ಕೈಗಾರಿಕೋದ್ಯಮಿ ಗೌತಮ್ ಅದಾನಿಯವರ ಒಟ್ಟು ಸಂಪತ್ತಿನ ಮೌಲ್ಯವೆಷ್ಟು ಗೊತ್ತಾ..!?
ಗೌತಮ್ ಅದಾನಿ ಅವರ ಸಂಪತ್ತು 2021 ರಲ್ಲಿ ಗರಿಷ್ಠ ಮಟ್ಟಕ್ಕೆ ಏರಿದೆ : ಬ್ಲೂಮ್ ಬರ್ಗ್ ವರದಿ
Team Udayavani, Mar 14, 2021, 11:42 AM IST
ನವ ದೆಹಲಿ : ಕೈಗಾರಿಕೋದ್ಯಮಿ ಗೌತಮ್ ಅದಾನಿಯ ಸಂಪತ್ತು 2021 ರಲ್ಲಿ ಗರಿಷ್ಠ ಮಟ್ಟಕ್ಕೆ ಏರಿದೆ ಎಂದು ಬ್ಲೂಮ್ ಬರ್ಗ್ ವರದಿ ಮಾಡಿದೆ.
ಬ್ಲೂಮ್ ಬರ್ಗ್ ಬಿಲಿಯನೇರ್ಸ್ ಸೂಚ್ಯಂಕದ ಪ್ರಕಾರ ಪ್ರಸ್ತುತ ವಿಶ್ವದ 26 ನೇ ಶ್ರೀಮಂತ ವ್ಯಕ್ತಿಯಾಗಿರುವ ಅದಾನಿ, ಈ ವರ್ಷ ಅವರ ಸಂಪತ್ತಿಗೆ 2 16.2 ಬಿಲಿಯನ್ (ಸುಮಾರು 1.18 ಲಕ್ಷ ಕೋಟಿ ರೂ.) ಸೇರ್ಪಡೆಗೊಂಡಿದೆ. ಶುಕ್ರವಾರ ಅವರ ಒಟ್ಟು ನಿವ್ವಳ ಮೌಲ್ಯ 50 ಬಿಲಿಯನ್ (ಅಂದಾಜು 36.39 ಲಕ್ಷ ಕೋಟಿ ರೂ.)ಆಗಿದೆ ಎಂದು ವರದಿ ಹೇಳಿದೆ.
ಓದಿ : ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳು: ನಾಳೆ ಅಧಿಕಾರಿಗಳೊಂದಿಗೆ ಸಿಎಂ ಸಭೆ
ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿ, ಅಮೆಜಾನ್ ಸಂಸ್ಥೆಯ ಮಾಲೀಕ ಜೆಫ್ ಬೆಜೋಸ್ .5 7.59 ಬಿಲಿಯನ್ (5.52 ಲಕ್ಷ ಕೋಟಿ ರೂ.) ಕಳೆದುಕೊಂಡರೆ, ಎರಡನೇ ಶ್ರೀಮಂತ ವ್ಯಕ್ತಿ ಟೆಸ್ಲಾ ಮತ್ತು ಸ್ಪೇಸ್ ಎಕ್ಸ್ ಮುಖ್ಯಸ್ಥ ಎಲೋನ್ ಮಸ್ಕ್ 10.3 ಬಿಲಿಯನ್ (ಸುಮಾರು 75,000 ಕೋಟಿ ರೂ) ಈ ವರ್ಷ ಅವರ ಸಂಪತ್ತಿಗೆ ಸೇರ್ಪಡೆಗೊಳ್ಳುವುದರ ಮೂಲಕ ಒಟ್ಟು ಆಸ್ತಿ ಮೌಲ್ಯ ಹೆಚ್ಚಳವಾಗಿದೆ. ಭಾರತದ ಅತ್ಯಂತ ಶ್ರೀಮಂತ ವ್ಯಕ್ತಿ ಮತ್ತು ವಿಶ್ವದ 10 ನೇ ಶ್ರೀಮಂತ ವ್ಯಕ್ತಿ ಮುಖೇಶ್ ಅಂಬಾನಿ 8.05 ಬಿಲಿಯನ್ ಡಾಲರ್ (5.85 ಲಕ್ಷ ಕೋಟಿ ರೂ.) ಗಳಿಸಿದ್ದಾರೆ.
ಅದಾನಿ ಗ್ರೀನ್ ಎನರ್ಜಿ ಲಿಮಿಟೆಡ್ ಮತ್ತು ಅದಾನಿ ಪೋರ್ಟ್ಸ್ ಅವರ ಒಟ್ಟು ಸಂಪತ್ತಿನ ಅರ್ಧಕ್ಕಿಂತ ಹೆಚ್ಚು (27 ಬಿಲಿಯನ್) ಪಾಲನ್ನು ಹೊಂದಿದೆ ಎಂದು ಬ್ಲೂಮ್ ಬರ್ಗ್ ಡೇಟಾ ತೋರಿಸಿದೆ.
ಆದಾಗ್ಯೂ, ಬಂದರುಗಳು ಮತ್ತು ವಿಮಾನ ನಿಲ್ದಾಣಗಳ ಹೊರತಾಗಿ, ಅವರು ಭಾರತದಲ್ಲಿ ತ್ವರಿತಗತಿಯಲ್ಲಿ ಡಾಟ ಸೆಂಟರ್ಸ್ ಮತ್ತು ಕಲ್ಲಿದ್ದಲು ಗಣಿಗಳನ್ನು ತಮ್ಮ ವ್ಯವಹಾರಕ್ಕೆ ಸೇರಿಸುತ್ತಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ.
ಓದಿ : ಆಹಾರ ಮತ್ತು ಇಂಧನ ಬೆಲೆಗಳ ಹೆಚ್ಚಳ: ಚಿಲ್ಲರೆ ಹಣದುಬ್ಬರ ಶೇ. 5.03ಕ್ಕೆ ಏರಿಕೆ..!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು