ಸೊಸೆಯ ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ಕೊಡಲಿಯಿಂದ ಕೊಚ್ಚಿ ಅತ್ತೆಯ ಕೊಲೆ
Team Udayavani, Mar 17, 2021, 8:15 PM IST
ಮಂಡ್ಯ: ಕೆ.ಆರ್.ಪೇಟೆ ತಾಲೂಕಿನ ಶೀಳನೆರೆ ಹೋಬಳಿಯ ಹುಣಸನಹಳ್ಳಿ ಗ್ರಾಮದಲ್ಲಿ ಸೊಸೆಯ ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ವ್ಯಕ್ತಿಯೊಬ್ಬ ಮಹಿಳೆಯನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ.
ಹುಣಸನಹಳ್ಳಿ ಗ್ರಾಮದ ಕಾಳಯ್ಯ ಅವರ ಪತ್ನಿ ದೊಡ್ಡತಾಯಮ್ಮ(55) ಕೊಲೆಯಾದ ಮಹಿಳೆ. ಹುಣಸನಹಳ್ಳಿ ಗ್ರಾಮದ ಕುಮಾರ್ ಅವರ ಮಗ ವಾಸು(30) ಕೊಲೆ ಆರೋಪಿ.
ಮೃತ ದೊಡ್ಡತಾಯಮ್ಮ ಅವರ ಸೊಸೆಯೊಂದಿಗೆ ವಾಸು ಅನೈತಿಕ ಸಂಬಂಧ ಹೊಂದಿದ್ದ ಎನ್ನಲಾಗಿದೆ. ಇದನ್ನು ವಿರೋಧಿಸಿ ಪ್ರಶ್ನಿಸಿದ ದೊಡ್ಡತಾಯಮ್ಮ, ನಮ್ಮ ಮನೆಗೆ ಬರಬೇಡ ಎಂದು ಹಲವು ಬಾರಿ ಬುದ್ಧಿ ಹೇಳಿ ಕಳುಹಿಸಿದ್ದರಂತೆ. ಇದರಿಂದ ಕುಪಿತಗೊಂಡ ಆರೋಪಿ ವಾಸು ತನ್ನ ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿರುವ ದೊಡ್ಡತಾಯಮ್ಮ ಅವರನ್ನ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾನೆ.
ಇದನ್ನೂ ಓದಿ :ಕಳ್ಳರ ಕೈಚಳಕ: ಬ್ಯಾಂಕ್ಗೆ ಜಮೆ ಮಾಡಲು ತಂದಿದ್ದ ಹುಂಡಿಯ ಹಣವನ್ನೇ ಎಗರಿಸಿದ ಕಳ್ಳರು
ಘಟನಾ ಸ್ಥಳಕ್ಕೆ ಎಸ್ಪಿ ಡಾ.ಅಶ್ವಿನಿ, ಡಿವೈಎಸ್ಪಿ ನವೀನ್ಕುಮಾರ್, ಸಿಪಿಐ ಎಂ.ಕೆ.ದೀಪಕ್, ಸಬ್ಇನ್ಸ್ಪೆಕ್ಟರ್ ಬಿ.ಪಿ.ಬ್ಯಾಟರಾಯಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಘಟನೆ ಸಂಬಂಧ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ವಾಸು ಪತ್ತೆಗೆ ಪೊಲೀಸರು ಶೋಧ ಆರಂಭಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ