‘ಪರೀಕ್ಷಾ ಪೇ ಚರ್ಚಾ’ಗೆ ಆಯ್ಕೆ: ಆರ್ಡಿ ಶಾಲೆಯ ಅನುಷಾಗೆ ಅಭಿನಂದನೆ ಸಲ್ಲಿಸಿದ ಸುರೇಶ್ ಕುಮಾರ್
Team Udayavani, Mar 19, 2021, 2:55 PM IST
ಕುಂದಾಪುರ: ಪ್ರಧಾನಿ ನರೇಂದ್ರ ಮೋದಿ ನಡೆಸಿಕೊಡುವ ‘ಪರೀಕ್ಷಾ ಪೇ ಚರ್ಚಾ’ ಸಂವಾದ ಕಾರ್ಯಕ್ರಮಕ್ಕೆ ಆಯ್ಕೆಯಾದ ಉಡುಪಿ ಜಿಲ್ಲೆಯ ಆರ್ಡಿಯ ಚಾರ್ಮಕ್ಕಿ ನಾರಾಯಣ ಶೆಟ್ಟಿ ಸ್ಮಾರಕ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿನಿ ಅನುಷಾಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಕರೆ ಮಾಡಿ ಅಭಿನಂದನೆ ಸಲ್ಲಿಸಿದರು.
ಅನುಷಾಗೆ ಕರೆ ಮಾಡಿದ ಸಚಿವರು, ಪ್ರಧಾನಿಯವರ ಜೊತೆ ಮಾತನಾಡಲು ನೀನು ಆಯ್ಕೆಯಾಗಿರುವುದು ನಮಗೆ ಖುಷಿಯಾಗಿದೆ. ನೀನು ಶಾಲೆಗೆ ಮತ್ತು ರಾಜ್ಯಕ್ಕೆ ಹೆಮ್ಮೆ ತರಬೇಕು ಎಂದು ಹೇಳಿದರು.
ಇದನ್ನೂ ಓದಿ:ಪ್ರಧಾನಿ “ಪರೀಕ್ಷಾ ಪೇ ಚರ್ಚಾ’ : ಚಾರಮಕ್ಕಿ ಶಾಲೆಯ ಅನುಷಾ ಆಯ್ಕೆ
‘ಪರೀಕ್ಷಾ ಪೇ ಚರ್ಚಾ’ ಗೆ ದೇಶಾದ್ಯಂತ ಆಯ್ಕೆಯಾಗಿರುವ ಮೂವತ್ತು ಶಾಲೆಗಳಲ್ಲಿ ಆರ್ಡಿ- ಅಲ್ಬಾಡಿ ಶಾಲೆಯೂ ಒಂದು. ಕರ್ನಾಟಕದಿಂದ ಬೆಂಗಳೂರಿನ ಒಂದು ಮತ್ತು ಆರ್ಡಿ ಶಾಲೆ ಮಾತ್ರ ಆಯ್ಕೆಯಾಗಿವೆ.
ಗುಡ್ಡೆಯಂಗಡಿ ನಿವಾಸಿ ಕೃಷ್ಣ ಕುಲಾಲ್-ಜಯಲಕ್ಷ್ಮೀ ದಂಪತಿಯ ಪುತ್ರಿ ಅನುಷಾ ಅಲ್ಬಾಡಿ -ಆರ್ಡಿ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ. ಈಕೆ ಭವಿಷ್ಯದಲ್ಲಿ ಎಂಜಿನಿಯರಿಂಗ್ ಮಾಡುವ ಕನಸು ಹೊಂದಿದ್ದಾರೆ.
ಇದನ್ನೂ ಓದಿ: ಹೆಚ್ಚುವರಿ ಶುಲ್ಕಕ್ಕೆ ಒತ್ತಡ: ಸಂವೇದನೆಯ ವರ್ತನೆ ಇಂದಿನ ಅಗತ್ಯ ಎಂದ ಸಚಿವ ಸುರೇಶ್ ಕುಮಾರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
D.K,Udupi ಸಿಎನ್ಜಿ ಇಂಧನ ಕೊರತೆ: ಬಂಕ್ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು
Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ
Kundapura ಕಾರು ಡಿವೈಡರ್ ಏರಿ ಪಲ್ಟಿ; ಮೂವರಿಗೆ ಗಾಯ
MUST WATCH
ಹೊಸ ಸೇರ್ಪಡೆ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ