ಕಳಸಾ ಬಂಡೂರಿ ಯೋಜನಾ ಪ್ರದೇಶಕ್ಕೆ ಭೇಟಿ ಸಂದರ್ಭ ಗೋವಾದಿಂದ ದುರುದ್ದೇಶ: ಅಶೋಕ ಚಂದರಗಿ


Team Udayavani, Mar 21, 2021, 3:04 PM IST

ಕಳಸಾ ಬಂಡೂರಿ ಯೋಜನಾ ಪ್ರದೇಶಕ್ಕೆ ಭೇಟಿ ಸಂದರ್ಭ ಗೋವಾದಿಂದ ದುರುದ್ದೇಶ: ಅಶೋಕ ಚಂದರಗಿ

ಬೆಳಗಾವಿ: ಮಹಾದಾಯಿ ನೀರು ಹಂಚಿಕೆಯ ಸಂಬಂಧ ಸುಪ್ರೀಂ ಕೋರ್ಟ್ ನೀಡಿದ ಆದೇಶದನ್ವಯ ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರ ರಾಜ್ಯಗಳ ನೀರಾವರಿ ಇಲಾಖೆಗಳ ಅಧಿಕಾರಿಗಳ ತ್ರಿಸದಸ್ಯ ಜಂಟಿ ಪರಿಶೀಲನಾ ಸಮಿತಿಯು ಖಾನಾಪುರ ಬಳಿಯ ಕಳಸಾ ಬಂಡೂರಿ ಯೋಜನಾ ಪ್ರದೇಶಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ನಡೆದ ಘಟನಾವಳಿಗಳು ಗೋವಾದ ದುರುದ್ದೇಶವನ್ನು ಬಟಾಬಯಲುಗೊಳಿಸಿದ್ದು, ಇದನ್ನು ಕರ್ನಾಟಕ ಸರಕಾರವು ಸುಪ್ರೀಂ ಕೋರ್ಟ್ ಗಮನಕ್ಕೆ ತರಬೇಕು ಎಂದು ಜಿಲ್ಲಾ ಕನ್ನಡದಲ್ಲಿ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ಒತ್ತಾಯಿಸಿದ್ದಾರೆ.

ಈ ಕುರಿತು ಜಲಸಂಪನ್ಮೂಲ ಇಲಾಖೆಗೆ ಪತ್ರ ಬರೆದಿರುವ ಅವರು ಮೂರೂ ರಾಜ್ಯಗಳ ಅಧಿಕಾರಿಗಳ ಸಮಿತಿಯ ಭೇಟಿಯ ಕಾಲಕ್ಕೆ ಗೋವಾದ ಅಧಿಕಾರಿಗಳು ತಮ್ಮೊಂದಿಗೆ ಪರಿಸರವಾದಿಗಳನ್ನು ಮತ್ತು ಪತ್ರಕರ್ತರನ್ನು ಕರೆತಂದಿದ್ದರು. ಉದ್ದೇಶಪೂರ್ವಕವಾಗಿಯೇ ಕರ್ನಾಟಕದ ಪೊಲೀಸರ ಜೊತೆಗೆ ವಾಗ್ವಾದದಲ್ಲಿ ತೊಡಗಿದ್ದಲ್ಲದೆ ಕರ್ನಾಟಕದ ಅಧಿಕಾರಿಗಳ ಜೊತೆಗೂ ವಾದ ನಡೆಸಿ ವಾಸ್ತವತೆಯ ಆಧಾರದ ಮೇಲೆ ವರದಿ ತಯಾರಿಸಲೂ ಸಹ ಸಿದ್ಧರಾಗಲಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ:ಮಾಡಬಾರದ ಕೆಲಸ ಮಾಡಿ ಕಾಂಗ್ರೆಸ್ ನವರಿಗೆ ಅಭ್ಯಾಸ: ಸಚಿವ ಕೆ.ಎಸ್. ಈಶ್ವರಪ್ಪ

ಸುಪ್ರೀಂ ಕೋರ್ಟ್ ಆದೇಶದನ್ವಯವೇ ನಿರ್ಮಿಸಲಾದ ತಡೆಗೋಡೆಯು ಭದ್ರವಾಗಿಯೇ ಇದೆಯೆಂಬ ವಾಸ್ತವವನ್ನು ಕಂಡರೂ ಸಹ ಅದನ್ನು ವರದಿಯಲ್ಲಿ ಪ್ರಸ್ತಾಪಿಸಲು ಸಿದ್ಧರಾಗದ ಗೋವಾ ಅಧಿಕಾರಿಗಳು ಗೋವಾದ ಮಾಧ್ಯಮಗಳಲ್ಲಿ ಕರ್ನಾಟಕದ ಅಧಿಕಾರಿಗಳ ವಿರುದ್ಧ ವರದಿಗಳು ಪ್ರಕಟವಾಗಲು ಕಾರಣರಾದರು ಎಂದು ಪತ್ರದಲ್ಲಿ ಹೇಳಿದ್ದಾರೆ.

ಕಳಸಾ ಬಂಡೂರಿ ಯೋಜನೆಯ ಅನುಷ್ಠಾನವನ್ನು ತಡೆಯುವ ಪ್ರಯತ್ನವಾಗಿ ವಿಳಂಬ ತಂತ್ರವನ್ನು ಅನುಸರಿಸುತ್ತಿರುವ ಗೋವಾ ತನ್ನ ತಂತ್ರಕ್ಕಾಗಿ ನ್ಯಾಯಾಲಯದ ಅಮೂಲ್ಯ ಸಮಯವನ್ನು ಹಾಳು ಮಾಡುತ್ತಿದೆ. ಈ ವಿಷಯವನ್ನು ಸರಕಾರ ಬರುವ ಎಪ್ರಿಲ್ ಮೊದಲ ವಾರ ನಡೆಯುವ ವಿಚಾರಣೆ ಕಾಲಕ್ಕೆ ನ್ಯಾಯಾಲಯದ ಗಮನಕ್ಕೆ ತರುವುದು ಒಳ್ಳೆಯದು ಎಂದು ಅಶೋಕ ಚಂದರಗಿ ಆಗ್ರಹಿದ್ದಾರೆ.

2010 ರಿಂದ 2018 ರವರೆಗೆ ಮಹಾದಾಯಿ ನ್ಯಾಯಮಂಡಳಿಯ ವಿಚಾರಣೆ ಕಾಲಕ್ಕೂ ಇದೇ ರೀತಿ ವಿಳಂಬ ತಂತ್ರವನ್ನು ಅನುಸರಿಸಿದ್ದ ಗೋವಾ ಈಗ ನ್ಯಾಯಾಲಯ ಮತ್ತು ಕೇಂದ್ರ ಸರಕಾರದ ವೇದಿಕೆಗಳನ್ನು ಬಳಸಿಕೊಂಡು ಯೋಜನೆಯ ಅನುಷ್ಠಾನವನ್ನು ತಡೆಯಲು ಯತ್ನಿಸುತ್ತಿದೆ. ಈ ಸಮಗ್ರ ವಿವರಗಳನ್ನು ನ್ಯಾಯಾಲಯದ ಗಮನಕ್ಕೆ ತರುವ ಮೂಲಕ ಗೋವಾ ಕುತಂತ್ರವನ್ನು ಬಯಲು ಮಾಡಬೇಕೆಂದು ಅವರು ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.