ಕೋವಿಡ್: 24 ಗಂಟೆಯಲ್ಲಿ 26 ಸಾವಿರ ಸೋಂಕಿತರು, ಮಹಾರಾಷ್ಟ್ರದಲ್ಲಿ ಮುಂದುವರಿದ ಆತಂಕ
ದರ ಪರಿಣಾಮ ಕಳೆದ ಸೋಮವಾರದಿಂದ ಮಹಾರಾಷ್ಟ್ರದ ಆಯ್ದಭಾಗಗಳಲ್ಲಿ ಕೆಲವು ಕಠಿಣ ನಿರ್ಬಂಧಗಳನ್ನು ಹೇರಿದೆ
Team Udayavani, Mar 15, 2021, 12:18 PM IST
ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಒಟ್ಟು 26,291 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿವೆ. ಇದು ಕಳೆದ 3 ತಿಂಗಳಲ್ಲಿಯೇ ದಿನವೊಂದರಲ್ಲಿ ದಾಖಲಾದ ಗರಿಷ್ಠ ಏರಿಕೆಯಾಗಿದ್ದು, ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ 1,13,85,339ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ(ಮಾರ್ಚ್ 15) ತಿಳಿಸಿದೆ.
ಇದನ್ನೂ ಓದಿ:ಇನ್ಮುಂದೆ ಪಡಿತರ ಚೀಟಿ ಬೇಕೆಂದಿಲ್ಲ..! ಯಾಕೆ..? ಪೂರ್ಣ ಮಾಹಿತಿ ಇಲ್ಲಿದೆ.
ಮೈಮರೆಯಲು ಇದು ಸಮಯವಲ್ಲ ಎಂಬ ಎಚ್ಚರಿಕೆಯ ಸಂದೇಶವನ್ನು ದೇಶವಾಸಿಗಳಿಗೆ ಹಾಗೂ ಎಲ್ಲಾ ಸರ್ಕಾರಗಳಿಗೆ ರವಾನಿಸಿದೆ. ಭಾನುವಾರ ಹೊತ್ತಿಗಿನ ಅಂಕಿಅಂಶಗಳನ್ನೇ ಪರಿಗಣಿಸಿದರೆ, ಈ ಏರಿಕೆಯಿಂದ ಒಟ್ಟು ಕೊರೊನಾ ಪ್ರಕರಣಗಳ ಸಂಖ್ಯೆಯನ್ನು 1.13 ಕೋಟಿಗೆ ಮುಟ್ಟಿಸಿದೆ. ಇಲ್ಲಿಯವರೆಗೆ ಒಟ್ಟು 1,58,607 ಸಾವುಗಳು ಸಂಭವಿಸಿದೆ. ಇದರಲ್ಲಿ ನಿನ್ನೆ ಒಂದೇ ದಿನ ಸಂಭವಿಸಿದ 161 ಸಾವುಗಳೂ ಸೇರಿವೆ. ಕಳೆದ 44 ದಿನಗಳಲ್ಲೇ ಇದು ದಿನವೊಂದರಲ್ಲಿ ಸಂಭವಿಸಿದ ಗರಿಷ್ಠ ಸಾವಿನ ಸಂಖ್ಯೆ ಯಾಗಿದೆ ಎಂದು ಸರ್ಕಾರಿ ದಾಖಲೆಗಳು ಹೇಳಿವೆ.
ಭಾರತವನ್ನು ಮೀರಿಸಿದ ಬ್ರೆಜಿಲ್: ವಿಶ್ವದಲ್ಲೇ 2ನೇ ಗರಿಷ್ಠ ಕೊರೊನಾ ಬಾಧಿತ ದೇಶ ಎಂಬ ಕುಖ್ಯಾತಿಗೆ ಈಗ ಬ್ರೆಜಿಲ್ ತುತ್ತಾಗಿದೆ. ಈಗ ಅಲ್ಲಿನ ಪ್ರಕರಣಗಳ ಸಂಖ್ಯೆ ಒಟ್ಟು 1.14 ಕೋಟಿಗೇರಿದೆ. ಸಾವಿನ ಸಂಖ್ಯೆ 2,77,216 ಕ್ಕೇರಿದೆ. ಭಾರತದಲ್ಲಿ ಪ್ರಕರಣಗಳ ಸಂಖ್ಯೆ 1.13 ಕೋಟಿ.
56 ವಿದ್ಯಾರ್ಥಿಗಳಿಗೆ ಸೋಂಕು: ತಮಿಳುನಾಡಿನ ತಂಜಾವೂರು ಸಮೀಪದ ಅಮ್ಮಾಟಿ ಪೆಟಾಯಿ ಹಳ್ಳಿಯ ಬಾಲಕಿಯರ ಸರ್ಕಾರಿ ಪ್ರೌಢ ಶಾಲೆಯಲ್ಲಿ 56 ವಿದ್ಯಾರ್ಥಿನಿಯರು ಮತ್ತು ಒಬ್ಬ ಶಿಕ್ಷಕಿಗೆ ಕೋವಿಡ್ ಕಾಣಿಸಿಕೊಂಡಿದೆ.
ಗುಜರಾತ್ ಶಾಲಾ, ಕಾಲೇಜು ಸಂಕಷ್ಟದಲ್ಲಿ:
ಗುಜರಾತ್ನ ಸೂರತ್ ನಗರದ ಎರಡು ಪ್ರಾಥಮಿಕ ಶಾಲೆಗಳು, ಒಂದು ಕಾಲೇಜನ್ನು ಎರಡು ವಾರಗಳ ಕಾಲ ಬಂದ್ ಮಾಡಲಾಗಿದೆ. ಫೆಬ್ರವರಿಯಲ್ಲಿ ಸೂರತ್ ಶಿಕ್ಷಣಸಂಸ್ಥೆಗಳನ್ನು ಮತ್ತೆ ತೆರೆಯಲಾಗಿತ್ತು. ಈ ಶಿಕ್ಷಣ ಸಂಸ್ಥೆಗಳಲ್ಲಿ ಒಟ್ಟು 20 ಪ್ರಕರಣಗಳು ದಾಖಲಾಗಿರುವುದರಿಂದ ಈ ಕ್ರಮಕ್ಕೆ ಅಲ್ಲಿನ ನಗರಪಾಲಿಕೆ ಮುಂದಾಗಿದೆ.
ಕಠಿಣ ಕ್ರಮದತ್ತ ಮಹಾರಾಷ್ಟ್ರ: ಮೊನ್ನೆ ಶನಿವಾರ ಮಹಾರಾಷ್ಟ್ರದ ನಾಗ್ಪುರದಲ್ಲಿ 1,828, ಮುಂಬೈನಲ್ಲಿ 1709, ಪುಣೆಯಲ್ಲಿ 1,667 ಪ್ರಕರಣಗಳು ದಾಖಲಾಗಿದ್ದವು. ಇದರ ಪರಿಣಾಮ ಕಳೆದ ಸೋಮವಾರದಿಂದ ಮಹಾರಾಷ್ಟ್ರದ ಆಯ್ದಭಾಗಗಳಲ್ಲಿ ಕೆಲವು ಕಠಿಣ ನಿರ್ಬಂಧಗಳನ್ನು ಹೇರಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ