ಯುಟ್ಯೂಬ್‌ ನೋಡಿ ಕಳವು ಕಲಿತ!

ಯುಟ್ಯೂಬ್‌ ನೋಡಿ ಕಳವು ಕಲಿತ! ಪೊಲೀಸರಿಗೆ ಸಿಕ್ಕಿ ಬಿದ್ದ ಆರೋಪಿಯಿಂದ 4.76 ಲಕ್ಷ ರೂ. ಮೌಲ್ಯದ 92 ಗ್ರಾಂ ಚಿನ್ನಾಭರಣ ವಶ

Team Udayavani, Mar 15, 2021, 10:50 AM IST

ಯುಟ್ಯೂಬ್‌ ನೋಡಿ ಕಳವು ಕಲಿತ!

ಸಾಂದರ್ಭಿಕ ಚಿತ್ರ

ಬೆಂಗಳೂರು: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ ನಷ್ಟ ಹೊಂದಿದ್ದ ಖಾಸಗಿ ಕಂಪನಿ ಉದ್ಯೋಗಿಯೊಬ್ಬ ಯುಟ್ಯೂಬ್‌ ನೋಡಿ ಜ್ಯುವೆಲ್ಲರಿ ಅಂಗಡಿಯಲ್ಲಿ ಕಳ್ಳತನ ಮಾಡಿ ಇದೀಗ ಮಲ್ಲೇ ಶ್ವರ ಪೊಲೀಸರ ಬಲೆಗೆ ಬಿದ್ದಿದ್ದಾನೆ.

ಮಾಗಡಿ ರಸ್ತೆಯ ನಿವಾಸಿ ಸಂತೋಷ್‌ ಕುಮಾರ್‌ (23) ಬಂಧಿತ. ಆತ ನಿಂದ 4.76 ಲಕ್ಷ ರೂ. ಮೌಲ್ಯದ 92 ಗ್ರಾಂ ಚಿನ್ನಾಭರಣ, ಕೃತ್ಯಕ್ಕೆ ಬಳಸಿದ ಒಂದು ದ್ವಿಚಕ್ರವಾಹನವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಆರೋಪಿ ಬಂಧನದಿಂದ ನಗರದ 2 ಚಿನ್ನದ ಮಳಿಗೆಗಳಲ್ಲಿ ನಡೆದಿದ್ದ ಚಿನ್ನಾಭರಣ ಪ್ರಕರಣಗಳು ಪತ್ತೆಯಾಗಿವೆ.

ಆರೋಪಿಯು ಫೈನಾನ್ಸ್‌ ಕಂಪನಿಯಲ್ಲಿ ಫೈನಾನ್ಸಿಯಲ್‌ ಅನಾಲಿಸ್ಟ್‌ ಆಗಿ ಕೆಲ ಸ ಮಾಡು ತ್ತಿದ್ದ. ಈ ವೇಳೆ ಬೇಗನೇ ಶ್ರೀಮಂತನಾಗಲು ಲಕ್ಷಾಂತರ ರೂ. ಅನ್ನು ಷೇರು ಮಾರು ಕ ಟ್ಟೆಯಲ್ಲಿ ಹೂಡಿಕೆ ಮಾಡಿದ್ದಾನೆ.ಆದರೆ, ಷೇರಿನಲ್ಲಿ ನಷ್ಟ ಉಂಟಾಗಿತ್ತು. ಇತ್ತ ಮನೆಯಜವಾಬ್ದಾರಿಯನ್ನು ತಾನೇ ನಿಭಾಯಿಸಬೇಕಿರುವುದರಿಂದ ಕಂಪನಿಯಲ್ಲಿ ಸಿಗುತ್ತಿದ್ದ ವೇತನ ಖರ್ಚಿಗೆ ಸಾಲುತ್ತಿರಲಿಲ್ಲ.

ಆಗ ಆರೋಪಿ ಸಂತೋಷ್‌ ಕಳ್ಳ ತನ ಮಾಡಲು ಸಿದ್ಧತೆ ನಡೆ ಸಿದ್ದ. ಅದ ಕ್ಕಾಗಿ ಯುಟ್ಯೂಬ್‌ನಲ್ಲಿ ಕಳ್ಳ ತನ ಮಾಡು ವು ದ ನ್ನು ಪರಿಶೀಲಿಸಿದ್ದ. ಚಿನ್ನಾಭರಣ ಗಳ ಮಳಿಗೆಗಳಲ್ಲಿ ಸಿಬ್ಬಂದಿ ಗಮನ ಬೇರೆಡೆ ಸೆಳೆದು ಚಿನ್ನ ಕದಿಯುವುದನ್ನು ಯುಟ್ಯೂಬ್‌ನಲ್ಲಿ ವೀಕ್ಷಿಸಿದ್ದ. ಅದೇ ಮಾದರಿಯಲ್ಲಿ ನಗರದ ಚಿನ್ನಾಭರಣಮಳಿಗೆಗಳಲ್ಲಿ ಕದಿಯಲು ಸಂಚು ರೂಪಿಸಿದ್ದ ಎಂದು ಪೊಲೀಸರು ಹೇಳಿದರು.

ಬ್ರೇಸ್‌ಲೆಟ್‌ ಲಪಟಾಯಿಸಿದ: ಫೆ.21ರಂದು ಸಂಜೆ 7 ಗಂಟೆಗೆ ಮಲ್ಲೇಶ್ವರದ ಪ್ರತಿ ಷ್ಠಿತ ಚಿನ್ನಾ ಭ ರಣ ಮಳಿಗೆಗೆ ಗ್ರಾಹ ಕರ ಸೋಗಿ ನಲ್ಲಿ ಬಂದಿದ್ದ ಸಂತೋಷ್‌, ಅಲ್ಲಿನ ಸಿಬ್ಬಂದಿ ಸೈಯ್ಯದ್‌ ಸೈಫ್‌ವುದ್ದೀನ್‌ ಅವರಿಗೆಬ್ರೇಸ್‌ಲೆಟ್‌ ತೋರಿಸುವಂತೆ ಸೂಚಿಸಿದ್ದ. ಅದರಂತೆ ಸಿಬ್ಬಂದಿ ಬ್ರೇಸ್‌ಲೇಟ್‌ ತೋರಿಸಿ, ಪಕ್ಕದ ಕೌಂಟರ್‌ನಲ್ಲಿದ್ದ ಬೇರೆ ಗ್ರಾಹಕರ ಬಳಿ ಹೋಗಿದ್ದರು. ಕೆಲಸಮಯದ ಬಳಿಕ ಸಿಬ್ಬಂದಿ ಇತ್ತ ಬಂದಾಗ ಸಂತೋಷ್‌ 42.99 ಗ್ರಾಂ ಬ್ರಾಸ್‌ಲೇಟ್‌ನೊಂದಿಗೆಪರಾರಿಯಾಗಿದ್ದ. ಸೈಯ್ಯದ್‌ ಈ ಕುರಿತು ಮಲ್ಲೇಶ್ವರ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಪ್ರಕರಣದಾಖಲಿಸಿಕೊಂಡ ಮಲ್ಲೇಶ್ವರ ಪೊಲೀಸರು ಚಿನ್ನಾಭರಣ ಮಳಿಗೆಯಲ್ಲಿದ್ದ ಸಿಸಿ ಕ್ಯಾಮೆರಾ ಪರಿಶೀಲಿಸಿದಾಗ ಆರೋಪಿಯ ಸುಳಿವು ಪತ್ತೆಯಾಗಿತ್ತು. ಆದರೆ, ಆರೋಪಿ ಸಂತೋಷ್‌ ಮಳಿಗೆಯೊಳಗೆ ಬಂದಾಗ ಮಂಕಿಕ್ಯಾಪ್‌, ಕನ್ನಡಕ, ಮಾಸ್ಕ್ ಧರಿಸಿದ್ದರಿಂದ ಮುಖ ಚಹರೆ ಕಂಡು ಬಂದಿರಲಿಲ್ಲ ಎಂದು ಪೊಲೀಸರು ಹೇಳಿದರು.

 

ಆರೋಪಿ ಸಿಕ್ಕಿಬಿದ್ದಿದ್ದು  ಹೇಗೆ ? :

ಮಾ.11ರಂದು ಮಾರ್ಗೋಸಾ ರಸ್ತೆಯಲ್ಲಿರುವ ಪ್ರತಿ ಷ್ಠಿ ತ ಜುವೆಲ್ಲರ್ ಬಳಿ ಆರೋಪಿ ಸಂತೋಷ್‌ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ. ಅನುಮಾನದ ಮೇರೆಗೆ ಗಸ್ತಿನಲ್ಲಿದ್ದ ಮಲ್ಲೇಶ್ವರ ಪೊಲೀಸರು ಈತನನ್ನು ವಶಕ್ಕೆ ಪಡೆದು ಠಾಣೆಗೆ ಕರೆ ತಂದು ವಿಚಾರಣೆ ನಡೆಸಿದಾಗ ಆರಂಭ ದಲ್ಲಿ ಯಾವುದೇ ಮಾಹಿತಿ ನೀಡಿ ರ ಲಿಲ್ಲ. ಬಳಿಕ ಚಿನ್ನಾ ಭ ರಣ ಮಳಿಗೆಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾದ ಕಳ್ಳ ಧರಿಸಿದ್ದ ಮಾದರಿಯ ಮಂಕಿ ಕ್ಯಾಪ್‌, ಕನ್ನಡಕ, ಮಾಸ್ಕ್ ನ್ನು ಈತನಿಗೆ ತೊಡಿಸಿದ ಪೊಲೀಸರು ಹೋಲಿಕೆ ಮಾಡಿ ನೋಡಿದಾಗಈತನನ್ನೇ ಹೋಲುತ್ತಿತ್ತು. ಬಳಿಕ ವಿಚಾ ರಣೆ ತೀವ್ರ ಗೊ ಳಿ ಸಿ ದಾಗ ತಪ್ಪೊ ಪ್ಪಿ ಕೊಂಡಿ ದ್ದಾ ನೆ. ಪೊಲೀಸರಿಗೆ ತನ್ನ ಸುಳಿವು ಸಿಗಬಾರದು ಎಂಬ ಉದ್ದೇಶದಿಂದ ಚಿನ್ನಾಭರಣ ಮಳಿಗೆಯೊಳಗೆ ತೆರಳುವ ವೇಳೆ ಮಂಕಿಕ್ಯಾಪ್‌, ಮಾಸ್ಕ್ ಜತೆಗೆ ಮೇಲ್ಭಾಗದಲ್ಲಿ ಬೇರೆ ಬಟ್ಟೆಗಳನ್ನು ಧರಿಸುತ್ತಿದ್ದೆ. ಹೊರ ಬಂದ ಕೂಡಲೇ ಅವುಗಳನ್ನು ತೆಗೆಯುತ್ತಿದ್ದೆ. ಹೀಗಾಗಿ ತನ್ನ ಮೇಲೆ ಯಾರಿಗೂ ಅನುಮಾನ ಬರುತ್ತಿರಲಿಲ್ಲ. ಕದ್ದ ಚಿನ್ನಾಭರಣಮಾರಾಟ ಮಾಡಿ ಬಂದ ಹಣವನ್ನು ಮತ್ತೆ ಷೇರು ಪೇಟೆ ಯಲ್ಲಿ ಹೂಡಿಕೆ ಮಾಡು ತ್ತಿದ್ದೆ ಎಂದು ಆರೋಪಿ ವಿಚಾರಣೆಯಲ್ಲಿ ಒಪ್ಪಿ ಕೊಂಡಿದ್ದಾನೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.