ಜಾಲಾಡಿ-ಹೊಸ್ಕಳಿ: ಇನ್ನೂ ಆಗದ ನದಿ ದಂಡೆ

ಗದ್ದೆಗಳಿಗೆ ನುಗ್ಗುತ್ತಿದೆ ಉಪ್ಪು ನೀರು , ರೈತರಿಂದಲೇ ತಾತ್ಕಾಲಿಕ ಬದು ನಿರ್ಮಾಣ

Team Udayavani, Mar 22, 2021, 3:30 AM IST

ಜಾಲಾಡಿ-ಹೊಸ್ಕಳಿ: ಇನ್ನೂ ಆಗದ ನದಿ ದಂಡೆ

ಹೆಮ್ಮಾಡಿ:  ಉಪ್ಪು ನೀರು ತಡೆಗೆ ಜಾಲಾಡಿ- ಹೊಸ್ಕಳಿಯಲ್ಲಿ ಇನ್ನೂ ನದಿ ದಂಡೆ ನಿರ್ಮಾಣಗೊಳ್ಳದ ಕಾರಣ ಹೆಮ್ಮಾಡಿ ಹಾಗೂ ಕಟ್‌ ಬೆಲೂ¤ರು ಗ್ರಾ.ಪಂ. ವ್ಯಾಪ್ತಿಯ ನೂರಾರು ಎಕರೆ ಗದ್ದೆ ಪ್ರದೇಶಗಳಿಗೆ ಈಗ ಉಪ್ಪು ನೀರು ನುಗ್ಗುತ್ತಿದ್ದು, ಇದರಿಂದ ಈ ಭಾಗದ ರೈತರಿಗೆ ಮುಂಬರುವ ಮುಂಗಾರು ಹಂಗಾಮಿನ ಕೃಷಿ ಕಾರ್ಯಕ್ಕೆ ತೊಡಕಾಗುವ ಭೀತಿ ಆವರಿಸಿದೆ.

ಹೆಮ್ಮಾಡಿ – ಕಟ್‌ಬೆಲೂ¤ರು ಪಂಚಾಯತ್‌ ವ್ಯಾಪ್ತಿಯ ಜಾಲಾಡಿ, ಹೊಸ್ಕಳಿ ಭಾಗದ 70ಕ್ಕೂ ಹೆಚ್ಚು ಮಂದಿ ರೈತರ 100 ಎಕರೆಗಳಿಗೂ ಮಿಕ್ಕಿ ಪ್ರದೇಶದ ಗದ್ದೆಗಳಿಗೆ ಉಪ್ಪು ನೀರು ನುಗ್ಗುತ್ತಿದೆ. ರಾಜಾಡಿ ವ್ಯಾಪ್ತಿಗೆ ಅನುಕೂಲವಾಗುವಂತೆ 4.44 ಕೋ. ರೂ. ವೆಚ್ಚದಲ್ಲಿ ಕಿಂಡಿ ಅಣೆಕಟ್ಟು ನಿರ್ಮಾಣವಾದ ಬಳಿಕ ಈ ಜಾಲಾಡಿ ಪರಿಸರದ ಗದ್ದೆಗಳಿಗೆ ಉಪ್ಪು ನೀರಿನ ಹಾವಳಿ ಹೆಚ್ಚಾಗಿದೆ. ಇದಷ್ಟೇ ಅಲ್ಲದೆ ಈ ಭಾಗದ ಬಾವಿಗಳ ನೀರಲ್ಲೂ ಉಪ್ಪಿನಂಶ  ಹೆಚ್ಚಾ ಗಿದೆ.

ರೈತರಿಂದಲೇ ಬದು ನಿರ್ಮಾಣ :

ಮುಂದಿನ ಕೃಷಿ ಹಂಗಾಮಿಗೆ ತೊಂದರೆ ಯಾಗದಿರಲಿ ಎನ್ನುವ ಕಾರಣಕ್ಕೆ ಈ ಭಾಗದ ರೈತರೇ ರವಿವಾರ ಬದು ನಿರ್ಮಾಣ ಮಾಡಲು ಮುಂದಾಗಿದ್ದಾರೆ. ಗೋಣಿ ಚೀಲಗಳಿಗೆ ಮರಳು, ಮಣ್ಣು ತುಂಬಿ ಅದನ್ನು ಉಪ್ಪು ನೀರು ನುಗ್ಗುವಲ್ಲಿ ಇಟ್ಟು, ತಾತ್ಕಾಲಿಕ ತಡೆಗೋಡೆ ನಿರ್ಮಿಸಿದ್ದಾರೆ. 10-15 ಮಂದಿ ರೈತರು ಸೇರಿ ಈ ಕಾರ್ಯ ಮಾಡಿದ್ದಾರೆ.

ಆದಷ್ಟು ಬೇಗ ಆಗಲಿ :

ಇನ್ನೀಗ ಕೆಲವು ತಿಂಗಳಲ್ಲಿಯೇ ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳು ಆರಂಭ ಗೊಳ್ಳಲಿದ್ದು, ಇಷ್ಟರೊಳಗೆ ಜಾಲಾಡಿಯಲ್ಲಿ ನದಿ ದಂಡೆ ನಿರ್ಮಾಣವಾಗಿದ್ದರೆ, ಈ ಭಾಗದ ರೈತರು ನಿರಾತಂಕವಾಗಿ ಕೃಷಿಯಲ್ಲಿ ತೊಡಗಿಸಿ ಕೊಳ್ಳಬಹುದಿತ್ತು. ಆದರೆ ಈ ಬಾರಿ ಬೇಸಾಯ ಮಾಡಿದರೂ ಯಾವಾಗ ಗದ್ದೆಗಳಿಗೆ ಉಪ್ಪು ನೀರು ನುಗ್ಗುತ್ತದೋ ಎನ್ನುವ ಆತಂಕದಲ್ಲಿಯೇ ದಿನ ಕಳೆಯಬೇಕಾಗಿದ್ದು, ಆದಷ್ಟು ಬೇಗ, ಮೇಯೊಳಗೆ ನದಿ ದಂಡೆ ನಿರ್ಮಿಸಿಕೊಡಿ ಎನ್ನುವುದಾಗಿ ಇಲ್ಲಿನ ರೈತರು ಮನವಿ ಮಾಡಿಕೊಂಡಿದ್ದಾರೆ.

ನದಿ ದಂಡೆ ಯಾವಾಗ? :

ಜಾಲಾಡಿಯಲ್ಲಿ ಹಿಂದೆ ಇದ್ದ ಕಿಂಡಿ ಅಣೆಕಟ್ಟು ಕುಸಿದು ಬಿದ್ದು ವರ್ಷಗಳೇ ಕಳೆದಿದ್ದು, ಆ ವೇಳೆ ಶಾಸಕರೇ ಇಲ್ಲಿಗೆ ಭೇಟಿ ನೀಡಿ, ಇಲ್ಲಿ ಸುಮಾರು 50 ಲಕ್ಷ ರೂ. ವೆಚ್ಚದಲ್ಲಿ ನದಿ ದಂಡೆ ನಿರ್ಮಿಸಿ ಕೊಡುವ ಭರವಸೆ ನೀಡಿದ್ದರು. ಈ ಬಗ್ಗೆ ಹಲವಾರು ಬಾರಿ ರೈತರು ಮನವಿ ಸಲ್ಲಿಸಿದ್ದರೂ ನದಿ ದಂಡೆ ಮಾತ್ರ ನಿರ್ಮಾಣವಾಗಿಲ್ಲ. ಕಳೆದ ಕೆಲವು ದಿನಗಳಿಂದ ಇಲ್ಲಿನ ಎಲ್ಲ ಗದ್ದೆಗಳಿಗೆ ನೀರು ನುಗ್ಗುತ್ತಿದ್ದು, ಇದು ಹೀಗೇ ಮುಂದುವರಿದರೆ ಮುಂದಿನ ಹಂಗಾಮಿನಲ್ಲಿ ಬೆಳೆ ಬೆಳೆಯುವುದು ಸಹ ಕಷ್ಟ ಎನ್ನುವುದು ರೈತರ ಆತಂಕವಾಗಿದೆ. ಹಿಂಗಾರಿನಲ್ಲಿ ಬೆಳೆಯಲಾದ ಉದ್ದು, ಕಲ್ಲಂಗಡಿ, ನೆಲಗಡಲೆ ಕೃಷಿಗೂ ಉಪ್ಪು ನೀರಿನಿಂದಾಗಿ ಹಾನಿಯಾಗಿತ್ತು.

ಜಾಲಾಡಿಯಲ್ಲಿ ಗದ್ದೆಗಳಿಗೆ ಉಪ್ಪು ನೀರು ನುಗ್ಗಿ ಹಾನಿಯಾಗುತ್ತಿರುವುದರ ಬಗ್ಗೆ ಗಮನದಲ್ಲಿದ್ದು, ಈ ಹಿಂದೆ ಹೇಳಿದಂತೆಯೇ ನದಿ ದಂಡೆ ನಿರ್ಮಾಣ ಪ್ರಕ್ರಿಯೆ ನಡೆಯುತ್ತಿದೆ. ಈಗಾಗಲೇ ಬೈಂದೂರು ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯ ಮಾಡುತ್ತಿದ್ದು ಕ್ಷೇತ್ರದ ಎಲ್ಲ ಸಮಸ್ಯೆಗಳನ್ನು ಹಂತ-ಹಂತವಾಗಿ ಬಗೆಹರಿಸಲು ಬದ್ಧನಾಗಿದ್ದೇನೆ.  – ಬಿ.ಎಂ. ಸುಕುಮಾರ್‌ ಶೆಟ್ಟಿ, ಬೈಂದೂರು ಶಾಸಕರು

 

– ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.