ದೇಶ್ಮುಖ್ ತಲೆದಂಡ ?
Team Udayavani, Mar 22, 2021, 6:40 AM IST
ಮುಂಬಯಿ: ಪ್ರತೀ ತಿಂಗಳು 100 ಕೋ.ರೂ. ವಸೂಲಿ ಮಾಡುವಂತೆ ಗೃಹ ಸಚಿವ ಅನಿಲ್ ದೇಶ್ಮುಖ್ ಸೂಚಿಸಿದ್ದರು ಎಂಬ ನಿರ್ಗಮಿತ ಮುಂಬಯಿ ಪೊಲೀಸ್ ಆಯುಕ್ತ ಪರಂಬೀರ್ ಸಿಂಗ್ ಅವರ ಸ್ಫೋಟಕ ಹೇಳಿಕೆ ಮಹಾರಾಷ್ಟ್ರದ ರಾಜಕಾರಣದಲ್ಲಿ ಭಾರೀ ತಲ್ಲಣ ಉಂಟುಮಾಡಿದೆ. ಮಹಾರಾಷ್ಟ್ರ ವಿಕಾಸ್ ಅಘಾಡಿ (ಎಂವಿಎ)ಯಲ್ಲಿ ಒಡಕಿಗೂ ಕಾರಣವಾಗಿದೆ. ಸೋಮವಾರ ಅನಿಲ್ ದೇಶ್ಮುಖ್ ಅವರ ತಲೆದಂಡದ ಬಗ್ಗೆ ನಿರ್ಧಾರವಾಗುವ ಸಾಧ್ಯತೆ ಇದೆ. ವಸೂಲಿ ಹೇಳಿಕೆಯ ಸಮಯವನ್ನು ಪ್ರಶ್ನಿಸಿರುವ ಎನ್ಸಿಪಿ ನಾಯಕ ಶರದ್ ಪವಾರ್, ಈ ಬಗ್ಗೆ ಕೂಲಂಕಷ, ಸ್ವತಂತ್ರ ತನಿಖೆಗೆ ಆಗ್ರಹಿಸಿದ್ದಾರೆ. ದೇಶ್ಮುಖ್ ವಿರುದ್ಧ ಸಿಎಂ ಉದ್ಧವ್ ಕ್ರಮ ಕೈಗೊಳ್ಳಬಹುದು ಎಂದಿದ್ದಾರೆ.
ಪರಂಬೀರ್ ಸಿಂಗ್ ಹೇಳಿಕೆ ಮತ್ತು ಸಚಿನ್ ವೇಜ್ ಪ್ರಕರಣದಿಂದ ಎಂವಿಎ ಸರಕಾರದ ವರ್ಚಸ್ಸಿಗೆ ಭಾರೀ ಧಕ್ಕೆಯಾಗಿದೆ ಎಂದು ಶಿವಸೇನೆ ಹೇಳಿದೆ. ಕಾಂಗ್ರೆಸ್ ನಾಯಕ ಸಂಜಯ್ ನಿರುಪಮ್ ಕೂಡ ಪ್ರಕರಣದ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.
ಈ ಮಧ್ಯೆ, ಪರಂಬೀರ್ ಸಿಂಗ್ ಅವರ ಆರೋಪಗಳ ಸಂಬಂಧ ಅನಿಲ್ ದೇಶ್ಮುಖ್ 8 ಅಂಶಗಳ ಸುದೀರ್ಘ ಸ್ಪಷ್ಟನೆ ಮೂಲಕ ತಿರುಗೇಟು ನೀಡಿದ್ದಾರೆ.
ಇಂದು ನಿರ್ಧಾರ? :
ಅನಿಲ್ ದೇಶ್ಮುಖ್ ವಿಚಾರ ವಾಗಿ ನಿರ್ಧಾರ ತೆಗೆದುಕೊಳ್ಳಲು ಶಿವಸೇನೆ, ಎನ್ಸಿಪಿ ಮತ್ತು ಕಾಂಗ್ರೆಸ್ ನಾಯಕರು ಸೋಮವಾರ ಸರಣಿ ಸಭೆ ನಡೆಸಲಿದ್ದಾರೆ. ರವಿವಾರ ಪತ್ರಿಕಾಗೋಷ್ಠಿ ನಡೆಸಿದ ಎನ್ಸಿಪಿಯ ಪರಮೋಚ್ಚ ನಾಯಕ ಶರದ್ ಪವಾರ್, ದೇಶ್ಮುಖ್ ರಾಜೀನಾಮೆ ಬಗ್ಗೆ ಖಚಿತವಾಗಿ ಏನನ್ನೂ ಹೇಳ ದಿದ್ದರೂ ನಿರ್ಧಾರ ತೆಗೆದು ಕೊಳ್ಳಲು ಸಿಎಂ ಸ್ವತಂತ್ರರು ಎಂದಿದ್ದಾರೆ. ಮೂಲಗಳ ಪ್ರಕಾರ ಶಿವಸೇನೆ ಕೂಡ ಅನಿಲ್ ದೇಶ್ಮುಖ್ ಅವರ ರಾಜೀನಾಮೆಯ ಬಗ್ಗೆ ಒಲವು ತೋರಿದೆ. ಸರಕಾರಕ್ಕೆ ಬಿದ್ದಿರುವ ಏಟುಗಳಿಂದ ಪಾರಾಗಬೇಕು ಎಂದಾದರೆ ದೇಶ್ಮುಖ್ ರಾಜೀನಾಮೆ ನೀಡುವುದು ಸೂಕ್ತ ಎಂಬುದು ಶಿವಸೇನೆಯ ವಾದ. ದೇಶ್ಮುಖ್ ರಾಜೀನಾಮೆ ನೀಡಿದರೆ ಅಜಿತ್ ಪವಾರ್ ಅಥವಾ ರಾಜೇಶ್ ಟೋಪೆ ಗೃಹ ಸಚಿವರಾಗುವ ಸಾಧ್ಯತೆ ಇದೆ.
ಬಿಜೆಪಿ ಬಿಗಿಪಟ್ಟು :
ಪರಂಬೀರ್ ಸಿಂಗ್ ಅವರ ಸ್ಫೋಟಕ “ವಸೂಲಿ’ ಹೇಳಿಕೆ ಬಿಡುಗಡೆಯಾಗುತ್ತಿದ್ದಂತೆ ಬಿಜೆಪಿಯಲ್ಲಿ ತೀವ್ರ ಚಟುವಟಿಕೆ ಗಳು ನಡೆದಿವೆ. ಅನಿಲ್ ದೇಶ್ಮುಖ್ ರಾಜೀನಾಮೆಗಾಗಿ ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ಶನಿವಾರ ರಾತ್ರಿಯೇ ಒತ್ತಾಯಿಸಿದ್ದಾರೆ. ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಬಿಜೆಪಿ ತೀರ್ಮಾನಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ