ಪುನೀತ್‌ ಗೆ ಇಂದು ಜನ್ಮದಿನದ ಸಂಭ್ರಮ


Team Udayavani, Mar 17, 2021, 8:47 AM IST

pun-eeth

ಬೆಂಗಳೂರು: ನಟ ಪವರ್‌ಸ್ಟಾರ್‌ ಪುನೀತ್‌ ರಾಜಕುಮಾರ್‌ ಅವರಿಗೆ ಇಂದು (ಮಾ. 17) ಜನ್ಮದಿನದ ಸಂಭ್ರಮ. ಪ್ರತಿವರ್ಷ ಪುನೀತ್‌ ರಾಜಕುಮಾರ್‌ ಜನ್ಮದಿನವನ್ನು ಅವರ ಅಭಿಮಾನಿಗಳು ಅದ್ಧೂರಿಯಾಗಿ ನಡೆಸಿಕೊಂಡು ಬರುತ್ತಿದ್ದಾರೆ. ಆದರೆ ಕಳೆದ ವರ್ಷದಿಂದ ಪುನೀತ್‌ ರಾಜಕುಮಾರ್‌ ಅದ್ಧೂರಿ ಜನ್ಮದಿನಕ್ಕೆ ಕೊರೋನಾ ಅಡ್ಡಿಯಾಗಿದೆ.

ಕಳೆದ ವರ್ಷ ಮಾರ್ಚ್‌ ವೇಳೆಗೆ ಕೊರೋನಾ ಸೋಂಕು ದೇಶದೆಲ್ಲೆಡೆ ತೀವ್ರಗತಿಯಲ್ಲಿ ಏರಿಕೆಯಾಗುತ್ತಿದ್ದರಿಂದ, ಪುನೀತ್‌ ರಾಜಕುಮಾರ್‌ ತಮ್ಮ ಅಭಿಮಾನಿಗಳಿಗೆ ಮನೆಯಿಂದ ಹೊರಬಂದು ಸಾರ್ವಜನಿಕವಾಗಿ, ಅದ್ಧೂರಿ ಬರ್ತ್‌ಡೇ ಸಂಭ್ರಮ ಆಚರಿಸದಂತೆ ಮನವಿ ಮಾಡಿದ್ದರು. ಅದರಂತೆ ತಮ್ಮ ನೆಚ್ಚಿನ ನಟನ ಮನವಿಗೆ ಸ್ಪಂದಿಸಿದ್ದ ಅಪ್ಪು ಫ್ಯಾನ್ಸ್‌ ಕೂಡ ಸರಳವಾಗಿ, ಸೋಶಿಯಲ್‌ ಮಿಡಿಯಾಗಳನ್ನೇ ವೇದಿಕೆ ಮಾಡಿಕೊಂಡು ಪವರ್‌ಸ್ಟಾರ್‌ ಬರ್ತ್‌ಡೇ ಆಚರಿಸಿ ಸಂಭ್ರಮಿಸಿದ್ದರು.

ಇನ್ನು ಈ ಬಾರಿಯಾದರೂ ಅಪ್ಪು ಬರ್ತ್ ಡೇಯನ್ನು ಅದ್ಧೂರಿಯಾಗಿ ಆಚರಿಸಬೇಕು ಎಂದು ಅಭಿಮಾನಿಗಳು ಸಿದ್ಧತೆ ಮಾಡಿಕೊಳ್ಳುತ್ತಿರು ವಾಗಲೇ, ಕೊರೋನಾದ ಎರಡನೇ ಅಲೆಯ ಆತಂಕ ಎದುರಾಗಿದೆ.

ಇದನ್ನೂ ಓದಿ: ಮತ್ತೆ ರಾತ್ರಿ ಕರ್ಫ್ಯೂ ಜಪ : ಮುಂಬಯಿ, ಪುಣೆ ಬಳಿಕ ಮ.ಪ್ರದೇಶ, ಗುಜರಾತ್‌ನಲ್ಲೂ ಜಾರಿ

ಕಳೆದ ಕೆಲ ದಿನಗಳಿಂದ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ತೀವ್ರಗತಿಯಲ್ಲಿ ಏರಿಕೆಯಾಗುತ್ತಿದ್ದು, ಮತ್ತೂಮ್ಮೆ ಲಾಕ್‌ಡೌನ್‌ ಆತಂಕ ಎದುರಾಗಿದೆ. ಮತ್ತೊಂದೆಡೆ, ಸರ್ಕಾರ ಕೂಡ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿ ಮಾಡುತ್ತಿದೆ. ಪರಿಸ್ಥಿತಿ ಹೀಗಿರುವಾಗ, ಜನರ ಆರೋಗ್ಯ ಮತ್ತು ಸಾಮಾಜಿಕ ಹೊಣೆಗಾರಿಕೆ ಯಿಂದ ಈ ಬಾರಿಯೂ ಪುನೀತ್‌ ರಾಜಕುಮಾರ್‌ ತಮ್ಮ ಹುಟ್ಟುಹಬ್ಬವನ್ನು ಆದಷ್ಟು ಸರಳವಾಗಿ ಆಚರಿಸಲು ನಿರ್ಧರಿಸಿದ್ದಾರೆ.

ತಮ್ಮ ಜನ್ಮದಿನಕ್ಕೂ ಎರಡು ದಿನಗಳ ಮುಂಚೆಯೇ ಸೋಶಿಯಲ್‌ ಮೀಡಿಯಾದಲ್ಲಿ ಲೈವ್‌ ಬಂದಿರುವ ಪುನೀತ್‌ ರಾಜಕುಮಾರ್‌, “ಕಳೆದ ವರ್ಷದಂತೆ ಈ ಬಾರಿಯೂ ಸರಳವಾಗಿ ಹುಟ್ಟುಹಬ್ಬ ಆಚರಿಸಲು ನಿರ್ಧರಿಸಲಾಗಿದೆ. ಈ ಬಾರಿ ನನ್ನ ಜನ್ಮದಿನದಂದು ನಾನು ಮನೆಯಲ್ಲಿ ಇರುವುದಿಲ್ಲ. ಕುಟುಂಬ ದೊಂದಿಗೆ ದೇವಾಲಯಕ್ಕೆ ತೆರಳಲಿದ್ದೇನೆ.. ಹಾಗಾಗಿ ಯಾರೂ ಮನೆಗೆ ಬರುವುದು ಬೇಡ ಎಂದು ವಿನಂತಿ ಮಾಡಿಕೊಂಡಿದ್ದಾರೆ. ಇನ್ನು ಪುನೀತ್‌ ರಾಜಕುಮಾರ್‌ ಮನವಿಗೆ ಸ್ಪಂದಿಸಿರುವ ಅಭಿಮಾನಿಗಳು, ಈ ಬಾರಿಯೂ ತಮ್ಮ ನೆಚ್ಚಿನ ನಟನ ಜನ್ಮದಿನವನ್ನು ಸರಳವಾಗಿ ಆಚರಿಸಲು ಮುಂದಾಗಿದ್ದಾರೆ. ಬರ್ತ್ ಡೇ ಪ್ರಯುಕ್ತ ವಿಶೇಷ ಸಿಡಿಪಿ ವಿನ್ಯಾಸಗೊಳಿಸಿರುವ ಅಪ್ಪು ಫ್ಯಾನ್ಸ್‌, ಅದನ್ನು ಸೋಶಿಯಲ್‌ ಮೀಡಿಯಾಗಳಲ್ಲಿ ಹಂಚಿಕೊಳ್ಳುವ ಮೂಲಕ ಪವರ್‌ಸ್ಟಾರ್‌ಗೆ ಜನ್ಮದಿನದ ಶುಭಾಶಯ ಕೋರಲು ಮುಂದಾಗಿದ್ದಾರೆ.

ಅಲ್ಲದೆ ಪುನೀತ್‌ ಜನ್ಮದಿನದ ಪ್ರಯುಕ್ತ ಅಭಿಮಾನಿಗಳು ಸಸಿ ನೆಡುವುದು, ಬಡವರಿಗೆ ಆಹಾರ ಕಿಟ್‌ ವಿತರಣೆ, ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು-ಹಂಪಲು ವಿತರಣೆ, ಔಷಧಿ ವಿತರಣೆ, ಉಚಿತ ವೈದ್ಯಕೀಯ ತಪಾಸಣೆ, ಅನ್ನದಾನ ಹೀಗೆ ಒಂದಷ್ಟು ಸಾಮಾಜಿಕ ಕಾರ್ಯಗಳನ್ನು ಮಾಡಲು ತಯಾರಿ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ:  ಬಾಲಸುಟ್ಟ ಶಿವಸೇನೆ ಹುಲಿ : ಬೆಳಗಾವಿ ಕೇಂದ್ರಾಡಳಿತವಾಗದು ಎಂದು ಕೇಂದ್ರ ಸ್ಪಷ್ಟನೆ

ಟಾಪ್ ನ್ಯೂಸ್

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

1-24-friday

Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

IMD

IMD; ರಾಜ್ಯದ 19 ಜಿಲ್ಲೆಗಳಿಗೆ ಬಿಸಿ ಗಾಳಿ ಮುನ್ಸೂಚನೆ : ಬೆಂಗಳೂರಿನಲ್ಲಿ ಮಳೆ

Bommai BJP

Haveri; ಕಮಲ-ಕೈ ನಡುವೆ ನೇರ ಸ್ಪರ್ಧೆ: ಯಾರ ಕೊರಳಿಗೆ ಏಲಕ್ಕಿ ಹಾರ?

bjp-congress

Bagalkote: ಒಬ್ಬರಿಗೆ ಮೊದಲನೆಯದು, ಇನ್ನೊಬ್ಬರಿಗೆ ‘ಕಡೇ’ ಚುನಾವಣೆ!

vidhana-soudha

ಜೂ.3: ಶಿಕ್ಷಕ, ಪದವೀಧರ ಕ್ಷೇತ್ರಗಳಿಗೆ ಚುನಾವಣೆ : ಯಾವ ಕ್ಷೇತ್ರದಲ್ಲಿ ಯಾರಿದ್ದರು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rangasthala kannada movie

Kannada Cinema; ರಂಗಮಂಟಪ ಸುತ್ತ ‘ರಂಗಸ್ಥಳ’; ಹೊಸ ಚಿತ್ರದ ಟೈಟಲ್‌ ಲಾಂಚ್‌

jasti preethi kannada movie

Jasti Preethi; ಫೇಸ್ ಬುಕ್ ಪೋಸ್ಟ್ ಸಿನಿಮಾವಾಯಿತು..

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

1-24-friday

Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

19

Fraud: ಬೆಳಪು; ಹಣ ಪಡೆದು ಕಾಯಿಲ್‌ ನೀಡದೆ ವಂಚನೆ; ದೂರು ದಾಖಲು

CBI ಏಜೆನ್ಸಿ ನಮ್ಮ ನಿಯಂತ್ರಣದಲ್ಲಿಲ್ಲ: ಸುಪ್ರೀಂಗೆ ಕೇಂದ್ರ ಮಾಹಿತಿ

CBI ಏಜೆನ್ಸಿ ನಮ್ಮ ನಿಯಂತ್ರಣದಲ್ಲಿಲ್ಲ: ಸುಪ್ರೀಂಗೆ ಕೇಂದ್ರ ಮಾಹಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.