ವೇಣೂರು, ಆರಂಬೋಡಿ ಗ್ರಾ.ಪಂ. ಚುನಾವಣೆ : ಮೊದಲ ದಿನ ಯಾರಿಂದಲೂ ಸಲ್ಲಿಕೆಯಾಗದ ನಾಮಪತ್ರ


Team Udayavani, Mar 16, 2021, 4:00 AM IST

ವೇಣೂರು, ಆರಂಬೋಡಿ ಗ್ರಾ.ಪಂ. ಚುನಾವಣೆ : ಮೊದಲ ದಿನ ಯಾರಿಂದಲೂ ಸಲ್ಲಿಕೆಯಾಗದ ನಾಮಪತ್ರ

ವೇಣೂರು: ಬಾಕಿ ಉಳಿದಿದ್ದ ವೇಣೂರು ಹಾಗೂ ಆರಂಬೋಡಿ ಗ್ರಾ.ಪಂ.ನ ಚುನಾವಣೆ ಮಾ. 29ರಂದು ನಡೆಯಲಿದ್ದು, ಸರಕಾರ ಈಗಾಗಲೇ ಗ್ರಾ.ಪಂ.ಗಳಿಗೆ ವಾರ್ಡ್‌ವಾರು ಅಭ್ಯರ್ಥಿಗಳ ಮೀಸಲಾತಿ ನಿಗ ಪಡಿಸಿದೆ. ಸೋಮವಾರದಿಂದ ನಾಮಪತ್ರ ಸಲ್ಲಿಕೆಗೆ ಅಧಿಸೂಚನೆ ಹೊರಡಿಸಲಾಗಿದೆ. ಈ ಮೂಲಕ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭ ಗೊಂಡಿದೆ. ವೇಣೂರು ಗ್ರಾಮ ಪಂಚಾಯತ್‌ ಹಾಗೂ ಆರಂಬೋಡಿ ಗ್ರಾಮ ಪಂಚಾಯತ್‌ ಚುನಾವಣೆಗೆ ಮೊದಲ ದಿನ ಯಾವುದೇ ನಾಮಪತ್ರ ಸಲ್ಲಿಕೆಯಾಗಿಲ್ಲ.

ವೇಣೂರು ಗ್ರಾ.ಪಂ.: ವಾರ್ಡ್‌ವಾರು ಮೀಸಲಾತಿ
24 ಸದಸ್ಯ ಸ್ಥಾನಗಳನ್ನು ಹೊಂದಿರುವ ವೇಣೂರು ಗ್ರಾ.ಪಂ.ನ ವಾರ್ಡ್‌ 1ರಲ್ಲಿ ಹಿಂದುಳಿದ ವರ್ಗ ಎ ಮಹಿಳೆ, ಹಿಂದುಳಿದ ವರ್ಗ ಬಿ ಮಹಿಳೆ, ಸಾಮಾನ್ಯ ಮಹಿಳೆ, ವಾರ್ಡ್‌ 2ರಲ್ಲಿ ಅನುಸೂಚಿತ ಜಾತಿ (ಮಹಿಳೆ), ಸಾಮಾನ್ಯ, ಸಾಮಾನ್ಯ ಮಹಿಳೆ ಮೀಸಲಾತಿ ನಿಗದಿಪಡಿಸಿದೆ.

ಬಜಿರೆ ವಾರ್ಡ್‌ 1ರಲ್ಲಿ ಹಿಂದುಳಿದ ವರ್ಗ ಎ ಮಹಿಳೆ, ಸಾಮಾನ್ಯ (ಮಹಿಳೆ), ವಾರ್ಡ್‌ 2ರಲ್ಲಿ ಅನುಸೂಚಿತ ಜಾತಿ (ಮಹಿಳೆ), ಹಿಂದುಳಿದ ವರ್ಗ ಎ ಮೀಸಲಾತಿ, ಕರಿಮಣೇಲು ವಾರ್ಡ್‌ 1ರಲ್ಲಿ ಸಾಮಾನ್ಯ, ಸಾಮಾನ್ಯ (ಮಹಿಳೆ), ವಾರ್ಡ್‌ 2ರಲ್ಲಿ ಅನುಸೂಚಿತ ಜಾತಿ ಹಾಗೂ ಅನುಸೂಚಿತ ಪಂಗಡ (ಮಹಿಳೆ) ಮತ್ತು ಸಾಮಾನ್ಯ. ಮೂಡುಕೋಡಿ ವಾರ್ಡ್‌ 1ರಲ್ಲಿ ಹಿಂದುಳಿದ ವರ್ಗ ಬಿ, ಸಾಮಾನ್ಯ ಹಾಗೂ ವಾರ್ಡ್‌2ರಲ್ಲಿ ಹಿಂದುಳಿದ ವರ್ಗ ಎ, ಹಿಂದುಳಿದ ವರ್ಗ ಎ (ಮಹಿಳೆ) ಮತ್ತು ಸಾಮಾನ್ಯ ಅಭ್ಯರ್ಥಿಗೆ ಮೀಸಲಾತಿ ನಿಗಧಿಯಾಗಿದೆ.

ಆರಂಬೋಡಿ ಗ್ರಾ.ಪಂ.: ವಾರ್ಡ್‌ವಾರು ಮೀಸಲಾತಿ
12 ಸದಸ್ಯ ಸ್ಥಾನಗಳನ್ನು ಹೊಂದಿರುವ ಆರಂಬೋಡಿ ಗ್ರಾ.ಪಂ.ನ ವಾರ್ಡ್‌1ರಲ್ಲಿ ಹಿಂದುಳಿದ ವರ್ಗ ಎ, ಹಿಂದುಳಿದ ವರ್ಗ ಎ (ಮಹಿಳೆ) ಹಾಗೂ ಸಾಮಾನ್ಯ, ವಾರ್ಡ್‌ 2ರಲ್ಲಿ ಅನುಸೂಚಿತ ಜಾತಿ (ಮಹಿಳೆ), ಅನುಸೂಚಿತ ಪಂಗಡ (ಮಹಿಳೆ), ಸಾಮಾನ್ಯ. ಗುಂಡೂರಿ ವಾರ್ಡ್‌ 1ರಲ್ಲಿ ಹಿಂದುಳಿದ ವರ್ಗ ಎ (ಮಹಿಳೆ), ಹಿಂದುಳಿದ ವರ್ಗ ಬಿ ಹಾಗೂ ಸಾಮಾನ್ಯ ಮಹಿಳೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆಗೆ ಮೀಸಲಾತಿ ನಿಗದಿಯಾಗಿದೆ.

ಸಾಮತ್ರ ಸಲ್ಲಿಕೆ ಪ್ರಕ್ರಿಯೆ ಆರಂಭ ವಾಗುತ್ತಿದ್ದಂತೆ ಪಕ್ಷದ ವರಿಷ್ಠರು, ಕಾರ್ಯ ಕರ್ತರು ಮೀಸಲಾತಿಗೆ ಅನುಗುಣವಾಗಿ ಅಭ್ಯರ್ಥಿಗಳ ಆಯ್ಕೆ ಅಂತಿಮ ಹಂತ ದಲ್ಲಿದ್ದು, ಗ್ರಾಮ ರಾಜಕೀಯದ ಕಣ ಬಿಸಿಯೇರತೊಡಗಿದೆ.
ಚುನಾವಣಾ ನೀತಿ ಸಂಹಿತೆಯು ಮಾ. 15ರಂದು ಜಾರಿಯಾಗಿದ್ದು, ಮಾ. 31ರವರೆಗೆ ಜಾರಿಯಲ್ಲಿರಲಿದೆ.

ಮದ್ಯದಂಗಡಿಗಳು ಬಂದ್‌
ಮತದಾನ ನಡೆಯುವ ಗ್ರಾ.ಪಂ.ಗಳ ವ್ಯಾಪ್ತಿಯಲ್ಲಿ ಮಾ. 27ರಿಂದ ಮಾ.29ರ ಮತದಾನ ಮುಗಿಯುವವರಿಗೆ ಎಲ್ಲ ಮದ್ಯದಂಗಡಿಗಳು ಬಂದ್‌ ಆಗಲಿದೆ. ಈ ಸಮಯದಲ್ಲಿ ಯಾರಾದರೂ ಮದ್ಯವನ್ನು ದಾಸ್ತಾನು ಇರಿಸಿದರೆ ಅಥವಾ ಮದ್ಯ ಸೇವಿಸಿ ರಂಪ ಮಾಡಿದರೆ ಮುನ್ನೆಚ್ಚರಿಕೆ ಕ್ರಮವಾಗಿ ಚುನಾವಣೆ ಮುಗಿಯುವವರಿಗೆ ಅವರನ್ನು ಕಸ್ಟಡಿಯಲ್ಲಿ ಇಡಲಾಗುತ್ತದೆ ಎಂದು ಚುನಾವಣಾ ಆಯೋಗ ಎಚ್ಚರಿಕೆ ನೀಡಿದೆ.

ಒಟ್ಟು ಮತದಾರರು
ವೇಣೂರು ಗ್ರಾ.ಪಂ. ವ್ಯಾಪ್ತಿ ಯಲ್ಲಿ 8,074 ಮತದಾರರಿದ್ದು, ಇದರಲ್ಲಿ 4,034 ಪುರುಷರು ಹಾಗೂ 4,040 ಮಹಿಳಾ ಮತದಾರರಾಗಿದ್ದಾರೆ. ಆರಂಬೋಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಒಟ್ಟು 3,945 ಮಂದಿ ಮತದಾರರಿದ್ದು, 1,965 ಪುರುಷರು ಹಾಗೂ 1,980 ಮಹಿಳಾ ಮತದಾರರು ಇದ್ದಾರೆ.

ಟಾಪ್ ನ್ಯೂಸ್

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು

1-wwqewqe

BJP ಕುರುಬ ಸಮುದಾಯಕ್ಕೆ ಒಂದೂ ಟಿಕೆಟ್ ಕೊಟ್ಟಿಲ್ಲ: ಸಿಎಂ ಸಿದ್ದರಾಮಯ್ಯ ಕಿಡಿ

8

ಅಮಿತಾಭ್‌ ಟು ಶಾರುಖ್:‌ ಇಂದು ಕೋಟಿ ಕುಳರಾದ ಈ ನಟರ ಮೊದಲ ಸಂಪಾದನೆ ಎಷ್ಟಾಗಿತ್ತು ಗೊತ್ತಾ?

Panaji: ದಾರಿ ಮಧ್ಯೆ ಹೊತ್ತಿ ಉರಿದ ಟ್ರಕ್… 32 ಲಕ್ಷ ಮೌಲ್ಯದ ಸೊತ್ತು ನಷ್ಟ

Panaji: ದಾರಿ ಮಧ್ಯೆ ಹೊತ್ತಿ ಉರಿದ ಟ್ರಕ್… 32 ಲಕ್ಷ ಮೌಲ್ಯದ ಸೊತ್ತು ನಷ್ಟ

Belagavi; ಭಿಕ್ಷೆ ರೀತಿಯಲ್ಲಿ ಸಿಎಂ ಬರ ಪರಿಹಾರ ನೀಡಿದ್ದಾರೆ: ವಿಜಯೇಂದ್ರ ಆಕ್ರೋಶ

Belagavi; ಭಿಕ್ಷೆ ರೀತಿಯಲ್ಲಿ ಸಿಎಂ ಬರ ಪರಿಹಾರ ನೀಡಿದ್ದಾರೆ: ವಿಜಯೇಂದ್ರ ಆಕ್ರೋಶ

13

Tollywood: ʼಫ್ಯಾಮಿಲಿ ಸ್ಟಾರ್‌ʼ ಸೋಲಿನ ಬಳಿಕ ಹೊಸ ಸಿನಿಮಾ ಅನೌನ್ಸ್‌ ಮಾಡಿದ ದೇವರಕೊಂಡ

11-

Love and Care: ಪ್ರೀತಿ ಹಿಂದಿರುಗಿಸಲು ಅಂಜಿಕೆಯೇಕೆ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mangalore international airport

Mangaluru; ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ ಬೆದರಿಕೆ; ಪೊಲೀಸ್ ಭದ್ರತೆ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Rain ಸುಬ್ರಹ್ಮಣ್ಯ, ಸುಳ್ಯ ಸಹಿತ ಹಲವೆಡೆ ಗುಡುಗು-ಮಳೆ

Rain ಸುಬ್ರಹ್ಮಣ್ಯ, ಸುಳ್ಯ ಸಹಿತ ಹಲವೆಡೆ ಗುಡುಗು-ಮಳೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು

ಗದಗ: ಸಂವಿಧಾನ ಧರ್ಮಗ್ರಂಥ ಎಂದವರು ಮೋದಿ- ಬೊಮ್ಮಾಯಿ

ಗದಗ: ಸಂವಿಧಾನ ಧರ್ಮಗ್ರಂಥ ಎಂದವರು ಮೋದಿ- ಬೊಮ್ಮಾಯಿ

ಚಿನ್ನದ ನಾಡಿನ ಕಲಾವಿದೆ ವಿದ್ಯಾಶ್ರೀ ಪ್ರತಿಭೆ ಅನಾವರಣ-ನೃತ್ಯಗಂಗಾ ಪ್ರದರ್ಶನ

ಚಿನ್ನದ ನಾಡಿನ ಕಲಾವಿದೆ ವಿದ್ಯಾಶ್ರೀ ಪ್ರತಿಭೆ ಅನಾವರಣ-ನೃತ್ಯಗಂಗಾ ಪ್ರದರ್ಶನ

1-wwqewqe

BJP ಕುರುಬ ಸಮುದಾಯಕ್ಕೆ ಒಂದೂ ಟಿಕೆಟ್ ಕೊಟ್ಟಿಲ್ಲ: ಸಿಎಂ ಸಿದ್ದರಾಮಯ್ಯ ಕಿಡಿ

8

ಅಮಿತಾಭ್‌ ಟು ಶಾರುಖ್:‌ ಇಂದು ಕೋಟಿ ಕುಳರಾದ ಈ ನಟರ ಮೊದಲ ಸಂಪಾದನೆ ಎಷ್ಟಾಗಿತ್ತು ಗೊತ್ತಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.