ತೃತೀಯ ಲಿಂಗಿಗಳಿಗೆ ಮೀಸಲಾತಿ ನೀಡಿ


Team Udayavani, Mar 19, 2021, 6:22 PM IST

ghgfhghh

ಕಲಬುರಗಿ : ಸಮಾಜ ಅಗೌರವದಿಂದ ಕಾಣುವ ತೃತೀಯ ಲಿಂಗಿಗಳಿಗೆ ಹೆಚ್ಚಿನ ಅವಕಾಶ ದೊರೆಯಲು ಸರ್ಕಾರ ಮೀಸಲಾತಿ ಕಲ್ಪಿಸಬೇಕೆಂದು ಗುಲಬರ್ಗಾ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಸಂಸ್ಥೆ ನಿರ್ದೇಶಕ ಪ್ರೊ|ಎಚ್‌.ಟಿ. ಪೋತೆ ಅಭಿಪ್ರಾಯ ವ್ಯಕ್ತಪಡಿಸಿದರು.

ಗುವಿವಿ ಕನ್ನಡ ಅಧ್ಯಯನ ಸಂಸ್ಥೆಯ ಹರಿಹರ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷರಾದ ಪದ್ಮಶ್ರೀ ಪುರಸ್ಕೃತೆ ಮಂಜಮ್ಮ ಜೋಗತಿ ಅವರ ಸನ್ಮಾನ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಮಾಜದ ಕಟ್ಟಕಡೆಯ ಮತ್ತು ಅವಕಾಶ ವಂಚಿತರು, ನೊಂದವರಿಗೆ ಮೀಸಲಾತಿ ಸೌಲಭ್ಯ ಒದಗಿಸುವ ಮೂಲಕ ಅವರನ್ನು ಮೇಲೆತ್ತುವ ಕೆಲಸ ಆಗಬೇಕಿದೆ. ಆದರೆ, ಶಕ್ತರು ಸಹ ಮೀಸಲಾತಿ ಪಡೆಯಲು ಹಾಗೂ ಅವರಿಗೆ ಮೀಸಲಾತಿ ಕಲ್ಪಿಸಲು ಹೊರಟಿರುವುದು ವಿಷಾದನೀಯ ಸಂಗತಿಯಾಗಿದೆ ಎಂದರು.

ವಿಶ್ವವಿದ್ಯಾಲಯಗಳು ಸಮಾಜದ ಕಟ್ಟಕಡೆಯ ಮನುಷ್ಯನ ಬಳಿ ಹೋಗುವ ಕಾರ್ಯವಾಗಬೇಕು. ಇಂತಹ ಸದಾಶಯದಿಂದಲೇ ಗುಲಬರ್ಗಾ ವಿಶ್ವವಿದ್ಯಾಲಯ ಸಾಲುಮರದ ತಿಮ್ಮಕ್ಕನ ಕುರಿತ ಪಠ್ಯ ಅಳವಡಿಸಿತ್ತು. ಈಗ ಮಂಜಮ್ಮ ಜೋಗತಿ ಆತ್ಮಕಥೆ ಅಳವಡಿಸಲು ನಿರ್ಧರಿಸಲಾಗಿದೆ. ಸಾಹಿತ್ಯ ಓದಿ ವ್ಯಕ್ತಿಯನ್ನು ಗುಣದಿಂದ ಅಳೆಯಬೇಕು, ಜಾತಿಯಿಂದಲ್ಲ. ಜಾತಿ, ಧರ್ಮ ಬದಿಗಿಟ್ಟು ಸಾಹಿತ್ಯ ಓದಬೇಕೆಂದು ಪ್ರತಿಪಾದಿಸಿದರು. ಕಾರ್ಯಕ್ರಮ ಉದ್ಘಾಟಿಸಿದ ಕುಲಪತಿ ಪ್ರೊ| ದಯಾನಂದ ಅಗಸರ, ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷೆ ಮಂಜಮ್ಮ ಜೋಗತಿ ಆತ್ಮಕಥೆಯನ್ನು ಬಿಎಸ್ಸಿ 4ನೇ ಸೆಮಿಸ್ಟರ್‌ಗೆ ಪಠ್ಯವಾಗಿ ಅಳವಡಿಸಲಾಗುತ್ತಿದೆ. ಇದಕ್ಕೆ ವಿವಿಯ ಎಲ್ಲರೂ ಒಮ್ಮತದ ಸಹಮತ ವ್ಯಕ್ತಪಡಿಸಿದ್ದಾರೆ ಎಂದು ತಿಳಿಸಿದರು.

ಮಂಜಮ್ಮ ಜೋಗತಿ ಅವರಂತವರಿಗೆ ಕೇಂದ್ರ ಸರ್ಕಾರ ಪದ್ಮಶ್ರೀ ಪ್ರಶಸ್ತಿ ನೀಡುವ ಮೂಲಕ ತನ್ನ ಗೌರವ ಹೆಚ್ಚಿಸಿಕೊಂಡರೆ, ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷರನ್ನಾಗಿ ನೇಮಿಸುವ ಮೂಲಕ ರಾಜ್ಯ ಸರ್ಕಾರ ತನ್ನ ಗೌರವ ಹೆಚ್ಚಿಸಿಕೊಂಡಿದೆ ಎಂದರು. ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಅತಿಥಿ ಸಹಾಯಕ ಪ್ರಾಧ್ಯಾಪಕ ಡಾ| ಅರುಣ ಜೋಳದ ಕೂಡ್ಲಿಗಿ ಮಾತನಾಡಿ, ಮಂಜಮ್ಮ ಜೋಗತಿಗೆ ಪದ್ಮಶ್ರೀ ಪ್ರಶಸ್ತಿ ದೊರೆಯುವ ಮೂಲಕ ಜೋಗತಿ ಸಮುದಾಯಕ್ಕೆ ನ್ಯಾಯ ದೊರೆತಂತಾಗಿದೆ ಎಂದರು. ಮಂಜಮ್ಮನಲ್ಲಿನ ಜಾತ್ಯತೀತ ಮನೋಭಾವ ಆಕೆಯನ್ನು ಎತ್ತರಕ್ಕೆ ಕೊಂಡೊಯ್ಯಲು ಸಾಧ್ಯವಾಯಿತು. ತನ್ನೊಂದಿಗೆ ಇಡೀ ತಂಡವನ್ನೇ ಕೊಂಡೊಯ್ಯುತ್ತಾರೆ. ಜಾನಪದ ಅಕಾಡೆಮಿಗೆ ಸದಸ್ಯರಾದವರು, ಈಗ ಅಧ್ಯಕ್ಷರಾಗಿದ್ದಾರೆ. ಈ ಮೂಲಕ ಅಕಾಡೆಮಿ ತನ್ನನ್ನು ತಾನು ಗೌರವಿಸಿಕೊಂಡಿದೆ ಎಂದು ಹೇಳಿದರು.

ಗಂಡು ಮಗುವಿನಲ್ಲಿನ ಹೆಣ್ಣಿನ ಲಕ್ಷಣ ಗೋಚರಿಸಿತ್ತು. ಮನೆ, ಶಾಲೆ, ಸಮಾಜದಲ್ಲಿ ಅನೇಕ ಹಂತದಲ್ಲಿ ಮಂಜಮ್ಮ ನೋವು ಅನುಭವಿಸಿ, ಶಿಕ್ಷಣ ಕೈಬಿಡಬೇಕಾದ ಅನಿವಾರ್ಯತೆ ಎದುರಾಯಿತು. ಒಂದು ಹಂತದಲ್ಲಿ ಮಂಜಮ್ಮ ಆತ್ಮಹತ್ಯೆಗೂ ಯತ್ನಿಸಿದ ಪ್ರಸಂಗ ನಡೆದಿತ್ತು. ನಂತರ ಜೋಗತಿ ಪರಂಪರೆಗೆ ಅಂಟಿಕೊಂಡು, ಹಾದಿ, ಬೀದಿಗೆ ಸೀಮಿತವಾಗಿದ್ದ ಕಲೆಯನ್ನು ವೇದಿಕೆಗೆ ತಂದರು ಎಂದು ಆತ್ಮಕಥನವನ್ನು ಬಿಡಿಸಿಟ್ಟರು. ಸನ್ಮಾನ ಸ್ವೀಕರಿಸಿದ ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷೆ ಮಂಜಮ್ಮ ಜೋಗತಿ ಮಾತನಾಡಿದರು. ಮೌಲ್ಯಮಾಪನ ಕುಲಸಚಿವ ಡಾ| ಸೋನಾರ ನಂದಪ್ಪ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

1-24-sunday

Daily Horoscope: ವಿರಾಮ ಆಚರಣೆಯ ನಡುವೆ ಹೊಸ ಕಾರ್ಯಗಳ ಪ್ರಸ್ತಾವ

Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!

Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!

ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !

ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !

ನಾನು 100 ಕೋ.ರೂ. ಆಮಿಷ ಒಡ್ಡಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಿ: ಡಿಕೆಶಿ ಸವಾಲು

ನಾನು 100 ಕೋ.ರೂ. ಆಮಿಷ ಒಡ್ಡಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಿ: ಡಿಕೆಶಿ ಸವಾಲು

1-qweewq

IPL ಇಂದು ಲೀಗ್‌ ಪಂದ್ಯಗಳಿಗೆ ತೆರೆ: KKR vs RR ಟೇಬಲ್‌ ಟಾಪರ್‌ಗಳ ಸೆಣಸಾಟ

Siddaramaiah ಸರಕಾರಕ್ಕೆ ನಾಳೆಗೆ 1ವರ್ಷ; ಸಂಭ್ರಮಾಚರಣೆಗೆ ಚುನಾವಣೆ ನೀತಿ ಸಂಹಿತೆ ಅಡ್ಡಿ

Siddaramaiah ಸರಕಾರಕ್ಕೆ ನಾಳೆಗೆ 1ವರ್ಷ; ಸಂಭ್ರಮಾಚರಣೆಗೆ ಚುನಾವಣೆ ನೀತಿ ಸಂಹಿತೆ ಅಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !

ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !

ನಾನು 100 ಕೋ.ರೂ. ಆಮಿಷ ಒಡ್ಡಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಿ: ಡಿಕೆಶಿ ಸವಾಲು

ನಾನು 100 ಕೋ.ರೂ. ಆಮಿಷ ಒಡ್ಡಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಿ: ಡಿಕೆಶಿ ಸವಾಲು

Siddaramaiah ಸರಕಾರಕ್ಕೆ ನಾಳೆಗೆ 1ವರ್ಷ; ಸಂಭ್ರಮಾಚರಣೆಗೆ ಚುನಾವಣೆ ನೀತಿ ಸಂಹಿತೆ ಅಡ್ಡಿ

Siddaramaiah ಸರಕಾರಕ್ಕೆ ನಾಳೆಗೆ 1ವರ್ಷ; ಸಂಭ್ರಮಾಚರಣೆಗೆ ಚುನಾವಣೆ ನೀತಿ ಸಂಹಿತೆ ಅಡ್ಡಿ

Prajwal Revanna ಪತ್ತೆಗೆ ವಿತ್ತ ಅಸ್ತ್ರ ! ಬ್ಯಾಂಕ್‌ ವ್ಯವಹಾರ ಪರಿಶೀಲನೆ

Prajwal Revanna ಪತ್ತೆಗೆ ವಿತ್ತ ಅಸ್ತ್ರ ! ಬ್ಯಾಂಕ್‌ ವ್ಯವಹಾರ ಪರಿಶೀಲನೆ

Eshwara Khandre 5 ಕೋಟಿ ಸಸಿಗಳ ಪೈಕಿ ಎಷ್ಟು ಬದುಕಿವೆ? ವರದಿ ಕೊಡಿ

Eshwara Khandre 5 ಕೋಟಿ ಸಸಿಗಳ ಪೈಕಿ ಎಷ್ಟು ಬದುಕಿವೆ? ವರದಿ ಕೊಡಿ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

1-24-sunday

Daily Horoscope: ವಿರಾಮ ಆಚರಣೆಯ ನಡುವೆ ಹೊಸ ಕಾರ್ಯಗಳ ಪ್ರಸ್ತಾವ

Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!

Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!

ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !

ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !

ನಾನು 100 ಕೋ.ರೂ. ಆಮಿಷ ಒಡ್ಡಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಿ: ಡಿಕೆಶಿ ಸವಾಲು

ನಾನು 100 ಕೋ.ರೂ. ಆಮಿಷ ಒಡ್ಡಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಿ: ಡಿಕೆಶಿ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.