ಉಪ ಚುನಾವಣೆ ಗೆಲ್ಲಲು ಕಾಂಗ್ರೆಸ್‌-ಬಿಜೆಪಿ ಪೈಪೋಟಿ


Team Udayavani, Mar 15, 2021, 12:59 PM IST

ಉಪ ಚುನಾವಣೆ ಗೆಲ್ಲಲು ಕಾಂಗ್ರೆಸ್‌-ಬಿಜೆಪಿ ಪೈಪೋಟಿ

ಹನೂರು: ಪಟ್ಟಣ ಪಂಚಾಯಿತಿ ಸದಸ್ಯ ನಾಗ ರಾಜು ಮರಣದಿಂದಾಗಿ ತೆರವಾಗಿ ರುವಪಪಂ 2ನೇ ವಾರ್ಡ್‌ಗೆ ಉಪ ಚುನಾವಣೆಗೆ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.

ಉಪಚುನಾವಣೆಗೆ ಈಗಾಗಲೇ ಅಧಿಸೂಚನೆ ಹೊರಡಿಸಿದ್ದು,ನಾಮಪತ್ರ ಸಲ್ಲಿಕೆಗೆ ಮಾ.17 ಅಂತಿಮ ದಿನವಾಗಿದೆ. ಮಾ.18 ರಂದು ನಾಮಪತ್ರಗಳಪರಿಶೀಲನೆ ಜರುಗ ಲಿದ್ದು ನಾಮಪತ್ರಹಿಂಪಡೆಯಲು ಮಾರ್ಚ್‌ 20ರವರೆಗೆಅವಕಾಶವಿದೆ. ಮತದಾನ ಅವಶ್ಯವಾಗಿದ್ದಲ್ಲಿಮಾ.29ಕ್ಕೆ ಚುನಾವಣೆ ನಿಗದಿಯಾಗಿದೆ.

ವಾರ್ಡ್‌ನ ಚಿತ್ರಣ: ಪಪಂನ 2ನೇ ವಾರ್ಡ್‌ ನಲ್ಲಿ 716 ಮತದಾರರಿದ್ದು ಮೀಸಲಾತಿಅನು ಸಾರ ಈ ವಾರ್ಡ್‌ ಸಾಮಾನ್ಯ ವರ್ಗಕ್ಕೆಮೀಸ ಲಾಗಿ ದೆ. ಆದರೆ, ಈ ವಾರ್ಡ್‌ನಲ್ಲಿ ಆದಿ ಬವ ಮತಗಳೇ ನಿರ್ಣಾಯಕವಾಗಲಿವೆ. ಇಲ್ಲಿನ 716 ಮತದಾರರ ಪೈಕಿ ಆದಿ ಜಾಂಬವ ಸಮುದಾಯದ 550 ಮತಗಳು, ಒಕ್ಕಲಿಗೆ ಸಮುದಾಯದ 95 ಮತಗಳು, ಪೌರ ಕಾರ್ಮಿಕರ 35 ಮತಗಳು ಮತ್ತುಪರಿಶಿಷ್ಟ ಜಾತಿಯ ಆದಿ ಕರ್ನಾಟಕಕ್ಕೆ ಸೇರಿದ 25 ಮತ ದಾರ ರಿದ್ದಾರೆ. ಈ ವಾರ್ಡ್‌ನಲ್ಲಿ ಆದಿಜಾಂಬವ ಮತಗಳೇ ಹೆಚ್ಚು ಮತಗಳಿರುವುದರಿಂದ ಸಾಮಾನ್ಯ ವರ್ಗಕ್ಕೆ ಸೇರಿದವರಿಗಿಂದ ಆ ಸಮು ದಾಯದನಾಯಕರೇ ಸ್ಫರ್ಧೆಗೆ ಒಲವು ತೋರಿದ್ದಾರೆ.

ಕಳೆದ ಚುನಾವಣೆ ಅಖಾಡ: 2019ರಲ್ಲಿಜರು ಗಿದ್ದ ಪ.ಪಂ ಚುನಾವಣೆಯಲ್ಲಿ 2ನೇ ವಾರ್ಡ್‌ ನಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸುದೇಶ್‌ ತಿಪ್ಪೂ ರಯ್ಯ, ಬಿಜೆಪಿಅಭ್ಯರ್ಥಿಯಾಗಿ ದಿ| ನಾಗ ರಾಜು ಮತ್ತುಜೆಡಿಎಸ್‌ ಅಭ್ಯರ್ಥಿ ಯಾಗಿ ಗೋವಿಂದ್‌ ಸ್ಪರ್ಧೆ ಮಾಡಿದ್ದರು. ಈ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ನಾಗರಾಜು 256 ಮತ ಪಡೆದು ವಿಜೇತರಾಗಿ ದ್ದರು. ಕಾಂಗ್ರೆಸ್‌ನಸುದೇಶ್‌ ತಿಪ್ಪೂರಯ್ಯ 231 ಮತ ಪಡೆದು 35 ಮತಗಳ ಅಂತರದಿಂದಪರಾಭವಗೊಂಡಿದ್ದರು. ಇನ್ನು ಜೆಡಿಎಸ್‌ನಗೋವಿಂದ 175 ಮತಗಳನ್ನು ಪಡೆದು 3ನೇ ಸ್ಥಾನಕ್ಕೆ ತಳ್ಳಲ್ಪಟ್ಟಿದ್ದರು.

ಸ್ಪರ್ಧಾ ಕಣದಲ್ಲಿ ಯಾರ್ಯಾರು? :

ಉಪಚುನಾವಣೆಯ ಕಣಕ್ಕೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಈಗಾಗಲೇ 3 ಪಕ್ಷಗಳೂ ತಯಾರಿ ನಡೆಸಿಕೊಂಡಿವೆ. ಕಳೆದ ಚುನಾವಣೆಯಲ್ಲಿ ಅತ್ಯಲ್ಪ ಮತಗಳಿಂದ ಪರಾಭವಗೊಂಡಿದ್ದಸುದೇಶ್‌ ತಿಪ್ಪೂರಯ್ಯ ಕಾಂಗ್ರೆಸ್‌ ಅಭ್ಯರ್ಥಿಯಾಗುವುದುಬಹುತೇಕ ಖಚಿತವಾಗಿದೆ. ಇನ್ನು ಕಳೆದ ಬಾರಿ ವಾರ್ಡನ್ನು ತನ್ನ ತೆಕ್ಕೆಗೆಪಡೆದಿದ್ದ ಬಿಜೆಪಿ ಸಮರ್ಥ ಅಭ್ಯರ್ಥಿಯ ಹುಡುಕಾಟದಲ್ಲಿದ್ದು,ಆದಿಜಾಂಬವ ಸಮುದಾಯಕ್ಕೆ ಸೇರಿದ್ದ ಗುರು ಸ್ವಾಮಿಯನ್ನೇ ಅಖಾಡಕ್ಕಿಳಿಸಲು ಸಿದ್ಧತೆ ನಡೆಸಿದೆ ಎನ್ನಲಾಗಿದೆ. ಇನ್ನು ಜೆಡಿಎಸ್‌ ಪಕ್ಷಒಡೆದ ಮನೆಯಂತಾಗಿದ್ದು, ಕಳೆದ 2 ಚುನಾವಣೆಗಳಲ್ಲಿ ಸ್ಪರ್ಧಿಸಿ ಸೋತಿರುವ ಗೋವಿಂದ ಮತ್ತು ಪ್ರಸ್‌ಸ್ವಾಮಿ ನಡುವೆ ಟಿಕೆಟ್‌ಗಾಗಿ ಪೈಪೋಟಿ ಏರ್ಪಟ್ಟಿದೆ. ಈ ಇಬ್ಬರಲ್ಲಿ ಯಾರಿಗೆ ಟಿಕೆಟ್‌ ನೀಡಿದರೂ ಮತ್ತೋರ್ವರು ಅಸಮಾಧಾನಗೊಳ್ಳುವುದರಿಂದ ಪಕ್ಷದ ಮತಗಳಿಗೆ ಹೊಡೆತ ಬೀಳಲಿದೆ. ಈ ಹಿನ್ನೆಲೆ ಇಬ್ಬರನ್ನು ಹೊರತುಪಡಿಸಿ 3ನೇ ವ್ಯಕ್ತಿಗೆ ಟಿಕೆಟ್‌ ನೀಡಿ, ಒಂದೊಮ್ಮೆ ಅವಕಾಶ ಕಲ್ಪಿಸಿದರೆ ತಮ್ಮ ಪತ್ನಿಯನ್ನು ಅಖಾಡಕ್ಕೆ ಇಳಿಸುವುದಾಗಿ ಒಕ್ಕಲಿಗ ಸಮುದಾಯದ ಮುಖಂಡನೋರ್ವ ಬೇಡಿಕೆ ಇಟ್ಟಿದ್ದಾನೆ ಎನ್ನಲಾಗಿದೆ.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.