ಪ್ರತಿ ಸಮುದಾಯ ಕಾಯಕ ವೃತ್ತಿ ಗೌರವಿಸಲಿ

ಗುರುಗಳನ್ನು ಗೌರವದಿಂದ ಕಾಣುತ್ತ ಪೀಠದ ಅಭಿವೃದ್ಧಿಗೆ ಶ್ರಮಿಸಬೇಕು ಎಂದರು.

Team Udayavani, Mar 17, 2021, 6:19 PM IST

kayak

ವಾಡಿ: ಪ್ರತಿಯೊಂದು ಸಮುದಾಯ ತನ್ನ ಕಾಯಕ ವೃತ್ತಿ ಗೌರವಿಸಬೇಕು. ಕ್ಷೌರಿಕ ವೃತ್ತಿ ಕೀಳಲ್ಲ. ಅದು ಅತ್ಯಂತ ಶ್ರೇಷ್ಠ ಕಾರ್ಯವಾಗಿದೆ. ತಾವು ಹೀನರು, ಹಿಂದುಳಿದವರು, ಬಡವರು ಎಂಬ ಮನಸ್ಥಿತಿಯಿಂದ ಹೊರ ಬರಬೇಕು ಎಂದು ಮಾಜಿ ರಾಜ್ಯಸಭೆ ಸದಸ್ಯ, ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ-ಸಾಂಸ್ಕೃತಿಕ ಸಂಘದ ಅಧ್ಯಕ್ಷ ಬಸವರಾಜ ಪಾಟೀಲ ಸೇಡಂ ಹೇಳಿದರು.

ಕೊಂಚೂರು ಸವಿತಾ ಮಹರ್ಷಿ ಪೀಠದಲ್ಲಿ ಏರ್ಪಡಿಸಲಾಗಿದ್ದ ಸವಿತಾ ಮಹರ್ಷಿ ಜಯಂತಿ ಹಾಗೂ ಕೆರೆ ಲೋಕಾರ್ಪಣೆ ಸಮಾರಂಭದಲ್ಲಿ ಅವರು ಮಾತನಾಡಿದರು. ದೇವರು ಎಲ್ಲರಿಗೂ ಒಂದೇ ರೀತಿಯ ಆತ್ಮ ಕೊಟ್ಟಿದ್ದಾನೆ. ಬುದ್ಧ, ವಿವೇಕಾನಂದ, ಬಸವಣ್ಣನವರ ತಲೆಯಲ್ಲಿ ಏನು ಬುದ್ಧಿಯಿತ್ತೋ ಅದೇ ಬುದ್ಧಿ ಎಲ್ಲಾ ಜಾತಿ ಸಮುದಾಯದ ಮಕ್ಕಳ ತಲೆಯಲ್ಲಿರುತ್ತದೆ. ವಿಚಾರ ದೊಡ್ಡದಾದಾಗ ನಾವೂ ದೊಡ್ಡವರಾಗುತ್ತೇವೆ ಅಷ್ಟೇ ವ್ಯತ್ಯಾಸ.

ಆದ್ದರಿಂದ ಮಕ್ಕಳು ವಿದ್ಯಾವಂತರಾಗಿ, ಗುಣವಂತರಾಗಿ ಸವಿತಾ ಪೀಠದ ಕೀರ್ತಿ ಹೆಚ್ಚಿಸುವಂತಹ ವಾತಾವರಣ ಸೃಷ್ಟಿಸಲು ಸಮಾಜದ ಮುಖಂಡರು ಚಿಂತಿಸಬೇಕು. ಸವಿತಾ ಪೀಠಕ್ಕೆ ನೇಮಕಗೊಂಡಿರುವ ಸ್ವಾಮೀಜಿ ತರುಣರಾಗಿದ್ದಾರೆ. ಮಠದ ಪ್ರಗತಿ ಮತ್ತು ಸಮುದಾಯದ ಎಳ್ಗೆಗಾಗಿ ಹಲವು ಕನಸುಗಳನ್ನು ಕಟ್ಟಿಕೊಂಡು ರಾಜ್ಯ ಸುತ್ತುತ್ತಿದ್ದಾರೆ. ಗುರುಗಳನ್ನು ಗೌರವದಿಂದ ಕಾಣುತ್ತ ಪೀಠದ ಅಭಿವೃದ್ಧಿಗೆ ಶ್ರಮಿಸಬೇಕು ಎಂದರು.

ಮಾಜಿ ಸಚಿವ ಡಾ| ಶರಣಪ್ರಕಾಶ ಪಾಟೀಲ ಮಾತನಾಡಿ, ಸವಿತಾ ಸಮುದಾಯದ ಜನರು ತಮ್ಮ ಕಾಯಕದ ಮೇಲೆ ನಿಷ್ಠೆ ಹೊಂದಿದ್ದಾರೆ. ಕಾಯಕದ ಮೇಲೆ ವಿಶ್ವಾಸವಿಟ್ಟು ಶ್ರದ್ಧೆಯಿಂದ ಸಮಾಜದ ಸೇವೆ ಮಾಡುತ್ತಿದ್ದಾರೆ. ಹಡಪದ ಅಪ್ಪಣ್ಣನವರು ವಚನ ಸಾಹಿತ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಸವಿತಾ ಪೀಠದ ಅಭಿವೃದ್ಧಿಗಾಗಿ ಕಾಂಗ್ರೆಸ್‌ ಸರಕಾರದಿಂದ ಬಿಡುಗಡೆಯಾಗಿದ್ದ ಅನುದಾನ ಈಗ ಸ್ಥಗಿತಗೊಂಡಿದೆ. ಬಸವರಾಜ ಪಾಟೀಲ ಸೇಡಂ ಅವರು ರಾಜ್ಯ ಸರಕಾರಕ್ಕೆ ಪತ್ರ ಬರೆದು ಅನುದಾನ ಬಿಡುಗಡೆ ಮಾಡಿಸಿ ಪೀಠದ ಪ್ರಗತಿಗೆ ಸಹಕರಿಸಬೇಕು ಎಂದರು.

ಸಾನ್ನಿಧ್ಯ ವಹಿಸಿದ್ದ ಕೊಂಚೂರು ಸವಿತಾ ಮಹರ್ಷಿ ಪೀಠದ ಧರ್ಮಾಧಿಕಾರಿ ಶ್ರೀ ಧರಾನಂದ ಸರಸ್ವತಿ ಸ್ವಾಮೀಜಿ ಆಶೀರ್ವಚನ ನೀಡಿದರು. ಪಶು ಆರೋಗ್ಯ ಇಲಾಖೆ ತಾಲೂಕು ವೈದ್ಯಾಧಿಕಾರಿ ಡಾ| ಬಸಲಿಂಗಪ್ಪ ಡಿಗ್ಗಿ, ರಾಜ್ಯ ಸವಿತಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಎನ್‌. ನರೇಶಕುಮಾರ, ಸವಿತಾ ಸಮಾಜದ ರಾಜ್ಯಾಧ್ಯಕ್ಷೆ ಸೌಭಾಗ್ಯ, ಬಂಜಾರಾ ಸಮಾಜದ ರಾಜ್ಯ ಉಪಾಧ್ಯಕ್ಷ ವಿಠಲ ಜಾಧವ, ತಾಲೂಕು ಅಧ್ಯಕ್ಷ ರಾಜು ಶಿವಪುರ, ನಗರ ಅಧ್ಯಕ್ಷ ಬಸವರಾಜ ಪಗಡೀಕರ, ಕೆಪಿಎಸ್‌ಸಿ ಸದಸ್ಯ ಲಕ್ಷ್ಮೀನಾರಾಯಣ, ಹಿರಿಯರಾದ ಮಲ್ಲಣಗೌಡ ಪೊಲೀಸ್‌ ಪಾಟೀಲ ಬಳವಡಗಿ, ಸವಿತಾ ಸಮಾಜದ ಜಿಲ್ಲಾಧ್ಯಕ್ಷ ಸುಭಾಷ ಬಾಬಾನಿ,
ಸುದೀಂದ್ರ ದೇಶಪಾಂಡೆ, ಯಾದಗಿರಿ ಜಿಲ್ಲಾಧ್ಯಕ್ಷ ಅಪ್ಪಣ್ಣ ಚಿನ್ನಾಕರ, ಬಂಜಾರಾ ಸಮಾಜದ ಅಧ್ಯಕ್ಷ ಶಿವರಾಮ ಪವಾರ, ರಾಘವೇಂದ್ರ, ವೀರಣ್ಣ ಯಾರಿ, ಜ್ಯೋತಿಕುಮಾರ ರಾಯಚೂರು ಇದ್ದರು.

ಟಾಪ್ ನ್ಯೂಸ್

Man finds Rs 9,900 crore in his bank account

Bhadohi; ಯು.ಪಿ ವ್ಯಕ್ತಿಯ ಖಾತೆಗೆ ಬರೋಬ್ಬರಿ 9,900 ಕೋಟಿ ರೂ ಜಮೆ! ಆಗಿದ್ದೇನು?

Udupi Gitanjali Silk, Shantisagar Hotel founder Neere Bailur Govinda Naik passes away

Udupi ಗೀತಾಂಜಲಿ ಸಿಲ್ಕ್, ಶಾಂತಿಸಾಗರ್ ಹೊಟೇಲ್ ಸಂಸ್ಥಾಪಕ ನೀರೆ ಬೈಲೂರು ಗೋವಿಂದ ನಾಯಕ್ ನಿಧನ

Vijayapura ಎಪಿಎಂಸಿ ಮಾರುಕಟ್ಟೆಯಲ್ಲಿ ಯುವಕನ‌ ಹತ್ಯೆ; ಆಪ್ತರ ಮೇಲೆ ಶಂಕೆ

Vijayapura ಎಪಿಎಂಸಿ ಮಾರುಕಟ್ಟೆಯಲ್ಲಿ ಯುವಕನ‌ ಹತ್ಯೆ; ಆಪ್ತರ ಮೇಲೆ ಶಂಕೆ

twin terror attacks in Jammu and Kashmir

Jammu and Kashmir ಉಗ್ರ ದಾಳಿ; ಮಾಜಿ ಸರಪಂಚ್ ಸಾವು, ಇಬ್ಬರು ಪ್ರವಾಸಿಗರಿಗೆ ಗಾಯ

Man of the match ಪ್ರಶಸ್ತಿ ಸಿಗಬೇಕಾಗಿದ್ದು ನನಗಲ್ಲ…: ಫಾಫ್ ಡುಪ್ಲೆಸಿಸ್ ಹೀಗಂದಿದ್ಯಾಕೆ?

Man of the match ಪ್ರಶಸ್ತಿ ಸಿಗಬೇಕಾಗಿದ್ದು ನನಗಲ್ಲ…: ಫಾಫ್ ಡುಪ್ಲೆಸಿಸ್ ಹೀಗಂದಿದ್ಯಾಕೆ?

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

1-24-sunday

Daily Horoscope: ವಿರಾಮ ಆಚರಣೆಯ ನಡುವೆ ಹೊಸ ಕಾರ್ಯಗಳ ಪ್ರಸ್ತಾವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta

Marks card ಕೊಡಲು ಲಂಚ: ಶಿಕ್ಷಣ ಇಲಾಖೆ ಅಧಿಕಾರಿಗಳಿಬ್ಬರು ಲೋಕಾಯುಕ್ತ ಬಲೆಗೆ

Kalaburagi; Suresh Sajjan submits nomination as BJP rebel candidate

Kalaburagi; ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸುರೇಶ ಸಜ್ಜನ್ ನಾಮಪತ್ರ ಸಲ್ಲಿಕೆ

Kalaburagi: ಮರ್ಮಾಂಗಕ್ಕೆ ಕರೆಂಟ್ ಶಾಕ್ ನೀಡಿದ ಪ್ರಕರಣ: ಶೀಘ್ರ ಇನ್ನುಳಿದ ಆರೋಪಿಗಳ ಬಂಧನ

Kalaburagi: ಮರ್ಮಾಂಗಕ್ಕೆ ಕರೆಂಟ್ ಶಾಕ್ ನೀಡಿದ ಪ್ರಕರಣ: ಶೀಘ್ರ ಇನ್ನುಳಿದ ಆರೋಪಿಗಳ ಬಂಧನ

ಕಲಬುರಗಿ: ಎಂಎಲ್ಸಿ ಚುನಾವಣೆಯಲ್ಲಿ ಕೈತಪ್ಪಿದ ಟಿಕೆಟ್: ಬಿಜೆಪಿಯಲ್ಲಿ ಬಂಡಾಯ ಬಿಸಿ

ಎಂಎಲ್ಸಿ ಚುನಾವಣೆ: ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಮುಂದಾದ ಬಿಜೆಪಿ ನಾಯಕ…

2-kalburgi

Kalburgi: ಕರೆಂಟ್ ಶಾಕ್ ಪ್ರಕರಣ;ಖಂಡಿಸಿ ಹಿಂದೂ ಜಾಗೃತಿ ಸೇನೆಯಿಂದ ಸರಕಾರದ ಪ್ರತಿಕೃತಿ ದಹನ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

2-hunsur

Hunsur: ಹೆದ್ದಾರಿ ಸರ್ವೆ ಕಾರ್ಯ ತಡೆದು ರೈತರ ಆಕ್ರೋಶ

Man finds Rs 9,900 crore in his bank account

Bhadohi; ಯು.ಪಿ ವ್ಯಕ್ತಿಯ ಖಾತೆಗೆ ಬರೋಬ್ಬರಿ 9,900 ಕೋಟಿ ರೂ ಜಮೆ! ಆಗಿದ್ದೇನು?

Udupi Gitanjali Silk, Shantisagar Hotel founder Neere Bailur Govinda Naik passes away

Udupi ಗೀತಾಂಜಲಿ ಸಿಲ್ಕ್, ಶಾಂತಿಸಾಗರ್ ಹೊಟೇಲ್ ಸಂಸ್ಥಾಪಕ ನೀರೆ ಬೈಲೂರು ಗೋವಿಂದ ನಾಯಕ್ ನಿಧನ

Vijayapura ಎಪಿಎಂಸಿ ಮಾರುಕಟ್ಟೆಯಲ್ಲಿ ಯುವಕನ‌ ಹತ್ಯೆ; ಆಪ್ತರ ಮೇಲೆ ಶಂಕೆ

Vijayapura ಎಪಿಎಂಸಿ ಮಾರುಕಟ್ಟೆಯಲ್ಲಿ ಯುವಕನ‌ ಹತ್ಯೆ; ಆಪ್ತರ ಮೇಲೆ ಶಂಕೆ

twin terror attacks in Jammu and Kashmir

Jammu and Kashmir ಉಗ್ರ ದಾಳಿ; ಮಾಜಿ ಸರಪಂಚ್ ಸಾವು, ಇಬ್ಬರು ಪ್ರವಾಸಿಗರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.