ಅಸ್ಸಾಂನಲ್ಲಿ ಕಾಂಗ್ರೆಸ್, ಎಐಯುಡಿಎಫ್ ಮೈತ್ರಿ ಅಧಿಕಾರಕ್ಕೆ ಬಂದ್ರೆ ಶಾಂತಿ ನೆಲೆಸುತ್ತಾ? ಶಾ

ಅಸ್ಸಾಂನಲ್ಲಿ ಕಾಂಗ್ರೆಸ್ ಇದನ್ನು ಬದ್ರುದ್ದೀನ್ ಅಜ್ಮಲ್ ತೊಡೆ ಮೇಲೆ ಕುಳಿತು ಸಾಧಿಸುತ್ತದೆಯೇ?

Team Udayavani, Mar 22, 2021, 3:26 PM IST

ಅಸ್ಸಾಂನಲ್ಲಿ ಕಾಂಗ್ರೆಸ್, ಎಐಯುಡಿಎಫ್ ಮೈತ್ರಿ ಅಧಿಕಾರಕ್ಕೆ ಬಂದ್ರೆ ಶಾಂತಿ ನೆಲೆಸುತ್ತಾ? ಶಾ

ಜೋನಾಯ್(ಅಸ್ಸಾಂ):ಬಿಜೆಪಿ ಆಡಳಿತವಿರುವ ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಅಧಿಕಾರದ ಗದ್ದುಗೆ ಏರಲು ಕಾಂಗ್ರೆಸ್ ಪಕ್ಷ ಬದ್ರುದ್ದೀನ್ ಅಜ್ಮಲ್ ನೇತೃತ್ವದ ಎಐಯುಡಿಎಫ್ ಜತೆ ಮೈತ್ರಿ ಮಾಡಿಕೊಂಡಿದ್ದು, ಇದರಿಂದ ಅಸ್ಸಾಂನಲ್ಲಿ ಅಕ್ರಮ ಒಳನುಸುಳುವಿಕೆ ಹೆಚ್ಚಾಗಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಎಚ್ಚರಿಸಿದ್ದಾರೆ.

ಇದನ್ನೂ ಓದಿ:ಜಿಯೋ 5ಜಿ ಸ್ಮಾರ್ಟ್‌ ಫೋನ್, ಜಿಯೋ ಬುಕ್ ಲ್ಯಾಪ್‌ ಟಾಪ್ ಸದ್ಯದಲ್ಲೆ ಮಾರುಕಟ್ಟೆಗೆ..?

“ನಾವು ಅಭಿವೃದ್ಧಿಪಥದತ್ತ ಕೊಂಡೊಯ್ಯುತ್ತಿರು ರಾಜ್ಯದಲ್ಲಿ ಕಾಂಗ್ರೆಸ್ ಬದ್ರುದ್ದೀನ್ ಅಜ್ಮಲ್ ಜತೆ ಮೈತ್ರಿಮಾಡಿಕೊಂಡಿದೆ. ಒಂದು ವೇಳೆ ಅವರು ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ನುಸುಳುಕೋರರ ಸಂಖ್ಯೆ ಹೆಚ್ಚಾಗಲಿದೆ. ನಿಮಗೆ ಅಕ್ರಮವಾಗಿ ನುಸುಳುವವರನ್ನು ತಡೆಯಬೇಕೆ? ಕಾಂಗ್ರೆಸ್ ಪಕ್ಷ ಅಜ್ಮಲ್ ಜತೆ ಕೈಜೋಡಿಸಿರುವುದಕ್ಕೆ ನಾಚಿಕೆಪಡಬೇಕು ಎಂದು ಶಾ ಹೇಳಿದರು.

ಕಳೆದ ಐದು ವರ್ಷಗಳಲ್ಲಿ ಬಿಜೆಪಿ ಅಸ್ಸಾಂನಲ್ಲಿ ಶಾಂತಿ ಮತ್ತು ಅಭಿವೃದ್ಧಿಯ ಆಡಳಿತ ನೀಡಿದೆ. ಇದು ಕಾಂಗ್ರೆಸ್ ಆಡಳಿತಾವಧಿಯಲ್ಲಿನ ಹಿಂಸಾಚಾರ ಮತ್ತು ಅಸ್ಥಿರತೆಯ ವಿರುದ್ಧವಾಗಿದೆ ಎಂದು ಶಾ ಸೋಮವಾರ(ಮಾರ್ಚ್ 22) ಚುನಾವಣಾ ಪ್ರಚಾರ ಸಮಾರಂಭದಲ್ಲಿ ತಿಳಿಸಿದರು.

ಕಾಂಗ್ರೆಸ್ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಅಸ್ಸಾಂನಲ್ಲಿ ಪ್ರತಿಭಟನೆ, ಹಿಂಸಾಚಾರ, ಬಾಂಬ್ ಸ್ಫೋಟ, ಸಾವು ಮತ್ತು ಕರ್ಫ್ಯೂ ಸಾಮಾನ್ಯವಾಗಿತ್ತು. ಎಲ್ಲಾ ರೀತಿಯಿಂದಲೂ ಭಯದ ವಾತಾವರಣ ಇಲ್ಲಿ ಮನೆ ಮಾಡಿತ್ತು. ರಾಹುಲ್ ಗಾಂಧಿ ಹೇಳುತ್ತಾರೆ, ಅಸ್ಸಾಂ ಜನರ ಅಸ್ಮಿತೆ ಮತ್ತು ಅನನ್ಯತೆಯನ್ನು ರಕ್ಷಿಸುವ ಬಗ್ಗೆ ಮಾತನಾಡುತ್ತಾರೆ. ಆದರೆ ನಾನು ಇಂದು ಬಹಿರಂಗವಾಗಿ ಕೇಳುತ್ತೇನೆ, ಅಸ್ಸಾಂನಲ್ಲಿ ಕಾಂಗ್ರೆಸ್ ಇದನ್ನು ಬದ್ರುದ್ದೀನ್ ಅಜ್ಮಲ್ ತೊಡೆ ಮೇಲೆ ಕುಳಿತು ಸಾಧಿಸುತ್ತದೆಯೇ? ಎಂದು ಶಾ ಪ್ರಶ್ನಿಸಿದರು.

ಒಂದು ವೇಳೆ ಅಜ್ಮಲ್ ಅಧಿಕಾರಕ್ಕೆ ಬಂದರೆ, ಆಗ ಅಸ್ಸಾಂ ನುಸುಳುಕೋರರಿಂದ ಸುರಕ್ಷಿತವಾಗಿರಲಿದೆಯೇ? ರಾಜ್ಯದಲ್ಲಿ ಇನ್ನಷ್ಟು ನುಸುಳುಕೋರರು ಆಗಮಿಸುವುದು ನಿಮಗೆ(ಜನರಿಗೆ) ಬೇಕಾಗಿದೆಯೇ? ಎಂದು ಶಾ ಪ್ರಶ್ನಿಸಿದ್ದು, ಬಿಜೆಪಿ ಸಬ್ ಕಾ ಸಾಥ್, ಸಬ್ ವಿಕಾಸ್ ನೀತಿಯಡಿ ಕಾರ್ಯನಿರ್ವಹಿಸುತ್ತಿದೆ ಎಂದರು.

ಟಾಪ್ ನ್ಯೂಸ್

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

1-eeqwew

Ban; ಎಂಡಿಎಚ್‌, ಎವರೆಸ್ಟ್‌ ಮಸಾಲೆಗಳ ಮೇಲೆ ಅಮೆರಿಕ ಕೂಡ ನಿಷೇಧ?

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.