ಇಂದಿನಿಂದ ಕುಂದಾಪುರ, ಬೈಂದೂರಿಗೆ ಮರಳು : ಇ ಸ್ಯಾಂಡ್‌ ಆ್ಯಪ್‌ ಮೂಲಕ ವಿತರಣೆಗೆ ನಿರ್ಧಾರ


Team Udayavani, Mar 17, 2021, 5:20 AM IST

ಇಂದಿನಿಂದ ಕುಂದಾಪುರ, ಬೈಂದೂರಿಗೆ ಮರಳು : ಇ ಸ್ಯಾಂಡ್‌ ಆ್ಯಪ್‌ ಮೂಲಕ ವಿತರಣೆಗೆ ನಿರ್ಧಾರ

ಕುಂದಾಪುರ: ಬೈಂದೂರು ಹಾಗೂ ಕುಂದಾಪುರ ತಾಲೂಕಿನ ಜನತೆಗೆ ಮಾ. 17ರಿಂದ ಮರಳು ದೊರೆಯಲಿದೆ. ಈ ಕುರಿತು ಗಣಿ ಇಲಾಖೆ ಅಧಿಕೃತ ಪ್ರಕಟನೆ ಹೊರಡಿಸಿದೆ. ಇದರ ಬೆನ್ನಿಗೇ ಮಂಗಳವಾರ ಅಪರಾಹ್ನದಿಂದಲೇ ಮರಳು ಬುಕ್ಕಿಂಗ್‌ ಆರಂಭವಾಗಿದೆ.

ವಿತರಣೆಗೆ ಅನುಮತಿ
ಒಂದೆಡೆ ಆಕ್ರಮ ಮರಳು ಸಾಗಾಟ ನಡೆದು ನದಿಗಳೆಲ್ಲ ಖಾಲಿಯಾಗುತ್ತಿದ್ದರೆ ಇನ್ನೊಂದೆಡೆ ಗಣಿಗಾರಿಕೆಗೆ ಅನುಮತಿ ಪಡೆದವರು ವಿತರಣೆಗೆ ಅನುಮತಿಯಿಲ್ಲದೇ ಸಾವಿರಗಟ್ಟಲೆ ಲೋಡು ಮರಳು ಸಂಗ್ರಹ ಮಾಡಿಟ್ಟಿದ್ದು ಬಾಕಿ ಯಾಗಿತ್ತು. ಇದೀಗ ಅನುಮತಿ ದೊರೆತ ಕಾರಣ ಜನ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

ಕುಂದಾಪುರ ತಾ|ನ ಗುಲ್ವಾಡಿ, ಕಾವ್ರಾಡಿ, ಬಳ್ಕೂರು ಗ್ರಾಮದ ಸರ್ವೇ ನಂ 180, 157, 189ರಲ್ಲಿನ 11.90 ಎಕರೆ ವಿಸ್ತೀರ್ಣ ಪ್ರದೇಶದ ಮರಳು ಬ್ಲಾಕ್‌ ಸಂಖ್ಯೆ 4 ರಲ್ಲಿ ಹಾಗೂ ಜಪ್ತಿ, ಹಳ್ನಾಡು ಗ್ರಾಮದ ಸರ್ವೆ ನಂ. 174, 56 ರಲ್ಲಿನ 5.70 ಎಕರೆ ವಿಸ್ತೀರ್ಣ ಪ್ರದೇಶದ ಮರಳು ಬ್ಲಾಕ್‌ ಸಂಖ್ಯೆ 6ರಲ್ಲಿ ಸಾರ್ವಜನಿಕರಿಗೆ, ಅಭಿವೃದ್ಧಿ ಕಾಮಗಾರಿಗಳಿಗೆ ಆ್ಯಪ್‌ ಮೂಲಕ ಪೂರೈಸಲು ಜಿಲ್ಲಾ ಮರಳು ಉಸ್ತುವಾರಿ ಸಮಿತಿಯಲ್ಲಿ ತೀರ್ಮಾನಿಸಲಾಗಿದೆ. ಈ ಮೊದಲು ನೇರ ಖರೀದಿ ಇತ್ತು. ದೂರುಗಳು ಬಂದ ಹಿನ್ನೆಲೆಯಲ್ಲಿ ಈ ವರ್ಷದಿಂದ ಆ್ಯಪ್‌ ಮೂಲಕ ನೀಡಲು ಈ ಮೂಲಕ ಪಾರದರ್ಶಕತೆ ಕಾಪಾಡಿಕೊಳ್ಳಲು ತೀರ್ಮಾನಿಸಲಾಗಿದೆ.

ಸಂಪರ್ಕ
ಮರಳನ್ನು ಉಡುಪಿ ಇ ಸ್ಯಾಂಡ್‌ ಆ್ಯಪ್‌ ಮುಖಾಂತರ ಪಡೆದುಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ, ಹಿರಿಯ ಭೂವಿಜ್ಞಾನಿಯವರ ಕಚೇರಿ, ಗಣಿ ಮತ್ತು ಭೂವಿಜ್ಞಾನ ಇಲಾಖೆ, ರಜತಾದ್ರಿ, ಎ ಬ್ಲಾಕ್‌, ಮೊದಲನೇ ಮಹಡಿ, ಮಣಿಪಾಲ, ಉಡುಪಿ ಜಿಲ್ಲೆ, ಉಡುಪಿ, ದೂರವಾಣಿ ಸಂಖ್ಯೆ: 0820-2572333, ಉಡುಪಿ ಇ ಸ್ಯಾಂಡ್‌ ಆ್ಯಪ್‌ ದೂರವಾಣಿ ಸಂಖ್ಯೆ 6366248666, 6366743888, 6366871888 ಯನ್ನು ಸಂಪರ್ಕಿಸಬಹುದಾಗಿದೆ ಎಂದು ಹಿರಿಯ ಭೂ ವಿಜ್ಞಾನಿ ಹಾಗೂ ಜಿಲ್ಲಾ ಮರಳು ಉಸ್ತುವಾರಿ ಸಮಿತಿ ಸದಸ್ಯ ಕಾರ್ಯದರ್ಶಿ ಅವರು ತಿಳಿಸಿದ್ದಾರೆ.

ಸುದಿನ ವರದಿ
ಮರಳು ಕೊರತೆ, ಸಂಗ್ರಹ ಇದ್ದರೂ ಮರಳು ನೀಡಲಾಗದ ಅಸಹಾಯಕತೆ, ಉಡುಪಿ ಬ್ರಹ್ಮಾವರ ದಿಂದ ಮರಳು ತರಿಸುವಾಗ ಆಗುವ ದುಬಾರಿ ದರ, ಬೈಂದೂರು ಹಾಗೂ ಕುಂದಾಪುರ ಜನ ಮರಳಿಗಾಗಿ ಪಡುತ್ತಿರುವ ಸಂಕಷ್ಟದ ಕುರಿತು “ಉದಯವಾಣಿ’ “ಸುದಿನ’ ವರದಿ ಮಾಡಿತ್ತು. ಶೀಘ್ರದಲ್ಲಿಯೇ ಮರಳು ದೊರೆಯಲಿದೆ ಎಂದು ಗಣಿ ಇಲಾಖೆ ಹೇಳಿಕೆ ಆಧರಿಸಿ ಪ್ರಕಟಿಸಲಾಗಿತ್ತು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.