ಕಾಡಾನೆ ಸಮಸ್ಯೆಗೆ ಶಾಶ್ವತ ಪರಿಹಾರ : ಎಪ್ರಿಲ್‌ನಲ್ಲಿ ಕೇಂದ್ರಕ್ಕೆ ನಿಯೋಗ: ಗೋಪಾಲಯ್ಯ


Team Udayavani, Mar 21, 2021, 12:28 AM IST

ಕಾಡಾನೆ ಸಮಸ್ಯೆಗೆ ಶಾಶ್ವತ ಪರಿಹಾರ : ಎಪ್ರಿಲ್‌ನಲ್ಲಿ  ಕೇಂದ್ರಕ್ಕೆ ನಿಯೋಗ: ಗೋಪಾಲಯ್ಯ

ಸಕಲೇಶಪುರ: ಕಾಡಾನೆ ಸಮಸ್ಯೆಗೆ ಶಾಶ್ವತ ಪರಿಹಾರ ಕೋರಿ ಎಪ್ರಿಲ್‌ನಲ್ಲಿ ಕೇಂದ್ರಕ್ಕೆ ಬೆಳೆಗಾರರ ನಿಯೋಗವನ್ನು ಕರೆದೊಯ್ಯು ವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ ಹೇಳಿದರು.

ಕಸಬಾ ಹೋಬಳಿ ಬೆಳೆಗಾರರ ಸಂಘವು ಶನಿವಾರ ಹಮ್ಮಿಕೊಂಡಿದ್ದ ಕಾಫಿ ಕೃಷಿ ಸಮ್ಮೇಳನ ಹಾಗೂ ವಾರ್ಷಿಕ ಸಭೆಯಲ್ಲಿ ಮಾತನಾಡಿದ ಅವರು, ತಾಲೂಕಿನ ಜನರನ್ನು ಕಾಡುತ್ತಿರುವ ಕಾಡಾನೆ ಸಮಸ್ಯೆ ಬಗ್ಗೆ ಅರಿವಿದ್ದು, ಇದನ್ನು ಶಾಶ್ವತವಾಗಿ ನಿವಾರಿಸಲು ಕೇಂದ್ರ ಕ್ರಮ ಕೈಗೊಳ್ಳ ಬೇಕಾಗಿದೆ. ಈ ನಿಟ್ಟಿನಲ್ಲಿ ಕಾಡಾನೆ ಸಮಸ್ಯೆ ಪೀಡಿತ ಪ್ರದೇಶದ ಶಾಸಕರ ಸಭೆ ನಡೆಸಿದ್ದು, ಎ.17ರ ಬಳಿಕ ನನ್ನ ನಾಯಕತ್ವದಲ್ಲೇ ಶಾಸಕರು, ಸಂಸದರು ಹಾಗೂ ಬೆಳೆಗಾರರ ಸಂಘದ ಪ್ರತಿನಿಧಿಗಳನ್ನು ಕೇಂದ್ರಕ್ಕೆ ಕರೆದೊಯ್ಯಲಾಗುವುದು ಎಂದರು.

ಆತಂಕ ಬೇಡ :

ಅರಣ್ಯ ಒತ್ತುವರಿ ಸಮಸ್ಯೆ ಬಗೆಹರಿಸಲು ಕೇರಳ ಮಾದರಿಯಲ್ಲಿ ಜಮೀನು ಗುತ್ತಿಗೆ ನೀಡುವ ಪದ್ಧತಿ ಜಾರಿಗೊಳಿಸಲು ಚಿಂತಿಸಲಾಗುತ್ತಿದೆ. ಯಾವುದೇ ಕಾರಣಕ್ಕೂ ರೈತರು ಆತಂಕಗೊಳ್ಳಬೇಕಾಗಿಲ್ಲ ಎಂದರು.

ಸಿಎಂ ಜತೆ ಚರ್ಚೆ :

ಸಮಯಕ್ಕೆ ಸರಿಯಾಗಿ ರಸಗೊಬ್ಬರ ದೊರಕದ ಬಗ್ಗೆ ದೂರುಗಳು ಕೇಳಿ ಬಂದಿದ್ದು, ಶೀಘ್ರದಲ್ಲೇ ಬೆಳೆಗಾರರ ಸಂಘದ ಪ್ರತಿನಿಧಿಗಳನ್ನು ಕೇಂದ್ರ ರಸಗೊಬ್ಬರ ಸಚಿವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಲಾಗುವುದು. 10 ಎಚ್‌.ಪಿ. ಮೋಟಾರ್‌ವರೆಗೆ ಉಚಿತ ವಿದ್ಯುತ್‌ ನೀಡುವ ಹಾಗೂ ಬಡ್ಡಿ ಮನ್ನಾ ಯೋಜನೆ ಅವಧಿ ಮತ್ತಷ್ಟು ತಿಂಗಳು ವಿಸ್ತರಿಸುವ ಕುರಿತು ಸಿಎಂ ಜತೆ ಚರ್ಚಿಸಿ ಪರಿಹಾರ ಕಂಡು ಕೊಳ್ಳಲಾಗುವುದು ಎಂದರು.

ಶಾಸಕ ಎಚ್‌.ಕೆ. ಕುಮಾರಸ್ವಾಮಿ, ಮಾಜಿ ಶಾಸಕ ಎಚ್‌. ಎಂ. ವಿಶ್ವನಾಥ್‌, ಕಸಬಾ ಬೆಳೆಗಾರರ ಸಂಘದ ಅಧ್ಯಕ್ಷ ಉದಯ್‌ ಕುಮಾರ್‌ ಮಾತನಾಡಿದರು.  ಕಾಫಿ ಬೋರ್ಡ್‌ ಅಧ್ಯಕ್ಷ ಭೋಜೇಗೌಡ, ಕರ್ನಾಟಕ ಬೆಳೆಗಾರರ ಸಂಘದ ಅಧ್ಯಕ್ಷ ಮೋಹನ್‌ ಕುಮಾರ್‌ ಸಹಿತ ಗಣ್ಯರು ಉಪಸ್ಥಿತರಿದ್ದರು.

 ಸುರಂಗ ಮಾರ್ಗಕ್ಕೆ ಪ್ರಬಲ ವಿರೋಧ :

ಶಿರಾಡಿಘಾಟಿಯ ರಾಷ್ಟ್ರೀಯ ಹೆದ್ದಾರಿ-75ಕ್ಕೆ ಪರ್ಯಾಯವಾಗಿ ನಿರ್ಮಿಸಲು ಉದ್ದೇಶಿಸಿರುವ ಸುರಂಗ ಮಾರ್ಗಕ್ಕೆ ನಮ್ಮ ಪ್ರಬಲ ವಿರೋಧವಿದೆ ಎಂದು ಶಾಸಕ ಎಚ್‌.ಕೆ. ಕುಮಾರಸ್ವಾಮಿ ಹೇಳಿದರು.

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.