ಪ್ರೇಕ್ಷಕರ ಮುಂದೆ “ನನ್ನ ಗುರಿ ವಾರೆಂಟ್’ : ಮಾ.26ಕ್ಕೆ ರಿಲೀಸ್
Team Udayavani, Mar 22, 2021, 3:19 PM IST
ನಟ ಜೆ.ಕೆ (ಜಯರಾಮ್ ಕಾರ್ತಿಕ್) ಅಭಿನಯದ ಮತ್ತೂಂದು ಚಿತ್ರ ತೆರೆಗೆ ಬರಲು ರೆಡಿಯಾಗಿದೆ. ಆ ಚಿತ್ರದ ಹೆಸರು “ನನ್ನ ಗುರಿ ವಾರೆಂಟ್’. ಎಸ್.ಕೆ ನಾಗೇಂದ್ರ ಅರಸ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ “ವಾರೆಂಟ್’ ಚಿತ್ರಕ್ಕೆ ಮನಿಷಾ ವೈಗನ್ಕರ್ ಕಥೆಯನ್ನು ಬರೆದು, ನಿರ್ಮಾಣ ಮಾಡಿದ್ದಾರೆ.
ಚಿತ್ರದಲ್ಲಿ ನಾಯಕಿಯಾಗಿ ಕಾಣಿಸಿಕೊಂಡಿರುವ ಮನಿಷಾ ವೈಗನ್ ಕರ್ ಅವರಿಗೆ ಕಿರುತೆರೆ ನಟ ರಾಮ್ ತಾಂಡವ್ ಹಿರಿತೆರೆಯಲ್ಲಿ ಜೋಡಿಯಾಗಿ ಅಭಿನಯಿಸಿದ್ದಾರೆ. “ನನ್ನ ಗುರಿ ವಾರೆಂಟ್’ ಚಿತ್ರದ ಟೈಟಲ್ಗೆ “ದಿ ಮಿಷನ್’ ಎಂಬ ಅಡಿಬರಹವಿದೆ. ಸಸ್ಪೆನ್ಸ್ ಕಂ ಕ್ರೈಂ-ಥ್ರಿಲ್ಲರ್ ಕಥಾಹಂದರ ಹೊಂದಿರುವ “ನನ್ನ ಗುರಿ ವಾರೆಂಟ್’ ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದ್ದು, ಇದೇ ತಿಂಗಳ ಕೊನೆವಾರ ಚಿತ್ರವನ್ನು ಪ್ರೇಕ್ಷಕರ ಮುಂದೆ ತರುವ ಯೋಚನೆಯಲ್ಲಿದೆ ಚಿತ್ರತಂಡ.
ಇದನ್ನೂ ಓದಿ:ಹೀರೋ ಟೆಂಪರ್ ಜೋರು
“ನನ್ನ ಗುರಿ ವಾರೆಂಟ್’ ಚಿತ್ರದ ಬಗ್ಗೆ ಮಾತನಾಡುವ ನಾಯಕಿ ಕಂ ನಿರ್ಮಾಪಕಿ ಮನಿಷಾ ವೈಗನ್ಕರ್, “ಇದೊಂದು ಸಸ್ಪೆನ್ಸ್ ಕಂ ಕ್ರೈಂ-ಥ್ರಿಲ್ಲರ್ ಕಥಾಹಂದರ ಹೊಂದಿರುವ ಸಿನಿಮಾ. ಭೇಟಿ ಬಚಾವೋ, ಭೇಟಿ ಫಡಾವೋ ಆಶಯವನ್ನು ಇಟ್ಟುಕೊಂಡು ಈ ಸಿನಿಮಾ ಮಾಡಲಾಗಿದೆ. ನಾನು ಕಂಡ ಕೆಲವು ಅಂಶಗಳನ್ನು
ಇಟ್ಟುಕೊಂಡು ಈ ಸಿನಿಮಾದ ಕಥೆ ಮಾಡಿದ್ದೇನೆ. ಅನೇಕ ಥ್ರಿಲ್ಲಿಂಗ್ ಆಂಶಗಳು ಸಿನಿಮಾದಲ್ಲಿದ್ದು, ಆಡಿಯನ್ಸ್ಗೆ ಕಂಪ್ಲೀಟ್ ಎಂಟರ್ಟೈನ್ಮೆಂಟ್ ಸಿಗಲಿದೆ’ ಎನ್ನುತ್ತಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?
Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Sandalwood; ಟ್ರೆಂಡ್ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…
MUST WATCH
ಹೊಸ ಸೇರ್ಪಡೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ
Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್ ಪಂತ್
Amruthapura: ಅಮೃತಪುರವೆಂಬ ಅದ್ಭುತ ತಾಣ