ತಾವರೆಕೆರೆಯಲ್ಲಿ ತಹಶೀಲ್ದಾರ್‌ ಗ್ರಾಮವಾಸ್ತವ್ಯ

ಗ್ರಾಪಂನಿಂದ ರಸ್ತೆ ಬದಿ, ಚರಂಡಿಗಳ ಸ್ವತ್ಛತೆ ! ಶುದ್ಧ ನೀರಿನ ಘಟಕ, ಶಾಲೆ, ಅಂಗನವಾಡಿ ಕಟ್ಟಡ ಅಗತ್ಯ

Team Udayavani, Mar 20, 2021, 5:22 PM IST

fghe

ಚನ್ನರಾಯಪಟ್ಟಣ/ನುಗ್ಗೇಹಳ್ಳಿ: ತಾಲೂಕಿನ ನುಗ್ಗೇ ಹಳ್ಳಿ ಹೋಬಳಿ ತಾವರೆಕೆರೆ ಗ್ರಾಮದಲ್ಲಿ ಮಾ.20ರಂದು ನಡೆಯಲಿರುವ ಜಿಲ್ಲಾಧಿಕಾರಿ ನಡೆ ಗ್ರಾಮದ ಕಡೆ ಕಾರ್ಯಕ್ರಮದಡಿ ತಹಶೀಲ್ದಾರ್‌ ಗ್ರಾಮ ವಾಸ್ತವ್ಯ ಮಾಡ ಲಿದ್ದು, ತರಾತುರಿಯಲ್ಲಿ ಗ್ರಾಮ ಸ್ವತ್ಛಗೊಳಿಸಲಾಗಿದೆ.

ಸರ್ಕಾರಿ ಶಾಲೆ ಸಮೀಪ ಆದು ಹೋಗಿರುವ ಚರಂಡಿ ಹಲವು ದಿನಗಳಿಂದ ಕಸ, ಹೂಳು, ಗಿಡಗಂಟಿ, ಹುಲ್ಲು ಬೆಳೆದು ಕೊಳಚೆ ನೀರು ಹರಿಯದೇ ದುರ್ವಾಸನೆ ಬರುತ್ತಿತ್ತು. ತಾಲೂಕು ಆಡಳಿತವು ಗ್ರಾಮದಲ್ಲಿ ಒಂದು ದಿನ ವಾಸ್ತವ್ಯ ಹೂಡುವುದರಿಂದ, ಮುಜುಗರದಿಂದ ತಪ್ಪಿಸಿಕೊಳ್ಳಲು ಸ್ಥಳೀಯ ಗ್ರಾಪಂ ಚರಂಡಿ ಹಾಗೂ ರಸ್ತೆ ಅಕ್ಕಪಕ್ಕದಲ್ಲಿ ಬೆಳೆದಿದ್ದ ಗಡಿಗಂಟಿ ಸ್ವತ್ಛ ಮಾಡಿಸಿದೆ.

ಬರಿಗಾಲಿನಲ್ಲೇ ಸ್ವತ್ಛತೆ: ಚರಂಡಿ ಒಳಗೆ ಸಾಕಷ್ಟು ಮಣ್ಣು ತುಂಬಿಕೊಂಡು ದುರ್ನಾತ ಬೀರುತ್ತಿದೆ. ಇದನ್ನು ಸ್ವತ್ಛ ಮಾಡಲು ಕಾರ್ಮಿಕರಿಗೆ ಅಗತ್ಯ ಪರಿಕರ ನೀಡಿಲ್ಲ, ಬರಿಗಾಲಿನಲ್ಲಿ ಚರಂಡಿಗೆ ಇಳಿಸಲಾಗಿದೆ. ಅಲ್ಲದೆ, ಕೈಗೆ ಗೌಸ್‌, ಮುಖಕ್ಕೆ ಮಾಸ್ಕ್ ನೀಡದೆ, ಪಿಡಿಒ ಅವರೇ ಮುಂದೆ ನಿಂತು ಚರಂಡಿ ಸ್ವತ್ಛ ಮಾಡಿಸಿದರು. ಕೊಳಚೆ ನೀರಿನಲ್ಲಿ ನಿಂತು ಕಾರ್ಮಿಕರು ಕೆಲಸ ಮಾಡುವುದರಿಂದ ಅವರಿಗೆ ಚರ್ಮ ರೋಗಗಳು ಬರುವ ಸಂಭವವಿರುತ್ತದೆ ಎಂಬ ಪರಿವಿಲ್ಲದೆ ಈ ರೀತಿ ಮಾಡುವುದು ಎಷ್ಟು ಸರಿ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು.

ಶುದ್ಧ ಕುಡಿಯುವ ನೀರಿನ ಘಟಕ ಬೇಕು: ಗ್ರಾಮದಲ್ಲಿ 150ಕ್ಕೂ ಹೆಚ್ಚು ಮನೆಗಳಿದ್ದು, 500 ಆಸು ಪಾಸಿನಷ್ಟು ಮಂದಿ ವಾಸವಾಗಿರುವ ತಾವರೆಕೆರೆ ಗ್ರಾಮಕ್ಕೆ ಶುದ್ಧ ಕುಡಿಯುವ ನೀರಿನ ಘಟಕ ಅವಶ್ಯವಿದೆ. ಗ್ರಾಮಕ್ಕೆ ಕೂಗಳತೆ ದೂರದಲ್ಲಿನ ನೆಟ್ಟೇಕರೆ ಗ್ರಾಮಸ್ಥರಿಗೂ ಇದರಿಂದ ಸಹಕಾರಿ ಆಗಲಿದೆ. ಈ ಬಗ್ಗೆ ಸಂಬಂಧಪಟ್ಟವರು ಗಮನಕ್ಕೆ ತಂದರೂ ಯಾವುದೇ ಪ್ರಯೋಜವಾಗಿಲ್ಲ, ಗ್ರಾಮ ವಾಸ್ತವ್ಯದಲ್ಲಾದರೂ ಇದು ನೆರವೇರಲಿದೆ ಎಂದು ಗ್ರಾಮಸ್ಥರು ಚಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ.

ಸಕಾಲಕ್ಕೆ ಬಸ್‌ ಇಲ್ಲ: ಗ್ರಾಮದಿಂದ ನುಗ್ಗೇಹಳ್ಳಿ ಹೋಬಳಿ ಕೇಂದ್ರ ಹಾಗೂ ಚನ್ನರಾಯಪಟ್ಟಣ ಸೇರಿ ವಿವಿಧ ಕಡೆಗಳಿಗೆ 50ಕ್ಕೂ ಹೆಚ್ಚು ಮಂದಿ ಶಾಲಾ ಕಾಲೇಜಿಗೆ ತೆರಳುತ್ತಾರೆ. ಅವರಿಗೆ ಸಕಾಲಕ್ಕೆ ಬಸ್‌ ಬರುತ್ತಿಲ್ಲ, ಗ್ರಾಮಕ್ಕೆ 9.30 ಗಂಟೆಗೆ ಆಗಮಿಸುವುದರಿಂದ ವಿದ್ಯಾರ್ಥಿಗಳ ಸಮಯಕ್ಕೆ ಇದು ಹೊಂದಾಣಿಕೆ ಆಗುತ್ತಿಲ್ಲ, ಕನಿಷ್ಠ ಎಂಟು ಗಂಟೆಗೆ ಬಸ್‌ ಬಂದರೆ ಎಲ್ಲರಿಗೂ ಅನುಕೂಲ ಆಗುತ್ತದೆ. ಇಲ್ಲದೆ ಹೋದರೆ ಗ್ರಾಮದಿಂದ ನಾಲ್ಕೈದು ಕಿ.ಮೀ.ವರೆಗೆ ಪಾದಯಾತ್ರೆ ಮಾಡಿ ನಂತರ ಬಸ್‌ ಏರಬೇಕಾದ ಪರಿಸ್ಥಿತಿ ವಿದ್ಯಾರ್ಥಿಗಳದ್ದಾಗಿದೆ.

ಅಂಗನವಾಡಿ, ಶಾಲಾ ಕೊಠಡಿ ಅವಶ್ಯಕ: ಗ್ರಾಮಕ್ಕೆ 30 ವರ್ಷದ ಹಿಂದೆ ಅಂಗನವಾಡಿ ಕಟ್ಟಡ ನಿರ್ಮಾಣ ಮಾಡಿದ್ದು ಅದು ಶಿಥಿಲವಾಗಿದೆ. ಮಳೆ ಬಂದರೆ ನೀರು ಸೋರುತ್ತಿದೆ. ಎರಡು ಕೊಠಡಿಯಲ್ಲಿ ಒಂದರಿಂದ 5ನೇ ತರಗತಿವರೆಗೆ 20 ಮಕ್ಕಳು ವ್ಯಾಸಂಗ ಮಾಡುತ್ತಿದ್ದಾರೆ. ಅದರಲ್ಲಿ ಒಂದು ಕೊಠಡಿ ಒಳಗೆ ನೀರಿನ ಟ್ಯಾಂಕ್‌ ಇರಿಸಿದ್ದು, ಜಿಡ್ಡುಗಟ್ಟಿದೆ. ಮೊತ್ತೂಂದು ಕೊಠಡಿ ಶಿಥಿಲವಾಗಿದೆ. ಗೋಡೆ ಬಿರುಕು ಬಿಟ್ಟು ಬೀಳುವ ಹಂತದಲ್ಲಿದೆ. ನೂತನ ಕೊಠಡಿ ನಿರ್ಮಿಸುವತ್ತ ತಾಲೂಕು ಆಡಳಿತ ಗಮನ ಹರಿಸಬೇಕಾಗಿದೆ. ಪಟ್ಟಣದಲ್ಲಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಓದುವ ಟಿ.ಎಂ.ತನುಜಾ, ಟಿ.ಎಸ್‌.ದಿವ್ಯಾ, ಟಿ.ಎಂ.ಪೂಜಾ ಉದಯವಾಣಿ ಜೊತೆ ಮಾತನಾಡಿ, ಗ್ರಾಮಕ್ಕೆ ಬಸ್‌ ಇಲ್ಲದೆ ಇರುವುದರಿಂದ ನಾಲ್ಕೈದು ಕಿ.ಮೀ.ವರೆಗೆ ನಡೆದು ಕಾಲೇಜಿಗೆ ತೆರಳಬೇಕಿದೆ. ದಾರಿ ಮಧ್ಯದಲ್ಲಿ ಜಂಬೂರು ವನ ಇದೆ. ಚಿರತೆ ನೆಲೆಸಿದ್ದು ಜೀವ ಕೈನಲ್ಲಿ ಹಿಡಿದು ಸಾಗಬೇಕಾಗಿದೆ. ಇನ್ನು ನಿರಂತರ ಜ್ಯೋತಿ ಇದೆ. ಆದರೆ, ರಾತ್ರಿ ಎಂಟು ಗಂಟೆಗೆ ವಿದ್ಯುತ್‌ ಕಡಿತ ಮಾಡುವುದರಿಂದ ಓದಲು ಸಮಸ್ಯೆ ಆಗಿದೆ ಎಂದರು.

ಶಾಮಸುಂದರ್‌ ಕೆ.ಅಣ್ಣೇನಹಳ್ಳಿ

ಟಾಪ್ ನ್ಯೂಸ್

Women’s T20 World Cup: ಭಾರತ- ಪಾಕಿಸ್ತಾನ ಪಂದ್ಯ ಯಾವಾಗ? ಪಂದ್ಯಗಳ ವೇಳಾಪಟ್ಟಿ ಇಲ್ಲಿದೆ

Women’s T20 World Cup: ಭಾರತ- ಪಾಕಿಸ್ತಾನ ಪಂದ್ಯ ಯಾವಾಗ? ಪಂದ್ಯಗಳ ವೇಳಾಪಟ್ಟಿ ಇಲ್ಲಿದೆ

12

The Family Man 3: ಬಹು ನಿರೀಕ್ಷಿತ ʼದಿ ಫ್ಯಾಮಿಲಿ ಮ್ಯಾನ್‌ʼ ಸೀಸನ್‌ – 3 ಶೂಟ್‌ ಅರಂಭ

Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್‌ʼ

Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್‌ʼ

Bantwala; ಕಾರಿಗೆ ಸೈಡ್ ಕೊಟ್ಟಿಲ್ಲವೆಂದು ಕೆಎಸ್ಆರ್ ಟಿಸಿ ಬಸ್ ಚಾಲಕನಿಗೆ ತಂಡದಿಂದ ಹಲ್ಲೆ

Bantwala; ಕಾರಿಗೆ ಸೈಡ್ ಕೊಟ್ಟಿಲ್ಲವೆಂದು ಕೆಎಸ್ಆರ್ ಟಿಸಿ ಬಸ್ ಚಾಲಕನಿಗೆ ತಂಡದಿಂದ ಹಲ್ಲೆ

Mangaluru; ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ

Mangaluru; ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Team India’s T20 World Cup 2024 Jersey Leaked

T20 World Cup; ಹೊರಬಿತ್ತು ಭಾರತ ತಂಡದ ಜೆರ್ಸಿ ಫೋಟೊ: ಹೇಗಿದೆ ನೋಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwala; ಕಾರಿಗೆ ಸೈಡ್ ಕೊಟ್ಟಿಲ್ಲವೆಂದು ಕೆಎಸ್ಆರ್ ಟಿಸಿ ಬಸ್ ಚಾಲಕನಿಗೆ ತಂಡದಿಂದ ಹಲ್ಲೆ

Bantwala; ಕಾರಿಗೆ ಸೈಡ್ ಕೊಟ್ಟಿಲ್ಲವೆಂದು ಕೆಎಸ್ಆರ್ ಟಿಸಿ ಬಸ್ ಚಾಲಕನಿಗೆ ತಂಡದಿಂದ ಹಲ್ಲೆ

Mangaluru; ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ

Mangaluru; ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ

ಮುಗಿದ ಅಬ್ಬರ; ಎರಡು ದಿನ ಮನೆ-ಮನೆ ಸಂದಾಯ! 1992ರ ಚುನಾವಣೆ ನೆನಪಿಸಿದ ರಣತಂತ್ರ

ಮುಗಿದ ಅಬ್ಬರ; ಎರಡು ದಿನ ಮನೆ-ಮನೆ ಸಂದಾಯ! 1992ರ ಚುನಾವಣೆ ನೆನಪಿಸಿದ ರಣತಂತ್ರ

Lok Sabha Election: ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

Lok Sabha Election: ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ

BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Women’s T20 World Cup: ಭಾರತ- ಪಾಕಿಸ್ತಾನ ಪಂದ್ಯ ಯಾವಾಗ? ಪಂದ್ಯಗಳ ವೇಳಾಪಟ್ಟಿ ಇಲ್ಲಿದೆ

Women’s T20 World Cup: ಭಾರತ- ಪಾಕಿಸ್ತಾನ ಪಂದ್ಯ ಯಾವಾಗ? ಪಂದ್ಯಗಳ ವೇಳಾಪಟ್ಟಿ ಇಲ್ಲಿದೆ

12

The Family Man 3: ಬಹು ನಿರೀಕ್ಷಿತ ʼದಿ ಫ್ಯಾಮಿಲಿ ಮ್ಯಾನ್‌ʼ ಸೀಸನ್‌ – 3 ಶೂಟ್‌ ಅರಂಭ

Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್‌ʼ

Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್‌ʼ

Bantwala; ಕಾರಿಗೆ ಸೈಡ್ ಕೊಟ್ಟಿಲ್ಲವೆಂದು ಕೆಎಸ್ಆರ್ ಟಿಸಿ ಬಸ್ ಚಾಲಕನಿಗೆ ತಂಡದಿಂದ ಹಲ್ಲೆ

Bantwala; ಕಾರಿಗೆ ಸೈಡ್ ಕೊಟ್ಟಿಲ್ಲವೆಂದು ಕೆಎಸ್ಆರ್ ಟಿಸಿ ಬಸ್ ಚಾಲಕನಿಗೆ ತಂಡದಿಂದ ಹಲ್ಲೆ

Mangaluru; ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ

Mangaluru; ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.