ಸೀಯಾಳ, ಹಣ್ಣುಗಳಿಗೆ ಬೇಡಿಕೆ; ಜಲ ಮಟ್ಟ ಕುಸಿತ


Team Udayavani, Mar 22, 2021, 4:40 AM IST

ಸೀಯಾಳ, ಹಣ್ಣುಗಳಿಗೆ ಬೇಡಿಕೆ; ಜಲ ಮಟ್ಟ ಕುಸಿತ

ಸುಳ್ಯ: ಬಿಸಿಲ ತಾಪ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಬೆಳಗ್ಗೆ 11ರಿಂದ ಅಪರಾಹ್ನ 3.30ರ ವರೆಗೆ ಹೊರಗಡೆ ಬರಲು ಸಾಧ್ಯವೇ ಇಲ್ಲ ಎಂಬ ಸ್ಥಿತಿಯಿದೆ. ಹೊರಗೆ ಬಂದ ಅರ್ಧ ಗಂಟೆಗೆ ಕಣ್ಣು ಮಂಜು, ತಲೆ ಸುತ್ತು ಆದಂತೆ ಭಾಸವಾಗುತ್ತಿದ್ದು ಜನ ತಂಪು ಪಾನೀಯಗಳ ಮೊರೆ ಹೋಗುತ್ತಿದ್ದಾರೆ.

ಒಂದು ವಾರದಿಂದ ಸುಳ್ಯ ತಾಲೂಕಿನಲ್ಲಿ ಮೋಡ ಕವಿದ ವಾತಾವರಣವಿದ್ದು ತಾಪಮಾನ ಗರಿಷ್ಠ 35, 36, 38 ಡಿಗ್ರಿ ಸೆಲ್ಸಿಯಸ್‌ನಷ್ಟು ಇತ್ತು. ಈ ವಾರ ತಾಪಮಾನ ಗರಿಷ್ಠ 40 ಡಿಗ್ರಿ ಸೆಲಿÏಯಸ್‌ವರೆಗೂ ಏರಿಕೆಯಾಗಬಹುದು ಎಂದು ಅಂದಾಜಿಸಲಾಗಿದೆ.

ಸೀಯಾಳ. ತಂಪು ಪಾನೀಯಗಳಿಗೆ ಹೆಚ್ಚಿದ ಬೇಡಿಕೆ ಜನರು ಸೀಯಾಳವನ್ನು ಹೆಚ್ಚು ಇಷ್ಟ ಪಡುತ್ತಿದ್ದು, ಸದ್ಯ 35ರಿಂದ 40 ರೂ.ಗಳವರೆಗೆ ಮಾರಾಟವಾಗುತ್ತಿದೆ. ಜತೆಗೆ ಮನೆಯವರಿಗಿರಲಿ ಅಂತ ಕಲ್ಲಂಗಡಿ, ದ್ರಾಕ್ಷಿ, ದಾಳಿಂಬೆಯನ್ನು ಹೆಚ್ಚಾಗಿ ಖರೀದಿಸುತ್ತಿದ್ದಾರೆ.

ಕೃಷಿಕರಿಗೆ ಚಿಂತೆ :

ಪಯಸ್ವಿನಿ ನದಿಯ ನೀರಿನ ಒಳಹರಿವು ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ. ಗ್ರಾಮಾಂತರ ಭಾಗದ ಕೃಷಿ ಹೊಂಡ, ಬಾವಿ, ಬೋರ್‌ವೆಲ್‌ಗ‌ಳಲ್ಲಿ ನೀರಿನ ಪ್ರಮಾಣ ತಗ್ಗಿದ್ದು ಕೃಷಿಕರ ನಿದ್ದೆಗೆಡಿಸಿದೆ. ಮೋಡ ಕವಿದ ವಾತಾವರಣದಿಂದ ಅಡಿಕೆ, ಗೇರು ಕೃಷಿ ಸೊರಗುತ್ತಿದೆ.

ಸುಳ್ಯ ನಗರದಲ್ಲಿ ಹಿಂದಿನ ವರ್ಷಗಳಲ್ಲಿ ನೀರಿನ ಅಭಾವ ಸೃಷ್ಟಿಯಾಗಿ ನೀರಿನ ಜತೆಗೆ ಮಣ್ಣು ಕೂಡ ಪಂಪಿಗ್‌ ಆಗುವಷ್ಟರ ಮಟ್ಟಿಗೆ ನೀರಿನ ಪ್ರಮಾಣ ಕುಗ್ಗಿತ್ತು. ಈ ಬಾರಿ ಮಳೆ ನಿಲ್ಲುವಾಗ ಕಳೆದ ಬಾರಿಗಿಂದ ವಿಳಂಬವಾಗಿದ್ದರಿಂದ ಹಿಂದಿನ ವರ್ಷದಷ್ಟು ಪರಿಸ್ಥಿತಿ ಕೆಟ್ಟದಾಗಿಲ್ಲ. ಹಾಗಂತ ಸಾರ್ವಜನಿಕರು ನೀರಿನ ಬಳಕೆಯನ್ನು ಬೇಕಾಬಿಟ್ಟಿ ಮಾಡಿದರೆ ಮತ್ತದೇ ಸ್ಥಿತಿ ಎದುರಿಸಬೇಕಾಗಬಹುದು. ಹಾಗಾಗಿ ನ.ಪಂ. ನೀರಿನ ಬಳಕೆಯ ಮೇಲೆ ನಿಗಾ ವಹಿಸಿ ಪೋಲಾಗದಂತೆ ತಡೆಯಬೇಕು. ತಿಂಗಳ ಹಿಂದೆ ಸಚಿವ ಅಂಗಾರ ಜಾಕ್‌ವೆಲ್‌ ನಿರ್ಮಾಣ ಒಂದು ತಿಂಗಳಲ್ಲಿ ಆರಂಭ ಮಾಡುತ್ತೇವೆಂದು ಹೇಳಿದ ಕಾರ್ಯ ಆರಂಭ ವಾಗಿಲ್ಲ. ಎಪ್ರಿಲ್‌- ಮೇಯಲ್ಲಿನ ನೀರಿನ ಕೊರತೆಯಾಗದಂತೆ ಎಚ್ಚರವಹಿಸುವ ಕಾರ್ಯ ಆಡಳಿತ ಮಾಡಲೇ ಬೇಕಾದ ಅನಿವಾರ್ಯತೆಯಿದೆ.

ಪಯಸ್ವಿನಿ ನದಿಗೆ ಕಂದಡ್ಕ ಹಾಗೂ ಕಲ್ಲುಮುಟ್ಲುವಿನಲ್ಲಿ ಮರಳು ಕಟ್ಟ  ಹಾಕಲಾಗಿದೆ. 10 ಬೋರ್‌ವೆಲ್‌ ಗಳ ಫಷ್‌ಔಟ್‌ ಮಾಡಿ ಬೇಸಗೆಯ ತಯಾರಿ ನಡೆದಿದೆ. ಸಾರ್ವಜನಿಕರು ಮಿತವಾಗಿ ನೀರು ಬಳಸಬೇಕು. ಕುಡಿ ಯುವ ನೀರನ್ನು ಬೇರೆ ಚಟುವಟಿಕೆಗಳಿಗೆ ಉಪಯೋಗಿಸಿದರೆ ಕ್ರಮ ಕೈಗೊಳ್ಳುತ್ತೇವೆ

-ವಿನಯ ಕುಮಾರ್‌ ಕಂದಡ್ಕ,  ಸುಳ್ಯ ನಗರ ಪಂಚಾಯತ್‌ ಅಧ್ಯಕ್ಷ

ನಗರಕ್ಕೆ ಬರುವವರು ಹೆಚ್ಚಾಗಿ ಹಣ್ಣುಗಳನ್ನು ಖರೀದಿಸುತ್ತಿದ್ದಾರೆ. ಕಳೆದ ಒಂದು ತಿಂಗಳಿಗೆ ಹೋಲಿಸಿದರೆ ಈಗ ವ್ಯಾಪಾರ ವೃದ್ಧಿಯಾಗಿದೆ. ಸೀಯಾಳ, ಕಲ್ಲಂಗಡಿ, ದಾಳಿಂಬೆ, ದ್ರಾಕ್ಷಿ ಹೆಚ್ಚು ಮಾರಾಟವಾಗುತ್ತಿದೆ.ೆ

-ಶರೀಫ್‌ ಬೆಳ್ಳಾರೆ,  ಸುಳ್ಯ, ಹಣ್ಣಿನ ವ್ಯಾಪಾರಿ

ಟಾಪ್ ನ್ಯೂಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.