ಜಿ.ಪಂ., ತಾ.ಪಂ. ಚುನಾವಣೆ ಮುಂದೂಡುವುದಿಲ್ಲ: ಸರಕಾರ ಸ್ಪಷ್ಟನೆ
Team Udayavani, Mar 23, 2021, 6:30 AM IST
ಬೆಂಗಳೂರು: ಜಿ.ಪಂ., ತಾ.ಪಂ. ಕ್ಷೇತ್ರ ಪುನರ್ವಿಂಗಡಣೆ ಮಾರ್ಗಸೂಚಿಗಳ ಬಗ್ಗೆ ವಿಧಾನಸಭೆಯಲ್ಲಿ ಪಕ್ಷಾತೀತವಾಗಿ ಸದಸ್ಯರಿಂದ ಆಕ್ಷೇಪ ವ್ಯಕ್ತವಾದ ಹಿನ್ನೆಲೆಯಲ್ಲಿ ಗುರುವಾರ ಸಭೆ ನಡೆಸಿ ಪರಿಷ್ಕೃತ ಮಾರ್ಗಸೂಚಿಗಳನ್ನು ರಾಜ್ಯ ಚುನಾವಣ ಆಯೋಗಕ್ಕೆ ಸಲ್ಲಿಸಲಾಗುವುದು ಎಂದು ಸರಕಾರ ಪ್ರಕಟಿಸಿದೆ. ಈ ನಡುವೆ, ಯಾವುದೇ ಕಾರಣಕ್ಕೂ ಜಿ.ಪಂ., ತಾ.ಪಂ. ಚುನಾವಣೆ ಮುಂದೂಡುವುದಿಲ್ಲ ಎಂದು ಸ್ಪಷ್ಟಪಡಿಸಿದೆ.
ಸೋಮವಾರ ಶೂನ್ಯವೇಳೆಯಲ್ಲಿ ಬಿಜೆಪಿಯ ವಿ. ಸುನಿಲ್ ಕುಮಾರ್ ಪ್ರಸ್ತಾವಿಸಿದ ವಿಷಯದ ಬಗ್ಗೆ ವಿಸ್ತೃತ ಚರ್ಚೆ ನಡೆಯಿತು. ಜಿ.ಪಂ., ತಾ.ಪಂ. ಕ್ಷೇತ್ರಗಳ ಪುನರ್ವಿಂಗಡಣೆ ಪ್ರಕ್ರಿಯೆ ಆರಂಭವಾಗಿದೆ.
ಹೊಸ ತಾಲೂಕು ರಚನೆಯಾಗಿದ್ದರೆ ಜನಸಂಖ್ಯೆ ಆಧಾರದಲ್ಲಿ ವರ್ಗೀಕರಣ ಮಾರ್ಗಸೂಚಿಯಿಂದ ಸಮಸ್ಯೆಯಾಗುತ್ತಿದೆ. ಆಡಳಿತ, ಅನುದಾನ ಲಭ್ಯತೆಯಲ್ಲಿ ಏರಿಳಿತವಾಗಲಿದೆ. ವೈಜ್ಞಾನಿಕವಾಗಿ ಕ್ಷೇತ್ರ ಪುನರ್ವಿಂಗಡಣೆಯಾಗಬೇಕಿದ್ದು, ಸರಕಾರ ಮಧ್ಯ ಪ್ರವೇಶಿಸಿ ಸಮಸ್ಯೆ ಸರಿಪಡಿಸಬೇಕು ಎಂದು ಮನವಿ ಮಾಡಿದರು. ಇದಕ್ಕೆ ಉತ್ತರಿಸಿದ ಸಚಿವ ಬೊಮ್ಮಾಯಿ, ಈ ಬಗ್ಗೆ ಚರ್ಚಿಸಿ ಆಯೋಗಕ್ಕೆ ತಿಳಿಸಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್