ಕೋರಂ ಕೊರತೆ: ನೆಲ್ಯಾಡಿ ಗ್ರಾ.ಪಂ.ಸಭೆ ಮುಂದೂಡಿಕೆ


Team Udayavani, Mar 20, 2021, 4:00 AM IST

Adjournment of the Nelady Gramapanchayath meeting

ಉಪ್ಪಿನಂಗಡಿ: ಕೋರಂ ಕೊರತೆಯಿಂದಾಗಿ ನೆಲ್ಯಾಡಿ ಗ್ರಾಮ ಪಂಚಾಯತ್‌ನ ನೂತನ ಆಡಳಿತ ಮಂಡಳಿಯ ಪ್ರಥಮ ಸಾಮಾನ್ಯ ಸಭೆಯು ಮುಂದೂಡಿಕೆಯಾಗಿದೆ.

ಗ್ರಾ. ಪಂ. ಅಧ್ಯಕ್ಷೆ ಚೇತನಾ ಅವರ ಅಧ್ಯಕ್ಷತೆಯಲ್ಲಿ ಗ್ರಾ. ಪಂ. ಸಭಾಂಗಣದಲ್ಲಿ ಸಭೆ ಆರಂಭಗೊಂಡಿತು. ಅಧ್ಯಕ್ಷೆ ಚೇತನಾ, ಸದಸ್ಯರಾದ ರವಿಪ್ರಸಾದ್‌ ಶೆಟ್ಟಿ, ಪ್ರಕಾಶ್‌ ಪೂಜಾರಿ, ಆನಂದ ಪಿಲವೂರು, ಶ್ರೀಲತಾ, ಜಯಂತಿ ಸೇರಿ ಆರು ಮಂದಿ ಸದಸ್ಯರು ಸಭೆಗೆ ಹಾಜರಾಗಿದ್ದು ಉಪಾಧ್ಯಕ್ಷ ಅಬ್ದುಲ್‌ ಜಬ್ಟಾರ್‌, ಸದಸ್ಯರಾದ ಜಯಾನಂದ ಬಂಟ್ರಿಯಾಲ್‌, ಮಹಮ್ಮದ್‌ ಇಕ್ಬಾಲ್‌, ರೇಷ್ಮಾಶಶಿ, ಉಷಾ ಜೋಯಿ ಜಯಲಕ್ಷ್ಮೀ ಪ್ರಸಾದ್‌, ಯಾಕೂಬ್‌ ಯಾನೆ ಸಲಾಂ ಬಿಲಾಲ್‌, ಪುಷ್ಪಾ ಪಡುಬೆಟ್ಟು ಸಹಿತ 8 ಮಂದಿ ಸದಸ್ಯರು ಸಭೆಗೆ ಗೈರು ಹಾಜರಿಯಾಗಿದ್ದರು.

ಸಭೆ ನಡೆಸಲು ಕೋರಂ ಕೊರತೆ ಉಂಟಾದ ಹಿನ್ನೆಲೆಯಲ್ಲಿ ಅಧ್ಯಕ್ಷರು ಆರಂಭದಲ್ಲಿ ಅರ್ಧ ತಾಸು ಸಭೆ ಮುಂದೂಡಿದರು. ಬಳಿಕವೂ ಸಭೆ ನಡೆಸಲು ಕೋರಂ ಕೊರತೆ ಉಂಟಾದ ಹಿನ್ನೆಲೆಯಲ್ಲಿ ಸಭೆ ಮುಂದೂಡಿದ ಅಧ್ಯಕ್ಷರು ಮಾ. 26ಕ್ಕೆ ಮತ್ತೆ ಸಭೆ ನಡೆಸುವುದಾಗಿ ಹೇಳಿದರು. ಪಿಡಿಒ ಮಂಜುಳ ಎನ್‌. ಸ್ವಾಗತಿಸಿದರು.

ಅಡ್ಡ ಮತದಾನದ ಪರಿಣಾಮ

14 ಸದಸ್ಯ ಬಲದ ನೆಲ್ಯಾಡಿ ಗ್ರಾ.ಪಂ.ನಲ್ಲಿ 8 ಕಾಂಗ್ರೆಸ್‌ ಬೆಂಬಲಿತ ಹಾಗೂ 6 ಬಿಜೆಪಿ ಬೆಂಬಲಿತ ಸದಸ್ಯರು ಚುನಾಯಿತರಾಗಿದ್ದರು. ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಸಂದರ್ಭದಲ್ಲಿ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್‌ ಬೆಂಬಲಿತ ಸದಸ್ಯರೋರ್ವರು ಅಡ್ಡ ಮತದಾನ ಮಾಡಿದ್ದರಿಂದ ಅಧ್ಯಕ್ಷ ಸ್ಥಾನದ ಅಭ್ಯರ್ಥಿಗಳಿಬ್ಬರು ಸಮಾನ ಮತ ಪಡೆದುಕೊಂಡಿದ್ದರು. ಬಳಿಕ ಚೀಟಿ ಎತ್ತುವಿಕೆಯಲ್ಲಿ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಚೇತನಾ ಅವರು ಆಯ್ಕೆ ಗೊಂಡಿದ್ದರು. ಬಹುಮತವಿದ್ದರೂ ಅಧ್ಯಕ್ಷ ಸ್ಥಾನ ವಂಚಿತಗೊಂಡಿರುವ ಹಿನ್ನೆ°ಲೆಯಲ್ಲಿ ಕಾಂಗ್ರೆಸ್‌ ಬೆಂಬಲಿತ 8 ಸದಸ್ಯರು ಸಭೆಗೆ ಗೈರು ಹಾಜರಿಯಾಗಿದ್ದಾರೆ ಎಂದು ಹೇಳಲಾಗಿದೆ.

ಟಾಪ್ ನ್ಯೂಸ್

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.