ರಾಪಂಗೆ 20 ಸಾವಿರರೂ. ನೀಡಲಾಗುತ್ತದೆ ಎಂದು ಬೆಂಗಳೂರು ನಗರ ಜಿಪಂ ಉಪ ಕಾರ್ಯದರ್ಶಿ ಡಾ.ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ.

ಸ್ಯಾನಿಟರಿ ನ್ಯಾಪ್‌ಕಿನ್‌ ದಹನ ಯಂತ್ರಗಳ ಅಳವಡಿಕೆ ಕುರಿತಂತೆ ಹಿರಿಯಅಧಿಕಾರಿಗಳೊಂದಿಗೆ ಸಮಾಲೋಚನೆಮಾಡಲಾಗಿದೆ. ಶೀಘ್ರದಲ್ಲೆ ಪ್ರತಿಯೊಂದು ಗ್ರಾಪಂಗಳಲ್ಲಿ ಯಂತ್ರಗಳ ಅಳವಡಿಕೆ ಕಾರ್ಯ ನಡೆಯಲಿದೆ ಎಂದು ಹೇಳಿದ್ದಾರೆ.

ಕರಗುವ ಗುಣ ಕಡಿಮೆ :

ಘನ ತ್ಯಾಜ್ಯದಲ್ಲಿ ಹಸಿ ತ್ಯಾಜ್ಯ, ಒಣ ತ್ಯಾಜ್ಯ ಮತ್ತು ಹಾನಿಕಾರಕ ತ್ಯಾಜ್ಯ ಮೂರು ವಿಧಗಳಿವೆ. ಹಾನಿಕಾರಕ ತ್ಯಾಜ್ಯದಲ್ಲಿ ನ್ಯಾಪ್‌ಕಿನ್‌ ಕೂಡ ಸೇರಿದೆ. ಸ್ಯಾನಿಟರಿ ನ್ಯಾಪ್‌ಕಿನ್‌ಗೆ ಕರಗುವ ಗುಣ ಕಡಿಮೆಯಿದೆ. ಹೀಗಾಗಿ ಇದು ಅಂತರ್ಜಲ ಕುಸಿತಕ್ಕೂ ಕಾರಣವಾಗಲಿದೆ. ಆ ಹಿನ್ನೆಲೆಯಲ್ಲಿ ಅದನ್ನು ವೈಜ್ಞಾನಿಕ ರೀತಿಯಲ್ಲಿ ದಹನ ಮಾಡುವ ಸಂಬಂಧ ಯೋಜನೆ ರೂಪಿಸಲಾಗುತ್ತಿದೆ ಎಂದು ನಗರ ಜಿಲ್ಲಾಡಳಿತದ ಸ್ವತ್ಛ ಭಾರತ್‌ ಮಿಷನ್‌ನ ಅಧಿಕಾರಿಗಳು ತಿಳಿಸಿದ್ದಾರೆ. ಯಂತ್ರ ಕಾರ್ಯನಿರ್ವಹಿಸಲು ವಿದ್ಯುತ್‌ ಬೇಕಾಗುತ್ತದೆ. ಇದನ್ನು ಆಯಾ ಗ್ರಾಪಂಗಳು ಸ್ಥಳೀಯ ಅನುದಾನದಿಂದ ಭರಿಸಬೇಕಾಗುತ್ತದೆ. ಈ ಬಗ್ಗೆ ಆಯಾ ಗ್ರಾಪಂಗಳ ಹಿರಿಯ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಲಾಗಿದೆ ಎಂದು ಹೇಳಿದ್ದಾರೆ.

ನಗರ ಜಿಲ್ಲಾಡಳಿತ ಗ್ರಾಮಗಳ ಸ್ವತ್ಛತೆಗೆ ಆದ್ಯತೆ ನೀಡಿದ್ದು ಅದನ್ನು ಕೇಂದ್ರೀಕರಿಸಿಯೇ ಯೋಜನೆಗಳನ್ನು ರೂಪಿಸುತ್ತಿದೆ. ಅದರ ಭಾಗವಾಗಿ ಈಗ ಪ್ರತಿ ಗ್ರಾಪಂಗಳ ಘನತ್ಯಾಜ್ಯ ನಿರ್ವಹಣಾ ಘಟಕಗಳಲ್ಲಿ ಒಂದು ಸ್ಯಾನಿಟರಿ ನ್ಯಾಪ್‌ ಕಿನ್‌ ದಹನ ಯಂತ್ರಗಳ ಅಳವಡಿಕೆ ಮಾಡಲಾಗುವುದು. ಡಾ.ಸಿದ್ದರಾಮಯ್ಯ, ನಗರ ಜಿಪಂ ಉಪ ಕಾರ್ಯದರ್ಶಿ

 

ದೇವೇಶ ಸೂರಗುಪ್ಪ

ಟಾಪ್ ನ್ಯೂಸ್

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.