ಸೋಂಕು ಹೆಚ್ಚಳ; ಲಾಕ್‌ಡೌನ್‌, ಕರ್ಫ್ಯೂ ಚರ್ಚೆ ಮುನ್ನೆಲೆಗೆ : ಸಿಎಂ ಎಚ್ಚರದ ಮನವಿ


Team Udayavani, Mar 15, 2021, 7:30 AM IST

ಸೋಂಕು ಹೆಚ್ಚಳ; ಲಾಕ್‌ಡೌನ್‌, ಕರ್ಫ್ಯೂ ಚರ್ಚೆ ಮುನ್ನೆಲೆಗೆ : ಸಿಎಂ ಎಚ್ಚರದ ಮನವಿ

ಬೆಂಗಳೂರು: ಒಂದು ವಾರದಿಂದ ರಾಜ್ಯದಲ್ಲಿ ಕೊರೊನಾ ಸೋಂಕು ಏರಿಕೆಯ ಹಾದಿ ಹಿಡಿದಿದ್ದು, ನಿತ್ಯ ಪತ್ತೆಯಾಗುವ ಹೊಸ ಪ್ರಕರಣಗಳು ಒಂದು ಸಾವಿರದ ಆಸುಪಾಸಿನಲ್ಲಿವೆ. ಇದರಿಂದ ಮತ್ತೆ ರಾತ್ರಿ ಕರ್ಫ್ಯೂ, ಲಾಕ್‌ಡೌನ್‌ ಜಾರಿ ಕುರಿತಾದ ಚರ್ಚೆಗಳು ಮುನ್ನೆಲೆಗೆ ಬಂದಿವೆ.

ಜನರು ನಿಯಮ ಪಾಲಿಸದೆ ಸೋಂಕು ಹೆಚ್ಚಾ ದರೆ ಲಾಕ್‌ಡೌನ್‌ ಅನಿವಾರ್ಯ ಎಂದು ಸಿಎಂ ಯಡಿಯೂರಪ್ಪ ರವಿವಾರ ಎಚ್ಚರಿಕೆ ನೀಡಿದ್ದಾರೆ. ಈ ಹಿಂದಿನ ಕಠಿನ ದಿನಗಳು ಮತ್ತೆ ಬರಬಾರದು ಎಂದಿದ್ದಲ್ಲಿ ಸೋಂಕು ಹತೋಟಿಗೆ ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.

ಫೆಬ್ರವರಿ ಕೊನೆಯ ವಾರದ ವರೆಗೆ ನಿತ್ಯ ಸರಾಸರಿ 400ರಷ್ಟು ಇದ್ದ ಸೋಂಕು ಪ್ರಕರಣಗಳು ಮಾರ್ಚ್‌ ಮೊದಲ ವಾರ 530ಕ್ಕೆ ಮುಟ್ಟಿದ್ದವು. ಮಾರ್ಚ್‌ ಎರಡನೇ ವಾರ 730ಕ್ಕೆ ಏರಿವೆ. ಜನವರಿ ಬಳಿಕ ಇದೇ ಮೊದಲ ಬಾರಿಗೆ ಪ್ರಕರಣಗಳು ಒಂದು ಸಾವಿರದ ಆಸುಪಾಸಿನಲ್ಲಿ ವರದಿಯಾಗುತ್ತಿವೆ. ರವಿವಾರ 50 ದಿನಗಳ ಬಳಿಕ ಅತೀ ಹೆಚ್ಚು 934 ಪ್ರಕರಣಗಳು ದಾಖಲಾಗಿವೆ.

ಈ ಹಿನ್ನೆಲೆಯಲ್ಲಿ ಮತ್ತೆ ಲಾಕ್‌ಡೌನ್‌, ಮಹಾರಾಷ್ಟ್ರ ದಂತೆ ಕೆಲವು ಜಿಲ್ಲೆ ಲಾಕ್‌ಡೌನ್‌ ಎಂಬ ಚರ್ಚೆ ಮುನ್ನೆಲೆಗೆ ಬಂದಿದೆ. ದಿನದ ದುಡಿಮೆಯನ್ನು ನಂಬಿರುವ ಕಾರ್ಮಿಕ ವರ್ಗವು ಮತ್ತೆ ಸಂಕಷ್ಟದ ದಿನಗಳನ್ನು ಎದುರಿಸುವ ಆತಂಕದಲ್ಲಿದೆ.

36 ಯೋಜನೆ ಕೋವಿಡ್‌ಗೆ “ಬಲಿ’
ಹಿಂದಿನ ಬಜೆಟ್‌ನಲ್ಲಿ ಪ್ರಕಟಿಸಿದ್ದ 36ಕ್ಕೂ ಹೆಚ್ಚು ಯೋಜನೆ, ಕಾರ್ಯ ಕ್ರಮ, ಘೋಷಣೆಗಳು ಕೊರೊನಾಕ್ಕೆ “ಬಲಿ’ಯಾಗಿವೆ. ಸುಮಾರು 950 ಕೋಟಿ ರೂ. ಮೊತ್ತದ ಕಾರ್ಯಕ್ರಮಗಳಿಗೆ ಕೊಕ್‌ ನೀಡಲಾಗಿರುವುದು ಅನುಪಾಲನ ವರದಿಯಲ್ಲಿ ಬಯಲಾಗಿದೆ.

ಕೈ ಬಿಡಲಾದ ಪ್ರಮುಖ ಯೋಜನೆಗಳು
- ಸಾವಯವ ಕೃಷಿ ಉತ್ತೇಜನ ಕಾರ್ಯಕ್ರಮ
- ಪ್ರವಾಸೋದ್ಯಮ ಇಲಾಖೆಯ ಜೀವನಚೈತ್ರ
- ಕರ್ನಾಟಕ ಮತ್ಸ  é ವಿಕಾಸ ಯೋಜನೆ
- ವಿದ್ಯುತ್‌ ಶುಲ್ಕ ಮರುಪಾವತಿ ಯೋಜನೆ

 ಇಂದು ತಜ್ಞರ ಜತೆ ಸಿಎಂ ಸಭೆ
ರಾಜ್ಯದಲ್ಲಿ ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ಸಿಎಂ ಸೋಮವಾರ ಸಂಜೆ ಆರೋಗ್ಯ ತಜ್ಞರ ಮತ್ತು ಅಧಿಕಾರಿಗಳ ಸಭೆ ಕರೆದಿದ್ದಾರೆ. ಸೋಂಕು ಹೆಚ್ಚಿರುವ ಜಿಲ್ಲೆಗಳಲ್ಲಿ ಲಾಕ್‌ಡೌನ್‌ ಯಾ ರಾತ್ರಿ ಕರ್ಫ್ಯೂ ಹೇರಿಕೆ ಸಂಬಂಧ ಚರ್ಚೆ ನಡೆಯುವ ಸಾಧ್ಯತೆಗಳಿವೆ.

 ಸುಳ್ಳು ಸುದ್ದಿಗಳ ಭರಾಟೆ
ಸಾಮಾಜಿಕ ಜಾಲತಾಣಗಳಲ್ಲಿ ಲಾಕ್‌ಡೌನ್‌ ಜಾರಿ, ಶಾಲಾ ಕಾಲೇಜು ಸ್ಥಗಿತ, ಪರೀಕ್ಷೆ ನಡೆಸದೆ ಉತ್ತೀರ್ಣ ಇತ್ಯಾದಿ ನಕಲಿ ಪೋಸ್ಟ್‌ಗಳು ಓಡಾಡುತ್ತಿವೆ. ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿನ ಕ್ರಮ ಕೈಗೊಳ್ಳು ವುದಾಗಿ ಡಿಸಿಎಂ ಅಶ್ವತ್ಥನಾರಾಯಣ ಹೇಳಿದ್ದಾರೆ.

ಜನರಲ್ಲಿ ಕೈಮುಗಿದು ಕೇಳಿಕೊಳ್ಳು ತ್ತೇನೆ; ಸರಕಾರದೊಂದಿಗೆ ಕೊರೊನಾ ತಡೆಗೆ ಸಹ ಕಾರ ನೀಡಿ. ಕಡ್ಡಾಯ ನಿಯಮ ಪಾಲನೆ, ಮುಂಜಾಗ್ರತೆ ಯಿಂದ ಲಾಕ್‌ಡೌನ್‌ ಇಲ್ಲದೆ ಸೋಂಕನ್ನು ನಿಯಂತ್ರಿಸ ಬಹುದು.
– ಬಿ.ಎಸ್‌. ಯಡಿಯೂರಪ್ಪ , ಮುಖ್ಯಮಂತ್ರಿ

ಟಾಪ್ ನ್ಯೂಸ್

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್ಐಆರ್‌ ಸಾಧ್ಯತೆ

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್ಐಆರ್‌ ಸಾಧ್ಯತೆ

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

ಇಂದು ರಾತ್ರಿಯಿಂದ ರಾಜ್ಯಾದ್ಯಂತ 108 ಆ್ಯಂಬುಲೆನ್ಸ್‌ ಸೇವೆ ಸ್ಥಗಿತ

ಇಂದು ರಾತ್ರಿಯಿಂದ ರಾಜ್ಯಾದ್ಯಂತ 108 ಆ್ಯಂಬುಲೆನ್ಸ್‌ ಸೇವೆ ಸ್ಥಗಿತ

ಸಿಹಿತಿಂಡಿ ನೀಡದ್ದಕ್ಕೆ ಮದುವೆಯೇ ರದ್ದು!

Madikeri ಸಿಹಿತಿಂಡಿ ನೀಡದ್ದಕ್ಕೆ ಮದುವೆಯೇ ರದ್ದು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್ಐಆರ್‌ ಸಾಧ್ಯತೆ

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್ಐಆರ್‌ ಸಾಧ್ಯತೆ

ಇಂದು ರಾತ್ರಿಯಿಂದ ರಾಜ್ಯಾದ್ಯಂತ 108 ಆ್ಯಂಬುಲೆನ್ಸ್‌ ಸೇವೆ ಸ್ಥಗಿತ

ಇಂದು ರಾತ್ರಿಯಿಂದ ರಾಜ್ಯಾದ್ಯಂತ 108 ಆ್ಯಂಬುಲೆನ್ಸ್‌ ಸೇವೆ ಸ್ಥಗಿತ

ಅಪಹೃತ ಮಹಿಳೆ ಸಿಆರ್‌ಪಿಸಿ 164ರಡಿ ಹೇಳಿಕೆ ನೀಡಲು ಒಪ್ಪಿಗೆ: ಪ್ರಜ್ವಲ್‌ಗೆ ಸಂಕಷ್ಟ

ಅಪಹೃತ ಮಹಿಳೆ ಸಿಆರ್‌ಪಿಸಿ 164ರಡಿ ಹೇಳಿಕೆ ನೀಡಲು ಒಪ್ಪಿಗೆ: ಪ್ರಜ್ವಲ್‌ಗೆ ಸಂಕಷ್ಟ

MP Prajwal ರೇವಣ್ಣಗೆ ವಾಟ್ಸ್‌ಆ್ಯಪ್‌ ನೋಟಿಸ್‌

MP Prajwal ರೇವಣ್ಣಗೆ ವಾಟ್ಸ್‌ಆ್ಯಪ್‌ ನೋಟಿಸ್‌

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್ಐಆರ್‌ ಸಾಧ್ಯತೆ

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್ಐಆರ್‌ ಸಾಧ್ಯತೆ

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.